ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಹೈಪರ್ ಅಸಿಡಿಟಿ ನಿಯಂತ್ರಿಸಿಕೊಳ್ಳಿ

ಡಾ. ವೆಂಕಟ್ರಮಣ ಹೆಗಡೆ
ಹೈಪರ್ ಅಸಿಡಿಟಿ ಇಂದು ಸಾಮಾನ್ಯವಾಗಿ ಅನೇಕರನ್ನು ಕಾಡುತ್ತಿರುವ ಸಮಸ್ಯೆ. ಇದನ್ನು ಅಸಿಡ್ ಡಿಸ್ಪೆಪ್ಸಿಯಾ ಎಂದೂ ಕರೆಯಲಾಗುತ್ತದೆ. ಹೊಟ್ಟೆನೋವು, ವಾಂತಿ ಬಂದಂತಾಗುವುದು, ಹಸಿವೆ ಆಗದಿರುವುದು, ವಾಯು ತುಂಬಿದಂತೆ ಭಾಸವಾಗುವುದು, ಎದೆಯಲ್ಲಿ ಉರಿಯಾಗುವುದು, ಎದೆನೋವು, ಕಫ, ಶ್ವಾಸಕೋಶ, ಶ್ವಾಸನಾಳಗಳಲ್ಲಿ ಸಮಸ್ಯೆ ಮುಂತಾದ ಲಕ್ಷಣಗಳು ಕಂಡುಬರುತ್ತವೆ.
ಅನೇಕರಲ್ಲಿ ಅಸಿಡಿಟಿಗೆ ಮುಖ್ಯ ಕಾರಣ ಹೆಲಿಕೋಬ್ಯಾಕ್ಟರ್ ಫೈಲೋರಿ (ಹೆಚ್. ಫೈಲೋರಿ) ಎಂಬ ಬ್ಯಾಕ್ಟೀರಿಯಾ ಎಂದು ಗುರುತಿಸಲಾಗಿದೆ. ನಾವು ಸೇವಿಸುತ್ತಿರುವ ಆಹಾರವು ಹೆಚ್.ಫೈಲೋರಿಯ ಇನ್ನೂ ಹೆಚ್ಚಿನ ವರ್ಧನೆಗೆ ಕಾರಣವಾದರೆ ಸಮಸ್ಯೆ ಉಲ್ಬಣವಾಗುವುದು. ಉಪ್ಪಿನ ಸೇವನೆಯು ಹೆಚ್.ಫೈಲೋರಿ ಹೆಚ್ಚಾಗಲು ಕಾರಣವಾಗುತ್ತದೆ. ಉಪ್ಪಿನ ಸೇವನೆಯನ್ನು ಕಡಿಮೆ ಮಾಡಿದರೆ ಶೇ. 70ರಷ್ಟು ಅಸಿಡಿಟಿ ಕಡಿಮೆಯಾಗುತ್ತದೆ. ಬೇಕರಿಯ ಆಹಾರ, ಕರಿದ ಆಹಾರ ಪದಾರ್ಥಗಳು, ಉಪ್ಪಿನಕಾಯಿ ಇಂತಹ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಬೇಕು.
ಪ್ರೋಬಯೋಟಿಕ್, ಪ್ರೀಬಯೋಟಿಕ್​ಗಳನ್ನು ಹೊಂದಿರುವ ಆಹಾರಸೇವನೆಯು ಅತ್ಯಂತ ಒಳ್ಳೆಯದು. ಹೊಟ್ಟೆಯಲ್ಲಿ ಒಳ್ಳೆಯ, ದೇಹಕ್ಕೆ ಒಳಿತು ಮಾಡುವ ಬ್ಯಾಕ್ಟೀರಿಯಾಗಳು ಹೆಚ್ಚಾಗಬೇಕು. ಮಜ್ಜಿಗೆ, ಮೊಸರು ಈ ನಿಟ್ಟಿನಲ್ಲಿ ಹೆಚ್ಚು ಸಹಕಾರಿ. ಶುಂಠಿಯನ್ನು ಹುಳಿಯಿಲ್ಲದ ಮಜ್ಜಿಗೆಯೊಂದಿಗೆ ಸೇರಿಸಿ ಸೇವಿಸುವುದು, ಯಷ್ಟಿಮಧು ಅಥವಾ ಜ್ಯೇಷ್ಠಮಧು ಪುಡಿಯನ್ನು ಮಜ್ಜಿಗೆಗೆ ಸೇರಿಸಿ ಕುಡಿಯುವುದೂ ಸಹಕಾರಿ.
