ದೇಶ ಕಂಡ ಅಪರೂಪದ ರಾಜಕಾರಣಿ, ಅಜಾತ ಶತೃ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು (ಆ.16) ಮೃತಪಟ್ಟಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ವಾಜಪೇಯಿ ನಿಧನದ ಬಗ್ಗೆ ಏಮ್ಸ್ ಆಸ್ಪತ್ರೆ ಅಧಿಕೃತವಾಗಿ ಘೋಷಣೆ ಮಾಡಿದ್ದು, ಮೂತ್ರಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಎರಡು ತಿಂಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
93 ವರ್ಷದ ವಾಜಪೇಯಿ ಅವರು 2009ರಲ್ಲಿ ಪಾರ್ಶ್ವವಾಯುಗೆ ತುತ್ತಾದ ಬಳಿಕ ಅವರ ಒಂದೇ ಕಿಡ್ನಿ ಕಾರ್ಯನಿರ್ವಹಿಸುತ್ತಿತ್ತು. ಇದರಿಂದಾಗಿ ಆಗಾಗ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು ಕಳೆದ ಎರಡು ತಿಂಗಳಿನಿಂದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆಯಷ್ಟೇ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ವಾಜಪೇಯಿ ಆರೋಗ್ಯ ವಿಚಾರಿಸಿದ್ದರು. ಇಂದು ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿರಿಯ ನಾಯಕರಾಗಿದ್ದ ವಾಜಪೇಯಿ, ಬದುಕಿದ್ದಷ್ಟೂ ದಿನ ತಮ್ಮ ಸಿದ್ಧಾಂತಗಳಿಗೆ ಬದ್ಧವಾಗಿದ್ದರು. ಅಧಿಕಾರ, ಹಣಕ್ಕಾಗಿ ಆಸೆ ಪಡಲಿಲ್ಲ. ಭ್ರಷ್ಟಾಚಾರವೆಂಬುದನ್ನು ಹತ್ತಿರವೂ ಬಿಟ್ಟುಕೊಳ್ಳಲಿಲ್ಲ. ಅನಾರೋಗ್ಯದಿಂದ ಹೈರಾಣಿಗದ್ದ ಅವರು, ಈಗ ಅಸುನೀಗಿದ್ದರೂ ಜನಮಾನಸದಲ್ಲಿ ಭದ್ರ ಸ್ಥಾನ ಪಡೆದಿದ್ದಾರೆ.
ಮಾದರಿ ಸಂಸತ್ ಪಟುವಾಗಿದ್ದ ಅವರು ಉತ್ತಮ ವಾಗ್ಮಿಯೂ ಕೂಡ. ಇಡೀ ದೇಶದುದ್ದಗಲಕ್ಕೂ ಸಂಚರಿಸಿ ಹಿಂದು ಸಿದ್ಧಾಂತದಡಿ ಬಿಜೆಪಿಯನ್ನು ಸಂಘಟಿಸಿ ಕೇಂದ್ರ ಹಾಗೂ ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಲು ನೆರವಾಗಿದ್ದರು.
ಜನನ, ಬಾಲ್ಯ, ವಿದ್ಯಾಭ್ಯಾಸ
ಅಟಲ್ ಜೀ ಅವರು 1924ರಲ್ಲಿ ಕೃಷ್ಣದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ಅವರ ಮಗನಾಗಿ ಮಧ್ಯ ಪ್ರದೇಶದ ಗ್ವಾಲಿಯರ್ ಹತ್ತಿರದ ಶಿಂದೆ ಕಿ ಚವ್ವಾಣಿ ಎನ್ನುವ ಗ್ರಾಮದಲ್ಲಿ ಜನಿಸಿದರು. ತಂದೆ ಒಬ್ಬ ಕವಿ ಮತ್ತು ಸಾಮಾನ್ಯ ಶಾಲೆಯ ಉಪಾಧ್ಯಾಯರಾಗಿದ್ದರು.
