ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಹೆಲ್ಮೆಟ್ ಹಾಕಿದ್ರಷ್ಟೇ ಸ್ಟಾರ್ಟಾಗುತ್ತೆ ಬೈಕ್!, |ಮಹೇಶ್ ಡಿ.ಎಂ.

ದಾವಣಗೆರೆ: ಹೆಲ್ಮೆಟ್ ಇಲ್ದೆ ನೀವು ಬೈಕ್ ಏರಂಗಿಲ್ಲ. ಹಾಗೊಮ್ಮೆ ಹತ್ತಿದ್ರೆ ಗಾಡೀನೇ ಸ್ಟಾರ್ಟ್ ಆಗಲ್ಲ. ಮದ್ಯಪ್ರಿಯರೇನಾದರೂ ಕಂಠಪೂರ್ತಿ ಕುಡಿದು ಹೆಲ್ಮೆಟ್ ಹಾಕಿಕೊಂಡು ಬೈಕ್ ಏರಿದರೆ ಗಂಟೆ ಕಳೆದರೂ ನಿಂತ ಜಾಗದಿಂದ ಕದಲೋದಿಲ್ಲ! ಇದು ಸ್ಮಾರ್ಟ್ ಹೆಲ್ಮೆಟ್​ನ ಸ್ಮಾರ್ಟ್ ಅನುಕೂಲತೆಗಳು. ದಾವಣಗೆರೆ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಇನ್​ಸ್ಟ್ರುಮೆಂಟೇಷನ್ ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿನಿಯರು ಈ ಹೆಲ್ಮೆಟ್​ನ ತಂತ್ರಜ್ಞರು.
ಪ್ರಾಣರಕ್ಷಕ: ಈ ಹೆಲ್ಮೆಟ್ ವಿಶೇಷತೆ ಇಷ್ಟಕ್ಕೇ ಮುಗಿಯೋದಿಲ್ಲ. ಹೆಲ್ಮೆಟ್ ಧರಿಸಿದ ಸವಾರ ಒಂದು ವೇಳೆ ಅಪಘಾತಕ್ಕೀಡಾದಲ್ಲಿ ತಕ್ಷಣವೇ ಎಸ್​ಎಂಎಸ್ (ಜಿಎಸ್​ಎಂ)ಮೂಲಕ ಆಸ್ಪತ್ರೆಗೆ ಹಾಗೂ ಸವಾರನ ಕುಟುಂಬ ಸದಸ್ಯರಿಗೆ ಸಂದೇಶ ರವಾನೆಯಾಗುತ್ತದೆ. ವಿದ್ಯಾರ್ಥಿನಿಯರಾದ ಪೂಜಾ ಆರ್. ಶರ್ವ, ಪಿ.ಪ್ರಿಯಾಂಕಾ, ಪಿ.ಜಿ.ಲತಾ, ಎಂ.ಜಿ.ನಿವೇದಿತಾ ತಂಡದ ಈ ಸಾಧನೆಗೆ ಪ್ರಾಧ್ಯಾಪಕಿ ಶ್ರೀದೇವಿ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದಾರೆ.
ಹೆಲ್ಮೆಟ್ ಹೈಲೈಟ್
ಹೆಲ್ಮೆಟ್ ಮತ್ತು ಬೈಕ್​ನಲ್ಲಿ ಎರಡು ಮಾಡ್ಯೂಲ್​ಗಳಿದ್ದು, ಮೂರು ಸೆನ್ಸರ್ ಅಳವಡಿಸಲಾಗಿದೆ. ಬೈಕ್ ಸವಾರ ಹೆಲ್ಮೆಟ್ ಧರಿಸಿದ್ದಲ್ಲಿ ಫೋರ್ಸ್ ಎಂಬ ಸೆನ್ಸರ್, ವಾಹನ ಚಲಾವಣೆಗೆ ಲೈಸೆನ್ಸ್ ನೀಡುತ್ತದೆ. ಎರಡೂ ಮಾಡ್ಯೂಲ್ ಸುಸ್ಥಿತಿಯಲ್ಲಿದ್ದರಷ್ಟೇ ಬೈಕ್ ಚಲಿಸುತ್ತದೆ. ಇಲ್ಲವಾದರೆ ಒಂದಡಿಯೂ ಕದಲುವುದಿಲ್ಲ. ಬೈಕ್ ಮತ್ತು ಹೆಲ್ಮೆಟ್ ನಡುವಿನ 100 ಮೀ.ಅಂತರಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವ ವೈರ್​ಲೆಸ್ ಮಾದರಿಯ ಜಿಗ್​ಬೀ ತಂತ್ರಜ್ಞಾನ ಬಳಸಿಕೊಳ್ಳಲಾಗಿದೆ. ಆರ್ಡಿನೋ-ಯುಎನ್​ಒ ಮತ್ತು ರೆನೆಸಸ್ ಮೈಕ್ರೋ ಕಂಟ್ರೋಲರ್ ಮೂಲಕ ಇದು ನಿರ್ವಹಣೆಯಾಗುತ್ತದೆ. ‘ಎಂ.