• ಮೇ 1998
ರಲ್ಲಿ ಭಾರತ ತನ್ನ ಸೇನಾ
ಬಲವನ್ನು ಎಲ್ಲ ವಿಧದಿಂದಲೂ ಹೆಚ್ಚಿಸಿಕೊಳ್ಳಲು
ತೀರ್ಮಾನಿಸಿ ಆಪರೇಷನ್ ಶಕ್ತಿ ಹೆಸರಿನ
ಅಣು ಬಾಂಬ್ ಪರೀಕ್ಷೆ ನಡೆಸಿತು.
1974 ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ
ಭಾರತವು ಮೊದಲ ಬಾರಿಗೆ ಅಣು
ಸ್ಫೋಟವನ್ನು ಪರೀಕ್ಷಾರ್ಥವಾಗಿ ನಡೆಸಿ ತನ್ನ ಸಾಮರ್ಥ್ಯವನ್ನು
ಜಗತ್ತಿಗೆ ತೋರಿಸಿತ್ತು.
• 1999 ರಲ್ಲಿ
ವಾಜಪೇಯಿ ಪ್ರಧಾನಿ ಯಾದ ಕೇವಲ
ಎರಡೇ ತಿಂಗಳಲ್ಲಿ ರಾಜಸ್ತಾನದ ಫೋಖ್ರಾನ್ ಎಂಬಲ್ಲಿ ಸುಧಾರಿತ ಅಣ್ವಸ್ತ್ರಗಳನ್ನು
ಪರೀಕ್ಷಿಸಲು ಉತ್ಸುಕರಾಗಿದ್ದ ವಿಜ್ಞಾನಿಗಳಿಗೆ ವಾಜಪೇಯಿಯವರಿಂದ ಹಸಿರು ನಿಶಾನೆ ದೊರೆಯಿತು.
ಆದರೆ ನಿಜವಾಗಿ ಸಾಧಿಸಿ ತೋರಿಸುವುದು
ಬಹಳ ಕಷ್ಟಕರವಾಗಿತ್ತು. ದೇಶದ ತುಂಬಾ ಹರಡಿಕೊಂಡಿದ್ದ
ಪಾಕಿಸ್ತಾನಿ ಬೇಹುಗಾರಿಕೆ ವ್ಯಕ್ತಿಗಳು ಹಾಗೂ ಅಮೇರಿಕಾ ಗುಪ್ತಚರ
ಇಲಾಖೆಯ (ಸಿ ಐ ಎ)
ಏಜೆಂಟ್ ಗಳು ವಿಷಯ ಸೋರಿಕೆ
ಮಾಡುವ ಆತಂಕವಿದ್ದೇ ಇತ್ತು. 1974 ರ ನಂತರದ ದಿನಗಳಲ್ಲಿ
ಕೆಲವಾರು ಬಾರಿ ಭಾರತದ ಅಣ್ವಸ್ತ್ರ
ಪರೀಕ್ಷೆಗೆ ಅಮೇರಿಕಾ ಗುಪ್ತಚರ ಇಲಾಖೆಯ
ಏಜೆಂಟ್ ಗಳು ಸುದ್ದಿ ಸೋರಿಕೆ
ಮಾಡಿ ತಣ್ಣೀರೆರಚಿದ್ದರು.
• ಈ ಬಾರಿ ಪರೀಕ್ಷೆಯನ್ನು ಇವರಾರಿಗೂ
ತಿಳಿಯದಂತೆ ನಡೆಸಬೇಕಾಗಿತ್ತು. ಗುಪ್ತಚರ ಇಲಾಖೆಯ ಏಜೆಂಟ್
ಗಳಷ್ಟೇ ಅಲ್ಲದೆ ಅಮೇರಿಕಾ ದೇಶದ
ಉಪಗ್ರಹವೊಂದು ಭಾರತದ ಅಂತರಾಷ್ಟ್ರೀಯ ಗಡಿಗಳ
ಮೇಲೆ ಹಾಗೂ ಸೂಕ್ಷ್ಮ ಪ್ರದೇಶಗಳ
ಮೇಲೆ ಸದಾ ಕಣ್ಗಾವಲಿಟ್ಟಿತ್ತು. ಆ
ಉಪಗ್ರಹ ಎಷ್ಟು ಕರಾರುವಕ್ಕಾಗಿತ್ತು ಎಂದರೆ
ಭಾರತದ ಗಡಿಯಲ್ಲಿ ನಿಂತಿರುವ ಯೋಧನೊಬ್ಬನ ಕೈಗೆ ಕಟ್ಟಿದ ಗಡಿಯಾರದ
ಫೋಟೋ ತೆಗೆದು ಅದರಲ್ಲಿ ಸಮಯವೆಷ್ಟು
ಎಂದು ಹೇಳಬಹುದಿತ್ತಂತೆ.
