⭕ ರಾಣಿ_ಲಕ್ಷ್ಮೀಬಾಯಿ ⭕
ಝಾನ್ಸಿಯ ರಾಣಿ ಲಕ್ಷ್ಮೀ ಬಾಯಿ ಭಾರತದ ಸ್ವಾತಂತ್ರ್ಯ ಹೋರಾಟದ ಹೆಸರುಗಳಲ್ಲಿ ಪ್ರಮುಖವಾದದ್ದು . 1857ರ ಸಿಪಾಯಿ ದಂಗೆ ಪ್ರಾರಂಭವಾಗಿತ್ತು. ಈ ಸಂದರ್ಭದಲ್ಲಿ ಝಾನ್ಸಿಯ ಆಳ್ವಿಕೆಯನ್ನು ಬ್ರಿಟಿಷರು ಲಕ್ಷ್ಮಿಬಾಯಿಗೆ ವಹಿಸಿದ್ದರು . 1858ರ ಮಾರ್ಚ್ 25ರಂದು ರಾಣಿ ಲಕ್ಷ್ಮೀಬಾಯಿ ಬ್ರಿಟಿಷರ ಬಗ್ಗೆ ಇದ್ದ ನಿಲುವು ಬದಲಾಯಿಸಲು ಕಾರಣವಾಯಿತು . ಸುಮಾರು 2 ವಾರಗಳ ಉಗ್ರ ಹೋರಾಟ ನಡೆಸಿ ..ದಂಗೆಕೋರ ತಾತ್ಯಾಟೋಪಿ ಮುಖಂಡನಾಗಿ ಯುದ್ಧ ಮಾಡಿ ಝಾನ್ಸಿ ಸ್ವತಂತ್ರವಾಗಲು ಸಹಕರಿಸಿದ್ದ. ಹೀಗೆ ದಿಟ್ಟತನದಿಂದ ಹೋರಾಡಿದ್ದ ಝಾನ್ಸಿ ಲಕ್ಷ್ಮೀಬಾಯಿ 1858, ಜೂನ್ 18ರಂದು ಸಾವನ್ನಪ್ಪಿದ್ದಳು . ರಾಣಿಯ ತಂದೆ ಮೊರೋಪಂತ್ ತಂಬೆ ಅವರನ್ನು ಝಾನ್ಸಿಯ ಸೋಲಿನ ನಂತರ ಸೆರೆಹಿಡಿದು, ಗಲ್ಲಿಗೇರಿಸಿದ್ದರು .
⭕ ಸರೋಜಿನಿ ನಾಯ್ಡು ⭕
ಉರ್ದು , ತೆಲುಗು , ಇಂಗ್ಲಿಷ್ , ಬೆಂಗಾಲಿ ಮತ್ತು ಪರ್ಷಿಯನ್ ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುತ್ತಿದ್ದ ಸರೋಜಿನಿ ನಾಯ್ಡು ಭಾರತದ ಕೋಗಿಲೆ ಎಂದು ಹೆಸರು ಪಡೆದಿದ್ದರು , ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು . ಉತ್ತರಪ್ರದೇಶದ ಮೊದಲನೆಯ ಮಹಿಳಾ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು . 1949ರ ಮಾರ್ಚ್ 2 ರಂದು ನಿಧನರಾಗಿದ್ದರು.
⭕ ಬೇಗಂ ಹಝರತ್ ಮಹಲ್ ⭕
1857ರ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಬೇಗಂ ಹಝರತ್ ಬೇಗಂ ಮಹಲ್ ಅವರ ಹೋರಾಟ ಪ್ರಮುಖವಾಗಿತ್ತು . ಈಕೆ ನವಾಬ್ ವಾಜಿದ್ ಅಲಿ ಷಾ ಅವರ 2 ನೇ ಪತ್ನಿ .ಕೋಲ್ಕತಾದಿಂದ ಷಾನನ್ನು ಗಡಿಪಾರು ಮಾಡಲಾಗಿತ್ತು . ಬಳಿಕ ಹಝರತ್ ಬೇಗಂ ಅವಾಧ್ ಆಡಳಿತ ನೋಡಿಕೊಳ್ಳುವುದರ ಜೊತೆಗೆ ಲಕ್ನೋವನ್ನು ತನ್ನ ವಶಕ್ಕೆ ತೆಗೆದುಕೊಂಡಿದ್ದಳು . ತದನಂತರ ಲಕ್ನೋ ಹಾಗೂ ಔಧ್ ಅನ್ನು ಬ್ರಿಟಿಷರು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. ಹಝರತ್ ಳನ್ನು ಬಲವಂತದಿಂದ ಅಧಿಕಾರದಿಂದ ಕೆಳಗಿಳಿಸಿದ್ದರು . ಕೊನೆಗೆ ಈಕೆ ನೇಪಾಳದಲ್ಲಿ ಆಶ್ರಯ ಪಡೆದಿದ್ದು , 1879ರಲ್ಲಿ ಕಾಠ್ಮುಂಡುವಿನಲ್ಲಿ ಸಾವನ್ನಪ್ಪಿದ್ದಳು .
