ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: 2030ಕ್ಕೆ ಕಾರ್ಬನ್ ಡೈ ಆಕ್ಸೈಡ್ ಪ್ರಮಾಣ ಶೇ. 2,313ರಷ್ಟು ಹೆಚ್ಚಳ

ಬೆಂಗಳೂರು: ರಾಜಧಾನಿಯಲ್ಲಿ 2030ರ ವೇಳೆಗೆ ವಾಹನಗಳಿಂದ ಉತ್ಪತ್ತಿಯಾಗುವ ಇಂಗಾಲದ ಡೈ ಆಕ್ಸೈಡ್‌ ಪ್ರಮಾಣ ಶೇ 2,313ರಷ್ಟು ಹೆಚ್ಚಾಗಲಿದೆ.
ಭಾರತೀಯ ವಿಜ್ಞಾನ ಸಂಸ್ಥೆಯ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಸಾರಿಗೆ ಎಂಜಿನಿಯರಿಂಗ್‌ ಪ್ರಯೋಗಾಲಯವು ಇಂಡೊ–ನಾರ್ವೆ ಯೋಜನೆ
ಯಡಿ ನಡೆಸಿರುವ ‘ಬೆಂಗಳೂರಿಗಾಗಿ ಸುಸ್ಥಿರ ಸಾರಿಗೆ ಕ್ರಮಗಳು’ ಕುರಿತ ಅಧ್ಯಯನದಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ.
ದೇಶದ ಪ್ರಮುಖ ನಗರಗಳಾದ ಬೆಂಗಳೂರು, ದೆಹಲಿ ಹಾಗೂ ಮುಂಬೈನಲ್ಲಿ ಸುಸ್ಥಿರ ಸಾರಿಗೆ ಕ್ರಮಗಳನ್ನು ಅಭಿವೃದ್ಧಿ ಪಡಿಸುವ ಕುರಿತು ಅಧ್ಯಯನ ಕೈಗೊಂಡಿದೆ. ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಪ್ರೊ.ಆಶಿಷ್‌ ವರ್ಮಾ, ಹರ್ಷ ವಜ್ಜರಾಪು, ಹೇಮಂತಿನಿ ಅಲ್ಲಿರಾಣಿ ತಂಡವು ಸದ್ಯ ಬೆಂಗಳೂರು ಮಹಾನಗರ ಪ್ರದೇಶದಲ್ಲಿ (ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಹಾಗೂ ರಾಮನಗರ) ಅಧ್ಯಯನ ಮಾಡಿದೆ. 2014ರಲ್ಲಿ ಅಧ್ಯಯನ ಆರಂಭಿಸಿ ನಾಲ್ಕು ವರ್ಷಗಳಲ್ಲಿ ಪೂರ್ಣಗೊಳಿಸಿದೆ.
ಮಂಗಳವಾರ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಪ್ರೊ.ಆಶಿಷ್‌ ವರ್ಮಾ ಅವರು ಅಧ್ಯಯನದ ಬಗ್ಗೆ ವಿವರಿಸಿದರು.
ವಾಹನಗಳಿಂದ ಉಂಟಾಗುತ್ತಿರುವ ಪ್ರಮುಖ ಮಾಲಿನ್ಯಕಾರಕಗಳಾದ ಇಂಗಾಲದ ಡೈ ಆಕ್ಸೈಡ್‌ (ಸಿಒ2), ಇಂಗಾಲದ ಮೊನಾಕ್ಸೈಡ್‌ (ಸಿಒ), ಹೈಡ್ರೋಕಾರ್ಬನ್‌ (ಎಚ್‌ಸಿ), ಸಾರಜನಕದ ಆಕ್ಸೈಡ್‌ (ಎನ್‌ಒಎಕ್ಸ್‌) ಹಾಗೂ ಗಾಳಿಯಲ್ಲಿ ತೇಲಾಡುವ ಕಣಗಳ (ಪಿಎಂ) ಪ್ರಮಾಣ 2030 ಹಾಗೂ 2050ರ ವೇಳೆಗೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಸದ್ಯದ ಸ್ಥಿತಿಯಲ್ಲಿ ಪ್ರತಿ ವರ್ಷ ಸರಾಸರಿ 6.95 ಲಕ್ಷ ಟನ್‌ ಇಂಗಾಲದ ಡೈ ಆಕ್ಸೈಡ್‌ ಬಿಡುಗಡೆಯಾಗುತ್ತಿದೆ. ಇದೇ ಪ್ರಮಾಣದಲ್ಲಿ ಮುಂದುವರಿದರೆ, 2030ಕ್ಕೆ 1.68 ಕೋಟಿ ಟನ್‌ ಹಾಗೂ 2050ಕ್ಕೆ 1.76 ಕೋಟಿ ಟನ್‌ಗೆ ಏರಿಕೆ ಆಗಲಿದೆ ಎಂದು ತಿಳಿಸಿದರು.