• ಇಂತಹ
ಬಿಗಿಯಾದ ಹದ್ದಿನ ಕಣ್ಣು ಇರಿಸಿರುವ
ಸಮಯದಲ್ಲಿ ಅಣು ಬಾಂಬ್ ಪರೀಕ್ಷೆ
ನಡೆಸುವುದು ದೊಡ್ಡ ಸಾಹಸವೇ ಆಯಿತು.
ಅಣು ಪರೀಕ್ಷೆ ನಡೆಸಬೇಕಾಗಿದ್ದ ಜಾಗದಲ್ಲಿ
"ನೀರಾವರಿ ಕಾಮಗಾರಿ ನಡೆಯುತ್ತಿದೆ" ಎಂದು
ಬೋರ್ಡು ಹಾಕಲಾಗಿತ್ತಂತೆ. ವಿಜ್ಞಾನಿಗಳಿಗೆ ಹಾಗೂ ಭೂಮಿಯನ್ನು ಅಗೆಯುತ್ತಿದ್ದ
ಭಾರತೀಯ ಸೈನಿಕರಿಗೆ ಸಾರ್ವಜನಿಕ ಇಲಾಖೆಯ ಕಾಮಗಾರಿ ಕಾರ್ಮಿಕರಿಗೆ
ಕೊಡಲಾಗುವಂತಹ ಮಾದರಿಯ ಬಟ್ಟೆ ಕೊಡಲಾಗಿತ್ತಂತೆ.
• ಇನ್ನು
ಯಾವ ಕಾರಣಕ್ಕೂ ಯಾರಿಗೂ ಅನುಮಾನ ಬರದಿರುವಂತೆ
ನೋಡಿಕೊಳ್ಳಲು ಸ್ಫೋಟಕ್ಕೆ ಸಂಬಂಧಿಸಿದ ಕಾರ್ಯವೆಲ್ಲವೂ ಬರೀ ರಾತ್ರಿ ವೇಳೆ
ನಡೆಯುತ್ತಿತ್ತಂತೆ. ಅಣು ಬಾಂಬ್ ಸ್ಫೋಟವಾದ
ವಿಷಯ ತಿಳಿದಿದ್ದು ಖುದ್ದು ವಾಜಪೇಯಿಯವರು ಪ್ರಧಾನಮಂತ್ರಿ
ಗೃಹದಲ್ಲಿ ಪತ್ರಕರ್ತರ ಸಭೆ ಕರೆದು ಫೋಖ್ರಾನ್
ಬಾಂಬ್ ಸ್ಫೋಟದ ಬಗ್ಗೆ ಅಧೀಕೃತವಾಗಿ
ಧೃಡಪಡಿಸಿದಾಗಲೇ.
• ಫೋಖ್ರಾನ್
ಸಮೀಪದಲ್ಲಿದ್ದ ಹಳ್ಳಿಯೊಂದರ ಜನಗಳನ್ನು ಬಾಂಬ್ ಸ್ಫೋಟಕ್ಕೂ ಕೆಲವು
ಗಂಟೆಗಳ ಮುನ್ನ ಮುನ್ನೆಚ್ಚರಿಕಾ ಕ್ರಮವಾಗಿ
ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿತ್ತಂತೆ. ಆದರೆ ಸ್ಥಳಾಂತರಗೊಂಡ ಜನರಿಗೂ
ಕಾರಣವೇನು ಎನ್ನುವುದು ತಿಳಿದಿರಲಿಲ್ಲವಂತೆ. ಸ್ಫೋಟಾನಂತರ ರಷ್ಯಾ ಹಾಗೂ ಫ್ರಾನ್ಸ್
ದೇಶಗಳು ಭಾರತದ ಸೇನೆಯು ಸೇನಾ
ಬಲ ಹೆಚ್ಚಿಸಿಕೊಳ್ಳುವ ಸಲುವಾಗಿ ಅಣ್ವಸ್ತ್ರ ಹೊಂದುವ
ಹಾಗೂ ಅದರ ಶಕ್ತಿಯನ್ನು ಖಾತ್ರಿ
ಪಡಿಸಿಕೊಂಡ ನಿಲುವನ್ನು ಸಮರ್ಥಿಸಿಕೊಂಡರೆ, ಅಮೇರಿಕಾ, ಕೆನಡಾ, ಜಪಾನ್, ಬ್ರಿಟನ್
ಹಾಗೂ ಯೂರೋಪ್ ಒಕ್ಕೂಟದ ದೇಶಗಳು
ಭಾರತದ ನಿಲುವಿಗೆ ಹರಿಹಾಯ್ದವು.