⭕ ಕಿತ್ತೂರು ರಾಣಿ ಚೆನ್ನಮ್ಮ ⭕
ಸ್ವಾತಂತ್ಯಕ್ಕಾಗಿ ಬ್ರಿಟಿಷರ ಬೃಹತ್ ಸೈನ್ಯದ ವಿರುದ್ಧ ಸೆಟೆದು ನಿಂತು ಹೋರಾಟ ನಡೆಸಿದ್ದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ . ಆಕೆಯ ಧೈರ್ಯ , ಸಾಹಸ , ಕೆಚ್ಚು ಇಂದಿಗೂ ಯುವ ಪೀಳಿಗೆಗೆ ಸ್ಫೂರ್ತಿದಾಯಕ . ದಿಟ್ಟ ಹೋರಾಟದ ನಂತರ 1824ರ ಡಿಸೆಂಬರ್ 5 ರಂದು ಚೆನ್ನಮ್ಮ ತನ್ನ ಸೊಸೆಯರಾದ ವೀರಮ್ಮ ಹಾಗೂ ಜಾನಕಿಬಾಯಿಯರ ಜೊತೆ ಕೈದಿಯಾಗುತ್ತಾಳೆ . ಡಿಸೆಂಬರ್ 12ರಂದು ಚೆನ್ನಮ್ಮ ಹಾಗೂ ವೀರಮ್ಮರನ್ನು ಬೈಲಹೊಂಗಲಕ್ಕೆ ಒಯ್ಯಲಾಗುತ್ತದೆ . ಅಲ್ಲಿ 4 ವರ್ಷ ಸೆರೆಮನೆವಾಸ ಅನುಭವಿಸಿ 1829ರ ಫೆಬ್ರುವರಿ 2 ರಂದು ನಿಧನ ಹೊಂದಿದ್ದಳು .
⭕ ಮೇಡಂ ಭಿಕಾಜಿ ಕಾಮಾ ⭕
ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಧ್ರುವತಾರೆಯಾಗಿರುವ ಮಹಿಳೆಯರಲ್ಲಿ ಮುಂಬೈನ ಮೇಡಂ ಭಿಕಾಜಿ ಕಾಮಾ ಒಬ್ಬರಾಗಿದ್ದಾರೆ. ಓ ಮಹನೀಯರೇ ಏಳಿ , ಈ ಧ್ವಜಕ್ಕೊಂದಿಸಿ. ಈ ಧ್ವಜದ ಪ್ರತಿನಿಧಿಯಾಗಿ ಪ್ರಾರ್ಥಿಸುತ್ತೇನೆ . ಓ ವಿಶ್ವದೆಲ್ಲ ಸ್ವತಂತ್ರ್ಯರಾಧಕರೇ ಈ ಧ್ವಜದೊಡನೆ ಸಹಕರಿಸಿ, ಹೀಗೆಂದು ಜರ್ಮನಿಯ ಸ್ಟುವರ್ಟ್ ನಲ್ಲಿ 1907ರಲ್ಲಿ ನಡೆದಿದ್ದ ಸಮಾಜವಾದಿ ಅಧಿವೇಶನದಲ್ಲಿ ಪ್ರಪ್ರಥಮ ಬಾರಿಗೆ ಭಾರತದ ಧ್ವಜಾರೋಹಣ ಮಾಡಿದ್ದರು. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಮಾ ಅವರು 1935ರಲ್ಲಿ ಬಾಂಬೆಗೆ ಆಗಮಿಸಿದ್ದರು . 1936ರ ಆಗಸ್ಟ್ 13ರಂದು ಪಾರ್ಸಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
⭕ ಸುಚೇತಾ ಕೃಪಾಲಾನಿ ⭕
ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದವರು ಸುಚೇತಾ ಕೃಪಾಲಾನಿ . ಭಾರತದ ಪ್ರಥಮ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು . ಉತ್ತರಪ್ರದೇಶದ ಸಿಎಂ ಆಗಿ 1963ರಿಂದ 67ರವರೆಗೆ ಕಾರ್ಯನಿರ್ವಹಿಸಿದ್ದರು . ಗಾಂಧಿ ಅನುಯಾಯಿಯಾಗಿದ್ದ ಕೃಪಾಲಾನಿ ಕ್ವಿಟ್ ಇಂಡಿಯಾ ಚಳವಳಿಗೆ ಧುಮುಕಿದ್ದರು . 1971ರಲ್ಲಿ ರಾಜಕೀಯದಿಂದ ದೂರ ಸರಿದಿದ್ದರು . 1974ರಲ್ಲಿ ನಿಧನರಾಗಿದ್ದರು.