ಬೆಂಗಳೂರು ಮಹಾನಗರ ಪ್ರದೇಶದಲ್ಲಿ ಸದ್ಯದ ವರ್ಷದಲ್ಲಿ ವಾಹನಗಳು ಸಾಗುವ ದೂರ 3.1 ಕೋಟಿ ಕಿ.ಮೀ. ಇದೆ. ಇದು 2030ಕ್ಕೆ 4.8 ಕೋಟಿ ಕಿ.ಮೀ. ಹಾಗೂ 2050ಕ್ಕೆ 7.2 ಕೋಟಿ ಕಿ.ಮೀ.ಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ಒಟ್ಟಾರೆ ಶೇ 60ರಷ್ಟು ಹೆಚ್ಚಳವಾಗಲಿದೆ ಎಂದರು.
ಪ್ರವಾಹದಿಂದಲೂ ವಾಹನ ದಟ್ಟಣೆ: ಬೆಂಗಳೂರು ಮಹಾನಗರ ಪ್ರದೇಶದಲ್ಲಿ 2015ರ ನವೆಂಬರ್‌ 3ರಂದು ನಾಲ್ಕು ಗಂಟೆ 10 ನಿಮಿಷಗಳವರೆಗೆ 266 ಮಿ.ಮೀ. ಮಳೆ ಬಿದ್ದಿತ್ತು. ಇದರಿಂದ ಅನೇಕ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿತ್ತು. ಬಹಳಷ್ಟು ರಸ್ತೆಗಳಲ್ಲಿ 4–5 ಅಡಿ ನೀರು ನಿಂತಿತ್ತು. ಇದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಕಾಂಕ್ರೀಟೀಕರಣ ಹಾಗೂ ಡಾಂಬರೀಕರಣದಿಂದಾಗಿ ಮಳೆ ನೀರು ಇಂಗುತ್ತಿಲ್ಲ. ರಸ್ತೆ ಮೇಲೆ ಬಿದ್ದ ನೀರು ಹರಿದು ತಗ್ಗು ಪ್ರದೇಶಗಳಲ್ಲಿ ಶೇಖರಣೆಯಾಗುತ್ತದೆ. ಇದನ್ನು ತಪ್ಪಿಸಬೇಕಾದರೆ, ನೀರು ಇಂಗುವಂತಹ ರಸ್ತೆಗಳನ್ನು ನಿರ್ಮಿಸಬೇಕು. ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಪ್ರವಾಹ ಉಂಟಾಗುವಂತಹ ಕಡೆಗಳಲ್ಲಿ ಇರುವ ಕೊಳೆಗೇರಿಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು.
ಹೆಚ್ಚುವರಿ ಪೊಲೀಸ್‌ ಕಮಿಷನರ್‌ (ಸಂಚಾರ) ಆರ್‌.ಹಿತೇಂದ್ರ ಪಾಲ್ಗೊಂಡಿದ್ದರು.
