ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಆರ್ಥಿಕತೆಗೆ ಬಲ, ಒಂದು ಕೋಟಿ ಹೊಸ ಉದ್ಯೋಗ ಸೃಷ್ಟಿ

ನವದೆಹಲಿ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಸುದ್ದಿಸಂಸ್ಥೆ ಎಎನ್​ಐಗೆ ಸಂದರ್ಶನ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳ ಹಲವು ಆರೋಪಗಳಿಗೆ ಉತ್ತರ ನೀಡಿದ್ದಾರೆ. ಲಿಂಚಿಂಗ್, ಎನ್​ಆರ್​ಸಿ ಸಹಿತ ಹಲವು ಪ್ರಚಲಿತ ವಿದ್ಯಮಾನ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಂದರ್ಶನದ ಪ್ರಮುಖ ಅಂಶಗಳನ್ನು ಅವರದೇ ಮಾತಿನಲ್ಲಿ ಓದಿ…..
ಹೊಸ ಉದ್ಯೋಗ ಸೃಷ್ಟಿ
ಕಳೆದ ಒಂದು ವರ್ಷದಲ್ಲಿ ಒಂದು ಕೋಟಿಗೂ ಅಧಿಕ ಹೊಸ ಉದ್ಯೋಗ ಸೃಷ್ಟಿಯಾಗಿದೆ. ಮುದ್ರಾ ಮತ್ತಿತರ ಯೋಜನೆಯಲ್ಲಿ 12 ಕೋಟಿಗೂ ಅಧಿಕ ಜನರಿಗೆ ಸಾಲ ವಿತರಣೆ ಮಾಡಲಾಗಿದೆ. ಭಾರತದ ಅರ್ಥ ವ್ಯವಸ್ಥೆ ತ್ವರಿತ ಗತಿಯಲ್ಲಿ ಪ್ರಗತಿ ಕಾಣುತ್ತಿದೆ. ರಸ್ತೆ, ರೈಲ್ವೆ, ವಿದ್ಯುತ್ ಉತ್ಪಾದನೆ ಮತ್ತಿತರ ಕ್ಷೇತ್ರಗಳಲ್ಲಿ ದಾಖಲೆಯ ಹೂಡಿಕೆಯಾಗಿದೆ. ವಿದೇಶಿ ಹೂಡಿಕೆಯಲ್ಲೂ ವ್ಯಾಪಕ ಏರಿಕೆ ಕಂಡುಬರುತ್ತಿದೆ. ಇದರ ಪರಿಣಾಮವಾಗಿ ಹೊಸ ಉದ್ಯೋಗ ಸೃಷ್ಟಿಯಲ್ಲೂ ಏರಿಕೆ ಕಂಡುಬರುತ್ತಿದೆ. ಉದ್ಯೋಗಕ್ಕೆ ಸಂಬಂಧಿಸಿದ ಸಂಪೂರ್ಣ ಡೇಟಾ ಇನ್ನೂ ಸಿಕ್ಕಿಲ್ಲ. ಇದನ್ನು ಸಂಗ್ರಹಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಹಳೆಯ ಡೇಟಾಗಳನ್ನು ಇಟ್ಟುಕೊಂಡು ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ.
ಮೈತ್ರಿಕೂಟಕ್ಕೆ ಬಲ
– ಎನ್​ಡಿಎ ಮೈತ್ರಿಕೂಟ ಇನ್ನಷ್ಟು ಬಲಗೊಂಡಿದೆ. ಇತ್ತೀಚೆಗೆ ನಡೆದ ಅವಿಶ್ವಾಸ ಮತ ಮಂಡನೆಗೆ ಸೋಲಾಗಿರುವುದು ಹಾಗೂ ರಾಜ್ಯಸಭೆಯ ಉಪಸಭಾಪತಿ ಚುನಾವಣೆಯಲ್ಲಿ ಎನ್​ಡಿಎ ಗೆಲುವು ಸಾಧಿಸಿರುವುದು ಇದಕ್ಕೆ ಸಾಕ್ಷಿ. ಯಾವ ಮೈತ್ರಿಕೂಟ ಹೆಚ್ಚು ಬಲವಾಗಿದೆ, ಯಾವ ಮೈತ್ರಿಕೂಟ ದುರ್ಬಲವಾಗಿದೆ ಎಂಬುದು ಇದರಿಂದ ತಿಳಿದುಬರುತ್ತದೆ. ವಿಪಕ್ಷಗಳ ಮಹಾಮೈತ್ರಿಕೂಟಕ್ಕೆ ದೇಶದ ಅಭಿವೃದ್ಧಿ ಬದಲು ಕುಟುಂಬ ರಾಜಕಾರಣ ಮುಖ್ಯವಾಗಿದೆ. ಇದು ಚುನಾವಣೆಗೆ ಮುನ್ನ ಒಡೆಯುತ್ತದೆಯೇ ಅಥವಾ ನಂತರ ಒಡೆಯುತ್ತದೆಯೇ ಎಂಬುದು ಪ್ರಶ್ನೆಯಾಗಿದೆ.
