ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ದ್ರಾವಿಡ ಚಳವಳಿಯ ಖನಿ, ಡಿಎಂಕೆ ವರಿಷ್ಠ ಕರುಣಾನಿಧಿ

ಡಿಎಂಕೆ ವರಿಷ್ಠರಾಗಿದ್ದ ಬಹುಮುಖ ವ್ಯಕ್ತಿತ್ವದ ಎಂ.ಕರುಣಾನಿಧಿ ರಾಜಕೀಯ, ಸಿನಿಮಾ ಮತ್ತು ದ್ರಾವಿಡ ಹೋರಾಟಗಳಲ್ಲಿ ವಿಶಿಷ್ಟ ಛಾಪು ಮೂಡಿಸಿದವರು. ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದಾರೆ.
”ಕಲೈನರ್” ಎಂದೇ ಖ್ಯಾತರಾದ ಎಂ. ಕರುಣಾನಿಧಿ ಅವರು 1924ರ ಜೂನ್ 3ರಲ್ಲಿ ಜನಿಸಿದರು. ಹೋರಾಟ ಮತ್ತು ರಾಜಕೀಯದಲ್ಲಿ ಚಿಕ್ಕಂದಿನಿಂದಲೇ ಆಸಕ್ತಿ ಹೊಂದಿದ್ದ ಕರುಣಾನಿಧಿ, 14ನೇ ವಯಸ್ಸಿನಲ್ಲೇ ರಾಜಕೀಯ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಆ ಹೊತ್ತಿನ ತಮಿಳುನಾಡಿನ ಪ್ರಭಾವಿ ನಾಯಕ, ಜಸ್ಟಿಸ್​ ಪಾರ್ಟಿಯ ನಾಯಕ ಅಳಗಿರಿ ಸ್ವಾಮಿ ಅವರ ವಿಚಾರಧಾರೆಗಳಿಂದ ಪ್ರೇರಿತರಾಗಿದ್ದರು.
ಹೀಗಿದ್ದ ಕರುಣಾನಿಧಿ ಅವರು ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ದು ಮಾತ್ರ ಚಿತ್ರರಂಗದ ಮೂಲಕ. ಚಿತ್ರ ಸಾಹಿತ್ಯ, ಚಿತ್ರಕತೆ ರಚನೆಯಲ್ಲಿ ಅತ್ಯಂತ ಸೂಕ್ಷ್ಮಮತಿಯಾಗಿದ್ದ ಕರುಣಾನಿಧಿ ‘ರಾಜಕುಮಾರಿ’ ಎಂಬ ಚಿತ್ರಕ್ಕೆ ಮೊಟ್ಟ ಮೊದಲ ಬಾರಿಗೆ ಚಿತ್ರಕಥೆ ಬರೆದಿದ್ದರು. ಆ ಚಿತ್ರ ಅವರನ್ನು ಸಿನಿಮಾ ರಂಗದಲ್ಲಿ ಮೇರು ಹಂತಕ್ಕೆ ಕೊಂಡೊಯ್ಯಿತು. ಆ ಮೂಲಕವೇ ಅವರು ಕಲೈನರ್​ ಎಂಬ ಪಟ್ಟವನ್ನೂ ದಕ್ಕಿಸಿಕೊಂಡವರು. ಸಿನಿಮಾ ಕ್ಷೇತ್ರ ಅವರ ಸೇವೆಯನ್ನು ಹಂಬಲಿಸುತ್ತಿರುವಾಗಲೇ ಅವರು ರಾಜಕೀಯಕ್ಕೆ ಧುಮುಕಿದ್ದರು. ಹೋರಾಟ ಮತ್ತು ರಾಜಕೀಯದಲ್ಲಿನ ಅಪಾರ ಆಸಕ್ತಿ ಅವರನ್ನು ಚಿತ್ರರಂಗದಲ್ಲಿ ಹೆಚ್ಚು ದಿನ ಇರಗೊಡಲಿಲ್ಲ.
ಹೋರಾಟದಲ್ಲೂ ಭಾಗಿ
ಸಿನಿಮಾ ಮತ್ತು ರಾಜಕೀಯ ರಂಗಕ್ಕೆ ಬರುವುದಕ್ಕೂ ಮೊದಲು ಹೋರಾಟಗಳಲ್ಲೇ ಹೆಚ್ಚು ಗುರುತಿಸಿಕೊಂಡಿದ್ದ ಕರುಣಾನಿಧಿ, ಯುವಕರ ಸಂಘ ಕಟ್ಟಿದ್ದರು. ಸಂಘದ ಸದಸ್ಯರಿಗಾಗಿ ‘ಮನಾವರ್​ ನೇಸನ್​’ ಎಂಬ ಪ್ರಕಟಣೆಯನ್ನು ಹೊರತರುತ್ತಿದ್ದರು. ಅಲ್ಲದೆ, ತಮಿಳ್​ ಮನಾವರ್​ ಮಂದರಮ್​ ಎಂಬ ಸಂಘಟನೆಯನ್ನು ಸ್ಥಾಪಿಸುವ ಮೂಲಕ ದ್ರಾವಿಡ ಚಳವಳಿಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.
