ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಐಟಿ ರಿಟರ್ನ್ಸ್ ಫೈಲ್ ಮಾಡಿದ್ರಾ?, | ಎನ್. ಆನಂದರಾಮ ರಾವ್

ಯಾವ ಕೆಲಸವನ್ನೇ ಆಗಲಿ, ಗಡುವಿಗಿಂತ ಸಾಕಷ್ಟು ಮುಂಚೆಯೇ ಮಾಡಿ ಮುಗಿಸುವ ಮನಸ್ಸು ಬಹಳಷ್ಟು ಜನರಿಗೆ ಇರುವುದಿಲ್ಲ. ಇನ್ನೂ ಹದಿನೈದು ದಿನ ಇದೆಯಲ್ವಾ, ಮಾಡಿದರಾಯ್ತು ಬಿಡು ಎನ್ನುವ ಮನಸ್ಥಿತಿಯಲ್ಲೇ ಇರುತ್ತಾರೆ ಬಹುತೇಕ ಜನ. ಹಾಗಾಗಿಯೇ ಪ್ರತಿ ವರ್ಷವೂ ಆದಾಯ ತೆರಿಗೆ ರಿಟರ್ನ್ಸ್​ ಸಲ್ಲಿಕೆಯ ಕೊನೆಯ ದಿನ ರಷ್ಷೋ ರಷ್ಷು. ಬಳಿಕ ದಿನಾಂಕ ವಿಸ್ತರಣೆಗೆ ಬೇಡಿಕೆ. ಈ ಸಲ ಹಾಗಾಗದಿರಲಿ ಎಂದೇ ವಿಳಂಬ ಸಲ್ಲಿಕೆಗೆ ಭಾರಿ ದಂಡ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಪ್ರತಿ ವರ್ಷ ಮಾರ್ಚ್ 31 ಮುಗಿಯುತ್ತಿದ್ದಂತೆಯೇ ಆದಾಯ ತೆರಿಗೆ ಇಲಾಖೆಗೆ ರಿಟರ್ನ್ಸ್ ಸಲ್ಲಿಸುವ ಗಡಿಬಿಡಿ ಆರಂಭವಾಗುತ್ತದೆ. ಅದರಲ್ಲಿಯೂ ಮುಖ್ಯವಾಗಿ ವೈಯಕ್ತಿಕ ತೆರಿಗೆದಾರರು, ಅಂದರೆ ವೇತನದಾರರು ನಿವೃತ್ತರು ಮುಂತಾದವರು ಈ ಬಗ್ಗೆ ಆತಂಕಕ್ಕೊಳಗಾಗುವುದು ಹೆಚ್ಚು. ಸಾಮಾನ್ಯವಾಗಿ, ಬಹುತೇಕ ಕಂಪನಿಗಳು ತಮ್ಮ ನೌಕರರಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಬೇಕಾಗುವ ನಂ.16ರ ಫಾಮ್ರ್ ಅನ್ನು ಜುಲೈನಲ್ಲಿ ನೀಡುತ್ತವೆ. ಹೀಗಾಗಿ ಜುಲೈ 31ರ ಅಂತಿಮ ದಿನಾಂಕ ಸಮೀಪಿಸುತ್ತಿರುವ ಹಾಗೆಯೇ ರಿಟರ್ನ್ಸ್ ಸಲ್ಲಿಕೆಯ ಧಾವಂತ ಹೆಚ್ಚಾಗುತ್ತದೆ. ಈ ಬಾರಿಯಂತೂ ರಿಟರ್ನ್ಸ್ ಸಲ್ಲಿಕೆಯನ್ನು ನಿಗದಿತ ದಿನಾಂಕದೊಳಗೆಯೇ ಕಟ್ಟುನಿಟ್ಟಾಗಿ ಮಾಡುವಂತೆ ಆದಾಯ ತೆರಿಗೆ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ನಿಗದಿಪಡಿಸಿದ ಕಡೆಯ ದಿನಾಂಕಕ್ಕಿಂತ ತಡವಾಗಿ ರಿಟರ್ನ್ಸ್ ಸಲ್ಲಿಸಿದರೆ ದಂಡ ವಿಧಿಸಲು ಸಿದ್ಧವಾಗಿದೆ. ಈ ದಂಡದ ಮೊತ್ತವೂ ಕಡಿಮೆಯೇನಿಲ್ಲ. ಆಗಸ್ಟ್ 1ರಿಂದ ಡಿಸೆಂಬರ್ 31ರವರೆಗೆ ಫೈಲ್ ಮಾಡಿದರೆ 5 ಸಾವಿರ ರೂ., ಜನವರಿ 1ರಿಂದ ಮಾರ್ಚ್ 31ರವರೆಗೆ ಫೈಲ್ ಮಾಡಿದರೆ 10 ಸಾವಿರ ರೂ. ದಂಡ ವಿಧಿಸಲು ತೆರಿಗೆ ಇಲಾಖೆ ಮುಂದಾಗಿದೆ. ಹಾಗಾಗಿ, ತೆರಿಗೆದಾರರು ನಿಗದಿತ ದಿನಾಂಕದೊಳಗಾಗಿ ರಿಟರ್ನ್ಸ್ ಸಲ್ಲಿಸುವುದು ಈ ಬಾರಿ ಅಗತ್ಯ ಮತ್ತು ಅನಿವಾರ್ಯವಾಗಿದೆ.
