ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: 5 ಕೋಟಿ ಎಲ್​ಪಿಜಿ ಸಂಪರ್ಕ

ನವದೆಹಲಿ: ನಿಗದಿತ ಅವಧಿಗೆ ಎಂಟು ತಿಂಗಳು ಮುಂಚಿತವಾಗಿಯೇ ಪ್ರಧಾನಮಂತ್ರಿ ಉಜ್ವಲಾ ಯೋಜನೆ (ಪಿಎಂಯುವೈ)ಯಲ್ಲಿ ಐದು ಕೋಟಿ ಕಡು ಬಡ ಕುಟುಂಬಗಳಿಗೆ ಅಡುಗೆ ಅನಿಲ (ಎಲ್​ಪಿಜಿ) ಸಂಪರ್ಕ ಒದಗಿಸುವ ಗುರಿ ಸಾಧಿಸಿದೆ ಕೇಂದ್ರ ಸರ್ಕಾರ.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಸಂಸತ್ ಭವನದಲ್ಲಿ ಉಜ್ವಲಾ ಯೋಜನೆಯ 5ನೇ ಕೋಟಿ ಫಲಾನುಭವಿಗೆ ಶುಕ್ರವಾರ ವಿತರಣಾ ಪತ್ರ ನೀಡಿದರು. ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್ ಹಾಜರಿದ್ದರು. ಹೊಗೆ ರಹಿತ ಅಡುಗೆ ಮನೆ ಪರಿಕಲ್ಪನೆಯಲ್ಲಿ ಬಡ ಕುಟುಂಬಗಳಿಗೆ ಎಲ್​ಪಿಜಿ ಸಂಪರ್ಕ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಿಂದ 2016ರ ಮೇ 1ರಂದು ಪಿಎಂಯುವೈ ಜಾರಿಗೆ ತರಲಾಯಿತು. 2019ರ ಮಾರ್ಚ್ ಒಳಗೆ ಐದು ಕೋಟಿ ಫಲಾನುಭವಿಗಳನ್ನು ತಲುಪುವ ಗುರಿಹೊಂದಲಾಗಿತ್ತು. ಆದರೆ, 2018ರ ಆಗಸ್ಟ್​ನಲ್ಲೇ ಈ ಗುರಿ ಸಾಧಿಸಲಾಗಿದೆ.
ಫಲಾನುಭವಿಗಳ ಪ್ರಮಾಣ ಶೇ.80ಕ್ಕೆ ಏರಿಕೆ
ಸಾಮಾಜಿಕ, ಆರ್ಥಿಕ ಮತ್ತು ಜಾತಿ ಆಧಾರಿತ ಜನಗಣತಿ ದತ್ತಾಂಶ ಆಧರಿಸಿ ಬಿಪಿಎಲ್ ಕುಟುಂಬಗಳಿಗೆ ಸಬ್ಸಿಡಿ ಸಹಿತ ಎಲ್​ಪಿಸಿ ಸಂಪರ್ಕ ನೀಡುವ ಉಜ್ವಲಾ ಯೋಜನೆಯನ್ನು 2018ರ ಏಪ್ರಿಲ್​ನಲ್ಲಿ ಇನ್ನೂ ಹಲವು ವರ್ಗಗಳಿಗೆ ವಿಸ್ತರಿಸಲ್ಪಟ್ಟಿತು. ಇದರಿಂದಾಗಿ ದೇಶದಲ್ಲಿ ಶೇ. 62ರಷ್ಟಿದ್ದ ಎಲ್​ಪಿಜಿ ಸಂಪರ್ಕ ಶೇ. 80ಕ್ಕೆ ಏರಿತು. ಉಜ್ವಲಾ ಯೋಜನೆಯ ಪ್ರತಿ ಫಲಾನುಭವಿಗೆ ಮುಂದಿನ ಮೂರು ವರ್ಷಗಳವರೆಗೆ ಸರ್ಕಾರ -ಠಿ; 1,600 ಸಬ್ಸಿಡಿ ಬೆಂಬಲ ನೀಡಲಿದೆ. ಈ ಫಲಾನುಭವಿಗಳ ಪೈಕಿ ಶೇ.47ರಷ್ಟು ಮಂದಿ ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ್ದಾರೆ. ಡಬ್ಲ್ಯುಎಚ್​ಒ ಶ್ಲಾಘನೆ
ಗ್ರಾಮೀಣ ಭಾಗದಲ್ಲಿ ಅಡುಗೆಗೆ ಉರುವಲು ಆಶ್ರಯಿಸುವುದನ್ನು ತಪ್ಪಿಸಿದ ಮತ್ತು ವಾಯು ಮಾಲಿನ್ಯಕ್ಕೆ ಕಡಿವಾಣ ಹಾಕಿದ ಪಿಎಂಯುವೈನಿಂದ 3.70 ಕೋಟಿ ಮಹಿಳೆಯರು ಸ್ವಚ್ಛ ಇಂಧನ ಪಡೆಯುವಂತೆ ಆಯಿತು. ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ಈ ಯೋಜನೆಯನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್​ಒ) ಕೂಡ ಶ್ಲಾಘಿಸಿದೆ.
ಪ್ರಧಾನಿ ಕರೆಗೆ ಓಗೊಟ್ಟು ಸಬ್ಸಿಡಿ ಬಿಟ್ಟರು
ಅವಶ್ಯಕತೆ ಇದ್ದವರಿಗೆ ಸಬ್ಸಿಡಿ ದೊರೆಯಬೇಕು, ಹೀಗಾಗಿ ಉಳ್ಳವರು ಎಲ್​ಪಿಜಿ ಸಬ್ಸಿಡಿಯನ್ನು ಬಿಟ್ಟುಕೊಡಬೇಕು ಎಂದು ಪ್ರಧಾನಿ ಮೋದಿ ದೇಶವಾಸಿಗಳಲ್ಲಿ ಮನವಿ ಮಾಡಿಕೊಂಡಿದ್ದವರು. ಈ ಕರೆಗೆ ಓಗೊಟ್ಟು ಒಟ್ಟಾರೆ ಗ್ರಾಹಕರಲ್ಲಿ ಶೇ. 4 ಜನರು ಸ್ವ ಇಚ್ಛೆಯಿಂದ ಸಬ್ಸಿಡಿ ಬಿಟ್ಟುಕೊಟ್ಟಿದ್ದಾರೆ. ಇದರ ಜತೆಗೆ ಸಿಲಿಂಡರ್​ಗಳ ದುರ್ಬಳಕೆ ತಪ್ಪಿಸಲು ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 12 ಸಿಲಿಂಡರ್​ಗಳ (14.2 ಕಿಲೊ ತೂಕ) ಮಿತಿಯನ್ನು ಸರ್ಕಾರ ವಿಧಿಸಿದೆ ಮತ್ತು ಸಬ್ಸಿಡಿಯನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸುತ್ತಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....