ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: 12 ವರ್ಷಗಳ ಬಳಿಕ ಭರ್ತಿಯಾದ ಸೂಪಾ ಜಲಾಶಯ

ಕಾರವಾರ/ದಾಂಡೇಲಿ/ಜೊಯಿಡಾ: ರಾಜ್ಯದ ಅತೀ ಎತ್ತರದ ಜಲಾಶಯ ಸೂಪಾ ಹನ್ನೆರಡು ವರ್ಷಗಳ ಬಳಿಕ ಈ ಬಾರಿ  ಭರ್ತಿಯಾಗಿದ್ದು, ಬುಧವಾರ ನೀರು ಹೊರ ಬಿಡಲಾಗಿದೆ. 564 ಮೀಟರ್ (ಸಮುದ್ರ ಮಟ್ಟದಿಂದ) ಗರಿಷ್ಠ ಸಂಗ್ರಹಣಾ ಸಾಮರ್ಥ್ಯವಿರುವ ಜಲಾಶಯದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ 562.75 ಮೀಟರ್​ವರೆಗೆ ನೀರು ಸಂಗ್ರಹವಾಗಿತ್ತು. 16,500 ಕ್ಯೂಸೆಕ್ ಒಳಹರಿವಿತ್ತು.
ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಬುಧವಾರ ಮಧ್ಯಾಹ್ನ 3 ಗಂಟೆ 10 ನಿಮಿಷಕ್ಕೆ 3 ಗೇಟ್​ಗಳನ್ನು ಅರ್ಧ ಅಡಿ ತೆರೆದು ಪ್ರತಿ ಸೆಕೆಂಡ್​ಗೆ 7 ಸಾವಿರ ಕ್ಯೂಬಿಕ್ ಅಡಿ (ಕ್ಯೂಸೆಕ್-ಪ್ರತಿ ಸೆಕೆಂಡ್​ಗೆ 28.317 ಲೀಟರ್) ನೀರು ಹೊರ ಬಿಡಲಾಗುತ್ತಿದೆ. ಅಲ್ಲದೆ, ಸೂಪಾ ಜಲಾಶಯದ ಕೆಳಗಿರುವ ವಿದ್ಯುದಾಗಾರದಿಂದ 150 ಮೆಗಾವ್ಯಾಟ್​ನ ಎರಡು ಟರ್ಬೆನ್​ಗಳಿಂದ ನಿರಂತರ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, 4,300 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ನೀರಿನ ಮಟ್ಟ 562 ಮೀಟರ್​ಗೆ ತಲುಪುವವರೆಗೂ ಅಂದರೆ, ಆ. 30ರ ಮಧ್ಯಾಹ್ನದವರೆಗೂ ಇದೇ ಹಂತದಲ್ಲಿ ನೀರು ಹೊರ ಬಿಡಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಐತಿಹಾಸಿಕ ಕ್ಷಣ: 1987ರಲ್ಲಿ ನಿರ್ಮಾಣಗೊಂಡ ಜಲಾಶಯ 31 ವರ್ಷಗಳಲ್ಲಿ ಎರಡೇ ಬಾರಿ ಸಂಪೂರ್ಣ ಭರ್ತಿಯಾಗಿತ್ತು. ಬುಧವಾರ ಮೂರನೇ ಬಾರಿ ನೀರು ಹೊರಬಿಡಲಾಯಿತು. ಸಮೀಪದ ಗ್ರಾಮಗಳ ನೂರಾರು ಜನ ನೀರು ಬಿಡುವ ಕ್ಷಣವನ್ನು ಕಣ್ತುಂಬಿಕೊಂಡರು. ಜಲಾಶಯ ಭರ್ತಿಯ ಹಂತ ತಲುಪಿದ್ದರಿಂದ ಆ. 15ರಂದೇ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದರು. 1994ರ ಆಗಸ್ಟ್ 27, 2006ರ ಅಕ್ಟೋಬರ್ 4ರಂದು ಜಲಾಶಯದ ಗೇಟ್ ತೆರೆದು ನೀರು ಹೊರಬಿಡಲಾಗಿತ್ತು. 2007, 2011 ಹಾಗೂ 2014ರಲ್ಲಿ ಭರ್ತಿಯಾಗುವ ಹಂತ ತಲುಪಿತ್ತು.
ನಿರಂತರ ವಿದ್ಯುತ್ ಉತ್ಪಾದನೆ: ಕಾಳಿ ಜಲವಿದ್ಯುತ್ ಯೋಜನೆ ಪ್ರಮುಖ ಜಲಾಶಯ ಸೂಪಾ ಭರ್ತಿಯಾಗುತ್ತಿರುವುದರಿಂದ ಇಲ್ಲಿ ನಿರಂತರ ವಿದ್ಯುತ್ ಉತ್ಪಾದನೆ ಮಾಡಿ ನೀರು ಹೊರಬಿಡುವ ಮೂಲಕ ಕೆಪಿಸಿ ನೀರನ್ನು ಸದ್ಬಳಕೆ ಮಾಡಿಕೊಳ್ಳುತ್ತಿದೆ. ಸೂಪಾ ಜಲಾಶಯದ ಸಮೀಪ ಇರುವ 150 ಮೆಗಾವ್ಯಾಟ್​ನ ಎರಡು ಘಟಕಗಳು ಹಾಗೂ ನಾಗಝುರಿ ಪವರ್ ಹೌಸ್​ನಲ್ಲಿರುವ 150 ಮೆಗಾವ್ಯಾಟ್​ನ 6 ಘಟಕಗಳ ಮೂಲಕ ಕಳೆದ ಕೆಲ ದಿನಗಳಿಂದ ನಿರಂತರ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ರಾಜ್ಯದ ವಿದ್ಯುತ್ ಬೇಡಿಕೆಯನ್ನು ಜಲವಿದ್ಯುತ್ ಘಟಕಗಳ ಮೂಲಕವೇ ಪೂರೈಸಿ ಉಷ್ಣ ವಿದ್ಯುತ್ ಸ್ಥಾವರಗಳ ಮೇಲಿನ ಒತ್ತಡ ಕಡಿಮೆ ಮಾಡಲಾಗುತ್ತಿದೆ.
