ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಶೂಟರ್ ಹೀನಾ ಸಿಧು ಸ್ವರ್ಣ ಸಾಧನೆ,

ಗೋಲ್ಡ್‌ ಕೋಸ್ಟ್: ಭಾರತದ ಹೀನಾ ಸಿಧು, ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕೂಟ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ.
ಬೆಲ್‌ಮೊಂಟ್‌ ಶೂಟಿಂಗ್‌ ಕೇಂದ್ರದಲ್ಲಿ ಮಂಗಳವಾರ ನಡೆದ ಮಹಿಳೆಯರ 25 ಮೀಟರ್ಸ್‌ ಪಿಸ್ತೂಲ್‌ ವಿಭಾಗದ ಫೈನಲ್‌ನಲ್ಲಿ ಹೀನಾ 38 ಸ್ಕೋರ್‌ ಕಲೆಹಾಕಿ ಮೊದಲ ಸ್ಥಾನ ತಮ್ಮದಾಗಿಸಿಕೊಂಡರು.
ಈ ಬಾರಿಯ ಕೂಟದಲ್ಲಿ ಹೀನಾ ಗೆದ್ದ ಎರಡನೆ ಪದಕ ಇದು. 10 ಮೀಟರ್ಸ್‌ ಏರ್‌ ಪಿಸ್ತೂಲ್ ವಿಭಾಗದಲ್ಲಿ ಅವರು ಬೆಳ್ಳಿ ಪದಕ ಜಯಿಸಿದ್ದರು. ಅರ್ಹತಾ ಸುತ್ತಿನಲ್ಲಿ (579 ಸ್ಕೋರ್‌) ಮೂರನೆ ಸ್ಥಾನ ಗಳಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದ ಹೀನಾ, ಅಂತಿಮ ಘಟ್ಟದಲ್ಲೂ ಮೋಡಿ ಮಾಡಿದರು.
ಮೊದಲ ಹಂತದ ಮೊದಲ ಅವಕಾಶದಲ್ಲಿ ಮೂರು ಸ್ಕೋರ್‌ ಗಳಿಸಿದ ಅವರು ನಂತರದ ಎರಡು ಅವಕಾಶಗಳಲ್ಲಿ ಕ್ರಮವಾಗಿ ನಾಲ್ಕು ಮತ್ತು ಮೂರು ಸ್ಕೋರ್‌ ಸಂಗ್ರಹಿಸಿದರು. ಆಸ್ಟ್ರೇಲಿಯಾದ ಎಲಿನಾ ಗ್ಯಾಲಿಯಬೊವಿಚ್‌ ಮೊದಲ ಹಂತದಲ್ಲಿ ಒಟ್ಟು 13 ಸ್ಕೋರ್‌ ಸಂಗ್ರಹಿಸಿ ಹೀನಾ ಅವರನ್ನು ಹಿಂದಿಕ್ಕಿದ್ದರು.
ಇದರಿಂದ ವಿಶ್ವಾಸ ಕಳೆದುಕೊಳ್ಳದ ಅನುಭವಿ ಶೂಟರ್‌ ಹೀನಾ, ಎರಡನೆ ಹಂತದ ಎಲಿಮಿನೇಷನ್‌ನಲ್ಲಿ ಮಿಂಚಿದರು. ಮೊದಲ ಎರಡು ಅವಕಾಶಗಳ ನಂತರ ಎಲಿನಾ 20–18ರಿಂದ ಮುಂದಿದ್ದರು. ಮೂರನೆ ಅವಕಾಶದಲ್ಲಿ ಐದು ಸ್ಕೋರ್‌ ಗಳಿಸಿದ ಹೀನಾ 23–23ರಿಂದ ಸಮಬಲ ಸಾಧಿಸಿದರು.
ನಾಲ್ಕನೆ ಅವಕಾಶದಲ್ಲಿ ಹೀನಾ ನಾಲ್ಕು ಸ್ಕೋರ್‌ ಗಳಿಸಿದರೆ, ಎಲಿನಾ ಎರಡು ಸ್ಕೋರ್‌ ಸಂಗ್ರಹಿಸಲಷ್ಟೇ ಶಕ್ತರಾದರು. ಹೀಗಾಗಿ ಭಾರತದ ಶೂಟರ್‌ 27–25ರಿಂದ ಮುನ್ನಡೆ ಸಾಧಿಸಿದರು. ನಂತರದ ಮೂರು ಅವಕಾಶಗಳಲ್ಲಿ ಕ್ರಮವಾಗಿ ನಾಲ್ಕು, ಮೂರು ಮತ್ತು ನಾಲ್ಕು ಸ್ಕೋರ್‌ ಸಂಗ್ರಹಿಸಿದ ಹೀನಾ ಸಂಭ್ರಮದ ಹೊಳೆಯಲ್ಲಿ ಮಿಂದೆದ್ದರು. ಒಟ್ಟು 35 ಸ್ಕೋರ್‌ ಕಲೆಹಾಕಿದ ಎಲಿನಾ ಬೆಳ್ಳಿಗೆ ತೃಪ್ತಿಪಟ್ಟರು.
