(ಕಾರ್ಗಿಲ್
ಯುದ್ಧ)
• ಜಮ್ಮು
ಕಾಶ್ಮೀರ ರಾಜ್ಯದ ಕಾರ್ಗಿಲ್ ಪ್ರದೇಶದಲ್ಲಿ
ಪಾಕಿಸ್ತಾನಿ ಸೈನಿಕರು ಅಂತರಾಷ್ಟ್ರೀಯ ಗಡಿಯನ್ನು
ಮೀರಿ ಕಾಶ್ಮೀರ ಕಣಿವೆಗಳ ಮುಖಾಂತರ
ಒಳನುಸುಳುತ್ತಿರುವುದು 1999 ನೇ ಇಸವಿಯ ಆರಂಭದಲ್ಲಿ
ಜನಸಾಮಾನ್ಯರಿಗೆ ಹಾಗೂ ಗಡಿ ಭದ್ರತಾ
ಪಡೆಯ ಸಿಬ್ಬಂದಿಗಳಿಗೆ ಖಾತ್ರಿಯಾಗಿ ಅದೇ ಸುದ್ದಿ ಭಾರತೀಯರ
ಕಣ್ಣು ಕೆಂಪಗಾಗಿಸಲು ಒಂದು ಕಾರಣವಾಯಿತು.
• ಬರಿಯ
ಕಾರ್ಗಿಲ್ ಪ್ರದೇಶ ಮಾತ್ರವಲ್ಲದೆ ಮಾನವ
ರಹಿತ ಚೆಕ್ ಪೋಸ್ಟ್ ಗಳ
ಮುಖಾಂತರ ಸಿಯಾಚಿನ ಗಡಿವರೆವಿಗೂ ಒಳನುಸುಳುವಿಕೆ
ಅವ್ಯಾಹತವಾಗಿ ನಡೆಯುತ್ತಿದ್ದುದು ಭಾರತಕ್ಕೆ ಸಹಿಸಲಸಾಧ್ಯವಾಯಿತು. ಅದೇ ಸಮಯಕ್ಕೆ ಪಾಕಿಸ್ತಾನಿ
ನಾಯಕರ ಹೇಳಿಕೆಗಳು ಪಾಕಿಸ್ತಾನ ಯುದ್ಧಕ್ಕೆ ತಯಾರಾಗಿದೆ ಎಂಬ ಸ್ಪಷ್ಟ ಸಂದೇಶವನ್ನು
ಅದಾಗಲೇ ರವಾನಿಸಿಯಾಗಿತ್ತು.
• ಕೇಂದ್ರ
ಸರ್ಕಾರ ಜೂನ್ 1999 ರಲ್ಲಿ ಭಾರತೀಯ ಸೇನೆಗೆ
ಒಳನುಸುಳುಕೋರರನ್ನು ಪ್ರತಿರೋಧಿಸಲು ಆಪರೇಷನ್ ವಿಜಯ್ ಹೆಸರಿನ
ಯುದ್ಧ ಆರಂಭಿಸುವಂತೆ ಅಪ್ಪಣೆ ಕೊಟ್ಟಿತು. ಕಾಶ್ಮೀರ
ಗಡಿಯಲ್ಲಿನ ತೀವ್ರ ಕಡಿಮೆ ತಾಪಮಾನ,
ವಿರೋಧಿ ಬಣದಿಂದ ಮಳೆಯಂತೆ ಬಂದು
ಸುರಿಯುತ್ತಿದ್ದ ಗ್ರೆನೇಡುಗಳು, ಸಮುದ್ರ ಮಟ್ಟದಿಂದ ಅತೀ
ಎತ್ತರದಲ್ಲಿದ್ದು ಆಗಾಗ ಉಸಿರಾಡಲೂ ಕಷ್ಟವಾಗುವಂತಹ
ಕ್ಲಿಷ್ಟ ಪರಿಸ್ಥಿತಿಗಳಲ್ಲಿ ಭಾರತೀಯ ಯೋಧರು ಪಾಕಿಸ್ತಾನಕ್ಕೆ
ಎದಿರೇಟು ಕೊಡುವಲ್ಲಿ ಸಫಲರಾಗುತ್ತಿದ್ದರು. * ಮೂರು ತಿಂಗಳ ಪರ್ಯಂತ
ನಡೆದ ಕಾರ್ಗಿಲ್ ಯುದ್ಧದಲ್ಲಿ ಸುಮಾರು 500 ಜನ ಭಾರತೀಯ ಯೋಧರು
ಹುತಾತ್ಮರಾದರು ಹಾಗೂ ಪಾಕಿಸ್ತಾನ ಬಣದಲ್ಲಿ
ಸುಮಾರು 600 - 4000 ಸೈನಿಕರು ಹತರಾಗಿರುವ ಬಗ್ಗೆ
ಅಂದಾಜಿಸಲಾಗಿದೆ.
