ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕಬಡ್ಡಿಯ ಮಿಂಚು ಉಷಾರಾಣಿ

ರಘುನಾಥ್ ಡಿ.ಪಿ. ಬೆಂಗಳೂರು
ಮನೆಯಲ್ಲಿರುವ ಬಹುತೇಕ ಮಂದಿ ಕಬಡ್ಡಿಯಲ್ಲಿ ಹೆಸರು ಮಾಡಿದವರೆ. ಆ ಕುಟುಂಬಕ್ಕೆ ಕಬಡ್ಡಿಯೇ ಜೀವಾಳ. ಹೀಗಾಗಿ ಆಕೆಗೆ ಕಬಡ್ಡಿ ಆಟ ರಕ್ತಗತವಾಗಿಯೇ ಬಂದಿದೆ. ಇದೊಂದು ಕಬಡ್ಡಿ ಕುಟುಂಬ ಎಂದರೂ ತಪ್ಪಾಗುವುದಿಲ್ಲ. ನಾವು ಹೇಳಲು ಹೊರಟಿರುವುದು ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ್ತಿ ಉಷಾರಾಣಿ ಕುರಿತು. ಅಪ್ಪ, ಅಕ್ಕ ಹಾಗೂ ತಮ್ಮಂದಿರು ಕೂಡ ಕಬಡ್ಡಿ ಆಟಗಾರರು. ಹೀಗಾಗಿ ಉಷಾರಾಣಿಗೆ ಕಬಡ್ಡಿ ಆಯ್ಕೆ ಅಷ್ಟು ಕಷ್ಟವಾಗಲಿಲ್ಲ.
ಕ್ಲಬ್​ ಮಟ್ಟದಿಂದ ಬೆಳೆದ ಪ್ರತಿಭೆ: ಕಳೆದ 12 ವರ್ಷಗಳಿಂದ ಕಬಡ್ಡಿಯಲ್ಲೇ ಜೀವನ ಕಂಡುಕೊಂಡಿರುವ ಉಷಾರಾಣಿ, ಮುಂದಿನ ತಿಂಗಳು ಇಂಡೋನೇಷ್ಯಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡ ಪ್ರತಿನಿಧಿಸಲಿದ್ದಾರೆ. ಮೂಲತಃ ಬೆಂಗಳೂರಿನ ಯಶವಂತಪುರದವರಾದ ಉಷಾ, ಸ್ಥಳೀಯ ಮಾತಾ ಸ್ಪೋರ್ಟ್ಸ್ ಕ್ಲಬ್​ನಿಂದ ಬೆಳಕಿಗೆ ಬಂದ ಪ್ರತಿಭೆ. ಯಶವಂತಪುರದಲ್ಲೇ ಪದವಿವರೆಗೂ ಶಿಕ್ಷಣ ಪೂರೈಸಿದ ಉಷಾ, ಸದ್ಯ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೈಸ್ಕೂಲ್​ವರೆಗೂ ಕಬಡ್ಡಿ ಆಟದತ್ತ ಸುಳಿಯದ ಉಷಾ, ಪ್ರಥಮ ಪಿಯುಸಿ ಕಲಿಯುವ ವೇಳೆ ಕಬಡ್ಡಿ ಆಡಲು ಶುರುಮಾಡಿದ್ದರು. ಅಲ್ಲಿಂದ ಶುರುವಾದ ಉಷಾ ಕಬಡ್ಡಿ ಜರ್ನಿಯಲ್ಲಿ ಹಿಂದಿರುಗಿ ನೋಡೇ ಇಲ್ಲ.
ಆಲ್​ರೌಂಡರ್ ಪಾತ್ರ ನಿರ್ವಹಣೆ
ತಂಡದಲ್ಲಿ ಉಷಾ ಅವರದ್ದು ಆಲ್​ರೌಂಡರ್ ಪಾತ್ರ. ರಾಜ್ಯ ತಂಡದಲ್ಲಿ ಪ್ರಮುಖ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಉಷಾ, ಚುರುಕಿನ ಟ್ಯಾಕ್ಲಿಂಗ್​ನಿಂದ ಗಮನಸೆಳೆದಿದ್ದಾರೆ. 29 ವರ್ಷದ ಅವರು ಇದುವರೆಗೂ 50ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ಟೂರ್ನಿಗಳಲ್ಲಿ ಆಡಿದ್ದಾರೆ. ಹಲವು ಬಾರಿ ರಾಜ್ಯ ತಂಡ ಪ್ರತಿನಿಧಿಸಿರುವ ಉಷಾ, ಕರ್ನಾಟಕದ ಮಾಜಿ ಸ್ಟಾರ್​ಗಳಾದ ಮಮತಾ ಪೂಜಾರಿ ಹಾಗೂ ತೇಜಸ್ವಿನಿಬಾಯಿ ಜತೆಗೂಡಿ ಹಲವು ಟೂರ್ನಿಗಳಲ್ಲಿ ಆಡಿದ್ದಾರೆ.
