ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಮುಂದುವರೆದ ಕಾಮನ್ವೆಲ್ತ್ ಅಬ್ಬರ, ಚಿನ್ನಕ್ಕೆ ಕೊರಳೊಡ್ಡಿದ ಶ್ರೇಯಸಿ

ಗೋಲ್ಡ್‌ ಕೋಸ್ಟ್‌ (ಪಿಟಿಐ): ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತದ ಶೂಟರ್‌ಗಳ ಪ್ರಾಬಲ್ಯ ಮುಂದುವರಿದಿದೆ. ಏಳನೆ ದಿನವಾದ ಬುಧವಾರ, ಶೂಟರ್‌ಗಳು ಭಾರತದ ಖಾತೆಗೆ ಮೂರು ಪದಕ ಸೇರ್ಪಡೆ ಮಾಡಿದ್ದಾರೆ.
ಬೆಲ್‌ಮೊಂಟ್‌ ಶೂಟಿಂಗ್‌ ಕೇಂದ್ರದಲ್ಲಿ ನಡೆದ ಮಹಿಳೆಯರ ಡಬಲ್‌ ಟ್ರ್ಯಾಪ್‌ ವಿಭಾಗದಲ್ಲಿ ಶ್ರೇಯಸಿ ಸಿಂಗ್‌ ಚಿನ್ನಕ್ಕೆ ಕೊರಳೊಡ್ಡಿದರು. ಫೈನಲ್‌ನಲ್ಲಿ ಅವರು ಆಸ್ಟ್ರೇಲಿಯಾದ ಎಮ್ಮಾ ಕಾಕ್ಸ್‌ ಅವರನ್ನು ಮಣಿಸಿ ಈ ಸಾಧನೆ ಮಾಡಿದರು.
ಶ್ರೇಯಸಿ ಮತ್ತು ಎಮ್ಮಾ ಅವರು ನಾಲ್ಕು ಸುತ್ತುಗಳಿಂದ ತಲಾ 96 ಪಾಯಿಂಟ್ಸ್‌ ಕಲೆಹಾಕಿದ್ದರು. ಹೀಗಾಗಿ ವಿಜೇತರನ್ನು ನಿರ್ಧರಿಸಲು ‘ಶೂಟ್‌ ಆಫ್‌’ ಮೊರೆ ಹೋಗಲಾಗಿತ್ತು.
‘ಶೂಟ್‌ ಆಫ್‌’ನ ಮೊದಲ ಅವಕಾಶದಲ್ಲಿ ಇಬ್ಬರೂ ಕೃತಕ ಹಕ್ಕಿಗಳನ್ನು ಹೊಡೆದುರುಳಿಸಿದರು. ಎರಡನೆ ಅವಕಾಶದಲ್ಲಿ ಶ್ರೇಯಸಿ ನಿಖರ ಗುರಿ ಹಿಡಿದರು. ಆದರೆ ಎಮ್ಮಾ ವಿಫಲರಾದರು. ಹೀಗಾಗಿ ಭಾರತದ ಶೂಟರ್‌ಗೆ ಚಿನ್ನ ಒಲಿಯಿತು. ಎಮ್ಮಾ, ಬೆಳ್ಳಿಗೆ ತೃಪ್ತಿಪಟ್ಟರು.
ಸ್ಕಾಟ್ಲೆಂಡ್‌ನ ಲಿಂಡಾ ಪಿಯರ್ಸನ್‌ (87 ಪಾಯಿಂಟ್ಸ್‌) ಈ ವಿಭಾಗದ ಕಂಚು ತಮ್ಮದಾಗಿಸಿಕೊಂಡರು. ಭಾರತದ ವರ್ಷಾ ವರ್ಮನ್‌ ನಾಲ್ಕನೆ ಸ್ಥಾನದೊಂದಿಗೆ ಸ್ಪರ್ಧೆ ಮುಗಿಸಿದರು.
ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವರ್ಷಾ, ನಾಲ್ಕು ಸುತ್ತುಗಳಿಂದ 86 ಪಾಯಿಂಟ್ಸ್‌ ಸಂಗ್ರಹಿಸಿದರು.
ದೆಹಲಿ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರುವ 26 ವರ್ಷದ ಶ್ರೇಯಸಿ, ಫೈನಲ್‌ನಲ್ಲಿ ಎಮ್ಮಾ ಅವರಿಂದ ಪ್ರಬಲ ಪೈಪೋಟಿ ಎದುರಿಸಿದರು.
