ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ.
ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ.
ಆಡಳಿತಕ್ಕೆ ಹೊಸ ಸ್ಪರ್ಶ
‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ.
ಓಬೀರಾಯನ ಕಾಲದ ಕಾನೂನು ರದ್ದು
ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ಕಾಯ್ದೆಗಳನ್ನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದೆ. ಇದರಲ್ಲಿ 2 ಸಾವಿರಕ್ಕೂ ಅಧಿಕ ಕಾಯ್ದೆಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಸುಮಾರು 1 ಸಾವಿರ ಕಾಯ್ದೆಗಳನ್ನು ರದ್ದುಪಡಿಸುವ ಪ್ರಸ್ತಾವನೆಯು ಲೋಕಸಭೆ ಮುಂದಿದೆ.
ವಾಸ್ತವಿಕ ಮುಂಗಡಪತ್ರ, ಅಭಿವೃದ್ಧಿ ಕಾರ್ಯತಂತ್ರ
ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸತತ 5 ಬಜೆಟ್ ಮಂಡಿಸಿದ್ದಾರೆ. ಆಕರ್ಷಕ ಯೋಜನೆಗಳನ್ನು ಘೋಷಿಸಿ ಜನರನ್ನು ಮರುಳು ಮಾಡುವ ಕಸರತ್ತಿನ ಬದಲು ವಾಸ್ತವಿಕ ಬಜೆಟ್ನತ್ತ ಗಮನ ನೀಡಲಾಗಿದೆ. ಸ್ವಚ್ಛ ಭಾರತ್, ಸ್ಮಾರ್ಟ್ ಇಂಡಿಯಾ, ಮೇಕ್ ಇನ್ ಇಂಡಿಯಾ, ವಸತಿ ರಹಿತರಿಗೆ ಸೂರು, ಅಮೃತ್ನಂತಹ ಪರಿಣಾಮಕಾರಿ ಯೋಜನೆಗಳಿಗೆ ಮಣೆ ಹಾಕಲಾಗಿದೆ. ಈ ಬಾರಿ ಸರ್ವರಿಗೂ ಆರೋಗ್ಯ ವಿಮೆ ಯೋಜನೆ ಘೋಷಿಸಿದ್ದು, ಭಾರತೀಯ ಆರೋಗ್ಯ ಕ್ಷೇತ್ರದ ಕ್ರಾಂತಿಗೆ ಕಾರಣವಾಗಲಿದೆ ಎಂಬ ನಿರೀಕ್ಷೆಯಿದೆ. ರೇಲ್ವೆ ಬಜೆಟ್ಟನ್ನು ಸಾಮಾನ್ಯ ಮುಂಗಡಪತ್ರದಲ್ಲಿ ವಿಲೀನಗೊಳಿಸಿದ್ದು, ಹೊಸ ರೇಲ್ವೆ ಯೋಜನೆ-ಮಾರ್ಗಗಳ ಘೋಷಣೆ ಬದಲು ಹಿಂದಿನ ಸರ್ಕಾರಗಳು ಘೋಷಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಸರ್ಕಾರ ಆದ್ಯತೆ ನೀಡಿದೆ. ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ರೈಲು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.
ಹಣದುಬ್ಬರ ನಿಯಂತ್ರಣ
ಯುಪಿಎ ಸರ್ಕಾರದ ಅವಧಿಯಲ್ಲಿ ಎರಡಂಕಿ ತಲುಪಿದ್ದ ಹಣದುಬ್ಬರವು ಈಗ ಶೇ.4ರ ಆಸುಪಾಸಿನಲ್ಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದ್ದು ಮೋದಿ ಸರ್ಕಾರಕ್ಕೆ ವರವಾಗಿ ಪರಿಣಮಿಸಿತು.
ಕಾರ್ವಿುಕ ನೀತಿ
# ಮಹಿಳಾ ಉದ್ಯೋಗಿಗಳ ಹೆರಿಗೆ ರಜೆ ಅವಧಿ 16 ವಾರದಿಂದ 26 ವಾರಕ್ಕೆ ಏರಿಕೆ
# ಸ್ಕಿಲ್ ಇಂಡಿಯಾ ಯೋಜನೆ ಮೂಲಕ ಕಾರ್ವಿುಕರಿಗೆ ಕೌಶಲ ತರಬೇತಿ
# ಇಪಿಎಫ್ಒ ಸಂಪೂರ್ಣ ಆನ್ಲೈನ್. ಒಂದು ಕಂಪನಿಯಿಂದ ಮತ್ತೊಂದು ಕಂಪನಿಗೆ ಖಾತೆ ವರ್ಗಾವಣೆ ಸೌಲಭ್ಯ.
# ಭೂಸ್ವಾಧೀನ ಮಸೂದೆ
# ಕೈಗಾರಿಕೆಗೆ ಭೂಮಿ ವಶಪಡಿಸಿಕೊಳ್ಳುವ ನೀತಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ವಿವಾದ ಬಳಿಕ ಹಿಂದಕ್ಕೆ ಪಡೆಯಲಾಯಿತು.
ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ.
ಆಡಳಿತಕ್ಕೆ ಹೊಸ ಸ್ಪರ್ಶ
‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ.
ಓಬೀರಾಯನ ಕಾಲದ ಕಾನೂನು ರದ್ದು
ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ಕಾಯ್ದೆಗಳನ್ನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದೆ. ಇದರಲ್ಲಿ 2 ಸಾವಿರಕ್ಕೂ ಅಧಿಕ ಕಾಯ್ದೆಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಸುಮಾರು 1 ಸಾವಿರ ಕಾಯ್ದೆಗಳನ್ನು ರದ್ದುಪಡಿಸುವ ಪ್ರಸ್ತಾವನೆಯು ಲೋಕಸಭೆ ಮುಂದಿದೆ.
ವಾಸ್ತವಿಕ ಮುಂಗಡಪತ್ರ, ಅಭಿವೃದ್ಧಿ ಕಾರ್ಯತಂತ್ರ
ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸತತ 5 ಬಜೆಟ್ ಮಂಡಿಸಿದ್ದಾರೆ. ಆಕರ್ಷಕ ಯೋಜನೆಗಳನ್ನು ಘೋಷಿಸಿ ಜನರನ್ನು ಮರುಳು ಮಾಡುವ ಕಸರತ್ತಿನ ಬದಲು ವಾಸ್ತವಿಕ ಬಜೆಟ್ನತ್ತ ಗಮನ ನೀಡಲಾಗಿದೆ. ಸ್ವಚ್ಛ ಭಾರತ್, ಸ್ಮಾರ್ಟ್ ಇಂಡಿಯಾ, ಮೇಕ್ ಇನ್ ಇಂಡಿಯಾ, ವಸತಿ ರಹಿತರಿಗೆ ಸೂರು, ಅಮೃತ್ನಂತಹ ಪರಿಣಾಮಕಾರಿ ಯೋಜನೆಗಳಿಗೆ ಮಣೆ ಹಾಕಲಾಗಿದೆ. ಈ ಬಾರಿ ಸರ್ವರಿಗೂ ಆರೋಗ್ಯ ವಿಮೆ ಯೋಜನೆ ಘೋಷಿಸಿದ್ದು, ಭಾರತೀಯ ಆರೋಗ್ಯ ಕ್ಷೇತ್ರದ ಕ್ರಾಂತಿಗೆ ಕಾರಣವಾಗಲಿದೆ ಎಂಬ ನಿರೀಕ್ಷೆಯಿದೆ. ರೇಲ್ವೆ ಬಜೆಟ್ಟನ್ನು ಸಾಮಾನ್ಯ ಮುಂಗಡಪತ್ರದಲ್ಲಿ ವಿಲೀನಗೊಳಿಸಿದ್ದು, ಹೊಸ ರೇಲ್ವೆ ಯೋಜನೆ-ಮಾರ್ಗಗಳ ಘೋಷಣೆ ಬದಲು ಹಿಂದಿನ ಸರ್ಕಾರಗಳು ಘೋಷಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಸರ್ಕಾರ ಆದ್ಯತೆ ನೀಡಿದೆ. ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ರೈಲು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.
ಹಣದುಬ್ಬರ ನಿಯಂತ್ರಣ
ಯುಪಿಎ ಸರ್ಕಾರದ ಅವಧಿಯಲ್ಲಿ ಎರಡಂಕಿ ತಲುಪಿದ್ದ ಹಣದುಬ್ಬರವು ಈಗ ಶೇ.4ರ ಆಸುಪಾಸಿನಲ್ಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದ್ದು ಮೋದಿ ಸರ್ಕಾರಕ್ಕೆ ವರವಾಗಿ ಪರಿಣಮಿಸಿತು.
ಕಾರ್ವಿುಕ ನೀತಿ
# ಮಹಿಳಾ ಉದ್ಯೋಗಿಗಳ ಹೆರಿಗೆ ರಜೆ ಅವಧಿ 16 ವಾರದಿಂದ 26 ವಾರಕ್ಕೆ ಏರಿಕೆ
# ಸ್ಕಿಲ್ ಇಂಡಿಯಾ ಯೋಜನೆ ಮೂಲಕ ಕಾರ್ವಿುಕರಿಗೆ ಕೌಶಲ ತರಬೇತಿ
# ಇಪಿಎಫ್ಒ ಸಂಪೂರ್ಣ ಆನ್ಲೈನ್. ಒಂದು ಕಂಪನಿಯಿಂದ ಮತ್ತೊಂದು ಕಂಪನಿಗೆ ಖಾತೆ ವರ್ಗಾವಣೆ ಸೌಲಭ್ಯ.
# ಭೂಸ್ವಾಧೀನ ಮಸೂದೆ
# ಕೈಗಾರಿಕೆಗೆ ಭೂಮಿ ವಶಪಡಿಸಿಕೊಳ್ಳುವ ನೀತಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ವಿವಾದ ಬಳಿಕ ಹಿಂದಕ್ಕೆ ಪಡೆಯಲಾಯಿತು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