ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಜಲಸಮರದಲ್ಲಿ ಚೀನಾಕ್ಕೆ ಇಂಡೋ-ಪೆಸಿಫಿಕ್ ಸೆಡ್ಡು

ಹಿಂದು ಮಹಾಸಾಗರದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಾಬಲ್ಯಕ್ಕೆ ತಡೆಯೊಡ್ಡಲು ಇಂಡೋನೇಷ್ಯಾದೊಂದಿಗೆ ಭಾರತ ಕೈ ಜೋಡಿಸಿದ್ದು, ಇಂಡೋನೇಷ್ಯಾದ ಸಬಂಗ್​ನಲ್ಲಿ ನೌಕಾ ಬಂದರು ನಿರ್ವಿುಸಲು ಉಭಯ ದೇಶಗಳು ನಿರ್ಧರಿಸಿವೆ.
ಇಂಡೋ-ಪೆಸಿಫಿಕ್ ಸಾಗರಕ್ಕೆ ಸಂಬಂಧಿಸಿ ಇಂಡೋನೇಷ್ಯಾವು ಚೀನಾ ಜತೆ ತಗಾದೆ ಹೊಂದಿದೆ. ಈ ಹಿನ್ನೆಲೆಯಲ್ಲಿ ಭಾರತದ ‘ಆಕ್ಟ್ ಈಸ್ಟ್’ ನೀತಿ ಅನುಸಾರ ಸಬಂಗ್​ನಲ್ಲಿ ಜಂಟಿಯಾಗಿ ನೌಕಾ ಬಂದರು ನಿರ್ವಿುಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಬುಧವಾರ ದ್ವಿಪಕ್ಷೀಯ ಮಾತುಕತೆ ಸಮಯದಲ್ಲಿ ಸಮ್ಮತಿಸಿದ್ದಾರೆ.
ಸುಮಾತ್ರಾ ದ್ವೀಪದ ಬಳಿ ಇರುವ ಸಬಂಗ್​ನಲ್ಲಿ ಆಧುನಿಕ ಬಂದರು ನಿರ್ವಣದ ಜತೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಲು ವಿಶೇಷ ಆರ್ಥಿಕ ವಲಯವನ್ನು ಕೂಡ ನಿರ್ವಿುಸಲಾಗುತ್ತದೆ. ಇಂಡೋ-ಪೆಸಿಫಿಕ್ ಸಾಗರದ ಅತಿ ಪ್ರಮುಖ ಜಾಗತಿಕ ವಾಣಿಜ್ಯ ಬಂದರು ಎನ್ನುವ ಖ್ಯಾತಿಯನ್ನು ಸಬಂಗ್ ಹೊಂದಿದೆ. ಇದರ ಜತೆಗೆ ಭಾರತದ ಅಂಡಮಾನ್ ದ್ವೀಪದಲ್ಲಿಯೂ ಮೂಲಭೂತ ಸೌಕರ್ಯ ವೃದ್ಧಿಸಿ, ಆಧುನಿಕ ಬಂದರು ನಿರ್ವಣದ ಬಗ್ಗೆ ಉಭಯ ದೇಶಗಳು ಆಸಕ್ತಿ ತೋರಿವೆ.
ಭಾರತ, ಇಂಡೋನೇಷ್ಯಾ ನಡುವಿನ ಈ ಒಪ್ಪಂದವನ್ನು ರಕ್ಷಣಾ ತಜ್ಞರು ಚೀನಾ ವಿರುದ್ಧದ ರಚನಾತ್ಮಕ ರಾಜತಾಂತ್ರಿಕ ನಿಲುವು ಎಂದು ವ್ಯಾಖ್ಯಾನಿಸಿದ್ದಾರೆ. ದಕ್ಷಿಣ ಚೀನಾ ಸಮುದ್ರದ ಕುರಿತಂತೆ ವಿವಾದ ಹೆಚ್ಚಿರುವ ಬೆನ್ನಲ್ಲೇ ಈ ಕ್ರಮವು ಭಾರತಕ್ಕೆ ಸಹಕಾರಿಯಾಗುವ ಸಾಧ್ಯತೆಯಿದೆ. ಚೀನಾದೊಂದಿಗೆ ಇಂಡೋನೇಷ್ಯಾ ಮಾತ್ರವಲ್ಲದೇ ಮಲೇಷ್ಯಾ, ಬ್ರುನೈ, ಫಿಲಿಪ್ಪಿನ್ಸ್, ತೈವಾನ್ ಹಾಗೂ ವಿಯೆಟ್ನಾಂ ಕೂಡ ಸಮುದ್ರದ ಗಡಿ ಸಮಸ್ಯೆ ಹೊಂದಿವೆ. ಈ ದೇಶಗಳು ಸುಮಾರು 3 ಲಕ್ಷ ಕೋಟಿ ಡಾಲರ್ ವ್ಯವಹಾರವನ್ನು ಹೊಂದಿವೆ. ನೂತನ ಬಂದರು ಮೂಲಕ ಚೀನಾಕ್ಕೆ ಸಮರ್ಥವಾಗಿ ಸೆಡ್ಡು ಹೊಡೆಯಲು ಸಾಧ್ಯ ಎನ್ನಲಾಗಿದೆ. ಇಂಡೋ-ಪೆಸಿಫಿಕ್ ಭಾಗದ ಕೇಂದ್ರ ಭಾಗವನ್ನು ಭಾರತ ಹೊಂದಿದ್ದು, ಒಟ್ಟಾರೆ 75,000 ಕಿ.ಮೀ ಸಮುದ್ರ ಗಡಿ ಹೊಂದಿದೆ. ಅತ್ತ ಇಂಡೋನೇಷ್ಯಾ ಸುಮಾರು 1.08 ಲಕ್ಷ ಕಿ.ಮೀ ಜಲಗಡಿ ಹೊಂದಿದೆ. ಈ ಒಪ್ಪಂದದಿಂದ ಜಾಗತಿಕ ವಾಣಿಜ್ಯ ಸೇವೆ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಗುತ್ತದೆ.
