ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ವೆಚ್ಚ ಜಾಸ್ತಿ ಅಭಿವೃದ್ಧಿ ನಾಸ್ತಿ

ರುದ್ರಣ್ಣ ಹರ್ತಿಕೋಟೆ
ಬೆಂಗಳೂರು: ರಾಜಕೀಯ ಪಕ್ಷಗಳು ಚುನಾವಣಾ ಸಮಯದಲ್ಲಿ ಮತ ಗಳಿಕೆಗಾಗಿ ಘೋಷಿಸುವ ಭರವಸೆಗಳು ರಾಜ್ಯದ ಆರ್ಥಿಕತೆ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿವೆ. ವಿವಿಧ ಸಹಾಯಧನ, ವೇತನ ಹಾಗೂ ಅನಗತ್ಯ ವೆಚ್ಚಗಳ ಮಿತಿ ಮೀರಿದ ಏರಿಕೆಯಿಂದ ಬಂಡವಾಳ ವೆಚ್ಚ ಕಡಿಮೆಯಾಗುತ್ತಿದೆ. ಇದರಿಂದಾಗಿ ರಾಜ್ಯದ ಆಸ್ತಿ ಸೃಜನೆಯೂ ಹಳ್ಳ ಹಿಡಿಯುತ್ತಿದೆ.
ರಾಜ್ಯಕ್ಕಿರುವುದು ಸೀಮಿತ ತೆರಿಗೆ ಹಾಗೂ ತೆರಿಗೆಯೇತರ ಸಂಪನ್ಮೂಲದ ಅವಕಾಶ. ಇರುವ ಆದಾಯದಲ್ಲಿಯೇ ಆಸ್ತಿ ಸೃಷ್ಟಿಸುವ ಕಡೆ ಗಮನ ಹರಿಸಬೇಕಾಗಿದೆ. ಇದು ಸರ್ಕಾರದ ಮುಂದಿರುವ ದೊಡ್ಡ ಸವಾಲು. ಅದನ್ನು ಮುಖ್ಯ ಕಾರ್ಯದರ್ಶಿ ನೇತೃತ್ವದ ಪರಿಶೀಲನಾ ಸಮಿತಿ ಸಹ ಗುರುತಿಸಿದೆ. ವರ್ಷದಿಂದ ವರ್ಷಕ್ಕೆ ವೆಚ್ಚಗಳು ಹೆಚ್ಚಾಗುತ್ತಿವೆ. ಇದುವರೆಗೂ ಹಣಕಾಸು ಖಾತೆ ನಿರ್ವಹಿಸಿದವರೆಲ್ಲರೂ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವುದಾಗಿ ಹೇಳುತ್ತಿದ್ದಾರೆ. ಆದರೆ, ಬಂಡವಾಳ ವೆಚ್ಚ ಹೆಚ್ಚಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಪ್ರಯತ್ನಗಳು ಕಂಡುಬಂದಿಲ್ಲ.
ಸಾಮಾಜಿಕ ವಲಯದಲ್ಲಿ ಮಾಡುವ ವೆಚ್ಚ ಸಹ ಪರೋಕ್ಷವಾಗಿ ಬಂಡವಾಳ ವೆಚ್ಚವೇ ಆಗಿರುತ್ತದೆ ಎಂಬ ಹೊಸ ವ್ಯಾಖ್ಯಾನ ಇತ್ತೀಚಿನ ವರ್ಷಗಳಲ್ಲಿ ಬಂದಿದೆ. ಅದನ್ನು ಒಂದು ಹಂತದಲ್ಲಿ ಒಪ್ಪಬಹುದಾದರೂ ರಾಜ್ಯಕ್ಕೆ ಆಸ್ತಿ ಸೃಷ್ಟಿಸಲು ಸಾಧ್ಯವಾಗುತ್ತಿಲ್ಲ. ಬಂಡವಾಳ ವೆಚ್ಚ ಹೆಚ್ಚು ಮಾಡಿದರೆ ಒಳ್ಳೆಯದು ಎಂಬ ಅಭಿಪ್ರಾಯ ಆರ್ಥಿಕ ತಜ್ಞರ ವಲಯದಲ್ಲಿದೆ.
ಸಾರ್ವಜನಿಕರಿಂದ ಸಂಗ್ರಹವಾಗುವ ತೆರಿಗೆ ಸರಿಯಾದ ರೀತಿಯಲ್ಲಿ ವೆಚ್ಚವಾಗಬೇಕು ಎಂದರೆ ಜನಪ್ರಿಯ ಕಾರ್ಯಕ್ರಮಗಳ ಜತೆಗೆ ಅಭಿವೃದ್ಧಿಗೂ ಒತ್ತು ನೀಡಬೇಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.
ರಾಜಸ್ವ ಹೆಚ್ಚಳ, ವಿತ್ತೀಯ ಕೊರತೆ ತಗ್ಗಿಸಿದರೆ ಮಾತ್ರ ಬಂಡವಾಳ ವೆಚ್ಚ ಹೆಚ್ಚು ಮಾಡಲು ಸಾಧ್ಯ. ಆಯವ್ಯಯ ಅಂದಾಜುಗಳು ಹೆಚ್ಚಾದರೂ ವೆಚ್ಚಗಳು ಸಹ ಅದೇ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ.
