ವಿವಿಧ ಹಣಕಾಸು ಅಕ್ರಮಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ, ಈಗ ಹೊಸ ಯೋಜನೆಯೊಂದನ್ನು ಘೋಷಿಸಿದೆ. ಕಪು್ಪಹಣ, ತೆರಿಗೆ ವಂಚನೆ, ಬೇನಾಮಿ ಆಸ್ತಿಗಳನ್ನು ಹೊಂದಿರುವವರ ಬಗ್ಗೆ ಖಚಿತ ಮಾಹಿತಿಗಳನ್ನು ನೀಡುವವರಿಗೆ -ಠಿ;50 ಲಕ್ಷದಿಂದ -ಠಿ; 5 ಕೋಟಿವರೆಗೆ ಬಹುಮಾನ ನೀಡುವುದಾಗಿ ತಿಳಿಸಿದೆ.
ಅಕ್ರಮಗಳ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಉತ್ತೇಜಿಸುವುದು, ಆರ್ಥಿಕ ಅಪರಾಧ ಎಸಗುವವರನ್ನು ಕಾನೂನು ವ್ಯಾಪ್ತಿಗೆ ತಂದು ಅಕ್ರಮ ಆಸ್ತಿಗಳನ್ನು ವಶಕ್ಕೆ ಪಡೆಯುವುದು ಈ ಯೋಜನೆ ಉದ್ದೇಶವಾಗಿದೆ ಎಂದು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಹೇಳಿಕೊಂಡಿದೆ. ನಿಗದಿತ ಮಾದರಿಯಲ್ಲಿ, ನಿಖರವಾಗಿ ಮಾಹಿತಿ ನೀಡಬೇಕು. ಮಾಹಿತಿದಾರರ ಹೆಸರನ್ನು ಯಾವುದೇ ಕಾರಣಕ್ಕೂ ಬಹಿರಂಗ ಮಾಡಲಾಗುವುದಿಲ್ಲ. ವ್ಯಕ್ತಿಗಳ ಹೆಸರನ್ನು ಅತ್ಯಂತ ಗೌಪ್ಯವಾಗಿ ಇಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಪು್ಪಹಣವನ್ನು ಬೇರೊಬ್ಬರ ಹೆಸರಿನಲ್ಲಿ ಹೂಡಿಕೆ ಮಾಡಿ, ತೆರಿಗೆ ವಂಚಿಸುತ್ತಿರುವ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೇನಾಮಿ ಹೆಸರಲ್ಲಿ ವಿದೇಶಗಳಲ್ಲೂ ಹೂಡಿಕೆ ಮಾಡಲಾಗುತ್ತಿದೆ. ಇಂಥವರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. 1988ರ ಬೇನಾಮಿ ಆಸ್ತಿ ವಹಿವಾಟು ಕಾಯ್ದೆಗೆ 2016ರಲ್ಲಿ ತಿದ್ದುಪಡಿ ತಂದಿರುವ ಸರ್ಕಾರ, ಕಾಯ್ದೆಯನ್ನು ಇನ್ನಷ್ಟು ಕಠಿಣಗೊಳಿಸಿದೆ.
ಗರಿಷ್ಠ ಮೊತ್ತದ ಬಹುಮಾನ
ಕೆಲ ಆರ್ಥಿಕ ಅಪರಾಧಿಗಳು ಸಾವಿರಾರು ಕೋಟಿ ರೂ.ಗಳ ವಂಚನೆ ಎಸಗಿದ್ದಾರೆ. ಸಣ್ಣ ಮೊತ್ತದ ಬಹುಮಾನಕ್ಕಾಗಿ ಇಂಥವರ ವಿರುದ್ಧ ಮಾಹಿತಿ ನೀಡಲು ಜನರು ಹೆಚ್ಚು ಆಸಕ್ತಿ ತೋರುವುದಿಲ್ಲ. ದೊಡ್ಡ ಮೊತ್ತದ ಬಹುಮಾನ ಘೋಷಿಸಿದರೆ, ಹೆಚ್ಚಿನ ವಂಚಕರ ಕುರಿತು ಮಾಹಿತಿ ಲಭ್ಯವಾಗುವ ಸಾಧ್ಯತೆ ಇರುತ್ತದೆ ಎಂದು ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿದೇಶಿಗರಿಗೂ ಅವಕಾಶ
ಕೆಲ ವ್ಯಕ್ತಿಗಳು ವಿದೇಶದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿ ಕಪು್ಪಹಣವನ್ನು ಬಿಳಿ ಮಾಡಿಕೊಳ್ಳುವುದು, ಕೇಂದ್ರ ಸರ್ಕಾರಕ್ಕೆ ತೆರಿಗೆ ವಂಚಿಸುವುದು ಮತ್ತಿತರ ಕೃತ್ಯದಲ್ಲಿ ತೊಡಗಿದ್ದಾರೆ. ಇಂಥವರ ಕುರಿತು ಆಯಾ ದೇಶದ ನಾಗರಿಕರೂ ತೆರಿಗೆ ಇಲಾಖೆಗೆ ಮಾಹಿತಿ ನೀಡಬಹುದಾಗಿದೆ. ಅವರಿಗೂ ಬಹುಮಾನ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಪ್ಪುಹಣ ಮಾಹಿತಿ