ಒಳನುಸುಳುಕೋರರನ್ನು
ಹಿಮ್ಮೆಟ್ಟಿಸುವಲ್ಲಿ ಭಾರತ ಸಫಲವಾಗಿದ್ದರಿಂದ ಪಾಕಿಸ್ತಾನಕ್ಕೆ
ತೀವ್ರ ಮುಖಭಂಗವಾಯಿತು.
• ಇದರಿಂದ
ತಪ್ಪಿಸಿಕೊಳ್ಳಲು ಪಾಕಿಸ್ತಾನ ಆಗಷ್ಟೇ ತಾನೇ ಸಿದ್ಧಪದಿಸಿಕೊಂಡಿದ್ದ
ಅಣು ಬಾಂಬ್ ಅನ್ನು ಭಾರತದ
ಮೇಲೆ ಪ್ರಯೋಗಿಸುವ ಬಗ್ಗೆ ಮಾತುಗಳು ಕೇಳಿ
ಬರಲಾರಂಭಿಸಿದವು. ವಿಷಯ ತಿಳಿದ ಆಗಿನ
ಅಮೇರಿಕಾ ಅಧ್ಯಕ್ಷ ಬಿಲ್ ಕ್ಲಿಂಟನ್
ಅಣು ಬಾಂಬ್ ಬಳಸಿ ಜಾಗತೀಕವಾಗಿ
ಕಠಿಣ ಪರಿಸ್ಥಿತಿ ನಿರ್ಮಾಣ ಮಾಡದಂತೆ ಪಾಕಿಸ್ತಾನಕ್ಕೆ
ಎಚ್ಚರಿಕೆಯ ಸಂದೇಶ ರವಾನಿಸಿದರು.
• ಯುದ್ಧ
ಸಂಬಂಧಿ ಪರಿಕರಗಳನ್ನೆಲ್ಲ ಪರದೇಶದಿಂದ ಅಮದು ಮಾಡಿಕೊಂಡಿದ್ದ ಪಾಕಿಸ್ತಾನಕ್ಕೆ
ಯುದ್ಧದಲ್ಲಿ ಸೋತಿದ್ದು ಅಪಾರ ನಷ್ಟವಾಯಿತು. ಅಮೇರಿಕಾ
ಹಾಗು ಚೀನಾ ತಾವು ಮಧ್ಯ
ಪ್ರವೇಶಿಸುವುದಕ್ಕೆ ಹಿಂದೇಟು ಹಾಕಿದವು. ಇಷ್ಟೆಲ್ಲಾ
ನಡೆಯುತ್ತಿದ್ದರೂ ಭಾರತದ ಕಡೆಯಿಂದ ಆಗುತ್ತಿದ್ದ
ದಾಳಿ ಇನ್ನು ನಿಂತಿರಲಿಲ್ಲ, ಪಾಕಿಸ್ತಾನಿ
ಸೈನಿಕರು ಬಂದ ದಾರಿಗೆ ಸುಂಕವಿಲ್ಲದಂತೆ
ಅಂತರಾಷ್ಟ್ರೀಯ ಗಡಿ ದಾಟಿ ಹಿಂದೆ
ಸರಿಯುವ ವರೆವಿಗೂ ಯುದ್ಧ ನಿಲ್ಲುವ
ಯಾವ ಲಕ್ಷಣಗಳೂ ಗೋಚರಿಸಲಿಲ್ಲ.