ಪ್ರಾಥಮಿಕ ಶಿಕ್ಷಣವನ್ನು ಗ್ವಾಲಿಯರ್ನ ಸರಸ್ವತಿ ಶಿಶು ಮಂದಿರದಲ್ಲಿ ಪಡೆದ ಅಟಲ್ ಜೀ ಅವರು ಪದವಿಯನ್ನು ವಿಕ್ಟೋರಿಯಾ ಕಾಲೇಜಿನಿಂದ (ಈಗ ಲಕ್ಷ್ಮಿ ಬಾಯಿ ಕಾಲೇಜು) ಪಡೆದರು. ಹಿಂದಿ, ಇಂಗ್ಲೀಷ್ ಹಾಗೂ ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಗಳಿಸಿದ ಅಟಲ್ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನ ಕಾನ್ಪುರದ ಡಿ.ಎ.ವಿ ಕಾಲೇಜಿನಿಂದ ಪಡೆದರು.
ಸ್ವಾತಂತ್ರ್ಯ ಸೇನಾನಿ
ವಾಜಪೇಯಿ ಬ್ರಿಟಿಷರ ವಿರುದ್ಧ ಭಾರತೀಯರು ನಡೆಸುತ್ತಿದ್ದ ಹೋರಾಟ ಸಂದರ್ಭದಲ್ಲಿ ಅಟಲ್ ಕೂಡ ಸಂಗ್ರಾಮಕ್ಕೆ ಧುಮುಕಿದರು. 1942ರಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಪಾಲ್ಗೊಂಡರು. ಅಲ್ಲಿಂದ ಆರಂಭವಾಯಿತು ಅಟಲ್ ರಾಜಕೀಯ ಜೀವನ. 1951ರಲ್ಲಿ ಭಾರತೀಯ ಜನಸಂಘ ಸ್ಥಾಪನೆಯಾದ ನಂತರ ಅಟಲ್ ಬಿಹಾರಿ ವಾಜಪೇಯಿ ಅದರೊಂದಿಗೆ ಗುರುತಿಸಿಕೊಂಡರು. ಹಿಂದುತ್ವ ಜಾಗೃತಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಘಟನೆಯಾದ ಜನಸಂಘದಲ್ಲಿ ವಾಜಪೇಯಿ ಅತ್ಯುನ್ನತ ಜವಾಬ್ದಾರಿಯನ್ನು ವಹಿಸಿಕೊಂಡರು.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ವಾಜಪೇಯಿ ನಿಧನದ ಬಗ್ಗೆ ಏಮ್ಸ್ ಆಸ್ಪತ್ರೆ ಅಧಿಕೃತವಾಗಿ ಘೋಷಣೆ ಮಾಡಿದ್ದು, ಮೂತ್ರಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಎರಡು ತಿಂಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
93 ವರ್ಷದ ವಾಜಪೇಯಿ ಅವರು 2009ರಲ್ಲಿ ಪಾರ್ಶ್ವವಾಯುಗೆ ತುತ್ತಾದ ಬಳಿಕ ಅವರ ಒಂದೇ ಕಿಡ್ನಿ ಕಾರ್ಯನಿರ್ವಹಿಸುತ್ತಿತ್ತು. ಇದರಿಂದಾಗಿ ಆಗಾಗ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು ಕಳೆದ ಎರಡು ತಿಂಗಳಿನಿಂದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆಯಷ್ಟೇ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ವಾಜಪೇಯಿ ಆರೋಗ್ಯ ವಿಚಾರಿಸಿದ್ದರು. ಇಂದು ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿರಿಯ ನಾಯಕರಾಗಿದ್ದ ವಾಜಪೇಯಿ, ಬದುಕಿದ್ದಷ್ಟೂ ದಿನ ತಮ್ಮ ಸಿದ್ಧಾಂತಗಳಿಗೆ ಬದ್ಧವಾಗಿದ್ದರು. ಅಧಿಕಾರ, ಹಣಕ್ಕಾಗಿ ಆಸೆ ಪಡಲಿಲ್ಲ. ಭ್ರಷ್ಟಾಚಾರವೆಂಬುದನ್ನು ಹತ್ತಿರವೂ ಬಿಟ್ಟುಕೊಳ್ಳಲಿಲ್ಲ. ಅನಾರೋಗ್ಯದಿಂದ ಹೈರಾಣಿಗದ್ದ ಅವರು, ಈಗ ಅಸುನೀಗಿದ್ದರೂ ಜನಮಾನಸದಲ್ಲಿ ಭದ್ರ ಸ್ಥಾನ ಪಡೆದಿದ್ದಾರೆ.
