ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವಿಧಾನಸಭಾ ಚುನಾವಣೆಯಲ್ಲಿ (ಚಾಮುಂಡೇಶ್ವರಿ ಕ್ಷೇತ್ರ) ಸೋಲಿಸಿದ್ದ ಜಿ.ಟಿ. ದೇವೇಗೌಡರಿಗೆ ಕೊನೆಗೂ ಮೈಸೂರು ಜಿಲ್ಲಾ ಉಸ್ತುವಾರಿ ಸ್ಥಾನ ಸಿಕ್ಕಿದ್ದು, ತುಮಕೂರು ಜಿಲ್ಲೆಯಲ್ಲಿ ಬೇರೆ ಇಬ್ಬರು ಸಚಿವರಿದ್ದರೂ ತವರು ಜಿಲ್ಲೆಯನ್ನು ಉಳಿಸಿಕೊಳ್ಳುವಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಹಂಚಿಕೆ ವಿಷಯದಲ್ಲಿ ದೋಸ್ತಿ ಸರ್ಕಾರದ ಮಿತ್ರ ಪಕ್ಷಗಳ ಮಧ್ಯೆ ಮಾತ್ರವಲ್ಲದೇ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದೊಳಗೇ ಜಟಾಪಟಿ ಏರ್ಪಟ್ಟಿತ್ತು. ಈ ಕಾರಣದಿಂದ ಸಂಪುಟ ವಿಸ್ತರಣೆಯಾಗಿ ಎರಡು ತಿಂಗಳು ಕಳೆದರೂ ಉಸ್ತುವಾರಿ ಸಚಿವರ ನೇಮಕವಾಗಿರಲಿಲ್ಲ.
ನಾಲ್ವರು ಸಚಿವರಿಗೆ (ಜಿ. ಪರಮೇಶ್ವರ, ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್ ಮತ್ತು ಕೃಷ್ಣ ಬೈರೇಗೌಡ) ತಲಾ ಎರಡು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಮೈಸೂರು ಜಿಲ್ಲೆ ಉಸ್ತುವಾರಿಯನ್ನು ಉನ್ನತ ಶಿಕ್ಷಣ ಸಚಿವ ದೇವೇಗೌಡರಿಗೆ ವಹಿಸುವುದಕ್ಕೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಜೆಡಿಎಸ್ ಪ್ರತಿನಿಧಿಸುವ ಸಚಿವ ಸಾ.ರಾ. ಮಹೇಶ್ ಕೂಡ ಈ ಜಿಲ್ಲೆಯ ಉಸ್ತುವಾರಿಗೆ ಪಟ್ಟು ಹಿಡಿದಿದ್ದರು. ಆದರೆ, ಈ ವಿಷಯದಲ್ಲಿ ದೇವೇಗೌಡ ಕೊನೆಗೂ ಗೆದ್ದಿದ್ದಾರೆ.
ಮಂಡ್ಯ ಜಿಲ್ಲೆ ಉಸ್ತುವಾರಿ ಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಸಂಬಂಧಿಯೂ ಆಗಿರುವ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಪಟ್ಟು ಹಿಡಿದಿದ್ದರು. ಆದರೆ, ಅದು ಅವರ ಕೈತಪ್ಪಿದ್ದು, ಸಿ.ಎಸ್. ಪುಟ್ಟರಾಜು ಅವರಿಗೆ ಉಸ್ತುವಾರಿ ಪಟ್ಟ ಸಿಕ್ಕಿದೆ.
ಗೃಹ ಖಾತೆ ಜತೆಗೆ ಬೆಂಗಳೂರು ಅಭಿವೃದ್ಧಿ ಖಾತೆಯನ್ನೂ ಹೊಂದಿರುವ ಜಿ. ಪರಮೇಶ್ವರ ಅವರಿಗೆ ಬೆಂಗಳೂರು ನಗರ ಜಿಲ್ಲೆಯ ಜೊತೆಗೆ ತುಮಕೂರು ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ. ತುಮಕೂರು ಜಿಲ್ಲೆ ಪ್ರತಿನಿಧಿಸುವ ಕಾಂಗ್ರೆಸ್ನ ವೆಂಕಟರಮಣಪ್ಪ ಹಾಗೂ ಜೆಡಿಎಸ್ನ ಎಸ್.ಆರ್. ಶ್ರೀನಿವಾಸ್(ವಾಸು) ಹೀಗೆ ಇಬ್ಬರು ಇದ್ದರೂ ಅವರಿಗೆ ಆ ಜಿಲ್ಲೆಯ ಉಸ್ತುವಾರಿ ದಕ್ಕಿಲ್ಲ.
ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳ ಉಸ್ತುವಾರಿಯನ್ನು ಕೃಷ್ಣ ಬೈರೇಗೌಡರಿಗೆ ವಹಿಸಲಾಗಿದೆ.
ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯನ್ನು ಆರ್.ವಿ. ದೇಶಪಾಂಡೆಗೆ ವಹಿಸಿರುವ ಮುಖ್ಯಮಂತ್ರಿ, ರಾಮನಗರ ಜಿಲ್ಲೆಯ ಜೊತೆಗೆ ಬಿಜೆಪಿ ಭದ್ರ ನೆಲೆಯಾದ ಬಳ್ಳಾರಿಯ ಹೊಣೆಯನ್ನೂ ಡಿ.ಕೆ. ಶಿವಕುಮಾರ್ಗೆ ನೀಡಲಾಗಿದೆ.ಸ
ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಹಂಚಿಕೆ ವಿಷಯದಲ್ಲಿ ದೋಸ್ತಿ ಸರ್ಕಾರದ ಮಿತ್ರ ಪಕ್ಷಗಳ ಮಧ್ಯೆ ಮಾತ್ರವಲ್ಲದೇ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದೊಳಗೇ ಜಟಾಪಟಿ ಏರ್ಪಟ್ಟಿತ್ತು. ಈ ಕಾರಣದಿಂದ ಸಂಪುಟ ವಿಸ್ತರಣೆಯಾಗಿ ಎರಡು ತಿಂಗಳು ಕಳೆದರೂ ಉಸ್ತುವಾರಿ ಸಚಿವರ ನೇಮಕವಾಗಿರಲಿಲ್ಲ.
ನಾಲ್ವರು ಸಚಿವರಿಗೆ (ಜಿ. ಪರಮೇಶ್ವರ, ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್ ಮತ್ತು ಕೃಷ್ಣ ಬೈರೇಗೌಡ) ತಲಾ ಎರಡು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಮೈಸೂರು ಜಿಲ್ಲೆ ಉಸ್ತುವಾರಿಯನ್ನು ಉನ್ನತ ಶಿಕ್ಷಣ ಸಚಿವ ದೇವೇಗೌಡರಿಗೆ ವಹಿಸುವುದಕ್ಕೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಜೆಡಿಎಸ್ ಪ್ರತಿನಿಧಿಸುವ ಸಚಿವ ಸಾ.ರಾ. ಮಹೇಶ್ ಕೂಡ ಈ ಜಿಲ್ಲೆಯ ಉಸ್ತುವಾರಿಗೆ ಪಟ್ಟು ಹಿಡಿದಿದ್ದರು. ಆದರೆ, ಈ ವಿಷಯದಲ್ಲಿ ದೇವೇಗೌಡ ಕೊನೆಗೂ ಗೆದ್ದಿದ್ದಾರೆ.
ಮಂಡ್ಯ ಜಿಲ್ಲೆ ಉಸ್ತುವಾರಿ ಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಸಂಬಂಧಿಯೂ ಆಗಿರುವ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಪಟ್ಟು ಹಿಡಿದಿದ್ದರು. ಆದರೆ, ಅದು ಅವರ ಕೈತಪ್ಪಿದ್ದು, ಸಿ.ಎಸ್. ಪುಟ್ಟರಾಜು ಅವರಿಗೆ ಉಸ್ತುವಾರಿ ಪಟ್ಟ ಸಿಕ್ಕಿದೆ.
ಗೃಹ ಖಾತೆ ಜತೆಗೆ ಬೆಂಗಳೂರು ಅಭಿವೃದ್ಧಿ ಖಾತೆಯನ್ನೂ ಹೊಂದಿರುವ ಜಿ. ಪರಮೇಶ್ವರ ಅವರಿಗೆ ಬೆಂಗಳೂರು ನಗರ ಜಿಲ್ಲೆಯ ಜೊತೆಗೆ ತುಮಕೂರು ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ. ತುಮಕೂರು ಜಿಲ್ಲೆ ಪ್ರತಿನಿಧಿಸುವ ಕಾಂಗ್ರೆಸ್ನ ವೆಂಕಟರಮಣಪ್ಪ ಹಾಗೂ ಜೆಡಿಎಸ್ನ ಎಸ್.ಆರ್. ಶ್ರೀನಿವಾಸ್(ವಾಸು) ಹೀಗೆ ಇಬ್ಬರು ಇದ್ದರೂ ಅವರಿಗೆ ಆ ಜಿಲ್ಲೆಯ ಉಸ್ತುವಾರಿ ದಕ್ಕಿಲ್ಲ.
ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳ ಉಸ್ತುವಾರಿಯನ್ನು ಕೃಷ್ಣ ಬೈರೇಗೌಡರಿಗೆ ವಹಿಸಲಾಗಿದೆ.
ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯನ್ನು ಆರ್.ವಿ. ದೇಶಪಾಂಡೆಗೆ ವಹಿಸಿರುವ ಮುಖ್ಯಮಂತ್ರಿ, ರಾಮನಗರ ಜಿಲ್ಲೆಯ ಜೊತೆಗೆ ಬಿಜೆಪಿ ಭದ್ರ ನೆಲೆಯಾದ ಬಳ್ಳಾರಿಯ ಹೊಣೆಯನ್ನೂ ಡಿ.ಕೆ. ಶಿವಕುಮಾರ್ಗೆ ನೀಡಲಾಗಿದೆ.ಸ
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