• ವಾಜಪೇಯಿಯವರು ರಾಜಕಾರಣಿಯಲ್ಲದೆ ಕವಿಯೂ ಆಗಿದ್ದರು. ಹಿಂದಿ ಭಾಷೆಯಲ್ಲಿ ಅನೇಕ ಕವಿತೆಗಳನ್ನು ರಚಿಸಿದ್ದಾರೆ. ಇವರ ಇಪ್ಪತ್ತೊಂದು ಕವಿತೆಗಳ ಸಂಕಲನ Twenty-One Poems ಎಂಬ ಹೆಸರಿನಲ್ಲಿ ಆಂಗ್ಲಭಾಷೆಗೆ ಅನುವಾದಗೊಂಡಿದೆ. 2005 ರಲ್ಲಿ ರಾಜಕೀಯದಿಂದ ನಿವೃತ್ತಿ ಘೋಷಿಸಿ ಕೊಂಡವರು ಅಟಲ್, ರಾಜಕೀಯವನ್ನ ಬಿಟ್ಟರೆ ಅಟಲ್ ಒಬ್ಬ ಒಳ್ಳೆಯ ಕವಿ ಹಾಗೂ ಸಾಹಿತಿಯೂ ಹೌದು. ಅವರು ಬರೆದ ಪುಸ್ತಕಗಳು ಅನೇಕ.
• ತಮ್ಮ ಆಡಳಿತದ ಸಮಯದಲ್ಲಿ ಇಡೀ ವಿಶ್ವವೇ ತಬ್ಬಿಬ್ಬಾಗುವಂತೆ ಮಾಡಿದ ಪೋಖ್ರಾನ್ ಅಣು ಪರೀಕ್ಷೆ, ಭಾರತ ಪಾಕ್ ಬಾಂಧವ್ಯಕ್ಕೆ ಕೊಂಡಿಯಾಗಿ ಲಾಹೋರ್ ಬಸ್ ಪ್ರಯಾಣ ಆರಂಭ ತನ್ನ ಕನಸಿನ ಕೂಸಾದ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಗೆ ಚಾಲನೆ ನೀಡಿದರು.
• ದೇಶದ ನಾಲ್ಕೂ ಮೂಲೆಗಳಿಗೂ ಸಂಪರ್ಕ ಕಲ್ಪಿಸುವ 15 ಸಾವಿರ ಕಿ.ಮೀ. ಉದ್ದದ "ಸುವರ್ಣ ಚತುಷ್ಪಥ" ಹೆದ್ದಾರಿಯನ್ನು ದಾಖಲೆಯ ಸಮಯದಲ್ಲಿ ಪೂರ್ಣಗೊಳಿಸಿದ ವಾಜಪೇಯಿಯವರ ಸಾಧನೆ ಅಸಾಮಾನ್ಯವಾದುದು. ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಹಳ್ಳಿಹಳ್ಳಿಗಳಿಗೂ ರಸ್ತೆಯನ್ನು ಒದಗಿಸಿದ್ದು, "ಸರ್ವ ಶಿಕ್ಷಾ ಅಭಿಯಾನ" ಮೂಲಕ ಎಲ್ಲರನ್ನೂ ಸಾಕ್ಷರರನ್ನಾಗಿ ಮಾಡಲು ಮುಂದಾಗಿದ್ದ ವಾಜಪೇಯಿಯವರು ನಿಜಕ್ಕೂ ಒಬ್ಬ ದೂರದೃಷ್ಟಿ ಹೊಂದಿದ್ದ ನಾಯಕ.
• ಭಾರತದ ಹಿರಿಯ ಪ್ರಜೆ, ರಾಜಕಾರಣಿಗಳಲ್ಲೆ ಸಭ್ಯ ರಾಜಕಾರಣಿ ಮತ್ತು ಗೌರವಾನ್ವಿತ ಮುತ್ಸದ್ಧಿ ಎಂದು ತಮ್ಮ ರಾಜಕೀಯ ವಿರೋದಿಗಳಿಂದಲೇ ಕರೆಸಿಕೊಂಡವರು ಅಟಲ್ ಬಿಹಾರಿ ವಾಜಪೇಯಿ.ಯು ಪಿ ಎ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನ್ ಮೋಹನ್ ಸಿಂಗ್ ವಾಜಪೇಯಿಯವರನ್ನು 'ಭಾರತೀಯ ರಾಜಕೀಯ ರಂಗದ ಭೀಷ್ಮ ಪಿತಾಮಹ' ಎಂದು ವರ್ಣಿಸಿದ್ದಾರೆ. ವಾಜಪೇಯಿ ಯವರಲ್ಲಿ ಅತ್ಯಂತ ಗೌರವವಿರಿಸಿಕೊಂಡಿರುವ ಮನ್ ಮೋಹನ್ ಸಿಂಗ್ ವಾಜಪೇಯಿಯವರ ಪ್ರತೀ ಜನ್ಮ ದಿನದಂದು ವಯಕ್ತಿಕವಾಗಿ ಶುಬಾಶಯಗಳನ್ನೂ ತಿಳಿಸುತ್ತಾರೆ.