ರಾಷ್ಟ್ರೀಯ ತಂಡಕ್ಕೆ 2ನೇ ಬಾರಿ ಎಂಟ್ರಿ
ಮಮತಾ-ತೇಜಸ್ವಿನಿ ಅವರೇ ನನಗೆ ಸ್ಪೂರ್ತಿ ಎನ್ನುವ ಉಷಾ, ಇದೀಗ 2ನೇ ಬಾರಿಗೆ ಭಾರತ ತಂಡ ಪ್ರತಿನಿಧಿಸುತ್ತಿದ್ದಾರೆ. 2017ರಲ್ಲಿ ನಡೆದ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಸ್ವರ್ಣ ಜಯಿಸಿದ ಭಾರತ ತಂಡದ ಪರ ಆಡಿದ್ದರು. ಇದಕ್ಕೂ ಮೊದಲು 2014ರ ಏಷ್ಯಾಡ್​ಗೆ ಹೆಸರಿಸಲಾದ ಸಂಭಾವ್ಯ ತಂಡದೊಂದಿಗೆ ಶಿಬಿರದಲ್ಲಿ ಭಾಗವಹಿಸಿದ್ದರೂ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ದಕ್ಷಿಣ ಕೊರಿಯಾದಲ್ಲಿ ನಡೆದ 2014ರ ಏಷ್ಯಾಡ್​ಗೆ ಕರ್ನಾಟಕದ ಆಟಗಾರ್ತಿಯರಾದ ಜಯಂತಿ ಪವಾರ್ ಹಾಗೂ ಸುಶ್ಮಿತಾ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದರು.
ಇಲಾಖೆಯ ಪ್ರೋತ್ಸಾಹವೇ ಪ್ರೇರಣೆ
ಕಬಡ್ಡಿ ಟೀಮ್ ಗೇಮ್ ಇಲ್ಲಿ ವೈಯಕ್ತಿಕ ಪ್ರದರ್ಶನದ ಜತೆಗೆ ಇತರ ಆಟಗಾರರ ಪ್ರದರ್ಶನವೂ ಮುಖ್ಯ ಎನ್ನುತ್ತಾರೆ ಉಷಾ ರಾಣಿ. ಪೊಲೀಸ್ ಇಲಾಖೆಯಲ್ಲಿ ನೀಡುತ್ತಿರುವ ಪ್ರೋತ್ಸಾಹದಿಂದಲೇ ಉತ್ತಮ ಆಟಗಾರ್ತಿಯಾಗಲು ಸಾಧ್ಯವಾಯಿತು. ಅಭ್ಯಾಸ ಮಾಡಲು ಸಮಯ ನೀಡುವುದಲ್ಲದೆ, ಅಗತ್ಯವಿದ್ದ ವೇಳೆ ರಜೆ ವ್ಯವಸ್ಥೆ ಮಾಡಿಕೊಡುತ್ತಾರೆ ಎಂದು ಇಲಾಖೆ ಪ್ರೋತ್ಸಾಹವನ್ನು ಉಷಾ ಸ್ಮರಿಸುತ್ತಾರೆ. ಜೂನಿಯರ್ ಹಾಗೂ ಸೀನಿಯರ್ ರಾಷ್ಟ್ರೀಯ ಮಟ್ಟದ ಹಲವು ಟೂರ್ನಿಗೆ ರಾಜ್ಯ ತಂಡ ಮುನ್ನಡೆಸಿರುವ ಅನುಭವ ಹೊಂದಿರುವ ಉಷಾ, ಪ್ರತಿಷ್ಠಿತ ಏಷ್ಯಾಡ್​ನಲ್ಲೂ ಉತ್ತಮ ನಿರ್ವಹಣೆ ನೀಡಲಿ ಎಂಬುದೇ ‘ವಿಜಯವಾಣಿ’ ಆಶಯ.
ಗಾಂಧಿನಗರದಲ್ಲಿ ತರಬೇತಿ
ಭಾರತ ಮಹಿಳಾ ತಂಡ ಏಷ್ಯಾಡ್​ಗೆ ತೆರಳುವುದಕ್ಕೂ ಮುನ್ನ ಗುಜರಾತ್​ನ ಗಾಂಧಿನಗರದಲ್ಲಿ ತರಬೇತಿ ಶಿಬಿರ ನಡೆಸಲಿದೆ. ಆ. 18ರಂದು ಆರಂಭವಾಗಲಿರುವ ಏಷ್ಯಾಡ್​ಗೆ ಕೆಲದಿನ ಮುಂಚೆ ಇಂಡೋನೇಷ್ಯಾಗೆ ಪ್ರಯಾಣ ಬೆಳೆಸಲಿದೆ.
ಭಾರತಕ್ಕೆ ಹ್ಯಾಟ್ರಿಕ್ ಸ್ವರ್ಣ ನಿರೀಕ್ಷೆ
ಏಷ್ಯಾಡ್​ನಲ್ಲಿ 2010ರಲ್ಲಿ ಮಹಿಳಾ ಕಬಡ್ಡಿ ಸ್ಪರ್ಧೆ ಸೇರ್ಪಡೆಗೊಂಡಿತ್ತು. ಆಗ ಗ್ವಾಂಗ್​ರೆkೌ ಏಷ್ಯಾಡ್​ನಲ್ಲಿ ಸ್ವರ್ಣ ಜಯಿಸಿದ್ದ ಭಾರತ ಮಹಿಳಾ ತಂಡ 2014ರಲ್ಲಿ ಇಂಚೋನ್ ಏಷ್ಯಾಡ್​ನಲ್ಲೂ ಇದೇ ಸಾಧನೆ ಪುನರಾವರ್ತಿಸಿತ್ತು. ಈ ಬಾರಿ ಜಕಾರ್ತದಲ್ಲಿ ಹ್ಯಾಟ್ರಿಕ್ ಸ್ವರ್ಣ ಸಾಧನೆ ಮಾಡುವ ಹಂಬಲ ಭಾರತ ಮಹಿಳಾ ಕಬಡ್ಡಿ ತಂಡದ್ದಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....