ಕಾಠ್ಮಂಡು: ಬಿಮ್ಸ್ಟೆಕ್ ಸದಸ್ಯ ರಾಷ್ಟ್ರಗಳಲ್ಲಿನ ಪ್ರಾದೇಶಿಕ ಸಂಪರ್ಕ ವೃದ್ಧಿ ಹಾಗೂ ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ನೇಪಾಳದ ರಾಜಧಾನಿ ಕಾಠ್ಮಂಡುವಿನಲ್ಲಿ ಗುರುವಾರ ಆರಂಭವಾದ 4ನೇ ಬಿಮ್ಸ್ಟೆಕ್ ಶೃಂಗದಲ್ಲಿ ಮೋದಿ ಮಾತನಾಡಿದರು. ಬಿಮ್ಸ್ಟೆಕ್ ಸದಸ್ಯ ರಾಷ್ಟ್ರಗಳು ಸಾಂಸ್ಕೃತಿಕ ಹಾಗೂ ಭೌಗೋಳಿಕವಾಗಿ ಹೋಲಿಕೆ ಹೊಂದಿವೆ. ಹಾಗೆಯೇ ಭಯೋತ್ಪಾದನೆ, ಮಾದಕ ದ್ರವ್ಯ ಹಾಗೂ ಮಾನವ ಕಳ್ಳ ಸಾಗಣೆಯಂಥ ಸಮಸ್ಯೆಗಳನ್ನು ಎದುರಿಸುತ್ತಿವೆ. ಇವುಗಳ ನಿಯಂತ್ರಣಕ್ಕೆ ಒಗ್ಗೂಡಿ ಕೆಲಸ ಮಾಡಬೇಕಿದೆ. ಇದಕ್ಕೆ ಪೂರಕ ಸಂಪರ್ಕ ಸೇತು ನಿರ್ವಿುಸಲು ಭಾರತ ಸಿದ್ಧವಿದೆ ಎಂದು ಮೋದಿ ಭರವಸೆ ನೀಡಿದರು.
ಬಿಮ್ಸ್ಟೆಕ್ ಸದಸ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಜಾಲದಿಂದಲೇ ಭಯೋತ್ಪಾದನೆಗೆ ಆರ್ಥಿಕ ನೆರವು ಸಿಗುತ್ತಿದೆ. ಈ ಜಾಲಕ್ಕೆ ಕಡಿವಾಣ ಹಾಕಿದಲ್ಲಿ ಭಯೋತ್ಪಾದನೆ ನಿಗ್ರಹ ಕೂಡ ಸಾಧ್ಯವಿದೆ ಎಂದು ಮೋದಿ ಅಭಿಪ್ರಾಯಪಟ್ಟರು. ಇದರ ಜತೆಗೆ ಭಾರತವು ಜ್ಞಾನ ಸಂಪರ್ಕ ಜಾಲ ವಿಸ್ತರಣೆಗೆ ಡಿಜಿಟಲ್ ಸಂಪರ್ಕ ಸಾಧಿಸಲು ಶ್ರೀಲಂಕಾ, ಬಾಂಗ್ಲಾದೇಶ, ಭೂತಾನ್ ಹಾಗೂ ನೇಪಾಳಕ್ಕೆ ನೆರವು ನೀಡುತ್ತಿದೆ ಎಂದು ಪ್ರಧಾನಿ ಉಲ್ಲೇಖಿಸಿದರು.
ಏನಿದು ಬಿಮ್ಸ್ಟೆಕ್ ಒಕ್ಕೂಟ
ಬಂಗಾಳ ಕೊಲ್ಲಿ ಸಮುದ್ರದ ಅಕ್ಕಪಕ್ಕದಲ್ಲಿರುವ ರಾಷ್ಟ್ರಗಳನ್ನು ಸೇರಿಸಿ ಈ ಒಕ್ಕೂಟ ರಚಿಸಲಾಗಿದೆ. ಭಾರತ, ಬಾಂಗ್ಲಾದೇಶ, ಮ್ಯಾನ್ಮಾರ್, ಶ್ರೀಲಂಕಾ, ಥಾಯ್ಲೆಂಡ್, ಭೂತಾನ್ ಹಾಗೂ ನೇಪಾಳಗಳು ಈ ಒಕ್ಕೂಟದ ಸದಸ್ಯ ರಾಷ್ಟ್ರಗಳಾಗಿವೆ. ಚೀನಾಕ್ಕೆ ಸೆಡ್ಡು ಹೊಡೆಯುವ ಉದ್ದೇಶದಿಂದ ಭಾರತವು ಈ ಒಕ್ಕೂಟ ರಚಿಸಿದ್ದು, ಈ ದೇಶಗಳಲ್ಲಿನ ಮೂಲಸೌಕರ್ಯ ಹಾಗೂ ತಾಂತ್ರಿಕ ಅಭಿವೃದ್ಧಿಗೆ ನೆರವಾಗುವ ಉದ್ದೇಶ ಹೊಂದಲಾಗಿದೆ.
