ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ‘ಅಭಿನಯ ತಾರೆ’ಗೆ ಭಾರತದ ಗೌರವ

ಪೆಶಾವರದ ಪಂಜಾಬ್‌ನಲ್ಲಿ ಜವಳಿ ವ್ಯಾಪಾರಿಗಳ ಕುಟುಂಬದಲ್ಲಿ 1946ರಲ್ಲಿ ಜನಿಸಿದ ವಿನೋದ್ ಖನ್ನಾ ಭಾರತೀಯ ಚಿತ್ರರಂಗದ ಸುಂದರ ನಾಯಕ ನಟರಲ್ಲೊಬ್ಬರು.
‘ಅಭಿನಯ ತಾರೆ’ ಎಂದು ಖ್ಯಾತಿ ಗಳಿಸಿದ ಖನ್ನಾ 1968ರಲ್ಲಿ ‘ಮನ್ ಕಾ ಮೀತ್’ ಚಿತ್ರದಿಂದ ಅಭಿನಯ ಜೀವನ ಆರಂಭಿಸಿದರು. 1971ರಲ್ಲಿ ಗುಲ್ಜಾರ್ ಅವರ ‘ಮೇರೆ ಅಪ್ನೆ’ ಚಿತ್ರದಲ್ಲಿ ಭ್ರಮೆಯಿಂದ ಬಳಲುವ ಯುವಕನಾಗಿ ನೀಡಿದ ಅಭಿನಯ ಜನರ ಗಮನ ಸೆಳೆಯಿತು. ಅದೇ ವರ್ಷ ತೆರೆಕಂಡ ‘ಹಮ್ ತುಮ್ ಔರ್ ವೋ’ ಚಿತ್ರದಿಂದ ನಾಯಕನಟರಾಗಿ ಗುರುತಿಸಿಕೊಂಡರು.
‘‍ಪೂರಬ್‌ ಔರ್ ಪಶ್ಚಿಮ್’, ‘ಸಚ್ಚಾ ಝೂಟಾ’, ‘ಮೇರಾ ಗಾಂವ್ ಮೇರಾ ದೇಶ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಗಮನ ಸೆಳೆಯುವ ಅಭಿನಯ ನೀಡಿದರು.
ಖನ್ನಾ, ಅಮಿತಾಬ್‌ ಬಚ್ಚನ್ ಜತೆಯಾಗಿ ನಟಿಸಿದ್ದ ‘ಅಮರ್ ಅಕ್ಬರ್ ಅಂತೋಣಿ’, ಚಿತ್ರದಲ್ಲಿ ಅಮರ್ ಖನ್ನಾ ಪಾತ್ರದಲ್ಲಿ  ವಿನೋದ್ ಖನ್ನಾ ಮಿಂಚಿದ್ದರು. ಇವರಿಬ್ಬರೂ ‘ಪರ್ವರಿಶ್’, ‘ರೇಷ್ಮಾ ಔರ್ ಶೇರಾ’, ‘ಮುಕದ್ದರ್ ಕಾ ಸಿಕಂದರ್’, ‘ಝಮೀರ್’, ‘ಹೇರಾ ಫೇರಿ’, ‘ಖೂನ್ ‍ಪಸೀನಾ’ದಂತಹ ಸೂಪರ್‌ಹಿಟ್ ಚಿತ್ರಗಳನ್ನು ನೀಡಿದರು.
ಅಧ್ಯಾತ್ಮ ಗುರು ಓಶೊ ರಜನೀಶ್ ಅವರ ಅನುಯಾಯಿ ಆಗಲು, ಅಭಿನಯ ಕ್ಷೇತ್ರದ ಪ್ರಸಿದ್ಧಿ ತೊರೆದು 1982ರಲ್ಲಿ ಅಮೆರಿಕಕ್ಕೆ ಹೋಗಿದ್ದರು. ಆದರೆ ಐದು ವರ್ಷಗಳ ಬಳಿಕ ಅಭಿನಯಕ್ಕೆ ಹಿಂದಿರುಗಿದ ಅವರು ಬಹಳ ಬೇಗನೆ ತಮ್ಮ ಸ್ಥಾನ ಮರಳಿ ಪಡೆದರು. ನಂತರ ‘ಇನ್ಸಾಫ್’, ‘ದಯಾವಾನ್’ನಂತಹ ಹಿಟ್ ಚಿತ್ರಗಳನ್ನು ನೀಡಿದರು.