• ಕೂಡಲೇ
ಪಾಕಿಸ್ತಾನದ ಸೇನಾ ಅಧ್ಯಕ್ಷ ಜನರಲ್
ಮುಷರಫ್ ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್
ರಲ್ಲಿ ಪಾಕಿಸ್ತಾನಿ ಸೈನಿಕರನ್ನು ಹಿಂದಕ್ಕೆ ಕರೆಸಿ ಮೊದಲಿನಂತೆ ನಿಯಂತ್ರಣ
ರೇಖೆಯಲ್ಲಿ ನಿಲ್ಲಿಸಲು ಮನವಿ ಮಾಡಿದರು. ಪಾಕಿಸ್ತಾನದಲ್ಲಿ
ಸರ್ಕಾರಕ್ಕೂ ಹಾಗು ಸೇನೆಗೂ ತಮ್ಮ
ರಾಷ್ಟ್ರೀಯ ಕಾರ್ಯ ನಿರ್ವಹಣೆಯ ವಿಚಾರದಲ್ಲಿ
ವಿಧಿತ ಕಟ್ಟುಪಾಡುಗಳು ಇಲ್ಲದ ಕಾರಣ ಎರಡೂ
ಬೇರೆ ಬೇರೆ ಯಾಗಿ ಕಾರ್ಯ
ನಿರ್ವಹಿಸುವುದೇ ಹೆಚ್ಚು.
• ಇಲ್ಲೂ
ಹಾಗೆ ನಡೆದು ನವಾಜ್ ಶರೀಫರು
ಮಾಡಿದ ಆಜ್ಞೆಯನ್ನು ಒಪ್ಪಲು ಯಾರೂ ತಯಾರಿರಲಿಲ್ಲ.
ಆದರೆ ಅಷ್ಟರಲ್ಲಾಗಲೇ ತಮ್ಮ ಶಕ್ತಿ ಸಾಮರ್ಥ್ಯಗಳನ್ನು
ಅರಿತುಕೊಂಡಿದ್ದ ಪಾಕಿಸ್ತಾನದ ಒಂದು ಸೇನಾ ತುಕಡಿ(ಏನ್ ಎಲ್ ಐ)
ತಾನು ಯುದ್ಧ ಭೂಮಿಯಿಂದ ಹಿಂದೆ
ಸರಿಯಿತು. ಕೊನೆಗೆ ಸೇನೆ ಹಿಂದೆ
ಸರಿಯುವ ವಿಚಾರದಲ್ಲಿ ಪಾಕಿಸ್ತಾನಿ ಸೇನೆಯೊಳಗೆ ಭಿನ್ನಾಭಿಪ್ರಾಯ ಸ್ಫೋಟವಾಯಿತು.
• ಭಿನ್ನಾಭಿಪ್ರಾಯ
ಎಷ್ಟರ ಮಟ್ಟಿಗೆ ಮುಂದುವರಿಯಿತೆಂದರೆ ಪಾಕಿಸ್ತಾನ
ಸೇನೆ ಒಳಜಗಳಗಳಿಗೆ ಸಾಕ್ಷಿಯಾಯಿತು ಹಾಗು ಹಲವಾರು ಸಾವು
ನೋವುಗಳನ್ನು ಕಂಡಿತು. ಎಲ್ಲದರ ಫಲವಾಗಿ
ಪಾಕಿಸ್ತಾನದ ಸೈನಿಕರು ಯುದ್ಧದಲ್ಲಿ ಸಫಲರಾಗದೆ
ಹಿಂದಿರುಗಿದರು, ಭಾರತ ವಿಜಯೋತ್ಸವ ಆಚರಿಸಿತು.
• ಈ ಯುದ್ಧ ಆಗಿನ ಪ್ರಧಾನ
ಮಂತ್ರಿ ವಾಜಪೇಯಿ ಯವರ ವ್ಯಕ್ತಿತ್ವವನ್ನು
ಎತ್ತರಕ್ಕೆ ಕೊಂಡೊಯ್ಯುವಲ್ಲಿ ಸಹಕಾರಿಯಾಯಿತು. ದೇಶದಲ್ಲಿ ಅಸಂಖ್ಯಾತ ಜನಗಳು ವಾಜಪೇಯಿಯವರ ಧೈರ್ಯವಾಗಿ
ತೀರ್ಮಾನ ತೆಗೆದುಕೊಳ್ಳುವ ಹಾಗು ಎಷ್ಟೇ ಕಷ್ಟವಾದರೂ
ಅದಕ್ಕೆ ಬದ್ಧರಾಗಿ ಗೆಲ್ಲುವ ಛಾತಿಯನ್ನು ಮೆಚ್ಚಿಕೊಂಡರು
ಹಾಗು ಅವರ ಅಭಿಮಾನಿಗಳು ಆದರು.
