ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಮೈಸೂರಿಗೆ ಸ್ವಚ್ಛ ನಗರಿ ಪಟ್ಟ

ಸತತ ಎರಡು ಬಾರಿ ‘ದೇಶದ ನಂ.1 ಸ್ವಚ್ಛ ನಗರಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮೈಸೂರು ಈ ಬಾರಿ ಮಧ್ಯಮ ನಗರ ವಿಭಾಗದಲ್ಲಿ ದೇಶದ ನಂ.1 ಸ್ವಚ್ಛ ನಗರಿ ಪಟ್ಟವನ್ನು ಮುಡಿಗೇರಿಸಿಕೊಂಡಿದೆ.
ಕಳೆದ ಬಾರಿ ಸ್ವಚ್ಛ ನಗರಿ ಪಟ್ಟದಲ್ಲಿ ಹ್ಯಾಟ್ರಿಕ್ ಸಾಧನೆಯ ಕನಸಿನಲ್ಲಿದ್ದ ಮೈಸೂರು ಐದನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಇದುವರೆಗೆ ಒಂದು ವಿಭಾಗದಲ್ಲಿ ಮಾತ್ರ ರ‍್ಯಾಂಕಿಂಗ್ ನೀಡಲಾಗುತ್ತಿತ್ತು. ಆದರೆ, ಇದೇ ಪ್ರಥಮ ಬಾರಿಗೆ ಬೃಹತ್, ಮಧ್ಯಮ, ಸಣ್ಣ ನಗರ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ವಚ್ಛ ನಗರಿಯ ರ‍್ಯಾಂಕಿಂಗ್ ಘೊಷಿಸಲಾಗಿದ್ದು, ಮಧ್ಯಮ (3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ) ನಗರ ವಿಭಾಗದಲ್ಲಿ ಮೈಸೂರು ದೇಶದ ನಂ.1 ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಈ ವರ್ಷದ ವರದಿಯನ್ನು ಬಿಡುಗಡೆ ಮಾಡಿ ದ್ದಾರೆ. ಈ ಜನವರಿಯಿಂದ ಮಾರ್ಚ್​ವರೆಗೆ ದೇಶದ 4203 ನಗರಗಳಲ್ಲಿ ಸ್ವಚ್ಛ ಸವೇಕ್ಷಣ ನಡೆದಿತ್ತು.
ಮಧ್ಯಪ್ರದೇಶದ ಇಂದೋರ್ ಮೊದಲ ಸ್ಥಾನ, ಭೋಪಾಲ್ ನಗರ ಸತತ ಎರಡನೇ ಬಾರಿಗೆ ಎರಡನೇ ಸ್ವಚ್ಛ ನಗರ ಎಂಬ ಖ್ಯಾತಿ ಪಡೆದಿದೆ. ಚಂಡೀಗಢಕ್ಕೆ 3ನೇ ಸ್ಥಾನ ಲಭಿಸಿದೆ. ಆಶ್ಚರ್ಯಕರ ಬೆಳವಣಿಗೆಯಲ್ಲಿ ಗ್ರೇಟರ್ ಮುಂಬೈಗೆ ಸ್ವಚ್ಛ ರಾಜಧಾನಿ ಪಟ್ಟ ದೊರೆತಿದೆ. ಉತ್ತರಪ್ರದೇಶದ ಗಾಜಿಯಾಬಾದ್​ಗೆ
ಉತ್ತಮ ಸುಧಾರಣೆ ಮಾಡುತ್ತಿರುವ ನಗರ ಎಂಬ ಪ್ರಶಸ್ತಿ ನೀಡಲಾಗಿದೆ. ಕಳೆದ ಬಾರಿ 351ನೇ ರ್ಯಾಂಕ್​ನಲ್ಲಿದ್ದ ನಗರವು 36ನೇ ರ್ಯಾಂಕ್​ಗೆ ಜಿಗಿದಿದೆ. ಏತನ್ಮಧ್ಯೆ ಬಿಜೆಪಿ ಆಡಳಿತಾರೂಢ ಜಾರ್ಖಂಡ್ ರಾಜ್ಯವು ಸ್ವಚ್ಛ ಭಾರತ ಅಭಿಯಾನದಲ್ಲಿ ಉತ್ತಮ ಕಾರ್ಯನಿರ್ವಹಣೆಯ ಪ್ರಶಸ್ತಿಗೆ ಭಾಜನವಾಗಿದೆ. ಉಳಿದಂತೆ ಬೃಹತ್ ನಗರ ವಿಭಾಗದಲ್ಲಿ ವಿಜಯವಾಡ, ಸಣ್ಣ ನಗರ ವಿಭಾಗದಲ್ಲಿ ನವದೆಹಲಿಯ ಮುನ್ಸಿಪಲ್ ಕೌನ್ಸಿಲ್ (ಎನ್​ಡಿಎಂಸಿ) ಆಯ್ಕೆಯಾಗಿವೆ.
