ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪರೀಕ್ಷೆ ಭಯವೇ, ಸಂಗೀತ ಕೇಳಿ!

ಡಾ. ವಿಜಯದಾಸ್

 ಯಾವ ಮೋಹನ ಮುರಳಿ ಕರೆಯಿತೋ ದೂರ ತೀರಕೆ ನಿನ್ನನು’, ‘ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ’, ‘ನಾದಮಯ ಈ ಲೋಕವೆಲ್ಲಾಹೀಗೆ ಸೊಗಸಾದ ಹಾಡುಗಳು ತೇಲಿಬರುತ್ತಿದ್ದರೆ, ಕೇಳುಗರು ಭಾವಪರವಶತೆಯಿಂದ ಆ ಸಂಗೀತದಲ್ಲಿಯೇ ಮುಳುಗಿ ಹೋಗುವುದನ್ನು ನಾವು ಕಾಣುವುದುಂಟು. ಸುಶ್ರಾವ್ಯ ಸಂಗೀತದಲ್ಲಿರುವ ಆನಂದ ನೀಡುವಂತಹ ಅದ್ಭುತ ಗುಣವೇ ಇದಕ್ಕೆ ಕಾರಣ.
ಸಂಗೀತ ನಮ್ಮ ಭಾವನೆಗಳೊಂದಿಗೆ ಸಂಬಂಧ ಹೊಂದಿರುತ್ತದೆ ಹಾಗೂ ಎಲ್ಲೋ ಸುಪ್ತವಾಗಿರುವ ಸುಮಧುರ ಭಾವವನ್ನು ಜಾಗೃತಗೊಳಿಸುತ್ತದೆ. ಆ ಮೂಲಕ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ, ಉಲ್ಲಾಸವನ್ನೂ ಉಂಟು ಮಾಡುತ್ತದೆ.
ಭಾರತದ ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಸೇರಿದಂತೆ, ಈ ಕಲೆಯ ಬೇರೆ ಬೇರೆ ಪ್ರಕಾರಗಳಾದ ಭಾವಗೀತೆ, ಭಕ್ತಿಗೀತೆ, ಚಿತ್ರಗೀತೆ, ಜಾನಪದ ಹಾಗೂ ವಾದ್ಯ ತಾಳದ ಅಲೆಗಳು ವಿವಿಧ ರೂಪಗಳಲ್ಲಿ, ವಿವಿಧ ವ್ಯಕ್ತಿತ್ವದ ಜನರಿಗೆ ಮುದವನ್ನು ನೀಡುತ್ತವೆ. ಆದರೆ ರಾಗ, ತಾಳ ತಪ್ಪಿದ ಗಾನ, ಕರ್ಕಶವಾಗಿ, ಕೇಳುಗರಿಗೆ ಮಾನಸಿಕ ಹಿಂಸೆಯನ್ನು ಉಂಟುಮಾಡಬಹುದು.
ಉತ್ತಮ ಸಂಗೀತ ಎಲ್ಲರ ಗಮನ ಸೆಳೆಯುತ್ತದೆ. ಅದು ಕೋಗಿಲೆಗಾನ, ಪಕ್ಷಿಗಳ ಕಲರವ ಅಥವಾ ಹರಿಯುವ ನದಿಯ ಜುಳು ಜುಳು ನಾದ... ಯಾವುದೂ ಆಗಿರಬಹುದು. ಮನುಷ್ಯನನ್ನು ಧ್ಯಾನದಲ್ಲಿ ಲೀನವಾಗಿಸಲೂ ಸಂಗೀತ ಸಹಕಾರಿ.
