ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಐರ್ಲೆಂಡ್‌ನಲ್ಲಿ ಗರ್ಭಪಾತ ನಿಷೇಧ ರದ್ದು

ಡಬ್ಲಿನ್‌ : ಯುರೋಪ್‌ ನಲ್ಲಿಯೇ ಸಂಪ್ರದಾಯವಾದಿ ರಾಷ್ಟ್ರ ಎಂದು ಕರೆಸಿಕೊಳ್ಳುವ ಐರ್ಲೆಂಡ್‌ ಗರ್ಭಪಾತಕ್ಕೆ ಸಂಬಂಧಿಸಿದ ಕಾನೂನಿನಲ್ಲಿ ಬದಲಾವಣೆ ತರುವ ಮೂಲಕ ಉದಾರವಾದದತ್ತ ಮುಖ ಮಾಡಿದೆ.
ಶನಿವಾರ ನಡೆದ ಜನಮತ ಗಣನೆಯಲ್ಲಿ ಗರ್ಭಪಾತಕ್ಕೆ ಅವಕಾಶ ನೀಡಬೇಕು ಎಂಬುದರ ಪರವಾಗಿ ಶೇ 68ರಷ್ಟು ಜನರು ಮತ ಚಲಾಯಿಸಿದ್ದರೆ, ಶೇ 32ರಷ್ಟು ಜನರು ವಿರೋಧಿಸಿ ಮತ ಚಲಾಯಿಸಿದ್ದಾರೆ.
1995ರಲ್ಲಷ್ಟೇ ಜನಮತಗಣನೆ ನಡೆದು, ವಿವಾಹ ವಿಚ್ಛೇದನವನ್ನು ಕೆಲವೇ ಮತಗಳ ಅಂತರದಿಂದ ಕಾನೂನುಬದ್ಧಗೊಳಿಸಿದ್ದ ಐರ್ಲೆಂಡ್‌ನಲ್ಲಿ ಈಗ ಗರ್ಭಪಾತಕ್ಕೆ ಅವಕಾಶ ನೀಡಲು ಕಾನೂನು ತಿದ್ದುಪಡಿ ತರುತ್ತಿರುವುದು ರಾಷ್ಟ್ರ ಬದಲಾವಣೆಗೆ ತನ್ನನ್ನು ಒಡ್ಡಿಕೊಳ್ಳುವ ಪ್ರಕ್ರಿಯೆಯಲ್ಲಿ ಮೈಲುಗಲ್ಲು ಎಂದು ಬಣ್ಣಿಸಲಾಗುತ್ತಿದೆ.
‘ನಾಳೆ ನಾವು ಇತಿಹಾಸ ಸೃಷ್ಟಿಸುತ್ತಿದ್ದೇವೆ ಎನಿಸುತ್ತಿದೆ’ ಎಂದು ಉದ್ಗರಿಸಿರುವ ಪ್ರಧಾನಿ ಲಿಯೋ ವರಾಡ್ಕರ್‌, ಗರ್ಭಪಾತಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಸಂವಿಧಾನದ 8ನೇ ತಿದ್ದುಪಡಿ ರದ್ದತಿಗೆ ಬೆಂಬಲ ನೀಡುವುದಾಗಿ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ.
‘ಪ್ರತಿವರ್ಷ ಐರ್ಲೆಂಡ್‌ನಿಂದ ಸಾವಿರಾರು ಗರ್ಭಿಣಿಯರು ಇಂಗ್ಲೆಂಡ್‌ಗೆ ಹೋಗಿ ಗರ್ಭಪಾತ ಮಾಡಿಸಿಕೊಂಡು ಬರುತ್ತಾರೆ. ಇಷ್ಟು ವೆಚ್ಚವನ್ನು ಭರಿಸ
ಲಾಗದ ಅಸಹಾಯಕರು ಗರ್ಭಪಾತಕ್ಕೆ ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ತಾಯಿ ಮತ್ತು ಮಗುವಿನ ಪ್ರಾಣಕ್ಕೆ ಕುತ್ತು ಎದುರಾದಾಗ ಗರ್ಭಪಾತ ಅನಿವಾರ್ಯವಾಗಲಿದ್ದು, ಅದಕ್ಕೆ ಅವಕಾಶ ನೀಡಬೇಕು’ ಎಂದು ಈ ವಿಷಯದ ಪರವಾಗಿ ಇರುವವರು ವಾದ ಮಂಡಿಸಿದ್ದಾರೆ.
ಇದನ್ನು ವಿರೋಧಿಸುವ ಗುಂಪಿನವರು ಸಹ ತಮ್ಮ ವಾದ ಮಂಡಿಸಿದ್ದು, ‘ಇಂತಹ ನಡೆ ದೌರ್ಭಾಗ್ಯವೇ ಸರಿ’ ಎಂದಿದ್ದಾರೆ.
****
ಕಾನೂನು ತಿದ್ದುಪಡಿಗೆ ಸವಿತಾ ಸಾವು ಕಾರಣ
ಗರ್ಭಪಾತಕ್ಕೆ ಕಾನೂನಿನಡಿ ಅವಕಾಶ ನೀಡಬೇಕು ಎಂಬ ವಿಷಯ ಬಿಟ್ಟರೆ ಸಾಮಾಜಿಕವಾಗಿ ಪರಿಣಾಮ ಬೀರುವಂತೆ ಬೇರೆ ಯಾವುದೇ ವಿಷಯಗಳು ಅರ್ಧಕೋಟಿಯಷ್ಟಿರುವ ಐರಿಷ್‌ ಜನರ ನಡುವೆ ಇಷ್ಟೊಂದು ಭಿನ್ನಾಭಿಪ್ರಾಯ ಮೂಡಿಸಿರಲಿಲ್ಲ ಎನ್ನಲಾಗಿದೆ.
ಬೆಳಗಾವಿ ಮೂಲದ ದಂತ ವೈದ್ಯೆ ಡಾ.ಸವಿತಾ ಹಾಲಪ್ಪನವರ್, ಗರ್ಭ ಧರಿಸಿದ ಸಂದರ್ಭದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆ ಎದುರಿಸುತ್ತಿದ್ದ ಕಾರಣ ಗರ್ಭಪಾತ ಮಾಡಿಸಿಕೊಳ್ಳಲು ಮುಂದಾಗಿದ್ದರು. ಆದರೆ, ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಐರ್ಲೆಂಡ್‌ನ ಆಸ್ಪತ್ರೆಯೊಂದು ಗರ್ಭಪಾತ ಮಾಡಲು ನಿರಾಕರಿಸಿದ ಕಾರಣ  ಸವಿತಾ 2012ರಲ್ಲಿ ಮೃತಪಟ್ಟಿದ್ದರು.
ಈ ಘಟನೆ ನಂತರ, ಗರ್ಭದಲ್ಲಿರುವ ಮಗು ಅಥವಾ ತಾಯಿಗೆ ಆರೋಗ್ಯ ಸಮಸ್ಯೆ ಎದುರಾದಾಗ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡಬೇಕು ಎಂಬ ಬೇಡಿಕೆಯೊಂದಿಗೆ ವಿವಿಧ ಸಂಘಟನೆಗಳು ಹೋರಾಟ ಕೈಗೊಂಡಿದ್ದವು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....