• 1977 ರಲ್ಲಿ ಜನತಾ ಸಂಘದ ಮೊದಲ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿ ಆಯ್ಕೆ ಆದಾಗ ಅವರು ಅಮೆರಿಕದ ಅಸೆಂಬ್ಲಿಯನ್ನ ಉದ್ದೇಶಿಸಿ ಮಾತನಾಡುವ ಅವಕಾಶ ಸಿಕ್ಕಿತ್ತು. ಆ ಸಂದರ್ಭ ದಲ್ಲಿ ಹಿಂದಿಯಲ್ಲಿ ಅಮೆರಿಕದ ಅಸೆಂಬ್ಲಿಯನ್ನ ಉದ್ದೇಶಿಸಿ ಮಾತನಾಡಿದ ಏಕೈಕ ಭಾರತೀಯರು ಅಟಲ್. ವಿಶೇಷವೆಂದರೆ ಅವರು ಭಾರತದ ಅವಿವಾಹಿತ ಪ್ರಧಾನ ಮಂತ್ರಿಯಾಗಿದ್ದರು.[೫]
ಡಿಸೆಂಬರ್ 2005 ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ ವಾಜಪೇಯಿ ಮುಂದಿನ ಯಾವ ಚುನಾವನೆಯಲ್ಲಿಯೂ ಸ್ಪರ್ಧಿಸುವುದಿಲ್ಲ ಎಂದು ಸೂಚ್ಯವಾಗಿ ತಿಳಿಸಿದರು. ಬಿ ಜೆ ಪಿ ಪಕ್ಷದ ಬೆಳ್ಳಿ ಹಬ್ಬದ ಅಂಗವಾಗಿ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ವಾಜಪೇಯಿ "ನನ್ನ ನಂತರ ಲಾಲ್ಕೃಷ್ಣ ಅಡ್ವಾಣಿ ಹಾಗೂ ಪ್ರಮೋದ್ ಮಹಾಜನ್ ಬಿ.ಜೆ.ಪಿ ಗೆ ರಾಮ ಲಕ್ಷ್ಮಣರಂತೆ ಇರಲಿದ್ದಾರೆ" ಎಂದು ಹೇಳುವ ಮೂಲಕ ತಮ್ಮ ನಂತರ ಪಕ್ಷವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದನ್ನು ಸೂಚಿಸಿದ್ದರು. ಮುಂದೆ ಆರೋಗ್ಯ ಸಮಸ್ಯೆಯಿಂದ ಬಳಲಿದ ವಾಜಪೇಯಿ ದೆಹಲಿಯ ಉನ್ನತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ದಿನದಿಂದ ದಿನಕ್ಕೆ ಆರೋಗ್ಯ ಕ್ಷೀಣಿಸಿದ ಪರಿಣಾಮ 2009 ರ ಲೋಕಸಭಾ ಚುನಾವಣೆಯ ಯಾವ ಪ್ರಚಾರ ಕಾರ್ಯಗಳಲ್ಲಿಯೂ ಅವರು ಭಾಗಿಯಾಗಲಿಲ್ಲ.
• ತಮ್ಮ ಆಡಳಿತದ ಸಮಯದಲ್ಲಿ ಇಡೀ ವಿಶ್ವವೇ ತಬ್ಬಿಬ್ಬಾಗುವಂತೆ ಮಾಡಿದ ಪೋಖ್ರಾನ್ ಅಣು ಪರೀಕ್ಷೆ, ಭಾರತ ಪಾಕ್ ಬಾಂಧವ್ಯಕ್ಕೆ ಕೊಂಡಿಯಾಗಿ ಲಾಹೋರ್ ಬಸ್ ಪ್ರಯಾಣ ಆರಂಭ ತನ್ನ ಕನಸಿನ ಕೂಸಾದ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಗೆ ಚಾಲನೆ ನೀಡಿದರು.
• ದೇಶದ ನಾಲ್ಕೂ ಮೂಲೆಗಳಿಗೂ ಸಂಪರ್ಕ ಕಲ್ಪಿಸುವ 15 ಸಾವಿರ ಕಿ.ಮೀ. ಉದ್ದದ "ಸುವರ್ಣ ಚತುಷ್ಪಥ" ಹೆದ್ದಾರಿಯನ್ನು ದಾಖಲೆಯ ಸಮಯದಲ್ಲಿ ಪೂರ್ಣಗೊಳಿಸಿದ ವಾಜಪೇಯಿಯವರ ಸಾಧನೆ ಅಸಾಮಾನ್ಯವಾದುದು. ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಹಳ್ಳಿಹಳ್ಳಿಗಳಿಗೂ ರಸ್ತೆಯನ್ನು ಒದಗಿಸಿದ್ದು, "ಸರ್ವ ಶಿಕ್ಷಾ ಅಭಿಯಾನ" ಮೂಲಕ ಎಲ್ಲರನ್ನೂ ಸಾಕ್ಷರರನ್ನಾಗಿ ಮಾಡಲು ಮುಂದಾಗಿದ್ದ ವಾಜಪೇಯಿಯವರು ನಿಜಕ್ಕೂ ಒಬ್ಬ ದೂರದೃಷ್ಟಿ ಹೊಂದಿದ್ದ ನಾಯಕ.