ಬಹುಮಾನ ಮೊತ್ತ – -ಠಿ; 5 ಕೋಟಿ ಯಾರಿಗೆ ಮಾಹಿತಿ ನೀಡಬೇಕು?- ತೆರಿಗೆ ಇಲಾಖೆಯ ತನಿಖಾ ನಿರ್ದೇಶಕರು
ಅಕ್ರಮಗಳ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಉತ್ತೇಜಿಸುವುದು, ಆರ್ಥಿಕ ಅಪರಾಧ ಎಸಗುವವರನ್ನು ಕಾನೂನು ವ್ಯಾಪ್ತಿಗೆ ತಂದು ಅಕ್ರಮ ಆಸ್ತಿಗಳನ್ನು ವಶಕ್ಕೆ ಪಡೆಯುವುದು ಈ ಯೋಜನೆ ಉದ್ದೇಶವಾಗಿದೆ ಎಂದು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಹೇಳಿಕೊಂಡಿದೆ. ನಿಗದಿತ ಮಾದರಿಯಲ್ಲಿ, ನಿಖರವಾಗಿ ಮಾಹಿತಿ ನೀಡಬೇಕು. ಮಾಹಿತಿದಾರರ ಹೆಸರನ್ನು ಯಾವುದೇ ಕಾರಣಕ್ಕೂ ಬಹಿರಂಗ ಮಾಡಲಾಗುವುದಿಲ್ಲ. ವ್ಯಕ್ತಿಗಳ ಹೆಸರನ್ನು ಅತ್ಯಂತ ಗೌಪ್ಯವಾಗಿ ಇಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಪು್ಪಹಣವನ್ನು ಬೇರೊಬ್ಬರ ಹೆಸರಿನಲ್ಲಿ ಹೂಡಿಕೆ ಮಾಡಿ, ತೆರಿಗೆ ವಂಚಿಸುತ್ತಿರುವ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೇನಾಮಿ ಹೆಸರಲ್ಲಿ ವಿದೇಶಗಳಲ್ಲೂ ಹೂಡಿಕೆ ಮಾಡಲಾಗುತ್ತಿದೆ. ಇಂಥವರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. 1988ರ ಬೇನಾಮಿ ಆಸ್ತಿ ವಹಿವಾಟು ಕಾಯ್ದೆಗೆ 2016ರಲ್ಲಿ ತಿದ್ದುಪಡಿ ತಂದಿರುವ ಸರ್ಕಾರ, ಕಾಯ್ದೆಯನ್ನು ಇನ್ನಷ್ಟು ಕಠಿಣಗೊಳಿಸಿದೆ.
ಗರಿಷ್ಠ ಮೊತ್ತದ ಬಹುಮಾನ
ಕೆಲ ಆರ್ಥಿಕ ಅಪರಾಧಿಗಳು ಸಾವಿರಾರು ಕೋಟಿ ರೂ.ಗಳ ವಂಚನೆ ಎಸಗಿದ್ದಾರೆ. ಸಣ್ಣ ಮೊತ್ತದ ಬಹುಮಾನಕ್ಕಾಗಿ ಇಂಥವರ ವಿರುದ್ಧ ಮಾಹಿತಿ ನೀಡಲು ಜನರು ಹೆಚ್ಚು ಆಸಕ್ತಿ ತೋರುವುದಿಲ್ಲ. ದೊಡ್ಡ ಮೊತ್ತದ ಬಹುಮಾನ ಘೋಷಿಸಿದರೆ, ಹೆಚ್ಚಿನ ವಂಚಕರ ಕುರಿತು ಮಾಹಿತಿ ಲಭ್ಯವಾಗುವ ಸಾಧ್ಯತೆ ಇರುತ್ತದೆ ಎಂದು ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿದೇಶಿಗರಿಗೂ ಅವಕಾಶ
ಕೆಲ ವ್ಯಕ್ತಿಗಳು ವಿದೇಶದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿ ಕಪು್ಪಹಣವನ್ನು ಬಿಳಿ ಮಾಡಿಕೊಳ್ಳುವುದು, ಕೇಂದ್ರ ಸರ್ಕಾರಕ್ಕೆ ತೆರಿಗೆ ವಂಚಿಸುವುದು ಮತ್ತಿತರ ಕೃತ್ಯದಲ್ಲಿ ತೊಡಗಿದ್ದಾರೆ. ಇಂಥವರ ಕುರಿತು ಆಯಾ ದೇಶದ ನಾಗರಿಕರೂ ತೆರಿಗೆ ಇಲಾಖೆಗೆ ಮಾಹಿತಿ ನೀಡಬಹುದಾಗಿದೆ. ಅವರಿಗೂ ಬಹುಮಾನ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಪ್ಪುಹಣ ಮಾಹಿತಿ
ಬಹುಮಾನ ಮೊತ್ತ – -ಠಿ; 5 ಕೋಟಿ ಯಾರಿಗೆ ಮಾಹಿತಿ ನೀಡಬೇಕು?- ತೆರಿಗೆ ಇಲಾಖೆಯ ತನಿಖಾ ನಿರ್ದೇಶಕರು
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