ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**:: ಕನ್ನಡ. ಸಂಧಿ ಎಂದರೇನು?

ನಾವು ಮಾತನಾಡುವಾಗ ಕೆಲವು ಶಬ್ದಗಳನ್ನು ಬಿಡಿಬಿಡಿಯಾಗಿ ಹೇಳುವುದಿಲ್ಲ.  “ಊರು ಊರು” ಎಂಬೆರಡು ಶಬ್ದಗಳನ್ನು ‘ಊರೂರು' ಎಂದು ಕೂಡಿಸಿಯೇ ಮಾತನಾಡುತ್ತೇವೆ.  ಅವನು + ಅಲ್ಲಿ ಎಂಬೆರಡು ಶಬ್ದ ರೂಪಗಳನ್ನು ಅವನಲ್ಲಿ ಎಂದು ಕೂಡಿಸಿ ಹೇಳುತ್ತೇವೆ.  ಮೇಲೆ ಹೇಳಿರುವ ಊರು + ಊರು ಎಂಬ ಶಬ್ದಗಳನ್ನೂ, ‘ಅವನು + ಅಲ್ಲಿ' ಎಂಬ ಪ್ರಕೃತಿ ಪ್ರತ್ಯಯಗಳನ್ನೂ ಕೂಡಿಸಿಯೇ ಹೇಳುತ್ತೇವೆ.  ಅಂದರೆ, ಅವನ್ನು ಸಂಧಿಸಿಯೇ ಹೇಳುತ್ತೇವೆ.  ಒಮ್ಮೊಮ್ಮೆ ಶಬ್ದ ಶಬ್ದಗಳನ್ನು ಬಿಡಿಬಿಡಿಸಿ ಹೇಳಿದರೂ, ಪಕೃತಿ ಪ್ರತ್ಯಯಗಳನ್ನು ಮಾತ್ರ ಸಂಧಿಸಿಯೇ ಹೇಳುತ್ತೇವೆ.  ಅವನ್ನು ಬಿಡಿಬಿಡಿಯಾಗಿ ಹೇಳಲಾಗುವುದೇ ಇಲ್ಲ.   ಈ ಕೆಳಗೆ ನೋಡಿ:-
ಪ್ರಕೃತಿ
+
ಪ್ರತ್ಯಯ
=
ಕೂಡಿಸಿದ ರೂಪ
ಆಡು
+
ಇಸು
=
ಆಡಿಸು
ಮರ
+
ಅನ್ನು
=
ಮರವನ್ನು
ಪುಸ್ತಕ
+
ಇಂದ
=
ಪುಸ್ತಕದಿಂದ
ದೇವರು
+
ಇಗೆ
=
ದೇವರಿಗೆ
ಪದಗಳನ್ನು ಕೂಡಿಸಿಯಾದರೂ ಹೇಳಬಹುದು ಅಥವಾ ಬಿಡಿಬಿಡಿಯಾಗಿಯೂ ಹೇಳಬಹುದು.
ಪದ
+
ಪದ
=
ಕೂಡಿಸಿದ ರೂಪ
-
ಕೂಡಿಸದ ರೂಪ
ಅವನ
+
ಅಂಗಡಿ
=
ಅವನಂಗಡಿ
-
ಅವನ ಅಂಗಡಿ
ಅವನಿಗೆ
+
ಇಲ್ಲ
=
ಅವನಿಗಿಲ್ಲ
-
ಅವನಿಗೆ ಇಲ್ಲ
ಹಣ್ಣಿನ
+
ಅಂಗಡಿ
=
ಹಣ್ಣಿನಂಗಡಿ
-
ಹಣ್ಣಿನ ಅಂಗಡಿಮೇಲೆ ಹೇಳಿರುವ ಅನೇಕ ಉದಾಹರಣೆಗಳಲ್ಲಿ ಪ್ರಕೃತಿ ಪ್ರತ್ಯಯಗಳನ್ನು ಸೇರಿಸುವಲ್ಲಿ ಅವನ್ನು ಕೂಡಿಸಿಯೇ ಹೇಳುತ್ತೇವಲ್ಲದೆ ಬಿಡಿಬಿಡಿಸಿ ಹೇಳಲು ಬರುವಂತೆಯೇ ಇಲ್ಲ.  ಆಡು ಇಸು ಎಂದು ಯಾರು ಹೇಳುವುದಿಲ್ಲ.  ಪುಸ್ತಕ ಅನ್ನು ತಾ ಎನ್ನಬಾರದು.  ಆಡಿಸು ಪುಸ್ತಕವನ್ನು ಹೀಗೆ ಕೂಡಿಸಿಯೇ ಹೇಳಬೇಕು.  ಆಡಿಸು ಎಂಬಲ್ಲಿ (ಆಡು+ಇಸು) ಉ+ಇ ಸ್ವರಗಳು ಸಂಧಿಸುತ್ತವೆ.  ಪುಸ್ತಕ+ಅನ್ನು ಎಂಬಲ್ಲಿ ಅ+ಅ ಸ್ವರಗಳು ಪರಸ್ಪರ ಸಂಧಿಸುತ್ತವೆ.  ಅವೆರಡೂ ಸಂಧಿಸುವಾಗ ಮೊದಲಿನ ಸ್ವರಗಳು ಎರಡೂ ಕಡೆ ಹೋಗುತ್ತವೆ.  ಈ ಸಂಧಿಸುವಿಕೆಯು ಕಾಲವಿಳಂಬವಿಲ್ಲದೆ ಹಾಗೆ ಆಗುತ್ತದೆ.  ಇವು ಪ್ರಕೃತಿ ಪ್ರತ್ಯಯಗಳ ಸಂಧಿಸುವಿಕೆಯನ್ನು ತಿಳಿಸುವ ಉದಾಹರಣೆಗಳು.