ಕೊನೆಯ ದಿನಗಳವರೆಗೂ ಖನ್ನಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಸಲ್ಮಾನ್ ಖಾನ್ ಅಭಿನಯದ ‘ದಬಾಂಗ್’ ಸರಣಿ ಚಿತ್ರಗಳು ಹಾಗೂ ಶಾರುಕ್‌ ಖಾನ್‌ರ 2015ರಲ್ಲಿ ಬಿಡುಗಡೆಯಾದ ‘ದಿಲ್‌ವಾಲೆ’, ಖನ್ನಾ ಅವರ ಕೊನೆಯ ದಿನದ ಚಿತ್ರಗಳು.
ಚಿತ್ರರಂಗ ಮಾತ್ರವಲ್ಲದೆ ರಾಜಕೀಯದಲ್ಲಿಯೂ ಖನ್ನಾ ತಮ್ಮನ್ನು ತೊಡಗಿಸಿಕೊಂಡಿದ್ದರು.1997ರಲ್ಲಿ ಪಂಜಾಬ್‌ನ ಗುರುದಾಸ್‌ಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2009ರಲ್ಲಿ ಇಲ್ಲಿ ಸೋಲನುಭವಿಸಿದ್ದ ಅವರು ಪುನಃ 2014ರಲ್ಲಿ ಇದೇ ಕ್ಷೇತ್ರದಲ್ಲಿ ಗೆಲುವು ಪಡೆದರು.
2002ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾಗಿದ್ದರು. ನಂತರ ವಿದೇಶಾಂಗ ವ್ಯವಹಾರಗಳ ಖಾತೆಯನ್ನೂ ನಿರ್ವಹಿಸಿದ್ದರು.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಖನ್ನಾ 2017ರ ಏಪ್ರಿಲ್ 27ರಂದು 70ನೇ ವಯಸ್ಸಿನಲ್ಲಿ ನಿಧನರಾದರು.
ಮೇ 3ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ನೀಡಲಿದ್ದಾರೆ.
ಶ್ರೀದೇವಿ ಅತ್ಯುತ್ತಮ ‘ಮಾಮ್’
ಶ್ರೀದೇವಿಗೆ ಪ್ರಶಸ್ತಿ ಘೋಷಣೆಯಾಗಿರುವ ಕುರಿತುಪ್ರತಿಕ್ರಿಯಿಸಿದ ಪತಿ, ನಿರ್ಮಾಪಕ ಬೋನಿ ಕಪೂರ್ ಅವರು ‘ಧನ್ಯವಾದಗಳು. ಇದನ್ನು ನೋಡಲು ಆಕೆ ಇಂದು ಇಲ್ಲಿರಬೇಕಿತ್ತು ಎಂದು ಆಶಿಸುತ್ತೇನೆ’ ಎಂದಿದ್ದಾರೆ.
ತಾಯಿಯ ಸಾಧನೆಯನ್ನು ಗುರುತಿಸಿದ್ದಕ್ಕಾಗಿ ಪುತ್ರಿಯರಾದ ಜಾನ್ವಿ, ಖುಷಿ ಕೇಂದ್ರ ಸರ್ಕಾರ ಹಾಗೂ ಪ್ರಶಸ್ತಿ ಆಯ್ಕೆ ಸಮಿತಿಗೆ ಧನ್ಯವಾದ ಸಲ್ಲಿಸಿದ್ದಾರೆ.
‘ಇದು ನಮಗೆ ಅತ್ಯಂತ ವಿಶೇಷವಾದ ಸಂದರ್ಭ. ಆಕೆ ಸದಾ ಎಲ್ಲ ಕೆಲಸಗಳಲ್ಲಿಯೂ ಪರಿಪೂರ್ಣತೆ ಸಾಧಿಸುತ್ತಿದ್ದರು. 300 ಚಲನಚಿತ್ರಗಳಲ್ಲಿಯೂ ಇದು ಕಾಣುತ್ತದೆ. ಆಕೆ ಅತ್ಯದ್ಭುತ ಕಲಾವಿದೆ ಮಾತ್ರ ಆಗಿರಲಿಲ್ಲ. ಅತ್ಯದ್ಭುತ ಪತ್ನಿ, ತಾಯಿಯೂ ಆಗಿದ್ದರು. ಇದು ಅವರ ಜೀವನ ಮತ್ತು ಸಾಧನೆಗಳನ್ನು ಆಚರಿಸುವ ಸಮಯ. ಇಂದು ಆಕೆ ನಮ್ಮೊಂದಿಗಿಲ್ಲ. ಆದರೆ ಆಕೆಯ ಪರಂಪರೆ ಸದಾ ಇರುತ್ತದೆ’ ಎಂದು ಬೋನಿ ಕಪೂರ್ ಹೇಳಿದ್ದಾರೆ.
