ನವದೆಹಲಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಾಲಿನ ಮೆಗಾ ಡೇರಿ ಸ್ಥಾಪಿಸಲು ಕೇಂದ್ರ ಸರ್ಕಾರ 900 ಕೋಟಿ ರೂ. ನೆರವು ನೀಡಲು ಒಪ್ಪಿಕೊಂಡಿದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾಸನ, ಕೋಲಾರ ಹಾಗೂ ದಕ್ಷಿಣ ಕನ್ನಡ ಸೇರಿ ಅನೇಕ ಜಿಲ್ಲೆಗಳಲ್ಲಿ ಮೆಗಾ ಡೇರಿಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಉದ್ದೇಶ. ಇದಕ್ಕೆ ಕೇಂದ್ರದಿಂದ ಸೂಕ್ತ ಪ್ರತಿಸ್ಪಂದನೆ ಸಿಕ್ಕಿದೆ. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಮ್ ವಿಲಾಸ್ ಪಾಸ್ವಾನ್, ರಾಧಾ ಮೋಹನ್ ಸಿಂಗ್, ನಿರ್ಮಲಾ ಸೀತಾರಾಮನ್ ನಮ್ಮ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸಿರುವುದು ಖುಷಿ ಕೊಟ್ಟಿದೆ ಎಂದು ತಿಳಿಸಿದರು.
ರಾಜ್ಯದ ಒಣಭೂಮಿಯಲ್ಲಿ ಸಹಜ ಕೃಷಿ ಉತ್ತೇಜನಕ್ಕಾಗಿ 1,000 ಕೋಟಿ ರೂ. ವಿಶೇಷ ಅನುದಾನವನ್ನು ನೀಡುವಂತೆ ಕುಮಾರಸ್ವಾಮಿ, ಕೇಂದ್ರ ಸಚಿವರಾದ ರಾಧಾ ಮೋಹನ್ ಸಿಂಗ್ ಅವರಲ್ಲಿ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಕೇಂದ್ರ ಸರ್ಕಾರ ಸಹಜ ಕೃಷಿ ಬೆಂಬಲಿಸುತ್ತಿದೆ. ಹೀಗಾಗಿ, ಅಗತ್ಯವಿರುವ ಅನುದಾನವನ್ನು ಒದಗಿಸುವ ಬಗ್ಗೆ ಚಿಂತಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.
ನಬಾರ್ಡ್ ಬ್ಯಾಂಕ್ಗಳು ನೀಡುವ ಆರ್ಥಿಕ ಸಹಾಯದ ಪ್ರಮಾಣವನ್ನು ಶೇ.40ರಿಂದ 75ಕ್ಕೇರಿಸಬೇಕು ಎಂದು ಸಿಎಂ ಕೋರಿದರು. ಶೇ.60ಕ್ಕೆ ಏರಿಕೆ ಮಾಡಿಕೊಡುವುದಾಗಿ ಕೃಷಿ ಸಚಿವರು ತಿಳಿಸಿದರು. ಮಾರುಕಟ್ಟೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಚರಂಡಿ ಮತ್ತು ಗೋದಾಮು ನಿರ್ವಣಕ್ಕಾಗಿ -ಠಿ;600 ಕೋಟಿ ಒದಗಿಸುವ ಕೋರಿಕೆ ಪರಿಶೀಲಿಸುವುದಾಗಿ ಹೇಳಿದರು. ರಾಜ್ಯದಲ್ಲಿ ನೆಫೆಡ್ ಸುಮಾರು 13.44 ಲಕ್ಷ ಕ್ವಿಂಟಾಲ್ ಕಡಲೆಯನ್ನು 2017-18ರಲ್ಲಿ ಖರೀದಿಸಿದೆ. ನೆಫೆಡ್ಗೆ
ಬಾಕಿ ಮೊತ್ತ ಬಿಡುಗಡೆ ಕೋರಿಕೆಗೆ ಪ್ರತಿಕ್ರಿಯಿಸಿ, ಈಗಾಗಲೇ ಮೊದಲ ಕಂತಿನ ರೂಪದಲ್ಲಿ 50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಬಳಕೆ ಪ್ರಮಾಣ ಪತ್ರ ಸಲ್ಲಿಸಿದ ತಕ್ಷಣ ಉಳಿದ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.