⭕ ಅರುಣಾ ಅಸಾಫ್ ಅಲಿ ⭕
ಅರುಣಾ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ದಿಟ್ಟ ಮಹಿಳೆ. 1942ರ ಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ಮುಂಬೈಯ ಗೌವಾಲಿಯಾ ಟ್ಯಾಂಕ್ ಮೈದಾನದಲ್ಲಿ ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ಫ್ಲ್ಯಾಗ್ ಅನ್ನು ಹಾರಿಸಿದ್ದರು . ಸ್ವಾತಂತ್ರ್ಯ ನಂತರ ರಾಜಕೀಯ ಪ್ರವೇಶಿಸಿದ್ದರು . 1958ರಲ್ಲಿ ದೆಹಲಿಯ ಮೊದಲ ಮೇಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. 1960ರಲ್ಲಿ ಮೀಡಿಯಾ ಪಬ್ಲಿಷಿಂಗ್ ಹೌಸ್ ಅನ್ನು ಆರಂಭಿಸಿದ್ದರು . ಭಾರತ ರತ್ನ ಪುರಸ್ಕಾರ ಪಡೆದಿದ್ದ ಅರುಣಾ ಗಂಗೂಲಿ ಅವರು 1996ರ ಜುಲೈ 29ರಂದು ನಿಧನರಾಗಿದ್ದರು.
⭕ ದುರ್ಗಾಬಾಯ್ ದೇಶ್ ಮುಖ್ ⭕
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ದುರ್ಗಾಬಾಯಿ ದೇಶಮುಖ್ ತೊಡಗಿಸಿಕೊಂಡಿದ್ದರು . 12ನೇ ವಯಸ್ಸಿನಲ್ಲಿಯೇ ಇಂಗ್ಲಿಷ್ ಭಾಷೆ ಕಲಿಕೆಯ ವಿರುದ್ಧ ಸೆಟೆದು ವಿದ್ಯಾಭ್ಯಾಸ ಮೊಟಕುಗೊಳಿಸಿ ಹೊರಬಂದಿದ್ದರು . ಬಳಿಕ ರಾಜಮಂಡ್ರಿಯಲ್ಲಿ ಹೆಣ್ಣು ಮಕ್ಕಳಿಗಾಗಿಯೇ ಬಾಲಿಕಾ ಹಿಂದಿ ಪಾಠಶಾಲೆಯನ್ನು ರಾಜಮಂಡ್ರಿಯಲ್ಲಿ ಆರಂಭಿಸಿದ್ದರು . ಮಹಾತ್ಮಗಾಂಧಿಯ ಅನುಯಾಯಿಯಾಗಿದ್ದ ದೇಶಮುಖ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಬಾರಿ ಜೈಲುವಾಸ ಅನುಭವಿಸಿದ್ದರು . ಈಕೆ ಯಾವತ್ತೂ ಚಿನ್ನಾಭರಣ ಧರಿಸಿರಲಿಲ್ಲ . 1981ರಲ್ಲಿ ದೇಶ್ ಮುಖ್ ಶ್ರೀಕಾಕುಳಂ🇮🇳🇮🇳🇮🇳💐
ಝಾನ್ಸಿಯ ರಾಣಿ ಲಕ್ಷ್ಮೀ ಬಾಯಿ ಭಾರತದ ಸ್ವಾತಂತ್ರ್ಯ ಹೋರಾಟದ ಹೆಸರುಗಳಲ್ಲಿ ಪ್ರಮುಖವಾದದ್ದು . 1857ರ ಸಿಪಾಯಿ ದಂಗೆ ಪ್ರಾರಂಭವಾಗಿತ್ತು. ಈ ಸಂದರ್ಭದಲ್ಲಿ ಝಾನ್ಸಿಯ ಆಳ್ವಿಕೆಯನ್ನು ಬ್ರಿಟಿಷರು ಲಕ್ಷ್ಮಿಬಾಯಿಗೆ ವಹಿಸಿದ್ದರು . 