ಮೊದಲ ಸುತ್ತಿನಲ್ಲಿ ಶ್ರೇಯಸಿ 24 ಪಾಯಿಂಟ್ಸ್‌ ಗಳಿಸಿದರೆ, ಎಮ್ಮಾ 23 ಪಾಯಿಂಟ್ಸ್‌ ಕಲೆಹಾಕಿದರು. ಎರಡು ಮತ್ತು ಮೂರನೆ ಸುತ್ತಿನಲ್ಲಿ ಕಾಕ್ಸ್‌ ಪಾರಮ್ಯ ಸಾಧಿಸಿದರು. ಹೀಗಾಗಿ ಶ್ರೇಯಸಿ 71–78ರಿಂದ ಹಿನ್ನಡೆ ಕಂಡರು. ಇದರಿಂದ ವಿಚಲಿತರಾಗದ ಭಾರತದ ಶೂಟರ್‌, ನಿರ್ಣಾಯಕ ಎನಿಸಿದ್ದ ನಾಲ್ಕನೆ ಸುತ್ತಿನಲ್ಲಿ ಮೋಡಿ ಮಾಡಿದರು.
ಅಂತಿಮ ಸುತ್ತಿನಲ್ಲಿ ಶ್ರೇಯಸಿ 25 ಪಾಯಿಂಟ್ಸ್‌ ಹೆಕ್ಕಿದರೆ, ಕಾಕ್ಸ್ 18 ಪಾಯಿಂಟ್ಸ್‌ ಸಂಗ್ರಹಿಸಲಷ್ಟೇ ಶಕ್ತರಾದರು. ಫೈನಲ್‌ನಲ್ಲಿ ಒಟ್ಟು 10 ಮಂದಿ ಪೈಪೋಟಿ ನಡೆಸಿದ್ದರು.
ಕಾಮನ್‌ವೆಲ್ತ್‌ ಕೂಟದಲ್ಲಿ ಶ್ರೇಯಸಿ ಗೆದ್ದ ಎರಡನೆ ಪದಕ ಇದಾಗಿದೆ. 2014ರಲ್ಲಿ ಗ್ಲಾಸ್ಗೊದಲ್ಲಿ ನಡೆದಿದ್ದ ಕೂಟದಲ್ಲಿ ಅವರು ಬೆಳ್ಳಿಯ ಸಾಧನೆ ಮಾಡಿದ್ದರು.
ಓಂ ಪ್ರಕಾಶ್‌ಗೆ ಕಂಚು: ಪುರುಷರ 50 ಮೀಟರ್ಸ್‌ ಪಿಸ್ತೂಲ್‌ ವಿಭಾಗದಲ್ಲಿ ಭಾರತದ ಓಂ ಪ್ರಕಾಶ್‌ ಮಿಥಾರ್ವಲ್‌ ಕಂಚಿನ ಸಾಧನೆ ಮಾಡಿದರು. ಓಂ ಪ್ರಕಾಶ್‌ ಈ ಬಾರಿಯ ಕೂಟದಲ್ಲಿ ಗೆದ್ದ ಎರಡನೆ ಪದಕ ಇದಾಗಿದೆ. 10 ಮೀಟರ್ಸ್‌ ಏರ್‌ ಪಿಸ್ತೂಲ್‌ ವಿಭಾಗದಲ್ಲೂ ಅವರು ಕಂಚಿನ ಪದಕ ಗೆದ್ದಿದ್ದರು.
ಫೈನಲ್‌ನಲ್ಲಿ ಮಿಥಾರ್ವಲ್‌ 201.1 ಪಾಯಿಂಟ್ಸ್‌ ಗಳಿಸಿ ಈ ಸಾಧನೆ ಮಾಡಿದರು. ಅರ್ಹತಾ ಸುತ್ತಿನಲ್ಲಿ 549 ಪಾಯಿಂಟ್ಸ್‌ ಸಂಗ್ರಹಿಸಿದ್ದ ಓಂ ಪ್ರಕಾಶ್‌ ಅಗ್ರಸ್ಥಾನದೊಂದಿಗೆ ಫೈನಲ್‌ ಪ್ರವೇಶಿಸಿದ್ದರು.