ಹಾಸನ ಬಗ್ಗೆ ಅತ್ಯಾಸಕ್ತಿ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಮಂಗಳವಾರ ಭೇಟಿ ಮಾಡಿದಾಗ ಹಾಸನಕ್ಕೆ ಸಂಬಂಧಿಸಿದ ರಸ್ತೆಗಳ ಬಗ್ಗೆ ಮನವಿ ಮಾಡಲಾಗಿತ್ತು. ಬುಧವಾರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಭೇಟಿಯಲ್ಲೂ ಮತ್ತೆ ಹಾಸನದ್ದೇ ಪ್ರಸ್ತಾಪವಾಗಿದೆ.
2 ದಿನ ಭೇಟಿ ಅನುದಾನ -ಠಿ;2,500 ಕೋಟಿ
ನವದೆಹಲಿ: ಕೇಂದ್ರ ಸರ್ಕಾರ ವಿವಿಧ ಸಚಿವರೊಂದಿಗೆ ಎರಡು ದಿನಗಳಿಂದ ನಡೆಸಿದ ಮಾತುಕತೆಯಿಂದಾಗಿ ವಿವಿಧ ಯೋಜನೆಗಳಿಗೆ ಹೆಚ್ಚುವರಿಯಾಗಿ 2,500 ಕೋಟಿ ರೂ. ಅನುದಾನ ಪಡೆಯಲು ಸಾಧ್ಯವಾಗಿದ್ದು, ದೆಹಲಿ ಭೇಟಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಸಂಸದರ ಸಭೆಗಾಗಿ ದೆಹಲಿಗೆ ಆಗಮಿಸಿದ್ದ ಕುಮಾರಸ್ವಾಮಿ, ಕೇಂದ್ರ ಆಹಾರ ಮತ್ತು ನಾಗರಿಕರ ಸರಬರಾಜು ಸಚಿವ, ಭೂ ಸಾರಿಗೆ ಮತ್ತು ಜಲಸಂಪನ್ಮೂಲ ಸಚಿವ, ಕೃಷಿ ಸಚಿವರು, ರೈಲ್ವೆ ಮತ್ತು ಕಲ್ಲಿದ್ದಲು ಸಚಿವರು, ರಕ್ಷಣಾ ಸಚಿವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಆಹಾರ ಸಚಿವ ರಾಮ್ ವಿಲಾಸ್ಪಾಸ್ವಾನ್ ಜತೆಗಿನ ಚರ್ಚೆ ವೇಳೆ 2014ರಿಂದ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಬೆಂಬಲ ಬೆಲೆಯ ಬಾಕಿ ಮೊತ್ತ 954 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿದ್ದಾರೆ ಎಂದರು.
ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾಸನ, ಕೋಲಾರ ಹಾಗೂ ದಕ್ಷಿಣ ಕನ್ನಡ ಸೇರಿ ಅನೇಕ ಜಿಲ್ಲೆಗಳಲ್ಲಿ ಮೆಗಾ ಡೇರಿಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಉದ್ದೇಶ. ಇದಕ್ಕೆ ಕೇಂದ್ರದಿಂದ ಸೂಕ್ತ ಪ್ರತಿಸ್ಪಂದನೆ ಸಿಕ್ಕಿದೆ. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಮ್ ವಿಲಾಸ್ ಪಾಸ್ವಾನ್, ರಾಧಾ ಮೋಹನ್ ಸಿಂಗ್, ನಿರ್ಮಲಾ ಸೀತಾರಾಮನ್ ನಮ್ಮ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸಿರುವುದು ಖುಷಿ ಕೊಟ್ಟಿದೆ ಎಂದು ತಿಳಿಸಿದರು.
ರಾಜ್ಯದ ಒಣಭೂಮಿಯಲ್ಲಿ ಸಹಜ ಕೃಷಿ ಉತ್ತೇಜನಕ್ಕಾಗಿ 1,000 ಕೋಟಿ ರೂ. ವಿಶೇಷ ಅನುದಾನವನ್ನು ನೀಡುವಂತೆ ಕುಮಾರಸ್ವಾಮಿ, ಕೇಂದ್ರ ಸಚಿವರಾದ ರಾಧಾ ಮೋಹನ್ ಸಿಂಗ್ ಅವರಲ್ಲಿ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಕೇಂದ್ರ ಸರ್ಕಾರ ಸಹಜ ಕೃಷಿ ಬೆಂಬಲಿಸುತ್ತಿದೆ. ಹೀಗಾಗಿ, ಅಗತ್ಯವಿರುವ ಅನುದಾನವನ್ನು ಒದಗಿಸುವ ಬಗ್ಗೆ ಚಿಂತಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.