ಸುಸ್ಥಿರ ಸಾರಿಗೆಗೆ ಕೈಗೊಳ್ಳಬೇಕಾದ ಕ್ರಮಗಳು
ವಾಹನ ಸಂಚಾರ ದಟ್ಟಣೆ ಹಾಗೂ ಮಾಲಿನ್ಯ ಪ್ರಮಾಣವನ್ನು ಕಡಿಮೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ಬಿಎಂಟಿಸಿ, ಮೆಟ್ರೊ ರೈಲು ಸೇರಿದಂತೆ ಸಮೂಹ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು. ಬೈಕ್‌ ಹಾಗೂ ಕಾರುಗಳನ್ನು ನಿರ್ದಿಷ್ಟ ಸ್ಥಳಗಳಲ್ಲಿ ನಿಲುಗಡೆ ಮಾಡಿ ಅಲ್ಲಿಂದ ಸಮೂಹ ಸಾರಿಗೆಯಲ್ಲಿ ತೆರಳುವಂತಹ ‘ಪಾರ್ಕ್‌ ಆ್ಯಂಡ್‌ ರೈಡ್‌’ ವ್ಯವಸ್ಥೆ ಅಸ್ತಿತ್ವಕ್ಕೆ ಬರಬೇಕು. ಕಾರ್‌ಪೂಲಿಂಗ್‌ಗೆ ಪ್ರೋತ್ಸಾಹ ನೀಡಬೇಕು. ಉತ್ತಮ ಪಾದಚಾರಿ ಮಾರ್ಗ ಹಾಗೂ ಸೈಕಲ್‌ ಪಥಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಆಶಿಷ್‌ ವರ್ಮಾ ಸಲಹೆ ನೀಡಿದರು.
ಕೆಲ ರಸ್ತೆಗಳನ್ನು ನಿರ್ಬಂಧಿತ ಪ್ರದೇಶಗಳನ್ನಾಗಿ ಮಾಡಬೇಕು. ಈ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಮಾಲೀಕರಿಂದ ಶುಲ್ಕ ವಸೂಲಿ ಮಾಡಬೇಕು. ಕಾರುಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಬೇಕು. ಇದರಿಂದ ಕಾರುಗಳ ಮಾರಾಟ ಪ್ರಮಾಣ ಕಡಿಮೆ ಆಗುತ್ತದೆ. ಪ್ರತ್ಯೇಕ ಬಸ್‌ ಪಥ ನಿರ್ಮಿಸುವುದು ಹಾಗೂ ಸಿಗ್ನಲ್‌ಗಳಲ್ಲಿ ಬಸ್‌ಗಳ ಸಂಚಾರಕ್ಕೆ ಆದ್ಯತೆ ನೀಡಬೇಕು ಎಂದರು.
ನಗರದಲ್ಲಿರುವ ಎಲ್ಲ ಬಸ್‌, ಕಾರು, ದ್ವಿಚಕ್ರ ವಾಹನ ಹಾಗೂ ಆಟೊಗಳು ವಿದ್ಯುತ್‌ಚಾಲಿತಗೊಂಡರೆ, ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯದ ಪ್ರಮಾಣವನ್ನು ಶೇ 70ರಷ್ಟು ಕಡಿಮೆ ಮಾಡಬಹುದು. ಇಂಗಾಲದ ಡೈ ಆಕ್ಸೈಡ್‌ ಪ್ರಮಾಣವನ್ನು ಶೇ 98ರಷ್ಟು ಕಡಿಮೆ ಮಾಡಬಹುದು. ಆದರೆ, ಆ ವಾಹನಗಳಿಗೆ ಪೂರೈಸುವ ವಿದ್ಯುತ್‌ ಜಲಜನಕ, ಸೌರಶಕ್ತಿ ಹಾಗೂ ಪವನಶಕ್ತಿಯಿಂದ ಪಡೆದದ್ದು ಆಗಿರಬೇಕು. ಶಾಖೋತ್ಪನ್ನ ವಿದ್ಯುತ್‌ ಕೇಂದ್ರಗಳಲ್ಲಿ ಕಲ್ಲಿದ್ದಲನ್ನು ಬಳಸುವುದರಿಂದ ಹೊಗೆ ಉತ್ಪತ್ತಿಯಾಗಿ ಮಾಲಿನ್ಯ ಉಂಟಾಗುತ್ತದೆ. ಹೀಗಾಗಿ, ಈ ಕೇಂದ್ರದಿಂದ ಪಡೆದ ವಿದ್ಯುತ್‌ ಅನ್ನು ವಾಹನಗಳಿಗೆ ಬಳಸಬಾರದು ಎಂದು ಆಶಿಷ್‌ ವರ್ಮಾ ವಿವರಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....