ನೇಪಾಳದ ರಾಜಧಾನಿ ಕಾಠ್ಮಂಡುವಿನಲ್ಲಿ ಗುರುವಾರ ಆರಂಭವಾದ 4ನೇ ಬಿಮ್ಸ್ಟೆಕ್ ಶೃಂಗದಲ್ಲಿ ಮೋದಿ ಮಾತನಾಡಿದರು. ಬಿಮ್ಸ್ಟೆಕ್ ಸದಸ್ಯ ರಾಷ್ಟ್ರಗಳು ಸಾಂಸ್ಕೃತಿಕ ಹಾಗೂ ಭೌಗೋಳಿಕವಾಗಿ ಹೋಲಿಕೆ ಹೊಂದಿವೆ. ಹಾಗೆಯೇ ಭಯೋತ್ಪಾದನೆ, ಮಾದಕ ದ್ರವ್ಯ ಹಾಗೂ ಮಾನವ ಕಳ್ಳ ಸಾಗಣೆಯಂಥ ಸಮಸ್ಯೆಗಳನ್ನು ಎದುರಿಸುತ್ತಿವೆ. ಇವುಗಳ ನಿಯಂತ್ರಣಕ್ಕೆ ಒಗ್ಗೂಡಿ ಕೆಲಸ ಮಾಡಬೇಕಿದೆ. ಇದಕ್ಕೆ ಪೂರಕ ಸಂಪರ್ಕ ಸೇತು ನಿರ್ವಿುಸಲು ಭಾರತ ಸಿದ್ಧವಿದೆ ಎಂದು ಮೋದಿ ಭರವಸೆ ನೀಡಿದರು.
ಬಿಮ್ಸ್ಟೆಕ್ ಸದಸ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಜಾಲದಿಂದಲೇ ಭಯೋತ್ಪಾದನೆಗೆ ಆರ್ಥಿಕ ನೆರವು ಸಿಗುತ್ತಿದೆ. ಈ ಜಾಲಕ್ಕೆ ಕಡಿವಾಣ ಹಾಕಿದಲ್ಲಿ ಭಯೋತ್ಪಾದನೆ ನಿಗ್ರಹ ಕೂಡ ಸಾಧ್ಯವಿದೆ ಎಂದು ಮೋದಿ ಅಭಿಪ್ರಾಯಪಟ್ಟರು. ಇದರ ಜತೆಗೆ ಭಾರತವು ಜ್ಞಾನ ಸಂಪರ್ಕ ಜಾಲ ವಿಸ್ತರಣೆಗೆ ಡಿಜಿಟಲ್ ಸಂಪರ್ಕ ಸಾಧಿಸಲು ಶ್ರೀಲಂಕಾ, ಬಾಂಗ್ಲಾದೇಶ, ಭೂತಾನ್ ಹಾಗೂ ನೇಪಾಳಕ್ಕೆ ನೆರವು ನೀಡುತ್ತಿದೆ ಎಂದು ಪ್ರಧಾನಿ ಉಲ್ಲೇಖಿಸಿದರು.
ಏನಿದು ಬಿಮ್ಸ್ಟೆಕ್ ಒಕ್ಕೂಟ
ಬಂಗಾಳ ಕೊಲ್ಲಿ ಸಮುದ್ರದ ಅಕ್ಕಪಕ್ಕದಲ್ಲಿರುವ ರಾಷ್ಟ್ರಗಳನ್ನು ಸೇರಿಸಿ ಈ ಒಕ್ಕೂಟ ರಚಿಸಲಾಗಿದೆ. ಭಾರತ, ಬಾಂಗ್ಲಾದೇಶ, ಮ್ಯಾನ್ಮಾರ್, ಶ್ರೀಲಂಕಾ, ಥಾಯ್ಲೆಂಡ್, ಭೂತಾನ್ ಹಾಗೂ ನೇಪಾಳಗಳು ಈ ಒಕ್ಕೂಟದ ಸದಸ್ಯ ರಾಷ್ಟ್ರಗಳಾಗಿವೆ. ಚೀನಾಕ್ಕೆ ಸೆಡ್ಡು ಹೊಡೆಯುವ ಉದ್ದೇಶದಿಂದ ಭಾರತವು ಈ ಒಕ್ಕೂಟ ರಚಿಸಿದ್ದು, ಈ ದೇಶಗಳಲ್ಲಿನ ಮೂಲಸೌಕರ್ಯ ಹಾಗೂ ತಾಂತ್ರಿಕ ಅಭಿವೃದ್ಧಿಗೆ ನೆರವಾಗುವ ಉದ್ದೇಶ ಹೊಂದಲಾಗಿದೆ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