ಹೋರಾಟಗಳ ಮೂಲಕವೇ ರಾಜಕೀಯದ ಮುನ್ನೆಲೆಗೆ ಬಂದಿದ್ದ ಅವರು, ಐವತ್ತರ ದಶಕದ ಹೊತ್ತಿಗೆ ಡಿಎಂಕೆ ಸೇರಿದ್ದರು. 1957ರಲ್ಲಿ ತಿರುಚನಾಪಳ್ಳಿಯ ಲಿತಲೈ ವಿಧಾನಸಭೆ ಮೂಲಕ ಮೊಟ್ಟ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 1967ರಲ್ಲಿ ತಮಿಳುನಾಡು ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾದರು. ಇದಾದ ಎರಡೇ ವರ್ಷದಲ್ಲಿ ದ್ರಾವಿಡ ಹೋರಾಟಗಾರ, ಡಿಎಂಕೆಯ ಪ್ರಮುಖ, ಅಂದಿನ ಮುಖ್ಯಮಂತ್ರಿ ಅಣ್ಣಾದೊರೈ ನಿಧನರಾದರು. ಅಂದು ಪಕ್ಷ ಮುಖ್ಯಮಂತ್ರಿ ಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದು ಕರುಣಾನಿಧಿಯವರನ್ನು.
50 ವರ್ಷ ಡಿಎಂಕೆ ಅಧ್ಯಕ್ಷ
ಡಿಎಂಕೆಯಲ್ಲಿ ಅಲ್ಲಿಂದ ಆರಂಭವಾದ ಕರುಣಾನಿಧಿ ಅವರ ಶಕೆ ಸತತ ಐವತ್ತು ವರ್ಷಗಳ ವರೆಗೆ ಪ್ರಶ್ನಾತೀತವಾಗಿ ಮುಂದುವರಿಯಿತು. ಇಂದು ಇಹಲೋಕ ತ್ಯಜಿಸಿರುವ ಕರುಣಾನಿಧಿ ಡಿಎಂಕೆ ಪಕ್ಷಕ್ಕೆ ಐವತ್ತು ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು ಎಂದರೆ ಅವರ ರಾಜಕೀಯ ಇಚ್ಛಾಶಕ್ತಿ ಎಂಥದ್ದು ಎಂಬುದನ್ನು ಯಾರು ಬೇಕಾದರೂ ಅರಿಯಬಹುದು.
ದ್ರಾವಿಡ ಅಸ್ಮಿತೆ ಮತ್ತು ದ್ರಾವಿಡ ಚಳವಳಿಗಳು ತಮಿಳುನಾಡಿನಲ್ಲಿ ಅತ್ಯಂತ ಪ್ರಖರ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿಗಳಾದ ಅಣ್ಣಾದೊರೈ, ಎಂ.ಜಿ. ರಾಮಚಂದ್ರನ್​ ಮತ್ತು ಕರುಣಾನಿಧಿ ಅವರನ್ನು ದ್ರಾವಿಡ ದ್ರುವತಾರೆಗಳು ಎಂದು ಕರೆಯುವುದುಂಟು. ದ್ರಾವಿಡ ಹೋರಾಟ ಮತ್ತು ಅಸ್ಮಿತೆಯ ಪ್ರತಿಪಾದನೆಯಲ್ಲಿ ಈ ಮೂವರೂ ನಾಯಕರಿಗಿದ್ದ ಬದ್ಧತೆ ಅವರಿಗೆ ಅಂಥ ಪಟ್ಟವನ್ನು ದಕ್ಕಿಸಿಕೊಟ್ಟಿತ್ತು. ಅದರೆ, ಕರುಣಾನಿಧಿ ಅವರ ನಿಧನದಿಂದಾಗಿ ದ್ರಾವಿಡ ಚಳವಳಿ ಅತ್ಯಂತ ಬದ್ಧತೆಯ, ತೂಕದ ನಾಯಕರನ್ನು ಕಳೆದುಕೊಂಡಿರುವುದು ಸುಳ್ಳಲ್ಲ.