ಅರ್ಹ ನಟಿ: ‘ನಾವು ಹೊಂದಿರುವ ಬಾಂಧವ್ಯಕ್ಕಾಗಿ ಅಲ್ಲ, ಮಾಮ್ ಚಿತ್ರದಲ್ಲಿನ ಅಭಿನಯಕ್ಕಾಗಿ ಆಕೆ ಅತ್ಯುತ್ತಮ ನಟಿ ಪ್ರಶಸ್ತಿಗೆ ಅರ್ಹರಾಗಿದ್ದರು’ ಎಂದು ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದ ಶೇಖರ್ ಕಪೂರ್ ಹೇಳಿದ್ದಾರೆ. 1987ರಲ್ಲಿ ಶ್ರೀದೇವಿ ಅವರ ‘ಮಿ.ಇಂಡಿಯಾ’ ಚಿತ್ರದಲ್ಲಿ ಅವರು ಜತೆಯಾಗಿ ಕಾರ್ಯನಿರ್ವಹಿಸಿದ್ದರು.
‘ಮಾಮ್’ ಚಿತ್ರದ ಸಹನಟ, ಪಾಕಿಸ್ತಾನಿ ಕಲಾವಿದ ಅದ್ನಾನ್ ಸಿದ್ದಿಕಿ, ‘ನನಗೆ ಆಶ್ಚರ್ಯವಾಗಿಲ್ಲ. ಅವರು ‍ಪ್ರ‍ಪಂಚದ ಪ್ರತಿಯೊಂದು ಪ್ರಶಸ್ತಿಗೂ ಅರ್ಹರು. ಪ್ರಶಸ್ತಿಯ ವಿದಾಯ ದೊರಕಿದ್ದು ನನಗೆ ಸಂತಸವಾಗಿದೆ. ಆದರೆ ಇಂದು ಅವರು ಇಲ್ಲಿ ಇಲ್ಲದ ವೇಳೆಯಲ್ಲಿ ಪ್ರಶಸ್ತಿ ದೊರಕಿದ್ದು ನನಗೆ ದುಃಖವಾಗಿದೆ’ ಎಂದು ಹೇಳಿದ್ದಾರೆ.
*ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ- ವಿನೋದ್ ಖನ್ನಾ
*ಅತ್ಯುತ್ತಮ ನಟಿ- ಶ್ರೀದೇವಿ (ಮಾಮ್)
*ಅತ್ಯುತ್ತಮ ನಟ- ರಿಧಿ ಸೇನ್ (ನಾಗರಕೀರ್ತನ್)
*ಅತ್ಯುತ್ತಮ ನಿರ್ದೇಶಕ- ಜಯರಾಜ್ (ಮಲಯಾಳಂ ಚಿತ್ರ: ಭಯಾನಕಮ್)
*ಅತ್ಯುತ್ತಮ ಚಿತ್ರ ವಿಮರ್ಶಕ- ಗಿರಿಧರ್ ಝಾ
*ಅತ್ಯುತ್ತಮ ಜನಪ್ರಿಯ ಚಿತ್ರ- ಬಾಹುಬಲಿ: ದಿ ಕನ್‌ಕ್ಲೂಷನ್
*ಅತ್ಯುತ್ತಮ ಹಿನ್ನೆಲೆ ಸಂಗೀತ- ಎ.ಆರ್. ರೆಹಮಾನ್
*ಅತ್ಯುತ್ತಮ ಹಿನ್ನೆಲೆ ಗಾಯಕ- ಯೇಸುದಾಸ್
*ಅತ್ಯುತ್ತಮ ಹಿನ್ನೆಲೆ ಗಾಯಕಿ- ಶಾಶಾ ತ್ರಿಪಾಠಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...