ನಬಾರ್ಡ್ ಬ್ಯಾಂಕ್ಗಳು ನೀಡುವ ಆರ್ಥಿಕ ಸಹಾಯದ ಪ್ರಮಾಣವನ್ನು ಶೇ.40ರಿಂದ 75ಕ್ಕೇರಿಸಬೇಕು ಎಂದು ಸಿಎಂ ಕೋರಿದರು. ಶೇ.60ಕ್ಕೆ ಏರಿಕೆ ಮಾಡಿಕೊಡುವುದಾಗಿ ಕೃಷಿ ಸಚಿವರು ತಿಳಿಸಿದರು. ಮಾರುಕಟ್ಟೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಚರಂಡಿ ಮತ್ತು ಗೋದಾಮು ನಿರ್ವಣಕ್ಕಾಗಿ -ಠಿ;600 ಕೋಟಿ ಒದಗಿಸುವ ಕೋರಿಕೆ ಪರಿಶೀಲಿಸುವುದಾಗಿ ಹೇಳಿದರು. ರಾಜ್ಯದಲ್ಲಿ ನೆಫೆಡ್ ಸುಮಾರು 13.44 ಲಕ್ಷ ಕ್ವಿಂಟಾಲ್ ಕಡಲೆಯನ್ನು 2017-18ರಲ್ಲಿ ಖರೀದಿಸಿದೆ. ನೆಫೆಡ್ಗೆ
ಬಾಕಿ ಮೊತ್ತ ಬಿಡುಗಡೆ ಕೋರಿಕೆಗೆ ಪ್ರತಿಕ್ರಿಯಿಸಿ, ಈಗಾಗಲೇ ಮೊದಲ ಕಂತಿನ ರೂಪದಲ್ಲಿ 50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಬಳಕೆ ಪ್ರಮಾಣ ಪತ್ರ ಸಲ್ಲಿಸಿದ ತಕ್ಷಣ ಉಳಿದ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.
ಹಾಸನ ಬಗ್ಗೆ ಅತ್ಯಾಸಕ್ತಿ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಮಂಗಳವಾರ ಭೇಟಿ ಮಾಡಿದಾಗ ಹಾಸನಕ್ಕೆ ಸಂಬಂಧಿಸಿದ ರಸ್ತೆಗಳ ಬಗ್ಗೆ ಮನವಿ ಮಾಡಲಾಗಿತ್ತು. ಬುಧವಾರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಭೇಟಿಯಲ್ಲೂ ಮತ್ತೆ ಹಾಸನದ್ದೇ ಪ್ರಸ್ತಾಪವಾಗಿದೆ.
2 ದಿನ ಭೇಟಿ ಅನುದಾನ -ಠಿ;2,500 ಕೋಟಿ
ನವದೆಹಲಿ: ಕೇಂದ್ರ ಸರ್ಕಾರ ವಿವಿಧ ಸಚಿವರೊಂದಿಗೆ ಎರಡು ದಿನಗಳಿಂದ ನಡೆಸಿದ ಮಾತುಕತೆಯಿಂದಾಗಿ ವಿವಿಧ ಯೋಜನೆಗಳಿಗೆ ಹೆಚ್ಚುವರಿಯಾಗಿ 2,500 ಕೋಟಿ ರೂ. ಅನುದಾನ ಪಡೆಯಲು ಸಾಧ್ಯವಾಗಿದ್ದು, ದೆಹಲಿ ಭೇಟಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಸಂಸದರ ಸಭೆಗಾಗಿ ದೆಹಲಿಗೆ ಆಗಮಿಸಿದ್ದ ಕುಮಾರಸ್ವಾಮಿ, ಕೇಂದ್ರ ಆಹಾರ ಮತ್ತು ನಾಗರಿಕರ ಸರಬರಾಜು ಸಚಿವ, ಭೂ ಸಾರಿಗೆ ಮತ್ತು ಜಲಸಂಪನ್ಮೂಲ ಸಚಿವ, ಕೃಷಿ ಸಚಿವರು, ರೈಲ್ವೆ ಮತ್ತು ಕಲ್ಲಿದ್ದಲು ಸಚಿವರು, ರಕ್ಷಣಾ ಸಚಿವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಆಹಾರ ಸಚಿವ ರಾಮ್ ವಿಲಾಸ್ಪಾಸ್ವಾನ್ ಜತೆಗಿನ ಚರ್ಚೆ ವೇಳೆ 2014ರಿಂದ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಬೆಂಬಲ ಬೆಲೆಯ ಬಾಕಿ ಮೊತ್ತ 954 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿದ್ದಾರೆ ಎಂದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