ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕೊನೆಗೂ ಬಗೆಹರೀತಾ ಬರ್ಮುಡಾ ಟ್ರಯಾಂಗಲ್​ ಮಿಸ್ಟರಿ?

<<ವಿಮಾನ, ಹಡಗುಗಳು ನಾಪತ್ತೆಗೆ ರಕ್ಕಸ ಅಲೆಗಳೇ ಕಾರಣ!>>
| ಚಂದ್ರ ಮೋಹನ್​, ದಿಗ್ವಿಜಯ ನ್ಯೂಸ್
ವಿಜ್ಞಾನಿಗಳಿಗೆ ಅಕ್ಷರಶಃ ತಲೆ ನೋವಾಗಿ ಪರಿಣಮಿಸಿದ್ದ ಹಾಗೂ ಇದುವರೆಗೂ 75ಕ್ಕೂ ಹೆಚ್ಚು ವಿಮಾನಗಳು, ಸಾವಿರಾರು ಜನ ನಾಪತ್ತೆಯಾಗಿರುವ ಬರ್ಮುಡಾ ಟ್ರಯಾಂಗಲ್​ ಮಿಸ್ಟರಿಗೆ ಕಾರಣ ದೊರೆತಿದೆ.
ಹೌದು, ಬರ್ಮುಡಾ ಟ್ರಯಾಂಗಲ್​ ಮಿಸ್ಟರಿಯನ್ನು ಹುಡುಕುತ್ತಾ ಹೊರಟ ಎಷ್ಟೋ ಮಂದಿ ಇಲ್ಲಿಯವರೆಗೆ ನಾಪತ್ತೆಯಾಗಿದ್ದರೂ, ಕೆಲ ವಿಜ್ಞಾನಿಗಳು ಅಲ್ಲಿ ವಿಮಾನಗಳು, ಹಡಗುಗಳು ನಾಪತ್ತೆಯಾಗಿರುವುದಕ್ಕೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಿದ್ದಾರೆ.
ಬರ್ಮುಡಾ ಟ್ರಯಾಂಗಲ್​ನಲ್ಲಿ ನಾಪತ್ತೆಯಾದ ವಿಮಾನಗಳು ಮತ್ತು ಮುಳುಗುವ ಹಡಗುಗಳ ಅವಶೇಷಗಳು ಇದುವರೆಗೆ ಪತ್ತೆಯಾಗಿರುವುದು ಅಪರೂಪವಾಗಿದ್ದು, ಇದಕ್ಕೆಲ್ಲಾ 100 ಅಡಿಯ ರಕ್ಕಸ ಅಲೆಗಳೇ ಕಾರಣ ಎಂದು ಸೌತಾಂಪ್ಟನ್​ ಮೂಲದ ಸಂಶೋಧಕರು ಹೇಳಿದ್ದಾರೆ.
100 ಅಡಿ ಬಂದರೆ ಹಡಗು ಮುಳುಗುತ್ತೆ!
ಈ ಸಂಶೋಧಕರು 1918ರ ವಿಶ್ವ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಅಮೆರಿಕ ಸೇನೆಗೆ ತೈಲ ಪೂರೈಸುತ್ತಿದ್ದ ಯುಎಸ್​ಎಸ್​​ ಸೈಕ್ಲೋಪ್ಸ್​ ಹಡಗಿನ ಮಾದರಿಯನ್ನ ನಿರ್ಮಾಣ ಮಾಡಿದ್ದರು. ಈ ಹಡಗನ್ನ ಒಳಾಂಗಣ ಸಿಮ್ಯುಲೇಟರ್​ ಹೊಂದಿರೋ ಬೃಹತ್​ ನೀರಿನಲ್ಲಿ ಚಲಿಸುವಂತೆ ಮಾಡಿದ್ರು. ಸಿಮ್ಯುಲೇಟರ್​ಗಳನ್ನ ಬಳಸಿ 100 ಅಡಿ ಎತ್ತರದ ಅಲೆಗಳನ್ನ ಸೃಷ್ಟಿಸಿದ್ರು. ಆಗ ಹಡಗು ಮುಳುಗಿ ಹೋಗಿದೆ ಅಂತಾ ಸಂಶೋಧಕರು ಹೇಳಿದ್ದಾರೆ.
ಇದಕ್ಕೂ ಮುಂಚೆ, ಕೆಲವರು ಬರ್ಬುಡಾ ಟ್ರಯಾಂಗಲ್​ನಲ್ಲಿ ಇದ್ದಕ್ಕಿದ್ದಂತೆ ವಿಮಾನಗಳು, ಹಡಗುಗಳು ನಾಪತ್ತೆಯಾಗುವುದಕ್ಕೆ ಏಲಿಯನ್​ಗಳು ಕಾರಣ ಎಂದರೆ, ಕೆಲವರು ಸಮುದ್ರದಲ್ಲಿರುವ ನಿಗೂಢ ಜೀವಿಗಳು ಕಾರಣ ಎಂದು ಹೇಳುತ್ತಿದ್ದರು. ಆದರೆ, ಇದಕ್ಕೆ ಪೂರಕವಾಗಿ ಯಾರೂ ಯಾವ ದಾಖಲೆಗಳನ್ನು ಒದಗಿಸಿರಲಿಲ್ಲ.
