ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿಯ ಸ್ವಚ್ಛ ಭಾರತ್ ಅಭಿಯಾನದಿಂದಾಗಿ ದೇಶದಲ್ಲಿ ಅತಿಸಾರದಿಂದ ಮೃತಪಡುವವರ ಸಂಖ್ಯೆ ಕಡಿಮೆಯಾಗಿದ್ದು, 2014 ರಿಂದ ಸುಮಾರು 1.8 ಲಕ್ಷ ಜನರ ಪ್ರಾಣ ಉಳಿದಿದೆ. 2019ರ ಅಕ್ಟೋಬರ್ ವೇಳೆಗೆ ಈ ಸಂಖ್ಯೆ 3 ಲಕ್ಷಕ್ಕೆ ತಲುಪಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿ ತಿಳಿಸಿದೆ.
2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಸ್ವಚ್ಛ ಭಾರತ್ ಅಭಿಯಾನದ ಅಡಿಯಲ್ಲಿ ಗ್ರಾಮೀಣ ಭಾಗದಲ್ಲಿ ನೈರ್ಮಲ್ಯವನ್ನು ಕಾಪಾಡಲು ಹೆಚ್ಚಿನ ಒತ್ತು ನೀಡಲಾಯಿತು ಮತ್ತು ಶೌಚಗೃಹಗಳನ್ನು ನಿರ್ಮಿಸಲು ಅನುದಾನ ನೀಡಲಾಯಿತು. ಇದರಿಂದಾಗಿ ಗ್ರಾಮೀಣ ಭಾಗದಲ್ಲಿ ನೈರ್ಮಲ್ಯದ ಸಮಸ್ಯೆಯಿಂದ ಕಂಡುಬರುತ್ತಿದ್ದ ರೋಗಗಳ ಪ್ರಮಾಣ ಕಡಿಮೆಯಾಗಿದೆ.
ಅಭಿಯಾನದಿಂದಾಗಿ ಗ್ರಾಮೀಣ ಭಾಗದ ಜನರ ಆರೋಗ್ಯದ ಮೇಲಾಗಿರುವ ಪರಿಣಾಮಗಳ ಕುರಿತು ವರದಿ ನೀಡಲು ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ವಿಶ್ವ ಆರೋಗ್ಯ ಸಂಸ್ಥೆಗೆ ಕೋರಿಕೆ ಸಲ್ಲಿಸಿತ್ತು. ಇದರಂತೆ ಡಬ್ಲ್ಯೂಎಚ್ಒ ತನ್ನ ವರದಿಯನ್ನು ನೀಡಿದ್ದು, 2014 ಕ್ಕೂ ಮುನ್ನ ವಾರ್ಷಿಕ 19.9 ಕೋಟಿ ಜನರು ಅತಿಸಾರ (ಡಯೇರಿಯಾ) ದಿಂದಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಆದರೆ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾದ ನಂತರ ಅತಿಸಾರದಿಂದ ಅನಾರೋಗ್ಯಕ್ಕೆ ತುತ್ತಾಗುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ಡಬ್ಲ್ಯೂಎಚ್ಒ ತಿಳಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ವರದಿ ಕುರಿತು ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಕಾರ್ಯದರ್ಶಿ ಹೀಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
This study which WHO has done for us shows that over the coarse of this programme, by the time it is concluded by October 2019, over 3 lakh lives would have been saved. In addition, there have been several other significant health benefits.
Parameswaran Iyer, MDWS secretary
2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಸ್ವಚ್ಛ ಭಾರತ್ ಅಭಿಯಾನದ ಅಡಿಯಲ್ಲಿ ಗ್ರಾಮೀಣ ಭಾಗದಲ್ಲಿ ನೈರ್ಮಲ್ಯವನ್ನು ಕಾಪಾಡಲು ಹೆಚ್ಚಿನ ಒತ್ತು ನೀಡಲಾಯಿತು ಮತ್ತು ಶೌಚಗೃಹಗಳನ್ನು ನಿರ್ಮಿಸಲು ಅನುದಾನ ನೀಡಲಾಯಿತು. ಇದರಿಂದಾಗಿ ಗ್ರಾಮೀಣ ಭಾಗದಲ್ಲಿ ನೈರ್ಮಲ್ಯದ ಸಮಸ್ಯೆಯಿಂದ ಕಂಡುಬರುತ್ತಿದ್ದ ರೋಗಗಳ ಪ್ರಮಾಣ ಕಡಿಮೆಯಾಗಿದೆ.
ಅಭಿಯಾನದಿಂದಾಗಿ ಗ್ರಾಮೀಣ ಭಾಗದ ಜನರ ಆರೋಗ್ಯದ ಮೇಲಾಗಿರುವ ಪರಿಣಾಮಗಳ ಕುರಿತು ವರದಿ ನೀಡಲು ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ವಿಶ್ವ ಆರೋಗ್ಯ ಸಂಸ್ಥೆಗೆ ಕೋರಿಕೆ ಸಲ್ಲಿಸಿತ್ತು. ಇದರಂತೆ ಡಬ್ಲ್ಯೂಎಚ್ಒ ತನ್ನ ವರದಿಯನ್ನು ನೀಡಿದ್ದು, 2014 ಕ್ಕೂ ಮುನ್ನ ವಾರ್ಷಿಕ 19.9 ಕೋಟಿ ಜನರು ಅತಿಸಾರ (ಡಯೇರಿಯಾ) ದಿಂದಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಆದರೆ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾದ ನಂತರ ಅತಿಸಾರದಿಂದ ಅನಾರೋಗ್ಯಕ್ಕೆ ತುತ್ತಾಗುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ಡಬ್ಲ್ಯೂಎಚ್ಒ ತಿಳಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ವರದಿ ಕುರಿತು ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಕಾರ್ಯದರ್ಶಿ ಹೀಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
This study which WHO has done for us shows that over the coarse of this programme, by the time it is concluded by October 2019, over 3 lakh lives would have been saved. In addition, there have been several other significant health benefits.
Parameswaran Iyer, MDWS secretary
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