ತಪು್ಪ ತಿದ್ದಿಕೊಂಡರು
ಕಳೆದ ಬಾರಿ ಶೌಚಗೃಹ ನಿರ್ಮಾಣ ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆಯಲ್ಲಿ ಹಿಂದೆ ಬಿದ್ದ ಹಿನ್ನೆಲೆಯಲ್ಲಿ ಮೈಸೂರು ದೇಶದ ನಂ.1 ಸ್ವಚ್ಛ ನಗರಿ ಪಟ್ಟ ಕಳೆದುಕೊಂಡಿತ್ತು. ಆದರೆ, ಈ ಬಾರಿ ಆ ಎಲ್ಲ ತಪ್ಪುಗಳನ್ನು ಸರಿಪಡಿಸಿಕೊಂಡ ಕಾರಣ ಮಧ್ಯಮ ನಗರ ವಿಭಾಗದಲ್ಲಿ ನಂ.1 ಸ್ಥಾನ ದೊರೆತಿದೆ. ಪ್ರಥಮ ಬಾರಿಗೆ ಎಲ್ಲ ಧರ್ಮಗಳ ಗುರುಗಳು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು. ಪ್ರತಿಯೊಂದು ಶಾಲೆ, ಕಾಲೇಜುಗಳಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸ ಲಾಯಿತು. ಅಲ್ಲದೆ, ಸ್ವಚ್ಛ ಸರ್ವೆಕ್ಷಣಾ ತಂಡ ನಗರಕ್ಕೆ ಆಗಮಿಸುವ ಸಂದರ್ಭ ಹಾಗೂ ಅದಕ್ಕೂ ಮುನ್ನ ಪೌರಕಾರ್ವಿುಕರು ಹಗಲಿರುಳು ಎನ್ನದೆ ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು. ಸ್ವಚ್ಛತಾ ರಾಯಭಾರಿಗಳನ್ನು ನೇಮಕ ಮಾಡಿ ಅವರ ಮೂಲಕವೂ ಜನಜಾಗೃತಿ ಮೂಡಿಸಲಾಯಿತು. ಈ ಬಾರಿ ಮಾಧ್ಯಮ ಸಹಭಾಗಿತ್ವವೂ ಉತ್ತಮವಾಗಿತ್ತು. ಜಿಲ್ಲಾ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸಭೆ ನಡೆಸಿ ಸ್ವಚ್ಛ ಸರ್ವೆಕ್ಷಣೆಗೆ ಸಂಪೂರ್ಣ ಬೆಂಬಲ, ಸಹಕಾರ ನೀಡಲಾಯಿತು. ಇದೆಲ್ಲದರ ಪರಿಣಾಮವಾಗಿ ಮೈಸೂರಿಗೆ ಮಧ್ಯಮ ನಗರ ವಿಭಾಗದಲ್ಲಿ ನಂ.1 ಸ್ವಚ್ಛ ನಗರಿ ಎಂಬ ಪಟ್ಟ ಒಲಿದಿದೆ.
ವರದಿ ವಿವರ
# ಸ್ವಚ್ಛ ಭಾರತ ಅಭಿಯಾನದಲ್ಲಿ ಉತ್ತಮ ಕಾರ್ಯನಿರ್ವಹಣೆ ರಾಜ್ಯ- ಜಾರ್ಖಂಡ್
# ಸ್ವಚ್ಛ ರಾಜಧಾನಿ- ಗ್ರೇಟರ್ ಮುಂಬೈ
# ಸ್ವಚ್ಛ ನಗರ(10 ಲಕ್ಷಕ್ಕೂ ಅಧಿಕ ಜನ ಇರುವ ನಗರ)- ವಿಜಯವಾಡ
# ಸ್ವಚ್ಛ ನಗರ(3-10 ಲಕ್ಷ ಜನರಿರುವ ನಗರ)- ಮೈಸೂರು
# ಸ್ವಚ್ಛತೆ ನಿರ್ವಹಣೆಯಲ್ಲಿ ಉತ್ತಮ ಪ್ರಯೋಗ ಹಾಗೂ ಸಂಶೋಧನೆ- ನಾಗ್ಪುರ
ವಿಭಾಗವಾರು ಸ್ವಚ್ಛ ನಗರಿ
# ಉತ್ತರ- ಭಾಲ್ಸೋ, ಪಂಜಾಬ್
# ಪೂರ್ವ- ಬುಂಡು, ಜಾರ್ಖಂಡ
#  ದಕ್ಷಿಣ- ಸಿದ್ದಿಪೇಟ್, ತೆಲಂಗಾಣ
#  ಪಶ್ಚಿಮ- ಪಂಚ್ಗನಿ, ಮಹಾರಾಷ್ಟ್ರ
ಮಂಗಳೂರಿಗೆ ಘನ ತ್ಯಾಜ್ಯ ವಿಲೇವಾರಿ ಪ್ರಶಸ್ತಿ
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ಸ್ವಚ್ಛ ಸರ್ವೆಕ್ಷಣ್-2018ರಲ್ಲಿ ಮಧ್ಯಮ ಮಟ್ಟದ ನಗರಗಳ ವಿಭಾಗದಲ್ಲಿ ಮಂಗಳೂರು ನಗರವೂ ಪ್ರಶಸ್ತಿ ಗಳಿಸಿಕೊಂಡಿದೆ. ಘನ ತ್ಯಾಜ್ಯ ವಿಲೇವಾರಿ ಕ್ಷೇತ್ರದಲ್ಲಿ ಮಂಗಳೂರು ನಗರವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 3ರಿಂದ 10 ಲಕ್ಷ ಜನಸಂಖ್ಯೆಯೊಳಗಿನ ಮಧ್ಯಮ ಗಾತ್ರದ ನಗರಗಳ ವಿಭಾಗದಲ್ಲಿ ಈ ಪ್ರಶಸ್ತಿ ಮಂಗಳೂರಿಗೆ ಸಿಕ್ಕಿದೆ. 1 ಲಕ್ಷ ಜನಸಂಖ್ಯೆಯೊಳಗಿನ ನಗರಗಳ ದಕ್ಷಿಣ ವಲಯ ವಿಭಾಗದಲ್ಲಿ ಘನ ತ್ಯಾಜ್ಯ ವಿಲೇವಾರಿ ಕ್ಷೇತ್ರದ ಉತ್ತಮ ನಗರ ಪ್ರಶಸ್ತಿ ರಾಜ್ಯದ ಹುಣಸೂರಿಗೆ ಲಭಿಸಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....