ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಬಯಲಾಗಲಿದೆ ಭಾರತೀಯರ ಸ್ವಿಸ್ ಬಂಡವಾಳ

ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರು ಠೇವಣಿ ಇರಿಸಿರುವ ಹಣದ ಅಧಿಕೃತ ಲೆಕ್ಕಾಚಾರ ಇದುವರೆಗೆ ಲಭ್ಯ ಇಲ್ಲದೇ ಹೋದರೂ, ಎಚ್​ಎಸ್​ಬಿಸಿಯಲ್ಲಿ ಅಘೋಷಿತ ಆದಾಯ -ಠಿ;8,448 ಕೋಟಿ ಇರಬಹುದೆಂಬ ಅಂದಾಜಿದೆ. ಭಾರತೀಯರಿಗೆ ಸಂಬಂಧಿಸಿದ ಎಚ್​ಎಸ್​ಬಿಸಿ ಖಾತೆಗಳ ವಿವರವನ್ನು ಸ್ವಿಜರ್ಲೆಂಡ್ ಅಧಿಕಾರಿಗಳು ಇನ್ನು ಹತ್ತು ದಿನದೊಳಗೆ ಭಾರತ ಸರ್ಕಾರಕ್ಕೆ ಹಸ್ತಾಂತರಿಸಲಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಮಂಗಳವಾರ ರಾಜ್ಯಸಭೆಗೆ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದ್ದಾರೆ. ಕೇಂದ್ರದ ಬಳಿ ಇರುವ ಮಾಹಿತಿ
ಎಚ್​ಎಸ್​ಬಿಸಿ ಖಾತೆದಾರರ 2010-11 ಮತ್ತು 2011-12ರಿಂದ 2014ರ ಅವಧಿಗೆ ಸಂಬಂಧಿಸಿದ ಮಾಹಿತಿ ಬಹಿರಂಗಗೊಂಡಿದೆಯಾದರೂ, ಆ ಕುರಿತ ಹೆಚ್ಚಿನ ಮಾಹಿತಿ ಪಡೆಯುವ ಕೆಲಸಕ್ಕೆ ಸ್ವಿಜರ್ಲೆಂಡ್ ಸರ್ಕಾರ ತಡೆಯೊಡ್ಡಿತ್ತು. ಅವು ರಹಸ್ಯ ಮಾಹಿತಿ ಎಂಬ ಕಾರಣವನ್ನೂ ಅದು ನೀಡಿತ್ತು. ಬಹಿರಂಗಗೊಂಡಿರುವ ಮಾಹಿತಿ ಕಳ್ಳತನದ ಮಾರ್ಗದಲ್ಲಿ ಪಡೆದುದು ಎಂದು ಘೋಷಿಸಿತ್ತು. ಕೊನೆಗೆ, ಕೇಂದ್ರ ಕಂದಾಯ ಕಾರ್ಯದರ್ಶಿ ಸ್ವಿಜರ್ಲೆಂಡ್​ಗೆ ತೆರಳಿ ಅಲ್ಲಿ ಸರ್ಕಾರದ ಜತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಬಳಿಕ 2015ರ ಅಕ್ಟೋಬರ್ 15ರಂದು ಉಭಯ ಸರ್ಕಾರಗಳು ಜಂಟಿ ಹೇಳಿಕೆಗೆ ಸಹಿ ಹಾಕಿದವು. ಅದರಂತೆ, ಪರಸ್ಪರ ಮಾಹಿತಿ ಹಂಚಿಕೊಳ್ಳುವ ಒಪ್ಪಂದ ಏರ್ಪಟ್ಟಿದೆ. ಎಚ್​ಎಸ್​ಬಿಸಿ ಖಾತೆಗಳ ಮಾಹಿತಿಯನ್ನೂ ಪಡೆಯಲು ಅವಕಾಶವಿದೆ.
ಎಚ್​ಎಸ್​ಬಿಸಿ ಪಟ್ಟಿಯಲ್ಲೇನಿತ್ತು?
