ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ನಮೋ ಹೆಜ್ಜೆ ಗುರುತು

ಕೇಂದ್ರದಲ್ಲಿ ಎನ್​ಡಿಎ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದು ಮೇ 26ಕ್ಕೆ 4 ವರ್ಷ ಪೂರ್ಣಗೊಳ್ಳಲಿದೆ. ಈ ಅವಧಿಯಲ್ಲಿ ಸರ್ಕಾರ ಸಾಧಿಸಿದ್ದೇನು? ಸಾಧಿಸದೆ ಮರೆತಿದ್ದೇನು? ಯಾವ್ಯಾವ ರಂಗಗಳಲ್ಲಿ ಏನೇನು ಬದಲಾವಣೆ ಆಗಿದೆ ಎಂಬ ಕುತೂಹಲ ಗರಿಗೆದರಿದೆ. ಈ ಮಾಹಿತಿಗಳ ಬೆನ್ನತ್ತಿ ವಿಜಯವಾಣಿ ಸಮಗ್ರ ವರದಿ ಸಿದ್ಧಪಡಿಸಿದ್ದು ಇಂದಿನಿಂದ ಸರಣಿ ರೂಪದಲ್ಲಿ ಓದುಗರ ಮುಂದಿಡುತ್ತಿದೆ.
100 ದಿನದ ಮುನ್ನೋಟ
# ತುರ್ತು ಗುರಿ, ವಲಯವಾರು ಕ್ಷೇತ್ರಗಳಿಗೆ ಆದ್ಯತೆ
# ದಿನದ 18 ಗಂಟೆ ಕಾರ್ಯ ನಿರ್ವಹಿಸಲು ಸಂಪುಟ
# ಸಚಿವರಿಗೆ, ಪ್ರಧಾನಿ ಕಾರ್ಯಾಲಯ ಸಿಬ್ಬಂದಿಗೆ ಸೂಚನೆ
ವಿಜಯಯಾತ್ರೆ
# ಸುದೀರ್ಘ 10 ವರ್ಷಗಳ ಯುಪಿಎ ಆಡಳಿತಕ್ಕೆ ತೆರೆ ಎಳೆದ ಮೋದಿ
# 2014ರ ಚುನಾವಣೆಯಲ್ಲಿ ದೇಶಾದ್ಯಂತ ನಡೆಯಿತು ನಮೋ ಮೋಡಿ
# 9 ಹಂತಗಳ ಮತದಾನ ಮುಗಿಯುವ ಮುನ್ನ ಬರೋಬ್ಬರಿ 450 ರ‍್ಯಾಲಿ
# ಪೂರ್ಣ ಬಹುಮತ ಬಂದರೂ ಮಿತ್ರಪಕ್ಷಗಳಿಗೆ ಸಂಪುಟದಲ್ಲಿ ಸ್ಥಾನ
ಮೋದಿ ಸರ್ಕಾರಕ್ಕೆ 4 ವರ್ಷ
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ‘ವಿಜಯವಾಣಿ’ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಮೊದಲ ಭಾಗ ಇಲ್ಲಿದೆ.
ವಿಜಯಯಾತ್ರೆ
10 ವರ್ಷಗಳ ಯುಪಿಎ ಆಡಳಿತದ ನಂತರ 2014ರಲ್ಲಿ ನಡೆದ ಲೋಕಸಭಾ ಚುನಾವಣೆ ಭಾರಿ ಮಹತ್ವ ಪಡೆದಿತ್ತು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿಸಿ, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಸಾಧಿಸಿತು. ಮೊದಲ ಬಾರಿ ಸ್ವಂತಬಲದ ಮೇಲೆ ಸರ್ಕಾರ ರಚಿಸಿತು. ಮತದಾನ ಮುಗಿಯುವ ಹೊತ್ತಿಗೆ ಮೋದಿ ದೇಶಾದ್ಯಂತ 450 ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಮೇ 16ರಂದು ಫಲಿತಾಂಶ ಪ್ರಕಟಗೊಂಡು ಬಿಜೆಪಿ 282 ಸ್ಥಾನಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ 44 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಬಹುಮತ ಇದ್ದಿದ್ದರಿಂದ ಯಾವುದೇ ಪಕ್ಷಗಳನ್ನು ಓಲೈಸುವ ಸಂದರ್ಭ ಬರಲಿಲ್ಲವಾದರೂ, ಎನ್​ಡಿಎ ಮೈತ್ರಿಕೂಟದ ಪಕ್ಷಗಳಿಗೆ ಸಂಪುಟದಲ್ಲೂ ಸ್ಥಾನ ನೀಡಿದರು ಮೋದಿ.