ಆದಾಯ ತೆರಿಗೆ ಎನ್ನುವುದು ಒಬ್ಬ ವ್ಯಕ್ತಿಯು ಗಳಿಸುವ ವಾರ್ಷಿಕ ಆದಾಯದ ಮೇಲಿನ ತೆರಿಗೆ. ಫೈನಾನ್ಸ್ ಆಕ್ಟ್ ಪ್ರಕಾರ, ಆಯಾ ವರ್ಷದಲ್ಲಿ ಸರ್ಕಾರ ನಿಗದಿಪಡಿಸುವ ದರದಲ್ಲಿ ತೆರಿಗೆದಾರನ ಆದಾಯಕ್ಕೆ ತಕ್ಕಂತೆ ತೆರಿಗೆಯನ್ನು ನೀಡಬೇಕಾಗುತ್ತದೆ.
ಆದಾಯ ತೆರಿಗೆ ಆಕ್ಟ್ ಸೆಕ್ಷನ್ 14ರ ಅನ್ವಯ ಆದಾಯವನ್ನು ಈ ಕೆಳಕಂಡಂತೆ ವರ್ಗೀಕರಿಸಬಹುದು: 1) ಭತ್ಯೆಗಳು ಹಾಗೂ ಸಂಭಾವನೆಗಳನ್ನು ಒಳಗೊಂಡಂತೆ ವೇತನ/ ನಿವೃತ್ತಿ ವೇತನ 2) ಮನೆ ಬಾಡಿಗೆಯ ಆದಾಯ 3 ವ್ಯಾಪಾರೋದ್ಯಮ ದಿಂದ ಗಳಿಸಿದ ಲಾಭ 4) ದೀರ್ಘಾವಧಿ ಹಾಗೂ ಅಲ್ಪಾವಧಿ ಲಾಭ 5) ಬ್ಯಾಂಕ್ ಬಡ್ಡಿ, ಹೂಡಿಕೆ ಮೇಲೆ ಗಳಿಸಿದ ಬಡ್ಡಿಯ ಆದಾಯ ಇತ್ಯಾದಿ.
ಹಿರಿಯ ನಾಗರಿಕರಿಗೆ ಬ್ಯಾಂಕ್ / ಅಂಚೆ ಕಚೇರಿ, ಸಹಕಾರಿ ಸಂಘಗಳಲ್ಲಿ ಮಾಡಿರುವ ಠೇವಣಿಗಳಿಗೆ ನೀಡುವ ಬಡ್ಡಿಗೆ ಇದುವರೆಗೆ ಇದ್ದ 10,000 ರೂ.ಗಳ ವಿನಾಯಿತಿಯನ್ನು 50,000 ರೂ.ಗಳಿಗೆ ಏರಿಸಲಾಗಿದೆ. ಉಳಿತಾಯ ಖಾತೆಯ ಮೇಲಿನ ಬಡ್ಡಿಗೆ ದೊರಕುತ್ತಿದ್ದ 10,000 ರೂ.ಗಳ ವಿನಾಯಿತಿಯನ್ನು ಹಿರಿಯ ನಾಗರಿಕರಿಗೆ ಇನ್ನು ಮುಂದೆ ನೀಡಲಾಗುವುದಿಲ್ಲ. ಆರೋಗ್ಯ ವಿಮೆ, ಪ್ರೀಮಿಯಂಗೆ ಕಟ್ಟುವ 50,000 ರೂ.ಗಳವರೆಗಿನ ಹಣಕ್ಕೆ ಆದಾಯ ತೆರಿಗೆ ವಿನಾಯಿತಿ ಇದೆ. ಕೆಲವು ವಿಷಮ ಕಾಯಿಲೆಗಳಿಗೆ ಖರ್ಚು ಮಾಡುವ 1,00,000 ರೂ.ಗಳವರೆಗಿನ ಮೊತ್ತಕ್ಕೆ ವಿನಾಯಿತಿ ಇದೆ.