• ಭಾರತದ ಹಿರಿಯ ಪ್ರಜೆ, ರಾಜಕಾರಣಿಗಳಲ್ಲೆ ಸಭ್ಯ ರಾಜಕಾರಣಿ ಮತ್ತು ಗೌರವಾನ್ವಿತ ಮುತ್ಸದ್ಧಿ ಎಂದು ತಮ್ಮ ರಾಜಕೀಯ ವಿರೋದಿಗಳಿಂದಲೇ ಕರೆಸಿಕೊಂಡವರು ಅಟಲ್ ಬಿಹಾರಿ ವಾಜಪೇಯಿ.ಯು ಪಿ ಎ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನ್ ಮೋಹನ್ ಸಿಂಗ್ ವಾಜಪೇಯಿಯವರನ್ನು 'ಭಾರತೀಯ ರಾಜಕೀಯ ರಂಗದ ಭೀಷ್ಮ ಪಿತಾಮಹ' ಎಂದು ವರ್ಣಿಸಿದ್ದಾರೆ. ವಾಜಪೇಯಿ ಯವರಲ್ಲಿ ಅತ್ಯಂತ ಗೌರವವಿರಿಸಿಕೊಂಡಿರುವ ಮನ್ ಮೋಹನ್ ಸಿಂಗ್ ವಾಜಪೇಯಿಯವರ ಪ್ರತೀ ಜನ್ಮ ದಿನದಂದು ವಯಕ್ತಿಕವಾಗಿ ಶುಬಾಶಯಗಳನ್ನೂ ತಿಳಿಸುತ್ತಾರೆ.
• 1977 ರಲ್ಲಿ ಜನತಾ ಸಂಘದ ಮೊದಲ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿ ಆಯ್ಕೆ ಆದಾಗ ಅವರು ಅಮೆರಿಕದ ಅಸೆಂಬ್ಲಿಯನ್ನ ಉದ್ದೇಶಿಸಿ ಮಾತನಾಡುವ ಅವಕಾಶ ಸಿಕ್ಕಿತ್ತು. ಆ ಸಂದರ್ಭ ದಲ್ಲಿ ಹಿಂದಿಯಲ್ಲಿ ಅಮೆರಿಕದ ಅಸೆಂಬ್ಲಿಯನ್ನ ಉದ್ದೇಶಿಸಿ ಮಾತನಾಡಿದ ಏಕೈಕ ಭಾರತೀಯರು ಅಟಲ್. ವಿಶೇಷವೆಂದರೆ ಅವರು ಭಾರತದ ಅವಿವಾಹಿತ ಪ್ರಧಾನ ಮಂತ್ರಿಯಾಗಿದ್ದರು.[೫]
ಡಿಸೆಂಬರ್ 2005 ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ ವಾಜಪೇಯಿ ಮುಂದಿನ ಯಾವ ಚುನಾವನೆಯಲ್ಲಿಯೂ ಸ್ಪರ್ಧಿಸುವುದಿಲ್ಲ ಎಂದು ಸೂಚ್ಯವಾಗಿ ತಿಳಿಸಿದರು. ಬಿ ಜೆ ಪಿ ಪಕ್ಷದ ಬೆಳ್ಳಿ ಹಬ್ಬದ ಅಂಗವಾಗಿ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ವಾಜಪೇಯಿ "ನನ್ನ ನಂತರ ಲಾಲ್ಕೃಷ್ಣ ಅಡ್ವಾಣಿ ಹಾಗೂ ಪ್ರಮೋದ್ ಮಹಾಜನ್ ಬಿ.ಜೆ.ಪಿ ಗೆ ರಾಮ ಲಕ್ಷ್ಮಣರಂತೆ ಇರಲಿದ್ದಾರೆ" ಎಂದು ಹೇಳುವ ಮೂಲಕ ತಮ್ಮ ನಂತರ ಪಕ್ಷವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದನ್ನು ಸೂಚಿಸಿದ್ದರು. ಮುಂದೆ ಆರೋಗ್ಯ ಸಮಸ್ಯೆಯಿಂದ ಬಳಲಿದ ವಾಜಪೇಯಿ ದೆಹಲಿಯ ಉನ್ನತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ದಿನದಿಂದ ದಿನಕ್ಕೆ ಆರೋಗ್ಯ ಕ್ಷೀಣಿಸಿದ ಪರಿಣಾಮ 2009 ರ ಲೋಕಸಭಾ ಚುನಾವಣೆಯ ಯಾವ ಪ್ರಚಾರ ಕಾರ್ಯಗಳಲ್ಲಿಯೂ ಅವರು ಭಾಗಿಯಾಗಲಿಲ್ಲ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