ಬೊಮ್ಮನಹಳ್ಳಿಯೂ ಭರ್ತಿ ಸಾಧ್ಯತೆ: ಸೂಪಾ ಜಲಾಶಯದಿಂದ ಬಿಟ್ಟ ನೀರು ಅದರ ಕೆಳಗಿರುವ ಬೊಮ್ಮನಹಳ್ಳಿಗೆ ಸೇರುತ್ತದೆ. ಆ ಜಲಾಶಯವೂ ಭರ್ತಿ ಹಂತದಲ್ಲಿದೆ. 438.38 ಮೀಟರ್ ಸಂಗ್ರಣಾ ಸಾಮರ್ಥ್ಯವಿರುವ ಬೊಮ್ಮನಹಳ್ಳಿಯಲ್ಲಿ 435 ಮೀಟರ್​ಗಿಂತ ಹೆಚ್ಚು ನೀರು ಸಂಗ್ರಹವಾಗಿದೆ. ತುಂಬುಲು ಇನ್ನೂ 2 ಟಿಎಂಸಿಯಷ್ಟು ನೀರು ಬೇಕಿದೆ. ಸೂಪಾ ಜಲಾಶಯದಿಂದ ಬುಧವಾರ ವಿದ್ಯುತ್ ಉತ್ಪಾದನೆ ಹಾಗೂ ನೇರವಾಗಿ ಸೇರಿ ಒಟ್ಟು 11,300 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇಷ್ಟು ನೀರನ್ನು 24 ಗಂಟೆ ನಿರಂತರವಾಗಿ ಹೊರ ಬಿಟ್ಟಲ್ಲಿ 1 ಟಿಎಂಸಿ ನೀರು ತುಂಬಲಿದೆ. ಆದರೆ, ಬೊಮ್ಮನಹಳ್ಳಿಯಿಂದ ನೀರು ಹೊರ ಬಿಡುವುದನ್ನು ತಪ್ಪಿಸಲು ಕೆಪಿಸಿ ನಾಗಝುರಿಯಲ್ಲಿ ನಿರಂತರ ವಿದ್ಯುತ್ ಉತ್ಪಾದನೆ ಮಾಡುತ್ತಿದೆ.
ಪ್ರವಾಹದ ಭೀತಿ ಇಲ್ಲ: ಸೂಪಾದಿಂದ ಬೊಮ್ಮನಹಳ್ಳಿ ಜಲಾಶಯದವರೆಗೆ ದಾಂಡೇಲಿ ನಗರ ಇಳವಾ, ಮೌಳಂಗಿ, ಬೀರಂಪಾಲಿ ಇತರ ಗ್ರಾಮಗಳು ಬರುತ್ತವೆ. ನೀರು ಬಿಟ್ಟಿದ್ದರಿಂದ ನದಿ ಅಪಾಯದ ಮಟ್ಟದಲ್ಲಿ ಹರಿಯಬಹುದು. ಆದರೆ, ಯಾವುದೇ ಪ್ರವಾಹ ಸಂಭವಿಸುವ ಸಾಧ್ಯತೆ ಇಲ್ಲ. ಬೊಮ್ಮನಹಳ್ಳಿ ಜಲಾಶಯದಿಂದ ನೀರು ಹೊರಬಿಟ್ಟರೆ ಕೆಲವೆಡೆ ತೊಂದರೆ ಉಂಟಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಅಣೆಕಟ್ಟೆಗಳ ಸುರಕ್ಷತೆ, ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಗರಿಷ್ಠ ವಿದ್ಯುತ್ ಉತ್ಪಾದನೆ ಮಾಡುವತ್ತ ಗಮನ ಹರಿಸುತ್ತಿದ್ದೇವೆ. ಒಮ್ಮೆಲೇ ಹೆಚ್ಚು ನೀರು ಬಿಟ್ಟು ಪ್ರವಾಹ ಸೃಷ್ಟಿಸುತ್ತಿಲ್ಲ. ಆದಷ್ಟು ವಿದ್ಯುತ್ ಉತ್ಪಾದನೆ ಮಾಡಿಯೇ ನೀರು ಹೊರಬಿಡಲಾಗುತ್ತಿದೆ.
| ಅಬ್ದುಲ್ ಮಜೀದ್, ಸುಪರಿಟೆಂಡೆಂಟ್ ಇಂಜಿನಿಯರ್, ಜಲಾಶಯ ವಿಭಾಗ ಸೂಪಾ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...