ಸಂಗೀತ ಚಿಕಿತ್ಸೆ ಎಂಬ ಪದ್ಧತಿ ಇತ್ತೀಚೆಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಪ್ರಚಲಿತವಾಗುತ್ತಿದೆ ಹಾಗೂ ಇದರ ಬಗ್ಗೆ ಬಹಳಷ್ಟು ಸಂಶೋಧನೆಗಳು ನಡೆದಿವೆ. ಭಾರತದಲ್ಲಿ ಸಂಗೀತವು ಅನಾದಿ ಕಾಲದಿಂದ, ಸಾಂಸ್ಕೃತಿಕ ಹಾಗೂ ಮನರಂಜನಾ ಕಲೆಯಾಗಿ ಜನಸಾಮಾನ್ಯರಲ್ಲಿ ಹಾಸು ಹೊಕ್ಕಾಗಿದೆ.
ಸಂಗೀತವನ್ನು ನಿರ್ದಿಷ್ಟ ರೀತಿಯಲ್ಲಿ, ನಿರ್ದಿಷ್ಟ ಬಗೆಯ ರೋಗಿಗಳಿಗೆ, ನಿರ್ದಿಷ್ಟ ಕಾಲದಲ್ಲಿ, ಅಳವಡಿಸಿದರೆ ಅದು ಸಂಗೀತ ಚಿಕಿತ್ಸೆಯಾಗುತ್ತದೆ. ಇದರಿಂದ ಆರೋಗ್ಯಕರ ಅನುಭವಗಳು ಹಲವಾರು ರೋಗಿಗಳಲ್ಲಿ ಕಂಡು ಬಂದಿರುವುದನ್ನು ದಾಖಲಿಸಲಾಗಿದೆ.
ಮನಸ್ಸಿಗೆ ಮುದ ನೀಡುವ ಧ್ವನಿತರಂಗಗಳು ಯಾವುದೇ ಚಿಕಿತ್ಸೆಗೂ ಪೂರಕವಾಗಿ ಸಹಾಯ ಮಾಡಬಲ್ಲವು. ಇದರ ಪ್ರಯೋಜನ ಪಡೆಯಲು ಆಸಕ್ತಿ ಮತ್ತು ವಿಶ್ವಾಸ ಮುಖ್ಯ. ಸಂಗೀತವನ್ನು ಕೇಳಿಯಾದರೂ, ನುಡಿಸಿಯಾದರೂ ಅಥವಾ ಹಾಡಿಯಾದರೂ ಪ್ರಯೋಜನ ಪಡೆಯಬಹುದು. ಇದರಿಂದ ಮಾನಸಿಕ ಒತ್ತಡ ನಿಯಂತ್ರಣ ಹೊಂದಿ ಮನೋದೈಹಿಕ ವ್ಯತ್ಯಾಸಗಳನ್ನು ತಕ್ಕಮಟ್ಟಿಗೆ ತಡೆಗಟ್ಟುವಲ್ಲಿ ಸಾಧ್ಯವಾಗುತ್ತದೆ ಎಂಬುದು ಸಂಶೋಧನೆಗಳಿಂದ ಕಂಡುಬಂದ ವರದಿ.
ಸಂಗೀತಕ್ಕೆ ಸಂಬಂಧಪಟ್ಟಂತೆ ಹಲವಾರು ಸಂಶೋಧನೆಗಳು ನಡೆದಿದ್ದು, ಅಲ್ಲಿ ಕಂಡುಬಂದ ಕೆಲವು ಅಂಶಗಳು ಹೀಗಿವೆ:
*ಸಂಗೀತ ಕೇಳುವುದರಿಂದ ಮಾನಸಿಕ ಒತ್ತಡದಲ್ಲಿರುವವರಿಗೆ ನೆಮ್ಮದಿ ಹೊಂದಲು ಸಹಕಾರಿ. ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಎದುರಿಸುವ ಒತ್ತಡವೂ ಸಂಗೀತ ಕೇಳುವುದರಿಂದ ಕಡಿಮೆ ಆಗುತ್ತದೆ.
