ವಿಷಯಕ್ಕೆ ಹೋಗಿ

ಮುಂಬೈ ಮತ್ತು ಎಲಿಫಾಂಟ ದ್ವೀಪ ಪ್ರದೇಶ ನಡುವೆ ದೇಶದ ಮೊದಲ ರೋಪ್ ವೇ

mumbai_up
ದೇಶದ ಮೊದಲ ಹಾಗೂ ಅತಿ ಉದ್ದನೆಯ ರೋಪ್ ವೇ ಮುಂಬೈ ಹಾಗೂ ಎಲಿಫೆಂಟ ದ್ವೀಪ ಪ್ರದೇಶದ ನಡುವೆ ಸಂಪರ್ಕ ಕಲ್ಪಿಸಲಿದೆ. ಈ ಉದ್ದೇಶಿತ ರೋಪ್ ವೇ ಯನ್ನು ಮುಂಬೈ ಪೋರ್ಟ್ ಟ್ರಸ್ಟ್ ನಿರ್ಮಿಸಲಿದ್ದು, ಅರಬ್ಬಿ ಸಮುದ್ರದ ಮೇಲೆ ನಿರ್ಮಾಣಗೊಳ್ಳಲಿದೆ. ಎಲಿಫಾಂಟ ದ್ವೀಪ ಪ್ರದೇಶ ಎಲಿಫೆಂಟ ಗುಹೆಗಳಿಂದ ವಿಶ್ವ ಪ್ರಸಿದ್ದಿಯಾಗಿದೆ. ಅಲ್ಲದೇ ಇದು ಯುನೆಸ್ಕೊ ವಿಶ್ವ ಪಾರಂಪರಿಕ ತಾಣ ಸಹ ಆಗಿದೆ. 8 ಕಿಮೀ ಉದ್ದದ ರೋಪ್ ವೇ ಮುಂಬೈಯ ಪೂರ್ವ ಕರಾವಳಿಯಲ್ಲಿರುವ ಸೆವರಿಯಿಂದ ಪ್ರಾರಂಭವಾಗಲಿದೆ ಮತ್ತು ರಾಯ್ಗಡ್ ಜಿಲ್ಲೆಯ ಎಲಿಫೆಂಟ ದ್ವೀಪದಲ್ಲಿ ಕೊನೆಗೊಳ್ಳುತ್ತದೆ.
• 20 ಆಸನಗಳ ಸಾಮರ್ಥ್ಯ ಕೇಬಲ್ ಕಾರು ಮೂಲಕ 40 ನಿಮಿಷದಲ್ಲಿ ತಲುಪುಬಹುದಾಗಿದ್ದು, ಪ್ರವಾಸೋಧ್ಯಮಕ್ಕೆ ವರದಾನವಾಗಲಿದೆ.
• ಸದ್ಯ ಈ ಪ್ರದೇಶಕ್ಕೆ ಹಡುಗಗಳ ಮೂಲಕ ಮಾತ್ರ ತಲುಪಬಹುದಾಗಿದ್ದು, ಸುಮಾರು 1 ಗಂಟೆಗೂ ಹೆಚ್ಚು ಸಮಯ ಹಿಡಿಯಲಿದೆ.
ಎಲಿಫೆಂಟ ಗುಹೆಗಳು:
ಎಲಿಫೆಂಟಾ ಗುಹೆಗಳು ಮುಂಬಯಿ ನಗರದ ಸಮೀಪ ಸಾಗರದಲ್ಲಿರುವ ಎಲಿಫೆಂಟಾ ದ್ವೀಪದಲ್ಲಿವೆ. ಎಲಿಫೆಂಟಾ ದ್ವೀಪದ ಮೂಲ ಮರಾಠಿ ಹೆಸರು ಘಾರಾಪುರಿ. ಪೋರ್ಚುಗೀಸರು ಈ ಹೆಸರನ್ನು ಎಲಿಫೆಂಟಾಎಂದು ಬದಲಾಯಿಸಿದರು. 1987ರಲ್ಲಿ ಎಲಿಫೆಂಟಾ ಗುಹೆಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಿತು. ಎಲಿಫೆಂಟಾ ಗುಹೆಗಳ ಇತಿಹಾಸವು 9 ರಿಂದ 13ನೆಯ ಶತಮಾನದಲ್ಲಿದ್ದ ಸಿಲ್ಹರ ಅರಸರ ಕಾಲದ್ದೆಂದು ನಂಬಲಾಗಿದೆ. ಆದರೆ ಇಲ್ಲಿನ ಕೆಲ ಶಿಲಾಮೂರ್ತಿಗಳು ಮಾನ್ಯಖೇಟದ ರಾಷ್ಟ್ರಕೂಟರ ಕಾಲದವೆಂದು ಸಹ ಕೆಲ ಅಭಿಪ್ರಾಯಗಳಿವೆ. ಇಲ್ಲಿ ಶಿವನ ಮೂರು ಮುಖಗಳನ್ನು ಹೊಂದಿರುವ ತ್ರಿಮೂರ್ತಿ ಸದಾಶಿವ ವಿಗ್ರಹವು ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರನ್ನು ಬಲು ಮಟ್ಟಿಗೆ ಹೋಲುತ್ತದೆ. ಈ ಸದಾಶಿವ ತ್ರಿಮೂರ್ತಿಯು ರಾಷ್ಟ್ರಕೂಟರ ರಾಜಲಾಂಛನವು ಸಹ ಆಗಿತ್ತು. ನಟರಾಜ ಮತ್ತು ಅತ್ಯಾಕರ್ಷಕವಾಗಿರುವ ಅರ್ಧನಾರೀಶ್ವರ ಮೂರ್ತಿಗಳು ಸಹ ರಾಷ್ಟ್ರಕೂಟ ಶೈಲಿಯವು. ಶಿಲೆಯಲ್ಲಿ ಕೊರೆದು ರೂಪಿಸಲಾಗಿರುವ ಎಲಿಫೆಂಟಾ ಗುಹೆಗಳು ಸುಮಾರು ೬೦೦೦೦ ಚದರ ಅಡಿಗಳಷ್ಟು ವಿಸ್ತಾರವಾಗಿವೆ. ಇಲ್ಲಿ ಅನೇಕ ಮೊಗಸಾಲೆಗಳು, ಹಜಾರಗಳಿದ್ದು ಹಲವು ಗುಡಿಗಳನ್ನು ಕಾಣಬಹುದು. ಈ ಗುಡಿಗಳಲ್ಲಿ ನಾನಾ ಶಿಲಾಮೂರ್ತಿಗಳಿವೆ. ಜೊತೆಗೆ ಒಂದು ಶಿವಾಲಯವು ಸಹ ಪ್ರಧಾನವಾಗಿದೆ. ಈ ದೇವಾಲಯ ಸಂಕೀರ್ಣವು ಶಿವನ ಆವಾಸತಾಣವೆಂದು ಸ್ಥಳೀಯರ ನಂಬಿಕೆ.
 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...