ಸಾರ್ಕ್ ರಾಷ್ಟ್ರಗಳಿಗೆ ಆಹ್ವಾನ
ನರೇಂದ್ರ ಮೋದಿ ಪ್ರಮಾಣವಚನ ಸಮಾರಂಭವನ್ನೂ ಐತಿಹಾಸಿಕವಾಗಿಸಿದರು. 2014ರ ಮೇ 26ರ ಪ್ರಮಾಣವಚನ ಸಮಾರಂಭಕ್ಕೆ ಸಾರ್ಕ್ (ಸೌತ್ ಏಷ್ಯನ್ ಅಸೋಸಿಯೇಷನ್ ಫಾರ್ ರೀಜನಲ್ ಕೋ ಆಪರೇಷನ್- ಪ್ರಾದೇಶಿಕ ಸಹಕಾರಕ್ಕಾಗಿರುವ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಂಘಟನೆ) ರಾಷ್ಟ್ರಗಳ ಮುಖ್ಯಸ್ಥರನ್ನು ಆಹ್ವಾನಿಸಿದರು. ಇದಕ್ಕೆ ಓಗೊಟ್ಟು ಆ ದೇಶಗಳ ಮುಖ್ಯಸ್ಥರು ಆಗಮಿಸಿದರು. ಏಳು ರಾಷ್ಟ್ರಗಳ ಮುಖ್ಯಸ್ಥರು, 4,000 ಅತಿಥಿಗಳ ಉಪಸ್ಥಿತಿಯಲ್ಲಿ ದೇಶದ 15ನೇ ಪ್ರಧಾನಿಯಾಗಿ ರಾಷ್ಟ್ರಪತಿ ಭವನದ ಪ್ರಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮೊದಲ ಬಾರಿಗೆ ಸಂಸತ್ ಪ್ರವೇಶ
ಮುಖ್ಯಮಂತ್ರಿಯಾಗಿಯೇ ಮೊದಲ ಬಾರಿಗೆ ಗುಜರಾತ್ ವಿಧಾನಸಭೆ ಪ್ರವೇಶಿಸಿದ್ದ ಮೋದಿ, ಪ್ರಧಾನಿಯಾಗಿಯೇ ಮೊದಲ ಬಾರಿ ಸಂಸತ್ತನ್ನು ಪ್ರವೇಶಿಸಿದರು. ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಮುಖಂಡರು ಹಾಗೂ ನೂತನವಾಗಿ ಆಯ್ಕೆಯಾದ ಸಂಸದರನ್ನು ಉದ್ದೇಶಿಸಿ ಮಾತನಾಡಲು ಸಂಸತ್ ಭವನದ ಸೆಂಟ್ರಲ್ ಹಾಲ್​ಗೆ ಆಗಮಿಸುವಾಗ ಪ್ರವೇಶದ್ವಾರದಲ್ಲೇ ಮೆಟ್ಟಿಲಿಗೆ ನಮಸ್ಕರಿಸಿ, ಪ್ರಜಾತಂತ್ರದ ಪಾವಿತ್ರ್ಯ ಸಾರಿದರು. ಅಂದು ಭಾವಪೂರ್ಣ ಭಾಷಣ ಮಾಡಿ ‘ಸಂಸತ್ತು ಪ್ರಜಾಪ್ರಭುತ್ವದ ಮಂದಿರ. ನಾವು 125 ಕೋಟಿ ಭಾರತೀಯರ ಆಶಾಭಾವ ಹಾಗೂ ನಿರೀಕ್ಷೆಯನ್ನು ಹೊತ್ತು ಬಂದಿದ್ದೇವೆ. ಹೊಣೆಗಾರಿಕೆ ನಿಭಾಯಿಸಲು ನಾವೆಲ್ಲರೂ ನಮ್ಮನ್ನೇ ಸಮರ್ಪಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.
100 ದಿನದ ಮುನ್ನೋಟ
ಸರ್ಕಾರ ಮೊದಲ 100 ದಿನಗಳಲ್ಲಿ ನೀಡಬೇಕಾದ ವಲಯ, ಕ್ಷೇತ್ರಗಳ ಆದ್ಯತೆ, ಸಾಧಿಸಬೇಕಾದ ತುರ್ತು ಗುರಿಗಳ ಬಗ್ಗೆ ಗಮನ ಹರಿಸಿದ ಮೋದಿ ಆ ಬಗ್ಗೆ ಮುನ್ನೋಟ ಮುಂದಿರಿಸಿದರು. ಸಂಪುಟದ ಸಚಿವರಿಗೆ, ಪ್ರಧಾನಿ ಕಾರ್ಯಾಲಯದ ಸಿಬ್ಬಂದಿಗೆ ದಿನಕ್ಕೆ 16-18 ಗಂಟೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಜಡ್ಡುಗಟ್ಟಿದ ಆಡಳಿತ ವ್ಯವಸ್ಥೆಯಲ್ಲಿ ಮಿಂಚಿನ ಸಂಚಾರ ಸೃಷ್ಟಿಯಾಯಿತು. ಪ್ರತಿ ಇಲಾಖೆಗೂ ಕಾಲಮಿತಿಯಲ್ಲಿ ಕೆಲಸಗಳನ್ನು ಪೂರೈಸುವಂತೆ ಸೂಚಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....