ವಿಷಯಕ್ಕೆ ಹೋಗಿ

Post title**ಜ್ಞಾನ ಕಾರಂಜಿ**::: ರಫೆಲ್ ಡೀಲ್ ರದ್ದಾಗಿದ್ದೇಕೆ?

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ರಫೆಲ್ ಯುದ್ಧವಿಮಾನ ಖರೀದಿ ಒಪ್ಪಂದವನ್ನು ಎನ್​ಡಿಎ ಸರ್ಕಾರ ರದ್ದುಗೊಳಿಸಲು ಕಾರಣವೇನು ಎಂಬುದನ್ನು ರಾಷ್ಟ್ರೀಯ ಮಾಧ್ಯಮವೊಂದು ಬಯಲು ಮಾಡಿದೆ.
ಫ್ರಾನ್ಸ್​ನ ಡಸಲ್ಟ್ ಏವಿಯೇಷನ್ಸ್ ಕಂಪನಿ ಉತ್ಪಾದಿಸುವ 126 ರಫೆಲ್ ಯುದ್ಧವಿಮಾನ ಖರೀದಿಗೆ ಯುಪಿಎ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು. ಆದರೆ 2015ರಲ್ಲಿ ಈ ಒಪ್ಪಂದವನ್ನು ಎನ್​ಡಿಎ ಸರ್ಕಾರ ರದ್ದುಗೊಳಿಸಿತ್ತು. ಬದಲಿಗೆ ಕಾರ್ಯಾಚರಣೆಗೆ ಸಿದ್ಧಗೊಂಡಿರುವ 36 ಯುದ್ಧ ವಿಮಾನಗಳನ್ನು ಮಾತ್ರ ಖರೀದಿಸಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿತ್ತು. ಇದು ಭಾರಿ ಚರ್ಚೆಗೆ ಕಾರಣವಾಗಿತ್ತು.
ಕೇಂದ್ರ ಸರ್ಕಾರದ ಟಿಪ್ಪಣಿ ಪ್ರಕಾರ, ಯುಪಿಎ ಸರ್ಕಾರ ಕರೆದಿದ್ದ ಟೆಂಡರ್​ನಲ್ಲಿ ಅತಿ ಕಡಿಮೆ ಬಿಡ್ ಮಾಡಿರುವ ಕಾರಣಕ್ಕೆ ಡಸಲ್ಟ್ ಏವಿಯೇಷನ್ಸ್​ಗೆ ಯುದ್ಧವಿಮಾನ ಪೂರೈಕೆ ಗುತ್ತಿಗೆ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೂಲದ ಎಚ್​ಎಎಲ್​ನಲ್ಲಿ ಹಲವು ವಿಮಾನಗಳು ತಯಾರಾಗುತ್ತಿದ್ದು, ಡಸಲ್ಟ್ ಏವಿಯೇಷನ್ಸ್ ಕಂಪನಿಗಿಂತಲೂ ಕಡಿಮೆ ವೆಚ್ಚದಲ್ಲಿ ಯುದ್ಧ ವಿಮಾನಗಳನ್ನು ಉತ್ಪಾದಿಸಬಹುದಾಗಿದೆ. ಇದರಿಂದ ಮೇಕ್ ಇನ್ ಇಂಡಿಯಾಕ್ಕೆ ಒತ್ತು ಸಿಗುತ್ತದೆ ಎಂಬುದು ಎನ್​ಡಿಎ ಸರ್ಕಾರದ ಲೆಕ್ಕಾಚಾರ ಎನ್ನಲಾಗಿದೆ.
ಪ್ರಸ್ತುತ ನಿವ್ವಳ ಮೌಲ್ಯದ ಆಧಾರದಲ್ಲಿ ರಫೆಲ್ ಯುದ್ಧ ವಿಮಾನಗಳನ್ನು ಖರೀದಿ ಮಾಡಲು 2011ರ ನವೆಂಬರ್​ನ ಒಪ್ಪಂದದಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ಇಂದು ಈ ವೆಚ್ಚ ಹಾಗೂ ಸನ್ನಿವೇಶದಲ್ಲಿ ಸಾಕಷ್ಟು ಬದಲಾವಣೆ ಆಗಿರುವ ಕಾರಣ, ರಫೆಲ್ ಯುದ್ಧ ವಿಮಾನ ಖರೀದಿ ದುಬಾರಿಯಾಗಲಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಈ ಮಧ್ಯೆ ಇಎಡಿಎಸ್ ಕಂಪನಿ ಉತ್ಪಾದಿಸುವ ಯುರೋಫೈಟರ್ ವಿಮಾನ ರಫೆಲ್​ಗೆ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಿದೆ. ಯುರೋಫೈಟರ್​ನ್ನು ಎಚ್​ಎಎಲ್ ಸಹಾಯದಿಂದ ಭಾರತದಲ್ಲಿ ಉತ್ಪಾದಿಸಿದರೆ ರಫೆಲ್​ಗಿಂತ ಕಡಿಮೆ ವೆಚ್ಚದಲ್ಲಿ ತಯಾರಿಸಬಹುದಾಗಿದೆ.