ಜಂಟಿ ಹೇಳಿಕೆ ಮುಖ್ಯಾಂಶ
# ಉಭಯ ದೇಶಗಳ ನಡುವೆ ರಕ್ಷಣೆ, ಬಾಹ್ಯಾಕಾಶ, ವಿಜ್ಞಾನ, ಶಿಕ್ಷಣ, ಪ್ರವಾಸೋದ್ಯಮ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ, ಆರೋಗ್ಯ ಹಾಗೂ ರೇಲ್ವೆಗೆ ಸಂಬಂಧಿಸಿ 15 ಒಪ್ಪಂದಗಳಿಗೆ ಸಹಿ
# ಭಾರತ ಹಾಗೂ ಇಂಡೋನೇಷ್ಯಾದ ನಡುವೆ ಇಂಡೋ-ಪೆಸಿಫಿಕ್ ಭಾಗದಲ್ಲಿ ನೇರ ಸಾರಿಗೆ ಸಂಪರ್ಕ
# ಇಂಡೋ-ಪೆಸಿಫಿಕ್ ಭಾಗದಲ್ಲಿ ನಡೆಯುತ್ತಿರುವ ಕಳ್ಳಸಾಗಣೆ, ಅಕ್ರಮ ಶಸ್ತ್ರಾಸ್ತ್ರ ರವಾನೆ, ಭಯೋತ್ಪಾದನೆ ಚಟುವಟಿಕೆ ಹಾಗೂ ಅನಿಯಂತ್ರಿತ ಮೀನುಗಾರಿಕೆ ಬಗ್ಗೆ ನಿಗಾ
# 2025ರ ವೇಳೆಗೆ ಭಾರತ, ಇಂಡೋನೇಷ್ಯಾ ನಡುವಿನ ವಾಣಿಜ್ಯ ವ್ಯವಹಾರವನ್ನು 50 ಬಿಲಿಯನ್ ಡಾಲರ್​ಗೆ ಏರಿಸಲು ನಿರ್ಧಾರ, ಸದ್ಯ 18.13 ಕೋಟಿ ರೂಪಾಯಿ ವ್ಯವಹಾರವಿದೆ.
# ಇಂಡೋನೇಷ್ಯಾದಲ್ಲಿ ಇತ್ತೀಚೆಗೆ ನಡೆದ ಚರ್ಚ್ ಮೇಲಿನ ಉಗ್ರ ದಾಳಿಗೆ ಮೋದಿ ಖಂಡನೆ.
30 ದಿನ ಉಚಿತ ವೀಸಾ!
ಭಾರತಕ್ಕೆ ಬರುವ ಇಂಡೋನೇಷ್ಯಾ ನಾಗರಿಕರಿಗೆ ಮೊದಲ 30 ದಿನ ಉಚಿತ ವೀಸಾ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂಡೋನೇಷ್ಯಾದಲ್ಲಿರುವ ಭಾರತೀಯ ಮೂಲದವರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಂಡೋನೇಷ್ಯಾಕ್ಕೆ ಬಂದ ಸಾಕಷ್ಟು ಭಾರತೀಯರು ಮತ್ತೆ ದೇಶವನ್ನು ನೋಡಿಲ್ಲ. ಹಾಗೆಯೇ ಇಂಡೋನೇಷ್ಯಾದ ನಾಗರಿಕರು ಕೂಡ ಭಾರತ ನೋಡಿಲ್ಲ. ಹೀಗಾಗಿ ಪ್ರವಾಸೋದ್ಯಮದ ಉದ್ದೇಶಕ್ಕೆ ಬರುವ ನಾಗರಿಕರಿಗೆ ಈ ಸವಲತ್ತು ನೀಡಲಾಗುವುದು ಎಂದರು.
ಗಾಳಿಪಟ ಹಾರಿಸಿದ ಮೋದಿ!
ಪ್ರಧಾನಿ ಮೋದಿ ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದರು. ರಾಮಾಯಣ ಹಾಗೂ ಮಹಾಭಾರತದ ವಿಷಯ ಆಧರಿಸಿ ನಡೆಯುತ್ತಿರುವ ಈ ಗಾಳಿಪಟ ಉತ್ಸವದಲ್ಲಿ ಇಬ್ಬರೂ ನಾಯಕರು ಗಾಳಿಪಟ ಹಾರಿಸುವ ಮೂಲಕ ಮೆರಗು ತಂದರು. ಭಾರತ ಹಾಗೂ ಇಂಡೋನೇಷ್ಯಾವು ಜಂಟಿಯಾಗಿ ಅಹಮದಾಬಾದ್​ನಲ್ಲಿ ಗಾಳಿಪಟ ಉತ್ಸವವನ್ನು ಆಚರಿಸುವ ತೀರ್ವನವನ್ನೂ ನಾಯಕರು ತೆಗೆದುಕೊಂಡರು. ಇದಾದ ಬಳಿಕ ಕೃಷ್ಣನ ಸಾರಥ್ಯವಿರುವ ಅರ್ಜುನನ ರಥದ ವಿಗ್ರಹವಿರುವ ಪ್ರದೇಶಕ್ಕೆ ಹಾಗೂ ಪುರಾತನ ಇಸ್ತಿಕಾಲ್ ಮಸೀದಿಗೆ ಮೋದಿ ಭೇಟಿ ನೀಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....