ಏರು ರಕ್ತದೊತ್ತಡ, ಹರ್ನಿಯಾ, ಹೃದಯದ ತೊಂದರೆ ಇರುವವರನ್ನು ಹೊರತುಪಡಿಸಿ, ಉಳಿದವರು ಬೆಳಗ್ಗೆ ಖಾಲಿಹೊಟ್ಟೆಯಲ್ಲಿ ಉಪ್ಪುಬೆರೆತ ಉಗುರುಬೆಚ್ಚಗಿನ ನೀರನ್ನು 7ರಿಂದ 8 ಗ್ಲಾಸ್ ಕುಡಿದು, ತುದಿಗಾಲಿನಲ್ಲಿ ಕುಳಿತು, ಎಡಗೈಯನ್ನು ಹೊಟ್ಟೆಯ ಮೇಲಿಟ್ಟು, ಬಲಗೈಯನ್ನು ಬಾಯೊಳಗೆ ಹಾಕಿ ವಾಂತಿ ಮಾಡಬೇಕು. ದಿನ ಬಿಟ್ಟು ದಿನ ಇದನ್ನು ಮಾಡುವುದರಿಂದ ಗ್ಯಾಸ್ಟ್ರೈಟಿಸ್ ಹತೋಟಿಗೆ ಬರುತ್ತದೆ. ಶುಂಠಿಯನ್ನು ಸೇರಿಸಿದ ಬೂದುಗುಂಬಳದ ಜ್ಯೂಸ್​ನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಅಸಿಡಿಟಿಯ ನಿಯಂತ್ರಣಕ್ಕೆ ಬಹಳ ಸಹಕಾರಿ. ಅಕ್ಕಿಗಂಜಿ ಅಥವಾ ರಾಗಿಗಂಜಿ ಮಾಡಿ ಎಂಟು ತಾಸಿನ ನಂತರ ಹುಳಿಯಿಲ್ಲದ ಮೊಸರು ಸೇರಿಸಿ ಸೇವಿಸುವುದರಿಂದ ಹೊಟ್ಟೆಯಲ್ಲಿ ಸಾಕಷ್ಟು ಉತ್ತಮ ಬ್ಯಾಕ್ಟೀರಿಯಾಗಳು ದೊರೆತು ಸಮಸ್ಯೆಯ ಮೂಲಕಾರಣಕ್ಕೆ ಚಿಕಿತ್ಸೆ ದೊರೆಯುತ್ತದೆ. ಹಣ್ಣುಗಳ ಸೇವನೆ, ದಾಳಿಂಬೆ ಜ್ಯೂಸ್, ಸೇಬು ಜ್ಯೂಸ್​ಗಳ ಸೇವನೆ ಒಳ್ಳೆಯದು.
ಹೀಗೆ ನಮ್ಮ ಪ್ರತಿನಿತ್ಯದ ವಿವೇಚನಾಭರಿತ ಆಹಾರಪದ್ಧತಿಯಿಂದ ಸಮಸ್ಯೆಯ ನಿವಾರಣೆ ಸಾಧ್ಯ. ಜೊತೆಯಲ್ಲಿ ಮಣ್ಣಿನ ಚಿಕಿತ್ಸೆ, ನೀರಿನ ಚಿಕಿತ್ಸೆಗಳಂತಹ ಪ್ರಕೃತಿಚಿಕಿತ್ಸೆಗಳಿಂದ ಅಸಿಡಿಟಿ ಕಡಿಮೆ ಮಾಡಬಹುದು
ಕೊನೇಹನಿ: ಬೆಳಗಿನ ತಿಂಡಿಗೂ ಮುನ್ನ ಬೇಯಿಸಿದ ಬೀಟ್​ರೂಟ್ ತಿಂದರೆ ಅಜೀರ್ಣ. ಮಲಬದ್ಧತೆ ದೂರ.
(ಇದು ಮನೆಯಲ್ಲಿ ಮಾಡಿಕೊಳ್ಳಬಹುದಾದ ಪರಿಹಾರ. ಇದೇ ಅಂತಿಮವಲ್ಲ. ಯಾವುದೇ ಆರೋಗ್ಯ ಸಮಸ್ಯೆಗೆ ತಜ್ಞವೈದ್ಯರನ್ನು ಸಂರ್ಪಸಲು ಮರೆಯಬೇಡಿ.)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....