ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಜಗದ ಕಣ್ಣು ರಷ್ಯಾದತ್ತ, ಕಾವೇರಿದ ಕಾಲ್ಚೆಂಡು ಜ್ವರ

ಬಲಿಷ್ಠ ಕ್ರೀಡಾರಾಷ್ಟ್ರವೆನಿಸಿದ್ದರೂ, ಇತ್ತೀಚೆಗೆ ಡೋಪಿಂಗ್ ಕಳಂಕದಿಂದಾಗಿ ಜಗತ್ತಿನೆದುರು ತಲೆತಗ್ಗಿಸಿ ನಿಂತಿತ್ತು ರಷ್ಯಾ. ಇದೀಗ ಫಿಫಾ ವಿಶ್ವಕಪ್ ಆಯೋಜನೆಯ ಮೂಲಕ ಕ್ರೀಡಾಲೋಕದಲ್ಲಿ ತನ್ನ ವರ್ಚಸ್ಸು ವೃದ್ಧಿಸಿಕೊಳ್ಳಲು ರಷ್ಯಾ ಸಜ್ಜಾಗಿದೆ. ಜೂನ್ 14ರಿಂದ ಒಂದು ತಿಂಗಳ ಕಾಲ ವಿಶ್ವದ ಅತಿದೊಡ್ಡ ರಾಷ್ಟ್ರದ 11 ನಗರಗಳಲ್ಲಿ ವಿಶ್ವ ಕಾಲ್ಚೆಂಡು ಸಮರ ನಡೆಯಲಿದೆ. ಇದಕ್ಕೆ ಮುನ್ನ ಹಿಂದಿನ 20 ಆವೃತ್ತಿಗಳ ಫಿಫಾ ವಿಶ್ವಕಪ್ ಟೂರ್ನಿಗಳ ಸರಣಿ ಮೆಲುಕು ಇಂದಿನಿಂದ ಶುರುವಾಗುತ್ತಿದೆ.
1930: ಉರುಗ್ವೆ
ಚೊಚ್ಚಲ ಫಿಫಾ ವಿಶ್ವಕಪ್​ಗೆ ಆತಿಥ್ಯ ವಹಿಸಿದ ಉರುಗ್ವೆ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿತು. 1930ರ ಜುಲೈ 13ರಿಂದ 30ರವರೆಗೆ 18 ದಿನಗಳ ಕಾಲ ಟೂರ್ನಿ ನಡೆಯಿತು. ಎಲ್ಲ ಪಂದ್ಯಗಳು ಉರುಗ್ವೆ ರಾಜಧಾನಿ ಮಾಂಟೆವಿಡಿಯೊದಲ್ಲೇ ನಡೆದವು. ಒಟ್ಟು 13 ತಂಡಗಳು ಭಾಗವಹಿಸಿದ್ದವು. ದಕ್ಷಿಣ ಅಮೆರಿಕದ 7, ಯುರೋಪ್​ನ 4 ಮತ್ತು ಉತ್ತರ ಅಮೆರಿಕದ 2 ತಂಡಗಳಿದ್ದವು. ದಕ್ಷಿಣ ಅಮೆರಿಕಕ್ಕೆ ಪ್ರಯಾಣ ಪ್ರಯಾಸಕರವಾಗಿದ್ದ ಕಾರಣ ಯುರೋಪ್​ನ ಹೆಚ್ಚಿನ ತಂಡಗಳು ಭಾಗವಹಿಸಲಿಲ್ಲ. ತಂಡಗಳನ್ನು 4 ಗುಂಪುಗಳಲ್ಲಿ ವಿಂಗಡಿಸಲಾಗಿತ್ತು. ಪ್ರತಿ ಗುಂಪಿನ ಅಗ್ರ ತಂಡ ಸೆಮಿಫೈನಲ್​ಗೇರಿದವು. ಫೈನಲ್​ನಲ್ಲಿ ಉರುಗ್ವೆ ತಂಡ 4-2ರಿಂದ ಅರ್ಜೆಂಟೀನಾ ತಂಡವನ್ನು ಸೋಲಿಸಿ ಫಿಫಾ ವಿಶ್ವಕಪ್ ಗೆದ್ದ ಮೊದಲ ತಂಡವೆನಿಸಿತು.
ತಂಡಗಳು: 13, ಪಂದ್ಯಗಳು: 18, ಗೋಲು: 70, ಟಾಪ್ ಗೋಲ್ ಸ್ಕೋರರ್: ಗುಲ್ಲೆರ್ವೆ ಸ್ಟಬಿಲ್ (8, ಅರ್ಜೆಂಟೀನಾ).
1934: ಇಟಲಿ
ಎರಡನೇ ಆವೃತ್ತಿಯ ವಿಶ್ವಕಪ್​ನಲ್ಲೂ ಅತಿಥೇಯ ತಂಡವೇ ಚಾಂಪಿಯನ್ ಆಗಿದ್ದು ವಿಶೇಷ. 1934ರ ಮೇ 27ರಿಂದ ಜೂನ್ 10ರವರೆಗೆ 15 ದಿನಗಳ ಕಾಲ ನಡೆದ ಟೂರ್ನಿಯ ಪಂದ್ಯಗಳಿಗೆ ಇಟಲಿಯ 8 ನಗರಗಳು ಆತಿಥ್ಯ ವಹಿಸಿಕೊಂಡಿದ್ದವು. ವಿಶ್ವಕಪ್​ಗೆ ಮೊದಲ ಬಾರಿ ನಡೆದ ಅರ್ಹತಾ ಸುತ್ತಿನಲ್ಲಿ 32 ತಂಡಗಳಿದ್ದರೆ ಫೈನಲ್ಸ್ ಟೂರ್ನಿಗೆ 16 ತಂಡಗಳು ಅರ್ಹತೆ ಪಡೆದವು. ತನ್ನ ಆತಿಥ್ಯದ ಟೂರ್ನಿಯ ಆಹ್ವಾನವನ್ನು ಕೇವಲ 4 ಯುರೋಪ್ ದೇಶಗಳಷ್ಟೇ ಸ್ವೀಕರಿಸಿದ್ದ ಸಿಟ್ಟಿನಿಂದ ಹಾಲಿ ಚಾಂಪಿಯನ್ ಇಟಲಿ ಟೂರ್ನಿಯಲ್ಲಿ ಆಡಲು ನಿರಾಕರಿಸಿತು. ಪ್ರಿ ಕ್ವಾರ್ಟರ್​ಫೈನಲ್ ಹಂತದಿಂದ ನಾಕೌಟ್ ಮಾದರಿಯಲ್ಲಿ ಟೂರ್ನಿ ನಡೆದಿತ್ತು. ಫೈನಲ್ ಪಂದ್ಯದಲ್ಲಿ ಇಟಲಿ ತಂಡ 2-1ರಿಂದ ಜೆಕೋಸ್ಲೊವಾಕಿಯಾವನ್ನು ಮಣಿಸಿ ಪ್ರಶಸ್ತಿ ಜಯಿಸಿತು. ತಂಡಗಳು: 16, ಪಂದ್ಯಗಳು: 17, ಗೋಲು: 70, ಟಾಪ್ ಗೋಲ್ ಸ್ಕೋರರ್: ಒಲ್ಡ್ ರಿಚ್ ನೆಜೆಡ್ಲಿ (5, ಜೆಕೋಸ್ಲೊವಾಕಿಯಾ).

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...