ಆಸ್ಟ್ರೇಲಿಯಾದ ಡೇನಿಯಲ್‌ ರೆಪಾಚೊಲಿ ಕೂಟ ದಾಖಲೆಯೊಂದಿಗೆ ಚಿನ್ನಕ್ಕೆ ಮುತ್ತಿಕ್ಕಿದರು. ಫೈನಲ್‌ನಲ್ಲಿ ಡೇನಿಯಲ್‌ 227.2 ಪಾಯಿಂಟ್ಸ್‌ ಗಳಿಸಿದರು. ಮೊದಲ ಹಂತದಲ್ಲಿ 91.2 ಪಾಯಿಂಟ್ಸ್‌ ಗಳಿಸಿದ್ದ ಅವರು ಎರಡನೆ ಹಂತದ ಎಲಿಮಿನೇಷನ್‌ನಲ್ಲೂ ಅಪೂರ್ವ ಸಾಮರ್ಥ್ಯ ತೋರಿದರು.
ಬಾಂಗ್ಲಾದೇಶದ ಶಕೀಲ್‌ ಅಹಮದ್‌ (220.5 ಪಾಯಿಂಟ್ಸ್‌) ಬೆಳ್ಳಿ ತಮ್ಮದಾಗಿಸಿಕೊಂಡರು. ಫೈನಲ್‌ಗೆ ಅರ್ಹತೆ ಗಳಿಸಿದ್ದ ಜಿತು ರಾಯ್‌ (105.0 ಪಾಯಿಂಟ್ಸ್‌) ಎಂಟನೆ ಸ್ಥಾನಕ್ಕೆ ತೃಪ್ತಿಪಟ್ಟರು. ಜಿತು ಅವರು 10 ಮೀಟರ್ಸ್‌ ಏರ್‌ ಪಿಸ್ತೂಲ್ ವಿಭಾಗದಲ್ಲಿ ಚಿನ್ನದ ಸಾಧನೆ ಮಾಡಿದ್ದರು.
ಮಿತ್ತಲ್‌ಗೆ ಕಂಚು: ಪುರುಷರ ಡಬಲ್‌ ಟ್ರ್ಯಾಪ್‌ನಲ್ಲಿ ಭಾರತದ ಅಂಕುರ್‌ ಮಿತ್ತಲ್‌ ಕಂಚು ಗೆದ್ದರು. ಫೈನಲ್‌ನಲ್ಲಿ ಅವರು 53 ಪಾಯಿಂಟ್ಸ್‌ ಸಂಗ್ರಹಿಸಿದರು.
ಸ್ಕಾಟ್ಲೆಂಡ್‌ನ ಡೇವಿಡ್‌ ಮೆಕ್‌ಮ್ಯಾತ್‌ (74 ಪಾಯಿಂಟ್ಸ್‌) ಕೂಟ ದಾಖಲೆಯೊಂದಿಗೆ ಚಿನ್ನ ಗೆದ್ದರು. ಐಲ್ ಆಫ್‌ ಮ್ಯಾನ್‌ ದೇಶದ ಟಿಮ್‌ ನಿಯಲೆ (70 ಪಾ.) ಬೆಳ್ಳಿಯ ಸಾಧನೆ ಮಾಡಿದರು.
ಈ ವಿಭಾಗದಲ್ಲಿ ಕಣದಲ್ಲಿದ್ದ ಭಾರತದ ಅಶಾಬ್‌ ಮಹಮ್ಮದ್‌ (43 ಪಾ.) ನಾಲ್ಕನೆ ಸ್ಥಾನಕ್ಕೆ ತೃಪ್ತಿಪಟ್ಟರು.
* 2014ರಲ್ಲಿ ಚಿನ್ನ ಗೆಲ್ಲಲು ಆಗಿರಲಿಲ್ಲ. ಹೀಗಾಗಿ ನಿರಾಸೆಯಾಗಿತ್ತು. ಈ ಬಾರಿ ಕಠಿಣ ಅಭ್ಯಾಸ ನಡೆಸಿದ್ದೆ. ಆದ್ದರಿಂದ ಚಿನ್ನದ ಕನಸು ಕೈಗೂಡಿದೆ.
–ಶ್ರೇಯಸಿ ಸಿಂಗ್‌, ಭಾರತದ ಶೂಟರ್‌

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....