ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಭಾರತದ ಪಕ್ಷಗಳ ಬಗ್ಗೆ ನಿಮಗೆಷ್ಟು ಗೊತ್ತು?

✴️ಅಖಿಲ ಭಾರತ ಕಾಂಗ್ರೇಸ್ ಪಕ್ಷ :
        1885ರಲ್ಲಿ  ಸ್ಥಾಪನೆಯಾಯಿತು.ಭಾರತದ ಹಳೆಯದಾದ ಪಕ್ಷಗಳಲ್ಲಿ ಒಂದಾಗಿದೆ.ಇದು ದೇಶದಲ್ಲಿ ಅತೀ ಹೆಚ್ಚು ಆಡಳಿತ ನಡೆಸಿದ ಪಕ್ಷವಾಗಿದೆ.
━━━━━━━━━━━━
✴️ಭಾರತೀಯ ಜನತಾ ಪಕ್ಷ :
      1980 ರಲ್ಲಿ ಸ್ಥಾಪನೆಯಾಯಿತು.ಹಿಂದುತ್ವ , ಹಿಂದೂ ರಾಷ್ಟ್ರೀಯತೆ ಜೊತೆ ಗುರುತಿಸಿಕೊಂಡಿದೆ.ಔದರ ಸ್ಥಾಪಕರು ಅಟಲೊ ಬಿಹಾರಿ ವೋಜಪೇಯಿ & ಶ್ಯಾಮ್ ಪ್ರಸಾದ್ ಮುಖಜಿ೯.
━━━━━━━━━━━━━
✴️ಜನತಾ ದಳ ಪಕ್ಷ :
        1989ರಲ್ಲಿ ವಿ.ಪಿ.ಸಿಂಗ್ ರ ನೇತೃತ್ವದಲ್ಲಿ ಸ್ಥಾಪನೆಯಾಯಿತು.ಜಯಪ್ರಕಾಶ್ ನಾರಾಯಣರ ಸಿದ್ಧಾಂತಗಳನ್ನು ಅಳವಡಿಸಿಕೊಂಡಿದೆ.
━━━━━━━━━━━━━
✴️ಕಮ್ಯೂನಿಸ್ಟ್ ಪಾಟಿ೯ ಆಫ್ ಇಂಡಿಯಾ :
      1920ರಲ್ಲಿ ಎಂ.ಎನ್.ರಾಯ್ ರಿಂದ ಸ್ಥಾಪನೆ.ಕಾಮಿ೯ಕ ಮತ್ತು ದುಡಿಯುವ ವಗ೯ದವರ ಹಿತಾಸಕ್ತಿ ಕಾಪಾಡುವುದಕ್ಕಾಗಿ ಈ ಪಕ್ಷ ಸ್ಥಾಪನೆಯಾಯಿತು.
━━━━━━━━━━━━━
✴️ಕಮ್ಯೂನಿಸ್ಟ್ ಪಾಟಿ೯ ಆಫ್ ಇಂಡಿಯಾ (ಮಾಕ್ವಿ೯ಸ್ಟ್ ):
        ಸಿಪಿಎ ಪಕ್ಷದಿಂದ ಪ್ರತ್ಯೇಕಗೊಂಡು 1964 ರಲ್ಲಿ ಸ್ಥಾಪನೆಯಾಯಿತು.ಇದು ಕೂಡ ಕಾಮಿ೯ಕರು , ರೈತರು ಹಾಗೂ ಹಿಂದುಳಿದ ವಗ೯ದವರ ಹಿತಾಸಕ್ತಿಗೆ ಹೋರಾಡುವ ಪಕ್ಷವಾಗಿದೆ.
━━━━━━━━━━━━━
✴️ರಾಷ್ಟ್ರೀಯ ಜನತಾ ದಳ :
        ಜನತಾದಳದಲ್ಲಿನ ಭಿನ್ನಾಭಿಪ್ರಾಯದಿಂದಾಗಿ ಲಾಲೂ ಪ್ರಸಾದ್ ಯಾದವ್ 1997 ರಲ್ಲಿ ಈ ಪಕ್ಷವನ್ನು ಸ್ಥಾಪಿಸಿದರು.