1858ರ ಮಾರ್ಚ್ 25ರಂದು ರಾಣಿ ಲಕ್ಷ್ಮೀಬಾಯಿ ಬ್ರಿಟಿಷರ ಬಗ್ಗೆ ಇದ್ದ ನಿಲುವು ಬದಲಾಯಿಸಲು ಕಾರಣವಾಯಿತು . ಸುಮಾರು 2 ವಾರಗಳ ಉಗ್ರ ಹೋರಾಟ ನಡೆಸಿ ..ದಂಗೆಕೋರ ತಾತ್ಯಾಟೋಪಿ ಮುಖಂಡನಾಗಿ ಯುದ್ಧ ಮಾಡಿ ಝಾನ್ಸಿ ಸ್ವತಂತ್ರವಾಗಲು ಸಹಕರಿಸಿದ್ದ. ಹೀಗೆ ದಿಟ್ಟತನದಿಂದ ಹೋರಾಡಿದ್ದ ಝಾನ್ಸಿ ಲಕ್ಷ್ಮೀಬಾಯಿ 1858, ಜೂನ್ 18ರಂದು ಸಾವನ್ನಪ್ಪಿದ್ದಳು . ರಾಣಿಯ ತಂದೆ ಮೊರೋಪಂತ್ ತಂಬೆ ಅವರನ್ನು ಝಾನ್ಸಿಯ ಸೋಲಿನ ನಂತರ ಸೆರೆಹಿಡಿದು, ಗಲ್ಲಿಗೇರಿಸಿದ್ದರು .
⭕ ಸರೋಜಿನಿ ನಾಯ್ಡು ⭕
ಉರ್ದು , ತೆಲುಗು , ಇಂಗ್ಲಿಷ್ , ಬೆಂಗಾಲಿ ಮತ್ತು ಪರ್ಷಿಯನ್ ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುತ್ತಿದ್ದ ಸರೋಜಿನಿ ನಾಯ್ಡು ಭಾರತದ ಕೋಗಿಲೆ ಎಂದು ಹೆಸರು ಪಡೆದಿದ್ದರು , ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು . ಉತ್ತರಪ್ರದೇಶದ ಮೊದಲನೆಯ ಮಹಿಳಾ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು . 1949ರ ಮಾರ್ಚ್ 2 ರಂದು ನಿಧನರಾಗಿದ್ದರು.
⭕ ಬೇಗಂ ಹಝರತ್ ಮಹಲ್ ⭕
1857ರ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಬೇಗಂ ಹಝರತ್ ಬೇಗಂ ಮಹಲ್ ಅವರ ಹೋರಾಟ ಪ್ರಮುಖವಾಗಿತ್ತು . ಈಕೆ ನವಾಬ್ ವಾಜಿದ್ ಅಲಿ ಷಾ ಅವರ 2 ನೇ ಪತ್ನಿ .ಕೋಲ್ಕತಾದಿಂದ ಷಾನನ್ನು ಗಡಿಪಾರು ಮಾಡಲಾಗಿತ್ತು . ಬಳಿಕ ಹಝರತ್ ಬೇಗಂ ಅವಾಧ್ ಆಡಳಿತ ನೋಡಿಕೊಳ್ಳುವುದರ ಜೊತೆಗೆ ಲಕ್ನೋವನ್ನು ತನ್ನ ವಶಕ್ಕೆ ತೆಗೆದುಕೊಂಡಿದ್ದಳು . ತದನಂತರ ಲಕ್ನೋ ಹಾಗೂ ಔಧ್ ಅನ್ನು ಬ್ರಿಟಿಷರು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. ಹಝರತ್ ಳನ್ನು ಬಲವಂತದಿಂದ ಅಧಿಕಾರದಿಂದ ಕೆಳಗಿಳಿಸಿದ್ದರು . ಕೊನೆಗೆ ಈಕೆ ನೇಪಾಳದಲ್ಲಿ ಆಶ್ರಯ ಪಡೆದಿದ್ದು , 1879ರಲ್ಲಿ ಕಾಠ್ಮುಂಡುವಿನಲ್ಲಿ ಸಾವನ್ನಪ್ಪಿದ್ದಳು .