ಐದು ಬಾರಿ ಮುಖ್ಯಮಂತ್ರಿ
DMKಯ ಸ್ಥಾಪಕರಾದ C.N. ಅಣ್ಣಾದೊರೈ 1969ರಲ್ಲಿ ತೀರಿಹೋದ ನಂತರ ಇವರು ಅದರ ಮುಖಂಡತ್ವ ವಹಿಸಿಕೊಂಡರು. ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದಾರೆ. (1969-71, 1971-76, 1989-91, 1996-2001 ಮತ್ತು 2006-ಇಂದಿನವರೆಗೆ). 60 ವರ್ಷಗಳ ದೀರ್ಘಕಾಲದ ರಾಜಕೀಯ ವೃತ್ತಿಜೀವನದಲ್ಲಿ ಅವರು ಸ್ಪರ್ಧಿಸಿದ ಪ್ರತಿಯೊಂದು ಚುನಾವಣೆಯಲ್ಲಿ ತಮ್ಮ ಸ್ಥಾನದಲ್ಲಿ ಜಯಿಸುವ ಮ‌ೂಲಕ ದಾಖಲೆ ನಿರ್ಮಿಸಿದ್ದಾರೆ.
2004ರ ಲೋಕಸಭೆ ಚುನಾವಣೆಯಲ್ಲಿ ಅವರು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಎಲ್ಲಾ 40 ಲೋಕಸಭೆ ಸ್ಥಾನಗಳನ್ನು ಗೆಲ್ಲಲು DMK-ನೇತೃತ್ವದ DPA (UPA ಮತ್ತು ಎಡ ಪಕ್ಷಗಳು) ಮುಂದಾಳತ್ವ ವಹಿಸಿದರು. ನಂತರದ 2009ರ ಲೋಕಸಭೆ ಚುನಾವಣೆಯಲ್ಲಿ DMKಯ ಸ್ಥಾನಗಳನ್ನು 16 ರಿಂದ 18ಕ್ಕೆ ಹೆಚ್ಚಿಸಿಕೊಳ್ಳಲು ಸಮರ್ಥರಾದರು. ತಮಿಳುನಾಡು ಮತ್ತು ಪುದುಚೇರಿಯಲ್ಲಿ UPAಯ ನೇತೃತ್ವ ವಹಿಸಿಕೊಂಡು, ಗಮನಾರ್ಹವಾಗಿ ಸಣ್ಣ ಸಮ್ಮಿಶ್ರ ಕೂಟವಾಗಿದ್ದರೂ 28 ಸ್ಥಾನಗಳನ್ನು ಜಯಿಸಿದರು.
ಮೂವರು ಪತ್ನಿಯರು
ಅವರು ಮ‌ೂರು ವಿವಾಹವಾಗಿದ್ದಾರೆ. ಪದ್ಮಾವತಿ, ದಯಾಲು ಅಮ್ಮಾಳ್ ಮತ್ತು ರಾಜದಿಯಮ್ಮಾಳ್ ಪತ್ನಿಯರು. ಅವರಿಗೆ M.K ಮುತ್ತು, M.K. ಅಳಗಿರಿ, M.K. ಸ್ಟಾಲಿನ್, M.K ತಮಿಳರಸು ಎಂಬ ನಾಲ್ವರು ಪುತ್ರರಿದ್ದಾರೆ ಹಾಗೂ ಸೆಲ್ವಿ ಮತ್ತು ಕನ್ನಿಮೊಳಿ ಎಂಬ ಇಬ್ಬರು ಪುತ್ರಿಯರಿದ್ದಾರೆ.
ಇಬ್ಬರು ಹೆಣ್ಣುಮಕ್ಕಳಾದ ಸೆಲ್ವಿ ಮತ್ತು ಕನ್ನಿಮೊಳಿ, ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ ಅವರಲ್ಲಿ ಕನ್ನಿಮೊಳಿ ಅಧಿಕಾರ ಸ್ಥಾನವನ್ನು ಹೊಂದಿದ್ದಾರೆ. ಪದ್ಮಾವತಿ ಮುಂಚೆಯೇ ಅಕಾಲಿಕ ಮರಣವಪ್ಪಿದ್ದು, ಹಿರಿಯ ಮಗ M.K. ಮುತ್ತುಗೆ ಜನ್ಮ ನೀಡಿದ್ದರು. ಅಳಗಿರಿ, ಸ್ಟಾಲಿನ್, ಸೆಲ್ವಿ ಮತ್ತು ತಮಿಳರಸು ದಯಾಲುವಮ್ಮಲ್ ಅವರಿಗೆ ಜನಿಸಿದವರಾಗಿದ್ದು, ಕನ್ನಿಮೊಳಿ ಮ‌ೂರನೇ ಹೆಂಡತಿ ರಾಜದಿಯಮ್ಮಲ್‌ ಅವರಿಂದ ಜನಿಸಿದ ಏಕೈಕ ಪುತ್ರಿ.
ಕರುಣಾನಿಧಿ ಅವರು ಬದುಕು ಸಾಧನೆ ಕುರಿತ ಚಿತ್ರಾವಳಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....