*ಸಂಗೀತ ಕೇಳುವುದರಿಂದ ಡೋಪಮಿನ್ ಎಂಬ ಹಾರ್ಮೋನ್ ಮತ್ತು ಇತರೆ ರಾಸಾಯನಿಕ ದ್ರವ್ಯಗಳು ಮೆದುಳಿನಲ್ಲಿ ಸ್ರವಿಸುವ ಕಾರಣ ನೆನಪಿನ ಶಕ್ತಿ ವೃದ್ಧಿಸುತ್ತದೆ. ಕಲಿಕೆ ಹಾಗೂ ಬಯೋಫೀಡ್‍ಬ್ಯಾಕ್‌ಗೆ ಇದರಿಂದ ತುಂಬಾ ಅನುಕೂಲವಾಗುವುದು.
*ಶಸ್ತ್ರಚಿಕಿತ್ಸೆಯ ಮೊದಲು ಮತ್ತು ನಂತರದಲ್ಲಿ ಹೆಡ್‍ಫೋನ್ ಮೂಲಕ ಸಂಗೀತ ಕೇಳುವುದರಿಂದ ಚಿಕಿತ್ಸೆಯ ಭಯ ಮತ್ತು ಆತಂಕ ಕಡಿಮೆಯಾಗುವುದು.
*ವೃದ್ಧಾಪ್ಯದಲ್ಲಿ, ಖಿನ್ನತೆ ಹೊಂದಿದವರಿಗೆ ಸಂಗೀತ ಆತ್ಮಸ್ಥೈರ್ಯ ಹೊಂದಲು ಅನುಕೂಲವಾಗುವುದು.
*ಕ್ಯಾನ್ಸರ್ ರೋಗಿಗಳಲ್ಲಿ, ಅವರು ಜೀವಭಯ ತೊರೆದು ಗುಣಮಟ್ಟದ ಜೀವನ ನಡೆಸಲು ಸಂಗೀತ ಪ್ರಭಾವ ಬೀರುವುದು.
*ಸ್ತನ್ಯಪಾನ ಮಾಡಿಸುವ ತಾಯಂದಿರಲ್ಲಿ ಹೆಚ್ಚಿನ ಹಾಲು ಸ್ರವಿಸಲು ನೆರವಾಗುವುದು.
*ಅಧಿಕ ರಕ್ತದೊತ್ತಡ ನಿಯಂತ್ರಿಸುವಲ್ಲಿ ಶಾಸ್ತ್ರೀಯ ಸಂಗೀತ (ಅದರ ಕೆಲವು ರಾಗಗಳು) ಸಹಕಾರಿಯಾಗುವುದು.
ಇಷ್ಟೆಂದ ಮಾತ್ರಕ್ಕೆ ಸಂಗೀತವೇ ಸರ್ವಬಾಧೆಗೂ ಪರಿಹಾರವಲ್ಲ. ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಇದು ಸಹಕಾರಿ. ಚಿಕಿತ್ಸೆಗೆ ಪೂರಕವಾಗಿ ಆಸ್ಪತ್ರೆಯ ಚಿಕಿತ್ಸಾ ಘಟಕಗಳಲ್ಲಿ ಮೆದುಧ್ವನಿಯಲ್ಲಿ ಸುಶ್ರಾವ್ಯ ಸಂಗೀತ ತೇಲಿ ಬರುತ್ತಿದ್ದರೆ, ರೋಗಿ, ಶುಶ್ರೂಷಕ ಸಿಬ್ಬಂದಿ, ವೈದ್ಯ ಎಲ್ಲರಿಗೂ ಹೊಸ ಚೈತನ್ಯ ಉಂಟಾಗಬಹುದು.
(ಲೇಖಕರು: ಸಹಪ್ರಾಧ್ಯಾಪಕರು, ಶರೀರ ಕ್ರಿಯಾಶಾಸ್ತ್ರ ವಿಭಾಗ, ಎಂ.ಎಸ್.ರಾಮಯ್ಯ ಮಹಾವಿದ್ಯಾಲಯ)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...