⭕ ಕಿತ್ತೂರು ರಾಣಿ ಚೆನ್ನಮ್ಮ ⭕
ಸ್ವಾತಂತ್ಯಕ್ಕಾಗಿ ಬ್ರಿಟಿಷರ ಬೃಹತ್ ಸೈನ್ಯದ ವಿರುದ್ಧ ಸೆಟೆದು ನಿಂತು ಹೋರಾಟ ನಡೆಸಿದ್ದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ . ಆಕೆಯ ಧೈರ್ಯ , ಸಾಹಸ , ಕೆಚ್ಚು ಇಂದಿಗೂ ಯುವ ಪೀಳಿಗೆಗೆ ಸ್ಫೂರ್ತಿದಾಯಕ . ದಿಟ್ಟ ಹೋರಾಟದ ನಂತರ 1824ರ ಡಿಸೆಂಬರ್ 5 ರಂದು ಚೆನ್ನಮ್ಮ ತನ್ನ ಸೊಸೆಯರಾದ ವೀರಮ್ಮ ಹಾಗೂ ಜಾನಕಿಬಾಯಿಯರ ಜೊತೆ ಕೈದಿಯಾಗುತ್ತಾಳೆ . ಡಿಸೆಂಬರ್ 12ರಂದು ಚೆನ್ನಮ್ಮ ಹಾಗೂ ವೀರಮ್ಮರನ್ನು ಬೈಲಹೊಂಗಲಕ್ಕೆ ಒಯ್ಯಲಾಗುತ್ತದೆ . ಅಲ್ಲಿ 4 ವರ್ಷ ಸೆರೆಮನೆವಾಸ ಅನುಭವಿಸಿ 1829ರ ಫೆಬ್ರುವರಿ 2 ರಂದು ನಿಧನ ಹೊಂದಿದ್ದಳು .
⭕ ಮೇಡಂ ಭಿಕಾಜಿ ಕಾಮಾ ⭕
ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಧ್ರುವತಾರೆಯಾಗಿರುವ ಮಹಿಳೆಯರಲ್ಲಿ ಮುಂಬೈನ ಮೇಡಂ ಭಿಕಾಜಿ ಕಾಮಾ ಒಬ್ಬರಾಗಿದ್ದಾರೆ. ಓ ಮಹನೀಯರೇ ಏಳಿ , ಈ ಧ್ವಜಕ್ಕೊಂದಿಸಿ. ಈ ಧ್ವಜದ ಪ್ರತಿನಿಧಿಯಾಗಿ ಪ್ರಾರ್ಥಿಸುತ್ತೇನೆ . ಓ ವಿಶ್ವದೆಲ್ಲ ಸ್ವತಂತ್ರ್ಯರಾಧಕರೇ ಈ ಧ್ವಜದೊಡನೆ ಸಹಕರಿಸಿ, ಹೀಗೆಂದು ಜರ್ಮನಿಯ ಸ್ಟುವರ್ಟ್ ನಲ್ಲಿ 1907ರಲ್ಲಿ ನಡೆದಿದ್ದ ಸಮಾಜವಾದಿ ಅಧಿವೇಶನದಲ್ಲಿ ಪ್ರಪ್ರಥಮ ಬಾರಿಗೆ ಭಾರತದ ಧ್ವಜಾರೋಹಣ ಮಾಡಿದ್ದರು. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಮಾ ಅವರು 1935ರಲ್ಲಿ ಬಾಂಬೆಗೆ ಆಗಮಿಸಿದ್ದರು . 1936ರ ಆಗಸ್ಟ್ 13ರಂದು ಪಾರ್ಸಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
⭕ ಸುಚೇತಾ ಕೃಪಾಲಾನಿ ⭕
ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದವರು ಸುಚೇತಾ ಕೃಪಾಲಾನಿ . ಭಾರತದ ಪ್ರಥಮ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು . ಉತ್ತರಪ್ರದೇಶದ ಸಿಎಂ ಆಗಿ 1963ರಿಂದ 67ರವರೆಗೆ ಕಾರ್ಯನಿರ್ವಹಿಸಿದ್ದರು . ಗಾಂಧಿ ಅನುಯಾಯಿಯಾಗಿದ್ದ ಕೃಪಾಲಾನಿ ಕ್ವಿಟ್ ಇಂಡಿಯಾ ಚಳವಳಿಗೆ ಧುಮುಕಿದ್ದರು . 1971ರಲ್ಲಿ ರಾಜಕೀಯದಿಂದ ದೂರ ಸರಿದಿದ್ದರು . 1974ರಲ್ಲಿ ನಿಧನರಾಗಿದ್ದರು.