ಮಲೇಷ್ಯಾದ ಆಲಿಯಾ ಸಾಜನ ಅಜಹಾರಿ (26 ಸ್ಕೋರ್‌) ಕಂಚಿನ ಪದಕ ಗೆದ್ದರು.
ಭಾರತದ ಅನುಸಿಂಗ್‌, ಆರನೆಯವರಾಗಿ ಸ್ಪರ್ಧೆ ಮುಗಿಸಿ ದರು. ಅವರು 15 ಸ್ಕೋರ್‌ ಗಳಿಸಿದ್ದರು. ಫೈನಲ್‌ನಲ್ಲಿ ಒಟ್ಟು ಆರು ಮಂದಿ ಪೈಪೋಟಿ ನಡೆಸಿದರು.
ಅರ್ಹತಾ ಸುತ್ತಿನಲ್ಲಿ ಮಿಂಚಿದ್ದ ಅನು, ಎರಡನೆ ಸ್ಥಾನ (584 ಸ್ಕೋರ್‌) ಗಳಿಸಿ ಫೈನಲ್‌ ಪ್ರವೇಶಿಸಿದ್ದರು.
ಸಿಂಗಪುರದ ಕ್ಸಿಯು ಹಾಂಗ್‌ ತೆಹ್‌ (584 ಸ್ಕೋರ್‌) ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದರು. ಅವರು ಫೈನಲ್‌ನಲ್ಲಿ (19 ಸ್ಕೋರ್‌) ಐದನೆ ಸ್ಥಾನ ಗಳಿಸಿದರು. ಆಸ್ಟ್ರೇಲಿಯಾದ ಎಲಿನಾ (572 ಸ್ಕೋರ್‌) ನಾಲ್ಕನೆ ಸ್ಥಾನದೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದ್ದರು.
**
ಗಂಡನೇ ಗುರು...
ಹೀನಾ ಅವರಿಗೆ ಪತಿ ರೋನಕ್‌ ಪಂಡಿತ್‌ ಮಾರ್ಗದರ್ಶನ ನೀಡುತ್ತಾರೆ. ರೋನಕ್‌ ಅವರು 2006ರಲ್ಲಿ ಮೆಲ್ಬರ್ನ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್‌ ಕೂಟದಲ್ಲಿ ಚಿನ್ನ ಗೆದ್ದಿದ್ದರು.
ಪುರುಷರ 25 ಮೀಟರ್ಸ್‌ ಸ್ಟ್ಯಾಂಡರ್ಡ್‌ ಪಿಸ್ತೂಲ್‌ (ಪೇರ್‌) ವಿಭಾಗದಲ್ಲಿ ಸಮರೇಶ್‌ ಜಂಗ್‌ ಜೊತೆಗೂಡಿ ಅವರು ಈ ಸಾಧನೆ ಮಾಡಿದ್ದರು.
ರೋನಕ್‌, ಭಾರತ ಪಿಸ್ತೂಲ್‌ ಮತ್ತು ರೈಫಲ್‌ ತಂಡದ ಹೈ ಪರ್ಫಾಮನ್ಸ್‌ ನಿರ್ದೇಶಕರಾಗಿದ್ದಾರೆ. ಈ ಬಾರಿ ಕಾಮನ್‌ವೆಲ್ತ್‌ ಕೂಟಕ್ಕೆ ಪ್ರಕಟಿಸಲಾಗಿದ್ದ ಅಧಿಕಾರಿಗಳ ಪಟ್ಟಿಯಿಂದ ಭಾರತ ಒಲಿಂಪಿಕ್‌ ಸಂಸ್ಥೆ (ಐಒಎ) ರೋನಕ್‌ ಹೆಸರನ್ನು ಕೈಬಿಟ್ಟಿತ್ತು. ಈ ಕುರಿತು ಸಾಕಷ್ಟು ಟೀಕೆ ವ್ಯಕ್ತವಾದ ನಂತರ ಐಒಎ, ರೋನಕ್‌ ಅವರಿಗೆ ತಂಡದ ಜೊತೆ ಹೋಗಲು ಅನುಮತಿ ನೀಡಿತ್ತು.
ಹೀನಾ ಮತ್ತು ರೋನಕ್‌ ಅವರು 2013ರಲ್ಲಿ ಮದುವೆಯಾಗಿದ್ದರು.