ತಪ್ಪು ಕಲ್ಪನೆ ಬೇಡ
ಫಿಕ್ಸೆಡ್ ಡಿಪಾಸಿಟ್ ಮೇಲಿನ ಬಡ್ಡಿಯನ್ನು ನೀಡುವಾಗ ಮೂಲದಲ್ಲಿ ಆದಾಯ ತೆರಿಗೆ ಕಡಿತಗೊಳಿಸಿದ್ದರೆ (ಟಿಡಿಎಸ್-ಟ್ಯಾಕ್ಸ್ ಡಿಡಕ್ಟೆಡ್ ಆಟ್ ಸೋರ್ಸ್) ಆದಾಯ ತೆರಿಗೆಯನ್ನು ನೀಡಬೇಕಾಗಿಲ್ಲ ಎಂಬುದು ಕೆಲವರ ಅಭಿಪ್ರಾಯ. ಆದರೆ, ಅದು ತಪ್ಪು ಕಲ್ಪನೆ. ಗಳಿಸಿದ ಬಡ್ಡಿಗೆ ಮೂಲದಲ್ಲಿ ಆದಾಯ ತೆರಿಗೆಯನ್ನು ಕಡಿತಗೊಳಿಸುವಾಗ ಕೇವಲ 10%ನ್ನು ಮಾತ್ರ ಕಡಿತಗೊಳಿಸಲಾಗಿರುತ್ತದೆ. ಆದರೆ, ತೆರಿಗೆದಾರನು ಹೆಚ್ಚಿನ ಆದಾಯ ತೆರಿಗೆ ಪರಿಮಿತಿಗೆ ಒಳಪಟ್ಟಿದ್ದರೆ ಹೆಚ್ಚಿನ ತೆರಿಗೆ ನೀಡಬೇಕಾಗುತ್ತದೆ.
ಈ ಸಂಗತಿಗಳನ್ನು ನೆನಪಿಡಿ
ವೈಯಕ್ತಿಕ ತೆರಿಗೆದಾರರು, ವೇತನದಾರರು, ನಿವೃತ್ತರು ಮುಂತಾದವರು ಆದಾಯ ತೆರಿಗೆ ರಿಟರ್ನ್ಸ್ ಅನ್ನು ಪ್ರತಿ ವರ್ಷ ಜುಲೈ 31ರೊಳಗಾಗಿ ಸಲ್ಲಿಸಬೇಕು. ತೆರಿಗೆದಾರರು ತಾವೇ ಸ್ವಂತವಾಗಿ ಆದಾಯ ತೆರಿಗೆ ರಿಟರ್ನ್ಸ್ ಫಾರಂ ಅನ್ನು ಆನ್​ಲೈನ್​ನಲ್ಲಿ ಭರ್ತಿ ಮಾಡಿ ಸಲ್ಲಿಸಬಹುದು. ಹಾಗೆ ಮಾಡಲಾಗದವರು ತೆರಿಗೆ ಸಲಹೆಗಾರನ್ನಾಗಲಿ ಚಾರ್ಟರ್ಡ್ ಅಕೌಂಟಂಟ್​ರನ್ನಾಗಲಿ ಸಂರ್ಪಸಿ ಅವರ ಸೇವೆಯ ಸೌಲಭ್ಯ ಪಡೆಯಬಹುದು. ಅವರು ತೆರಿಗೆ ಲೆಕ್ಕಾಚಾರ ಹಾಕಲು ತೆರಿಗೆದಾರರ ಆ ವರ್ಷದ ಒಟ್ಟು ಆದಾಯವನ್ನು ನಿರ್ಧರಿಸಿ ಕಾನೂನಿನಂತೆ ವಿವಿಧ ಸೆಕ್ಷನ್​ಗಳಲ್ಲಿ ದೊರಕುವ ವಿನಾಯಿತಿಗಳನ್ನು ಪರಿಗಣನೆಗೆ ತೆಗೆದುಕೊಂಡು ತೆರಿಗೆದಾರನು ನೀಡಬೇಕಾದ ತೆರಿಗೆ ಮೊತ್ತವನ್ನು ನಿರ್ಧರಿಸುತ್ತಾರೆ.
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಸಂದರ್ಭದಲ್ಲಿ ಈ ಕೆಳಗಿನ ಆದಾಯದ ಮೂಲವನ್ನೂ ಸಹ ತಿಳಿಸಬೇಕಾಗುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....