• ಕಾರ್ಗಿಲ್
ಯುದ್ಧ ಅಷ್ಟೊಂದು ಪ್ರಚಾರ ಪಡೆಯಲು ಇದ್ದ
ಒಂದೇ ಒಂದುಕಾರಣವೆಂದರೆ ಅದು ಎರಡು ಅಣ್ವಸ್ತ್ರ
ರಾಷ್ಟ್ರಗಳು ಮುಖಾ ಮುಖಿಯಾಗಿ ಯುದ್ಧ
ಮಾಡುತ್ತಿರುವುದು. ದಕ್ಷಿಣ ಏಷಿಯಾದ ಈ
ಎರಡೂ ಸಹೋದರ ರಾಷ್ಟ್ರಗಳೇ ಅಣ್ವಸ್ತ್ರಗಳಿಂದ
ಬಡಿದಾಡಿ ಕೊಂಡರೆ ಜಗತ್ತಿಗೆ ಕೆಟ್ಟ
ಅರ್ಥ ರವಾನೆಯಾಗುವುದಾಗಿ ಎಲ್ಲ ರಾಷ್ಟ್ರಗಳಿಗೂ ಆತಂಕ
ಮನೆ ಮಾಡಿತ್ತು. ಆದರೆ ಅಂದಿನ ಭಾರತದ
ಪ್ರಧಾನಿ ವಾಜಪೇಯಿ ಅಷ್ಟೇ ಸಮಾಧಾನದಿಂದ
ಪರಿಸ್ಥಿತಿ ತಿಳಿಯಾಗಿಸಲು ಯತ್ನಿಸಿದರು .
• ಯುದ್ಧಕ್ಕಿಂತಲೂ
ಮುಂಚೆ ಪಾಕಿಸ್ತಾನದೊಂದಿಗೆ ಶಾಂತಿ ಮಾತು ಕತೆ
ನಡೆಸಿದ್ದರು. ಎರಡೂ ರಾಷ್ಟ್ರಗಳ ಶಾಂತಿಯ
ಹಾಗೂ ಸ್ನೇಹದ ಧ್ಯೋತಕವಾಗಿ ಭಾರತದಿಂದ
ಪಾಕಿಸ್ತಾನದ ಲಾಹೋರ್ ಗೆ ಬಸ್
ಸೇವೆಯನ್ನು ಆರಂಭಿಸಿದ್ದರು. ಯುದ್ಧ ಕಾಲದಲ್ಲಿ ತುರ್ತು
ಪರಿಸ್ಥಿತಿ ಘೋಷಿಸುವಂತೆ ಒತ್ತಡ ಸೃಷ್ಟಿಯಾದರೂ ತುರ್ತು
ಪರಿಸ್ತಿತಿ ಘೋಷಿಸದೆ ಸೇನೆಯನ್ನು ಹುರಿದುಂಬಿಸಿದರು.
ಯುದ್ಧ ಸಮಯದಲ್ಲಿ ಸೈನಿಕರಿಗೆ ಹಿಂದೆಂದಿಗಿಂತಲೂ ಹೆಚ್ಚು ಅಧಿಕಾರ ಕೊಟ್ಟರು.
• ಸಣ್ಣ
ಪುಟ್ಟ ವಿಚಾರಗಳಿಗೂ ಮೇಲಧಿಕಾರಿಗಳ ಅಪ್ಪಣೆಗಾಗಿ ಅಲೆಯುತ್ತಿದ್ದ ಸೇನೆಯ ವಕ್ತಾರರಿಗೆ ಕೊಂಚ
ಸಮಾಧಾನವೆನಿಸಿದ್ದೆ ಆಗ. ಇವೆಲ್ಲವುಗಳ ಮುಖಾಂತರ
ವಾಜಪೇಯಿ ಶತ್ರು ಯಾರೇ ಆಗಿದ್ದರು
ನಮ್ಮವರಲ್ಲಿ ಹುರುಪು ಮೂಡಿಸಿದರೆ ಯುದ್ಧವನ್ನು
ಅರ್ಧ ಗೆದ್ದಂತೆ ಎಂಬ ಸ್ಪಷ್ಟ ಸಂದೇಶವನ್ನು
ಸಾರಿದರು. ಈ ಎಲ್ಲ ಕಾರಣಗಳಿಂದಲೇ
ವಾಜಪೇಯಿ ಜನ ಮಾನಸಗಳಲ್ಲಿ ನಿಂತರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