(ಚಿನ್ನ ಗೆದ್ದ ನಂತರ ಹೀನಾ ಅವರನ್ನು ಪತಿ ರೋನಕ್‌ ಪಂಡಿತ್‌ ಎತ್ತಿಕೊಂಡು ಸಂಭ್ರಮಿಸಿದರು ಪಿಟಿಐ ಚಿತ್ರ)
**
10 ಮೀಟರ್ಸ್‌ ಏರ್‌ ಪಿಸ್ತೂಲ್‌ನಲ್ಲಿ ಚಿನ್ನ ಗೆಲ್ಲಲು ಆಗಿರಲಿಲ್ಲ. ಹೀಗಾಗಿ ನಿರಾಸೆಗೊಂಡಿದ್ದೆ. 25 ಮೀ.ಪಿಸ್ತೂಲ್‌ನಲ್ಲಿ ಚಿನ್ನದ ಕನಸು ಕೈಗೂಡಿದ್ದರಿಂದ ಅತೀವ ಖುಷಿಯಾಗಿದೆ.
-ಹೀನಾ ಸಿಧು, ಭಾರತದ ಶೂಟರ್‌
**
ಗಗನ್‌, ಚೈನ್‌ಗೆ ನಿರಾಸೆ
ಪುರುಷರ 50 ಮೀಟರ್ಸ್‌ ರೈಫಲ್‌ ಪ್ರೋನ್‌ ವಿಭಾಗದಲ್ಲಿ ಸ್ಪರ್ಧಿಸಿದ್ದ ಅನುಭವಿ ಶೂಟರ್‌ ಗಗನ್‌ ನಾರಂಗ್‌ ಮತ್ತು ಚೈನ್‌ ಸಿಂಗ್‌, ಪದಕ ಗೆಲ್ಲಲು ವಿಫಲರಾದರು.
ಫೈನಲ್‌ನಲ್ಲಿ ಚೈನ್‌ (204.8 ಸ್ಕೋರ್‌) ನಾಲ್ಕನೆ ಸ್ಥಾನಕ್ಕೆ ತೃಪ್ತಿಪಟ್ಟರು. ಒಲಿಂಪಿಯನ್‌ ಶೂಟರ್‌ ನಾರಂಗ್‌ (142.3 ಸ್ಕೋರ್‌) ಏಳನೆ ಸ್ಥಾನ ತಮ್ಮದಾಗಿಸಿಕೊಂಡರು.
ವೇಲ್ಸ್‌ನ ಡೇವಿಡ್‌ ಫೆಲ್ಪ್ಸ್‌ ಕೂಟ ದಾಖಲೆಯೊಂದಿಗೆ ಚಿನ್ನಕ್ಕೆ ಕೊರಳೊಡ್ಡಿದರು. ಅವರು 248.8 ಸ್ಕೋರ್‌ ಸಂಗ್ರಹಿಸಿದರು.
ಸ್ಕಾಟ್ಲೆಂಡ್‌ನ ನೀಲ್‌ ಸ್ಟಿರ್ಟನ್‌ (247.7 ಸ್ಕೋರ್‌) ಬೆಳ್ಳಿ ಗೆದ್ದರೆ, ಇಂಗ್ಲೆಂಡ್‌ನ ಕೆನ್ನೆತ್‌ ಪಾರ್‌ (226.6 ಸ್ಕೋರ್‌) ಕಂಚಿನ ಸಾಧನೆ ಮಾಡಿದರು.
ಕ್ವೀನ್ಸ್‌ ಪ್ರೈಜ್‌ ಪೇರ್‌ ವಿಭಾಗದಲ್ಲಿ ಇಂಗ್ಲೆಂಡ್‌ನ ಪರಾಗ್ ಪಟೇಲ್‌ ಮತ್ತು ಡೇವಿಡ್‌ ಲೂಕ್‌ಮನ್‌ (584 ಪಾಯಿಂಟ್ಸ್‌) ಚಿನ್ನ ಗೆದ್ದರು.
ವೇಲ್ಸ್‌ನ ಕ್ರಿಸ್‌ ವಾಟ್ಸನ್‌ ಮತ್ತು ಗರೆತ್‌ ಮೊರಿಸ್‌ (582 ಪಾ.) ಬೆಳ್ಳಿ ತಮ್ಮದಾಗಿಸಿಕೊಂಡರು. ಈ ವಿಭಾಗದ ಕಂಚು, ಸ್ಕಾಟ್ಲೆಂಡ್‌ನ ಅಲೆಕ್ಸಾಂಡರ್‌ ವಾಕರ್ ಮತ್ತು ಇಯಾನ್‌ ಶಾ (582 ಪಾ.) ಅವರ ಪಾಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....