ಕ್ಯೂ-2’ ಎಂಬ ಹೆಸರಿನ ಮತ್ತೊಂದು ಸೆನ್ಸರ್, ಮದ್ಯದ ಕಂಟೆಂಟ್ ಅನ್ನು ಪತ್ತೆಹಚ್ಚುತ್ತದೆ. ಪಾನಮತ್ತ ಸವಾರ ಬೈಕ್ ಓಡಿಸದಂತೆ ಇದು ನಿರ್ಬಂಧಿಸುತ್ತದೆ! ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪಾನಮತ್ತ ಯುವಕರು ಬೈಕ್ ಅಪಘಾತಗಳಲ್ಲಿ ಮರಣಕ್ಕೀಡಾಗುವುದನ್ನು ನಿಯಂತ್ರಿಸಲು ಇದರಿಂದ ಅನುಕೂಲವಾಗುತ್ತದೆ. ಬೈಕ್ ಇಂಜಿನ್​ಗೆ ಅಳವಡಿಸಲಾದ ಮತ್ತೊಂದು ಸೆನ್ಸರ್ ‘ಆಕ್ಸಿಲರೋ ಮೀಟರ್’, ಬೈಕ್ 30 ಡಿಗ್ರಿ ಅಳತೆಗಿಂತಲೂ ಕಡಿಮೆ ಬೆಂಡಾದರೆ ‘ಅಪಘಾತವಾಗಿದೆ‘ ಎಂಬ ಸಂದೇಶ, ಮೊದಲೇ ಅಳವಡಿಸಲಾದ ಸವಾರನ ಸಂಬಂಧಿಗಳ ಮೊಬೈಲ್​ಗೆ ಜಿಎಸ್​ಎಂ ಮೂಲಕ ರವಾನೆಯಾಗುತ್ತದೆ! ಆಸ್ಪತ್ರೆ ಅಥವಾ ಪೊಲೀಸ್ ಠಾಣೆ ನಂಬರ್ ಸಹ ಅಳವಡಿಸಿಕೊಳ್ಳಬಹುದಾಗಿದೆ. ತುರ್ತು ಸಂದರ್ಭದಲ್ಲಿ ಬೈಕ್ ಚಲಾಯಿಸಲು ಪರ್ಯಾಯ ಮಾರ್ಗವೊಂದಿದೆ.!! ‘ಈ ಹೆಲ್ಮೆಟ್ ತಯಾರಿಸಲು 10 ಸಾವಿರ ರೂ. ವೆಚ್ಚವಾಗಿದೆ. ಬೈಕ್ ತಯಾರಕ ಕಂಪನಿಗಳು ಇದರ ಪೇಟೆಂಟ್ ಪಡೆದಲ್ಲಿ ಹೆಲ್ಮೆಟ್ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗಬಹುದು. ಬೈಕ್ ಕೊಂಡಲ್ಲಿ ಹೆಲ್ಮೆಟ್ ಕಡ್ಡಾಯ ನೀತಿಯನ್ನಾದರೂ ಜಾರಿ ಮಾಡಬಹುದು’ ಎನ್ನುತ್ತಾರೆ ಮಾರ್ಗದರ್ಶಿ ಪ್ರಾಧ್ಯಾಪಕಿ ಶ್ರೀದೇವಿ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ 20ನೇ ವಾರ್ಷಿಕೋತ್ಸವದ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಭಾಗವಹಿಸಿದ್ದ 125 ಕಾಲೇಜುಗಳ ಮಾದರಿಗಳಲ್ಲಿ ಇದು ಗಮನ ಸೆಳೆದು ಪ್ರಥಮ ಬಹುಮಾನ ಪಡೆದಿದೆ. ವಿಟಿಯು ಕುಲಪತಿ ಕರಿಸಿದ್ದಪ್ಪ, 25 ಸಾವಿರ ನಗದು, ಪ್ರಶಂಸನಾ ಪತ್ರ ವಿತರಿಸಿದ್ದಾರೆ. ಇಂಥ ಹೆಲ್ಮೆಟ್ ಬೇಗನೆ ಮಾರುಕಟ್ಟೆಗೆ ಬರಲಿ ಎಂಬುದು ಜನರ ಆಶಯ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....