ಮಾದರಿ ಸಂಸತ್ ಪಟುವಾಗಿದ್ದ ಅವರು ಉತ್ತಮ ವಾಗ್ಮಿಯೂ ಕೂಡ. ಇಡೀ ದೇಶದುದ್ದಗಲಕ್ಕೂ ಸಂಚರಿಸಿ ಹಿಂದು ಸಿದ್ಧಾಂತದಡಿ ಬಿಜೆಪಿಯನ್ನು ಸಂಘಟಿಸಿ ಕೇಂದ್ರ ಹಾಗೂ ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಲು ನೆರವಾಗಿದ್ದರು.
ಜನನ, ಬಾಲ್ಯ, ವಿದ್ಯಾಭ್ಯಾಸ
ಅಟಲ್ ಜೀ ಅವರು 1924ರಲ್ಲಿ ಕೃಷ್ಣದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ಅವರ ಮಗನಾಗಿ ಮಧ್ಯ ಪ್ರದೇಶದ ಗ್ವಾಲಿಯರ್ ಹತ್ತಿರದ ಶಿಂದೆ ಕಿ ಚವ್ವಾಣಿ ಎನ್ನುವ ಗ್ರಾಮದಲ್ಲಿ ಜನಿಸಿದರು. ತಂದೆ ಒಬ್ಬ ಕವಿ ಮತ್ತು ಸಾಮಾನ್ಯ ಶಾಲೆಯ ಉಪಾಧ್ಯಾಯರಾಗಿದ್ದರು.
ಪ್ರಾಥಮಿಕ ಶಿಕ್ಷಣವನ್ನು ಗ್ವಾಲಿಯರ್ನ ಸರಸ್ವತಿ ಶಿಶು ಮಂದಿರದಲ್ಲಿ ಪಡೆದ ಅಟಲ್ ಜೀ ಅವರು ಪದವಿಯನ್ನು ವಿಕ್ಟೋರಿಯಾ ಕಾಲೇಜಿನಿಂದ (ಈಗ ಲಕ್ಷ್ಮಿ ಬಾಯಿ ಕಾಲೇಜು) ಪಡೆದರು. ಹಿಂದಿ, ಇಂಗ್ಲೀಷ್ ಹಾಗೂ ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಗಳಿಸಿದ ಅಟಲ್ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನ ಕಾನ್ಪುರದ ಡಿ.ಎ.ವಿ ಕಾಲೇಜಿನಿಂದ ಪಡೆದರು.
ಸ್ವಾತಂತ್ರ್ಯ ಸೇನಾನಿ
ವಾಜಪೇಯಿ ಬ್ರಿಟಿಷರ ವಿರುದ್ಧ ಭಾರತೀಯರು ನಡೆಸುತ್ತಿದ್ದ ಹೋರಾಟ ಸಂದರ್ಭದಲ್ಲಿ ಅಟಲ್ ಕೂಡ ಸಂಗ್ರಾಮಕ್ಕೆ ಧುಮುಕಿದರು. 1942ರಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಪಾಲ್ಗೊಂಡರು. ಅಲ್ಲಿಂದ ಆರಂಭವಾಯಿತು ಅಟಲ್ ರಾಜಕೀಯ ಜೀವನ. 1951ರಲ್ಲಿ ಭಾರತೀಯ ಜನಸಂಘ ಸ್ಥಾಪನೆಯಾದ ನಂತರ ಅಟಲ್ ಬಿಹಾರಿ ವಾಜಪೇಯಿ ಅದರೊಂದಿಗೆ ಗುರುತಿಸಿಕೊಂಡರು. ಹಿಂದುತ್ವ ಜಾಗೃತಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಘಟನೆಯಾದ ಜನಸಂಘದಲ್ಲಿ ವಾಜಪೇಯಿ ಅತ್ಯುನ್ನತ ಜವಾಬ್ದಾರಿಯನ್ನು ವಹಿಸಿಕೊಂಡರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