ರಕ್ಕಸ ಅಲೆ ಏಳಲು ಕಾರಣವೇನು?
ಬರ್ಮುಡಾ ಟ್ರಯಾಂಗಲ್​ ಫ್ಲೋರಿಡಾ, ಪೋರ್ಟೋರಿಕೋ ಮತ್ತು ಬರ್ಮುಡಾ ಪ್ರದೇಶಗಳ ನಡುವೆ ಇದೆ. ಈ ಸಮುದ್ರದಲ್ಲಿ ನಾನಾ ದಿಕ್ಕುಗಳಿಂದ ಮಾರುತಗಳು ಬೀಸುತ್ತವೆ. ಈ ರೀತಿ ವಿವಿಧ ದಿಕ್ಕುಗಳಿಂದ ಮಾರುತಗಳು ಬೀಸುವುದರಿಂದ ನಾನಾ ದಿಕ್ಕಿಗೆ ಚಲಿಸುತ್ತಿದ್ದ ಅಲೆಗಳ ಮೇಲೆ ಪ್ರಭಾವ ಬೀರಿ, ಈ ರೀತಿಯ ರಕ್ಕಸ ಅಲೆಗಳು ಏಳುವುದಕ್ಕೆ ಕಾರಣವಾಗುತ್ತದೆ.ಈ ರಕ್ಕಸ ಅಲೆಗಳಿಗೆ ಸಿಲುಕುವ ಹಡಗುಗಳು, ಅಲೆಗಳ ಹೊಡೆತ ತಾಳಲಾರದೆ ಮುಳುಗಿ ಹೋಗುವ ಜತೆಗೆ, ಅಪಘಾತವಾದ ಸಮುದ್ರದಿಂದ ಬಹುದೂರಕ್ಕೆ ಸಾಗುತ್ತವೆ. ಹೀಗಾಗಿಯೇ ಹಡಗುಗಳು, ವಿಮಾನಗಳ ಅವಶೇಷಗಳು ಸಿಗುತ್ತಿಲ್ಲ ಎಂದು ಅಂತಾ ಸಂಶೋಧಕರು ಹೇಳಿದ್ದಾರೆ.
ಗುರುತ್ವಾಕರ್ಷಣ ಶಕ್ತಿ ವ್ಯತ್ಯಯ?
ವರ್ಷದ ಹಿಂದೆ ಕೊಲಾರಾಡೋ ವಿವಿಯ ವಿಜ್ಞಾನಿಗಳು, ಬರ್ಮುಡಾ ಟ್ರಯಾಂಗಲ್​ನಲ್ಲಿ ಅಷ್ಟಕೋನಾಕೃತಿಯ ಕೆಲವು ಪ್ರದೇಶಗಳಿದ್ದು, ಇಲ್ಲಿ ಇದ್ದಕ್ಕಿದ್ದಂತೆ ಹವಾಮಾನದಲ್ಲಿ ಭಾರಿ ಏರುಪೇರಾಗುತ್ತದೆ. ಇದ್ದಕ್ಕಿದ್ದಂತೆ ಹವಾಮಾನದಲ್ಲಿ ಆಗುವ ಏರುಪೇರಿನಿಂದ ಈ ಪ್ರದೇಶದಲ್ಲಿ ಗುರುತ್ವಾಕರ್ಷಣ ಶಕ್ತಿಯಲ್ಲಿ ವ್ಯತ್ಯಯವಾಗುತ್ತದೆ. ಹೀಗಾಗಿ ವಿಮಾನಗಳು ಮತ್ತು ಹಡಗುಗಳು ಈ ಪ್ರದೇಶದಲ್ಲಿ ನಾಪತ್ತೆಯಾಗಲು ಕಾರಣ ಎಂದಿದ್ದರು. ಇದಕ್ಕೆ ಉಪಗ್ರಹ ಚಿತ್ರಗಳನ್ನೂ ಕೂಡ ಸಾಕ್ಷ್ಯವಾಗಿ ನೀಡಿದ್ದರು. ಈ ವಿಜ್ಞಾನಿಗಳು ಹೇಳಿದ್ದ ಕಾರಣಗಳ ಜತೆಗೆ ಈಗ ಸಿಮ್ಯುಲೇಟರ್​ಗಳನ್ನ ಬಳಸಿ ಅದೇ ರೀತಿಯ ಸಮುದ್ರದ ಅಲೆಗಳನ್ನ ಸೃಷ್ಟಿಸಿ, ಸಂಶೋಧನೆ ನಡೆಸಿದ್ದಾರೆ.
ಸದ್ಯ ಬರ್ಮುಡಾ ಟ್ರಯಾಂಗಲ್​ನಲ್ಲಿ ವಿಮಾನಗಳು, ಹಡಗುಗಳ ನಾಪತ್ತೆಯಾಗುವ ಕುರಿತು ಎರಡು ವೈಜ್ಞಾನಿಕ ಕಾರಣಗಳು ಸಿಕ್ಕಿದ್ದರೂ, ಈ ಕುರಿತು ಮತ್ತಷ್ಟು ಸಂಶೋಧನೆಗಳು ನಡೆಯುತ್ತಲೇ ಇವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...