ಸಚಿವರ ಹೇಳಿಕೆ ಪ್ರಕಾರ, ಅಕ್ರಮವಾಗಿ ಬಿಡುಗಡೆಗೊಂಡಿರುವ ಎಚ್​ಎಸ್​ಬಿಸಿ ಪಟ್ಟಿ ಪ್ರಕಾರ -ಠಿ;5,447 ಕೋಟಿ ತೆರಿಗೆ ಬಾಧ್ಯತೆ ಹೊಂದಿದ -ಠಿ;8,448 ಕೋಟಿ ಅಲ್ಲಿನ ಭಾರತೀಯರ ಖಾತೆಗಳಲ್ಲಿದೆ. 164 ಪ್ರಕರಣಗಳಲ್ಲಿ -ಠಿ;1,290 ಕೋಟಿ ದಂಡ ವಿಧಿಸಲ್ಪಟ್ಟಿದೆ. 84 ಕೇಸ್​ಗಳಿಗೆ ಸಂಬಂಧಿಸಿ 199 ವಿಚಾರಣಾ ದೂರುಗಳು ದಾಖಲಾಗಿವೆ. ಪನಾಮಾ ಪೇಪರ್ಸ್​ಗೆ ಸಂಬಂಧಿಸಿ, 426 ಖಾತೆದಾರರ ವಿವರಗಳು ಲಭ್ಯವಾಗಿವೆ. ಆ ಕುರಿತು ತನಿಖೆ ಪ್ರಗತಿಯಲ್ಲಿದೆ.
ಎಚ್​ಎಸ್​ಬಿಸಿ ಪಟ್ಟಿ 1
ಸ್ವಿಜರ್ಲೆಂಡ್ ಎಚ್​ಎಸ್​ಬಿಸಿ ಬ್ಯಾಂಕ್​ನ ಜಿನೀವಾ ಶಾಖೆಯಲ್ಲಿ 2006ರಲ್ಲಿ ಸಿಕ್ಕ ಮಾಹಿತಿಯ ಪ್ರಕಾರ 628 ಭಾರತೀಯರ ಖಾತೆದಾರರ ಪಟ್ಟಿ 2011ರಲ್ಲಿ ಭಾರತಕ್ಕೆ ಲಭ್ಯವಾಗಿತ್ತು. 2006ರಲ್ಲಿ ಎಚ್​ಎಸ್​ಬಿಸಿ ಜಿನೀವಾ ಶಾಖೆಯಲ್ಲಿ ಉದ್ಯೋಗ ತ್ಯಜಿಸಿದ ವ್ಯಕ್ತಿಯ ಮೂಲಕ ಈ ಪಟ್ಟಿ ಬಹಿರಂಗವಾಗಿತ್ತು.
ಎಚ್​ಎಸ್​ಬಿಸಿ ಪಟ್ಟಿ 2
ತನಿಖಾ ಪತ್ರಕರ್ತರ ಅಂತಾರಾಷ್ಟ್ರೀಯ ಒಕ್ಕೂಟ ಮತ್ತು ಲೆ ಮಾಂಡ್ ಪತ್ರಿಕೆ ಕಾರ್ಯಾಚರಣೆ ‘ಸ್ವಿಸ್ ಲೀಕ್ಸ್’ ಮೂಲಕ 2015ರ ಆರಂಭದಲ್ಲಿ ಎಚ್​ಎಸ್​ಬಿಸಿ ಬ್ಯಾಂಕ್​ನ ಗ್ರಾಹಕರ ಪಟ್ಟಿ ಸೋರಿಕೆಯಾಗಿದೆ. ಈ ಪಟ್ಟಿಯಲ್ಲಿ ಜಗತ್ತಿನ 200ಕ್ಕೂ ಹೆಚ್ಚು ದೇಶಗಳ ಒಂದು ಲಕ್ಷಕ್ಕೂ ಅಧಿಕ ಗ್ರಾಹಕರ ಹೆಸರು, ಖಾತೆ, ದೇಶದ ವಿವರಗಳು ಇದ್ದವು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....