━━━━━━━━━━━━━
✴️ಸಮಾಜವಾದಿ ಪಾಟಿ೯  :
        ಜನತಾದಳ ಎಸ್ ಮತ್ತು ಜನತಾ ಪಕ್ಷ ಕೂಡಿಕೊಂಡು 1992ರಲ್ಲಿ ಸ್ಥಾಪನೆಯಾಯಿತು. ಇದರ ಸ್ಥಾಪಕರು ಮುಲಾಯಂ ಸಿಂಗ್ ಯಾದವ್ ರವರು.
━━━━━━━━━━━━━
✴️ಬಹುಜನ ಸಮಾಜವಾದಿ ಪಾಟಿ೯ :
         1984ರಲ್ಲಿ ಕಾನ್ಶಿರಾಂ ಇದನ್ನು ಸ್ಥಾಪಿಸಿದರು. ಇದು ಅನುಸೂಚಿತ ಜಾತಿ ,ಅನುಸೂಚಿತ ಪಂಗಡದವರ ಹಿತವನ್ನು ಕಾಪಾಡುವುದಕ್ಕಾಗಿ ಹೋರಾಟ ಮಾಡುತ್ತದೆ .
━━━━━━━━━━━━━
✴️ಆಲ್ ಇಂಡಿಯಾ ತೃಣಮೂಲ ಕಾಂಗ್ರೇಸ್ :
        ಕಾಂಗ್ರೇಸ್ ಪಕ್ಷದಲ್ಲಿನ ಭಿನ್ನಾಭಿಪ್ರಾಯದಿಂದಾಗಿ 1998ರಲ್ಲಿ ಮಮತಾ ಬ್ಯಾನಜಿ೯ ಈ ಪಕ್ಷವನ್ನು ಸ್ಥಾಪಿಸಿದರು.
━━━━━━━━━━━━━
✴ನ್ಯಾಷನಲಿಸ್ಟ್ ಕಾಂಗ್ರೇಸ್ ಪಾಟಿ೯ :
      ಕಾಂಗ್ರೇಸ್ ಪಕ್ಷದ ಭಿನ್ನಾಭಿಪ್ರಾಯದಿಂದಾಗಿ 1999ರಲ್ಲಿ ಶರದ್ ಪವಾರ್, ಪಿ.ಎ.ಸಂಗ್ಮಾ ಮತ್ತು ತಾರೀಕ್ ಅನ್ವರ್ ಕೂಡಿಕೊಂಡು ಸ್ಥಾಪನೆ ಮಾಡಿದರು.
━━━━━━━━━━━━━
✴️ಅಕಾಲಿದಳ ಪಕ್ಷ :
      ಪಂಜಾಬ್ ನ ಪ್ರಮುಖ ಪಕ್ಷವಾಗಿದೆ.1920ರಲ್ಲಿ ಸಿಖ್ಖರ ಹೌತಾಸಕ್ತಿ ಕಾಪಾಡುವುದಕ್ಕಾಗಿ ಸ್ಥಾಪನಗಯಾಯಿತು.
━━━━━━━━━━━━━
✴️ಆಲ್ ಇಂಡಿಯಾ ಫಾವ೯ಡ್೯ ಬ್ಲಾಕ್ :
        1940ರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಇದನ್ನು  ಸ್ಥಾಪಿಸಿದರು.ಸಮಾಜವಾದ ರಾಷ್ಟ್ರ ಕಟ್ಟುವುದು ಇದರ ಉದ್ದೇಶವಾಗಿದೆ.
━━━━━━━━━━━━━
✴ಅಸ್ಸಾಂ ಗಣ ಪರಿಷತ್ತು :
        1985ರಲ್ಲಿ ಪ್ರಫುಲ್ ಕುಮಾರ್ ಮಹಾಂತ ಇದನ್ನು ಸ್ಥಾಪಿಸಿದರು.ಇದು ಅಸ್ಸಾಂನ ಪ್ರಮುಖ ಪಕ್ಷವಾಗಿದೆ.
━━━━━━━━━━━━━
✴ತೆಲುಗು ದೇಶಂ :
          1982ರಲ್ಲಿ ಎನ್.ಟಿ.ರಾಮರಾವ್ ಆಂಧ್ರಪ್ರದೇಶದಲ್ಲಿ ಸ್ಥಾಪನೆ ಮಾಡಿದರು.ಇದು ಬಡತನ ಮತ್ತು ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಉದ್ದೇಶ ಹೊಂದಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....