• ಭಾರತದೊಂದಿಗೆ
ಇನ್ನು ಮುಂದೆ ನವೀನ ತಂತ್ರಜ್ಞಾನದ
ಮಾಹಿತಿಗಳನ್ನು ಹಾಗೂ ಯಾವುದೇ ರೀತಿಯ
ಸಂಪನ್ಮೂಲಗಳನ್ನು ಹಂಚಿ ಕೊಳ್ಳದಂತೆ ತಮ್ಮ
ತಮ್ಮಲ್ಲೇ ಒಪ್ಪಂದ ಮಾಡಿಕೊಂಡವು. ಭಾರತದ
ಅಣ್ವಸ್ತ್ರ ಪರೀಕ್ಷೆಯ ವಿಷಯ ಅಂತರಾಷ್ಟ್ರೀಯ ವೇದಿಕೆಯಲ್ಲಿ
ಬಾರೀ ಚರ್ಚೆಗೆ ಗ್ರಾಸವಾಯಿತು. ಹಲವಾರು
ದೇಶಗಳು ಭಾರತದಲ್ಲಿ ಹೂಡಿದ ಬಂಡವಾಳವನ್ನು ಹಿಂತೆಗೆದುಕೊಳ್ಳುವ
ನಿರ್ಧಾರ ಮಾಡಿದವು.
• ಮತ್ತೆ
ಕೆಲವು ರಾಷ್ಟ್ರಗಳು ಭಾರತಕ್ಕೆ ಯಾವ ಸಹಾಯಧನವನ್ನು ಕೊಡದಂತೆ
ವಿಶ್ವಸಂಸ್ಥೆಯಲ್ಲಿ ದೂರಿ ಭಾರತದ ಮೇಲೆ
ಆರ್ಥಿಕ ನಿರ್ಬಂಧ ಹೇರಿಸಿದರು. ವಾಜಪೇಯಿ
ನೇತೃತ್ವದಲ್ಲಿ ಇಂತಹ ಕ್ಲಿಷ್ಟ ಪರಿಸ್ತಿತಿಯನ್ನು
ಬಗೆಹರಿಸಿಕೊಳ್ಳಲಾಯಿತು. ವಾಜಪೇಯಿ ಮೇಲೆ ಜನರಿಗಿದ್ದ
ನಂಬಿಕೆ ಇಮ್ಮಡಿಯಾಗಲು ಇದೂ ಒಂದು ಕಾರಣವಾಯಿತು.
• ಆರ್ಥಿಕ
ಸಂಕಷ್ಟಗಳಲ್ಲಿಯೂ ಯಶಸ್ವಿಯಾಗಿ ದೇಶ ಮುನ್ನಡೆಸಿದ್ದನ್ನು ಅಂತರಾಷ್ಟ್ರೀಯ
ನಾಯಕರೂ ಕೊಂಡಾಡಿದರು, ಒಟ್ಟಿನಲ್ಲಿ ವಾಜಪೇಯಿಯವರ ರಾಜಕೀಯ ಚತುರತೆಯನ್ನು, ಇಚ್ಚಾ
ಶಕ್ತಿಯನ್ನು, ಆಡಳಿತ ವೈಖರಿಯನ್ನು ಅಂತರಾಷ್ಟ್ರೀಯ
ಮಟ್ಟದಲ್ಲಿ ಪಸರಿಸಲು ಫೋಖ್ರಾನ್ ಸ್ಫೋಟವೂ
ಮುಖ್ಯ ಪಾತ್ರ ವಹಿಸಿತು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