ಅವನ ಅಂಗಡಿ ಎಂಬ ಪದಗಳನ್ನು ಬೇಕಾದರೆ ಸಂಧಿಯಾಗುವಂತೆ ಅವನಂಗಡಿ ಎಂದಾದರೂ ಹೇಳಬಹುದು; ಅಥವಾ ಕಾಲವನ್ನು ಸ್ವಲ್ಪ ವಿಳಂಬ ಮಾಡಿ ಅವನ ಅಂಗಡಿ ಎಂದಾದರೂ ಹೇಳಬಹುದು.  ಅದು ಹೇಳುವವನ ಇಚ್ಛೆಯನ್ನು ಅವಲಂಬಿಸಿರುತ್ತದೆ.  ಅವನಂಗಡಿ ಎನ್ನುವಾಗ (ಅವನ+ಅಂಗಡಿ)
 ಇಲ್ಲಿ ಸಂಧಿಸುವ ಸ್ವರಗಳು ಅ+ಅ ಎಂಬುವು.  ಇವುಗಳಲ್ಲಿ ಮೊದಲಿನ ಅಕಾರವನ್ನು ತೆಗೆದುಹಾಕುತ್ತೇವೆ.  ಆದ್ದರಿಂದ ಎರಡು ಅಕ್ಷರಗಳು ಸಂಧಿಸುವಿಕೆಯೇ ಸಂಧಿಯೆನಿಸುವುದೆಂದಹಾಗಾಯಿತು.  ಇದರ ಸೂತ್ರವನ್ನು ಹೀಗೆ ಹೇಳಬಹುದು:-
(೧೫) ಎರಡು ವರ್ಣಗಳು (ಅಕ್ಷರಗಳು) ಕಾಲವಿಳಂಬವಿಲ್ಲದಂತೆ ಸೇರುವುದೇ ಸಂಧಿಯೆನಿಸುವುದು.
(i) ಸ್ವರದ ಮುಂದೆ ಸ್ವರ ಬಂದು ಹೀಗೆ ಸಂಧಿಯಾದರೆ ಸ್ವರಸಂಧಿಯೆನ್ನುತ್ತೇವೆ.
(ii) ಸ್ವರದ ಮುಂದೆ ವ್ಯಂಜನ ಬಂದು ಅಥವಾ ವ್ಯಂಜನದ ಮುಂದೆ ವ್ಯಂಜನ ಬಂದು ಸಂಧಿಯಾದರೆ ವ್ಯಂಜನಸಂಧಿಯೆನ್ನುತ್ತೇವೆ.
(iii) ಹೀಗೆ ಸಂಧಿಯಾಗುವಾಗ ಹಲಕೆಲವು ವ್ಯತ್ಯಾಸಗಳು ಆ ಸಂಧಿಸಿದ ಅಕ್ಷರಗಳಲ್ಲಿ ಉಂಟಾಗುವುವು. ಅವನ್ನೇ ಸಂಧಿಕಾರ‍್ಯಗಳು ಎನ್ನುತ್ತೇವೆ.  ಅವುಗಳನ್ನು ಈ ಮುಂದೆ ತಿಳಿಯೋಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...