ಕಡಿಮೆ ವೆಚ್ಚ: ಪ್ರತಿ ವರ್ಷ ಬಂಡವಾಳ ವೆಚ್ಚ 5 ಸಾವಿರ ಕೋಟಿ ರೂ. ಗಿಂತ ಹೆಚ್ಚು ಮಾಡುತ್ತಿಲ್ಲ. ವೆಚ್ಚಗಳ ಹೆಚ್ಚಳ ಹಾಗೂ ಸೀಮಿತ ಸಂಪನ್ಮೂಲವೇ ಇದಕ್ಕೆ ಕಾರಣವಾಗಿದೆ.
ಎಲ್ಲೆಲ್ಲಿ, ಎಷ್ಟು ಹೆಚ್ಚಳ?
ಸರ್ಕಾರಿ ನೌಕರರ ವೇತನಕ್ಕೆ ಕಳೆದ ಸಾಲಿನಲ್ಲಿ 24,255 ಕೋಟಿ ರೂ. ಇದ್ದರೆ, ಈ ಸಾಲಿನಲ್ಲಿ 31.698 ಕೋಟಿ ರೂ.ಗೆ ಏರಿಕೆಯಾಗಲಿದೆ. ನಿವೃತ್ತಿ ವೇತನಗಳು 12.062 ಕೋಟಿ ರೂ. ನಿಂದ 17,801 ಕೋಟಿ ರೂ.ಗೆ ಜಾಸ್ತಿಯಾಗುತ್ತದೆ. ಸಹಾಯಧನಗಳು 23,476 ಕೋಟಿ ರೂ. ನಿಂದ 24,403.78 ಕೋಟಿ ರೂ. ಗೆ ಹೆಚ್ಚಾಗಿವೆ. ಸಾಲದ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಈ ವರ್ಷದ ಅಂತ್ಯಕ್ಕೆ 2,92,220 ಕೋಟಿ ರೂ. ತಲುಪಲಿದೆ.
ಹಣಕಾಸಿನ ಸವಾಲುಗಳು
ರೈತರ ಸಾಲಮನ್ನಾ ಹಾಗೂ ವೇತನ ಹೆಚ್ಚಳದ ರಾಜಸ್ವ ವೆಚ್ಚ ಹೆಚ್ಚಳದ ಜತೆಜತೆಗೆ ಬಂಡವಾಳ ವೆಚ್ಚದ ಅಗತ್ಯತೆ ಎಲ್ಲೆಲ್ಲಿ ಜಾಸ್ತಿ ಇದೆ ಎಂಬ ಸವಾಲನ್ನು ಗುರುತಿಸಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ-3ರ ಭೂ ಸ್ವಾಧೀನ ವೆಚ್ಚಗಳು, ಲೋಕೋಪಯೋಗಿ ಹಾಗೂ ನೀರಾವರಿ ವಲಯಗಳಿಗೆ ಹೆಚ್ಚುವರಿ ಬಂಡವಾಳ ವೆಚ್ಚವನ್ನು ಒದಗಿಸಬೇಕಾಗಿದೆ. ಬೆಂಗಳೂರು ಮೆಟ್ರೋಗೆ ಬೃಹತ್ ಪ್ರಮಾಣದಲ್ಲಿ ವೆಚ್ಚ ಒದಗಿಸಬೇಕಾಗಿದೆ. ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯದ ಸಂಪನ್ಮೂಲದ ಸೀಮಿತ ಸ್ಥಿತಿಗತಿ ಅನುಸಾರವೇ ಒದಗಿಸಬೇಕಾಗಿದೆ. ಪೂರಕ ಅನುದಾನದ ಅಗತ್ಯತೆ ಕಡಿಮೆ ಮಾಡಿಕೊಳ್ಳಬೇಕಾಗಿದೆ ಎಂದು ಪರಿಶೀಲನಾ ಸಮಿತಿ ಹೇಳಿದೆ. ಸರ್ಕಾರ ಈ ಸವಾಲನ್ನು ಹೇಗೆ ನಿಭಾಯಿಸಲಿದೆ ಎಂಬುದು ಸದ್ಯದ ಪ್ರಶ್ನೆಯಾಗಿದೆ.
ಬೇರೆ ಬೇರೆ ವೆಚ್ಚಗಳು ಹೆಚ್ಚುತ್ತಿರುವ ಪರಿಣಾಮ ಆಸ್ತಿ ಸೃಷ್ಟಿಸಬಹುದಾದ ಬಂಡವಾಳ ವೆಚ್ಚ ಕಡಿಮೆಯಾಗುತ್ತಿದೆ. ಸರ್ಕಾರ ವಿತ್ತೀಯ ಕೊರತೆ ತಗ್ಗಿಸಿಕೊಂಡು ಬಂಡವಾಳ ಹೂಡಿಕೆ ಕಡೆ ಗಮನ ಹರಿಸಬೇಕಾಗುತ್ತದೆ. ಆ ಪ್ರಯತ್ನಗಳು ನಡೆಯಬೇಕಾಗಿವೆ.
| ಡಾ. ಅಬ್ದುಲ್ ಅಜೀಜ್ ಆರ್ಥಿಕ ತಜ್ಞ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....