ಮೀಸಲಾತಿ ಅಂತ್ಯ ಇಲ್ಲ
ಸಂವಿಧಾನ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯ ಇನ್ನೂ ಈಡೇರಿಲ್ಲ. ಇದನ್ನು ಈಡೇರಿಸುವುದು ನಮ್ಮೆಲ್ಲರ ಕರ್ತವ್ಯ. ಮೀಸಲಾತಿ ಜಾರಿ ಇದಕ್ಕೆ ಪೂರಕವಾಗಿದೆ. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಯಶಸ್ವಿಯಾಗಬೇಕಿದ್ದರೆ ಬಡವರು, ಹಿಂದುಳಿದವರು, ದಲಿತರು, ಬುಡಕಟ್ಟು ಜನರ ಅಭಿವೃದ್ಧಿಯಾಗಬೇಕು. ಪ್ರಮುಖ ಚುನಾವಣೆ ಎದುರಾಗುತ್ತಿರುವ ಸಂದರ್ಭದಲ್ಲಿ ಕೆಲವರು ಬಿಜೆಪಿ ವಿರುದ್ಧ ಅಪಪ್ರಚಾರ ನಡೆಸುತ್ತಾರೆ. ಮೀಸಲಾತಿ ವ್ಯವಸ್ಥೆ ನಿಲ್ಲಿಸಲಾಗುವುದಿಲ್ಲ. ಇದರಲ್ಲಿ ಯಾವುದೇ ಸಂದೇಹ ಬೇಡ.
ರಾಹುಲ್ ಗಾಂಧಿ ಅಪ್ಪುಗೆ
ಸಂಸತ್​ನಲ್ಲಿ ರಾಹುಲ್ ಗಾಂಧಿ ನನ್ನನ್ನು ಅಪ್ಪಿಕೊಂಡಿದ್ದು ಬಾಲಿಶತನ ಹೌದೊ, ಅಲ್ಲವೊ ಎಂಬುದನ್ನು ಜನರು ನಿರ್ಧರಿಸುತ್ತಾರೆ. ಅವರು ಕಣ್ಣು ಮಿಟುಕಿಸಿದ ದೃಶ್ಯ ನೋಡಿದ ಎಲ್ಲರಿಗೂ ಇದು ಅರ್ಥವಾಗುತ್ತದೆ. ನಾನು ಈ ದೇಶಕ್ಕಾಗಿ ಕೆಲಸ ಮಾಡುವ ‘ಕಾಮ್ಾರ್’. ಆದರೆ, ಅವರ (ರಾಹುಲ್ ಗಾಂಧಿ) ಶೈಲಿಯೇ ಬೇರೆ.
ಲಿಂಚಿಂಗ್ ಖಂಡನೀಯ
ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಲಿಂಚಿಂಗ್(ಗುಂಪು ಹಲ್ಲೆ ಮತ್ತು ಹತ್ಯೆ)ನಂಥ ಪ್ರಕರಣಗಳು ಖಂಡನೀಯ. ಸಮಾಜದಲ್ಲಿ ಶಾಂತಿ ಹಾಗೂ ಒಗ್ಗಟ್ಟು ನೆಲೆಸು ವಂತಾಗಲು ನಾಯಕರು ರಾಜಕೀಯ ಚೌಕಟ್ಟಿನಿಂದ ಹೊರಬಂದು ಕೆಲಸಮಾಡಬೇಕು. ಇಂಥ ವಿಚಾರವನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದು ಸರಿಯಲ್ಲ.
2019ರ ಚುನಾವಣೆಯಲ್ಲಿ ಪ್ರಮುಖ ಅಂಶಗಳು
ಅಭಿವೃದ್ಧಿಯೇ ಪ್ರಮುಖ ಕಾರ್ಯಸೂಚಿಯಾಗಿರಲಿದೆ. ತ್ವರಿತ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದರ ಆಧಾರದ ಮೇಲೆ ಮತಯಾಚನೆ, ಪ್ರಚಾರ ನಡೆಸಲಾಗುತ್ತದೆ. 2019ರ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ.
ಎನ್​ಆರ್​ಸಿ ವಿವಾದ
ನಿಜವಾದ ಭಾರತೀಯರು ದೇಶ ತೊರೆಯುವ ಅಗತ್ಯವಿಲ್ಲ. ಕಾನೂನು ಪ್ರಕಾರ ಎಲ್ಲರಿಗೂ ಅವಕಾಶ ನೀಡಲಾಗುವುದು. ಯಾರಿಗೆ ಜನರ ಬೆಂಬಲ ಕಳೆದುಕೊಳ್ಳುವ ಭಯ ಇರುತ್ತದೆಯೋ? ತಮ್ಮ ಮೇಲೆ ನಂಬಿಕೆ ಇರುವುದಿಲ್ಲವೋ ಅವರು ಹಿಂಸಾಚಾರ, ದೇಶ ಒಡೆಯುವ,ಅಂತರ್ಯುದ್ಧದ ಬಗ್ಗೆ ಮಾತನಾಡುತ್ತಾರೆ. ಅವರಿಗೆ (ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ) ಪ್ರಜಾಪ್ರಭುತ್ವದಲ್ಲಿ ನಂಬಿಕೆಯೇ ಇಲ್ಲ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....