⭕ ಅರುಣಾ ಅಸಾಫ್ ಅಲಿ ⭕
ಅರುಣಾ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ದಿಟ್ಟ ಮಹಿಳೆ. 1942ರ ಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ಮುಂಬೈಯ ಗೌವಾಲಿಯಾ ಟ್ಯಾಂಕ್ ಮೈದಾನದಲ್ಲಿ ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ಫ್ಲ್ಯಾಗ್ ಅನ್ನು ಹಾರಿಸಿದ್ದರು . ಸ್ವಾತಂತ್ರ್ಯ ನಂತರ ರಾಜಕೀಯ ಪ್ರವೇಶಿಸಿದ್ದರು . 1958ರಲ್ಲಿ ದೆಹಲಿಯ ಮೊದಲ ಮೇಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. 1960ರಲ್ಲಿ ಮೀಡಿಯಾ ಪಬ್ಲಿಷಿಂಗ್ ಹೌಸ್ ಅನ್ನು ಆರಂಭಿಸಿದ್ದರು . ಭಾರತ ರತ್ನ ಪುರಸ್ಕಾರ ಪಡೆದಿದ್ದ ಅರುಣಾ ಗಂಗೂಲಿ ಅವರು 1996ರ ಜುಲೈ 29ರಂದು ನಿಧನರಾಗಿದ್ದರು.
⭕ ದುರ್ಗಾಬಾಯ್ ದೇಶ್ ಮುಖ್ ⭕
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ದುರ್ಗಾಬಾಯಿ ದೇಶಮುಖ್ ತೊಡಗಿಸಿಕೊಂಡಿದ್ದರು . 12ನೇ ವಯಸ್ಸಿನಲ್ಲಿಯೇ ಇಂಗ್ಲಿಷ್ ಭಾಷೆ ಕಲಿಕೆಯ ವಿರುದ್ಧ ಸೆಟೆದು ವಿದ್ಯಾಭ್ಯಾಸ ಮೊಟಕುಗೊಳಿಸಿ ಹೊರಬಂದಿದ್ದರು . ಬಳಿಕ ರಾಜಮಂಡ್ರಿಯಲ್ಲಿ ಹೆಣ್ಣು ಮಕ್ಕಳಿಗಾಗಿಯೇ ಬಾಲಿಕಾ ಹಿಂದಿ ಪಾಠಶಾಲೆಯನ್ನು ರಾಜಮಂಡ್ರಿಯಲ್ಲಿ ಆರಂಭಿಸಿದ್ದರು . ಮಹಾತ್ಮಗಾಂಧಿಯ ಅನುಯಾಯಿಯಾಗಿದ್ದ ದೇಶಮುಖ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಬಾರಿ ಜೈಲುವಾಸ ಅನುಭವಿಸಿದ್ದರು . ಈಕೆ ಯಾವತ್ತೂ ಚಿನ್ನಾಭರಣ ಧರಿಸಿರಲಿಲ್ಲ . 1981ರಲ್ಲಿ ದೇಶ್ ಮುಖ್ ಶ್ರೀಕಾಕುಳಂ🇮🇳🇮🇳🇮🇳💐
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