ರಫೆಲ್ ಡೀಲ್ ಯಾವಾಗ ಏನಾಗಿತ್ತು?
2011 ಏಪ್ರಿಲ್ – 126 ಯುದ್ಧ ವಿಮಾನ ಖರೀದಿಗಾಗಿ ಡಸಲ್ಟ್​ನ ರಫೆಲ್, ಯುರೋಫೈಟರ್ ಟೈಪೂನ್​ನ್ನು ಆಯ್ಕೆ ಮಾಡಿದ ಭಾರತೀಯ ವಾಯುಪಡೆ
2012 ಜನವರಿ – ಅತಿ ಕಡಿಮೆ ಮೊತ್ತ ನಮೂದಿಸಿದ್ದ ಡಸಲ್ಟ್​ನ ರಫೇಲ್​ಗೆ ಟೆಂಡರ್. ಆದರೆ ವಿಮಾನ ಉತ್ಪಾದನೆಗೆ ಸಂಬಂಧಿಸಿದಂತೆ ಕಂಪನಿ ಹಾಗೂ ಅಂದಿನ ಯುಪಿಎ ಸರ್ಕಾರ ನಡುವೆ ಭಿನ್ನಮತ
2014 ಏಪ್ರಿಲ್ – ಶೇ. 10 ರಿಯಾಯಿತಿ ನೀಡುವುದಾಗಿ ಯುರೋಫೈಟರ್ ಘೋಷಣೆ. ಆದರೆ ಇದನ್ನು ಕಡೆಗಣಿಸಿದ ಯುಪಿಎ ಸರ್ಕಾರ
2015 ಜೂನ್ – ಯುಪಿಎ ಸರ್ಕಾರದ ಒಪ್ಪಂದವನ್ನು ರದ್ದುಗೊಳಿಸಿದ ಎನ್​ಡಿಎ ಸರ್ಕಾರ
2016 ಸೆಪ್ಟೆಂಬರ್ – ಹೊಸ ರಫೆಲ್ ಡೀಲ್​ಗೆ ಸಹಿ. 62 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕಾರ್ಯಾಚರಣೆಗೆ ಸಿದ್ಧಗೊಂಡಿರುವ 36 ಯುದ್ಧವಿಮಾನ ಖರೀದಿದೆ ಒಪ್ಪಂದ
ರದ್ದತಿಗೆ ಎನ್​ಡಿಎ ಕೊಟ್ಟ ಕಾರಣಗಳು
?126 ಯುದ್ಧವಿಮಾನಗಳ ನಿರ್ವಹಣೆ ಸಹಿತ ಎಲ್ಲ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಕಂಪನಿ ಹಿಂದೇಟು ಹಾಕಿರುವುದು ?ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಂಪನಿ ವಾರಂಟಿ ನೀಡಲು ಸಿದ್ಧವಿಲ್ಲದಿರುವುದು. ಒಟ್ಟು ವ್ಯವಹಾರದ ಮೊತ್ತದ ಶೇ. 5ನ್ನು ಬಾಂಡ್ ರೂಪದಲ್ಲಿ ಗ್ಯಾರೆಂಟಿಯಾಗಿ ನೀಡಬೇಕು ಎಂಬ ಕೇಂದ್ರ ಸರ್ಕಾರದ ಬೇಡಿಕೆಯನ್ನು ಕಂಪನಿ ತಿರಸ್ಕರಿಸಿತ್ತು ?ಭಾರತದಲ್ಲಿ ರಫೆಲ್​ಯುುದ್ಧ ವಿಮಾನ ಉತ್ಪಾದನೆ ಮಾಡಲು ಟೆಕ್ನೊ ಕಮರ್ಷಿಯಲ್ ಪರವಾನಗಿ ನೀಡಲು ಸಮಯಮಿತಿ ನಿಗದಿ ಮಾಡದಿರುವುದು ?ಎಚ್​ಎಎಲ್ ಸಹಭಾಗಿತ್ವದಲ್ಲಿ ರಫೆಲ್ ಉತ್ಪಾದಿಸಲು ಒಪ್ಪಂದ ವೇಳೆ ಉಲ್ಲೇಖಿಸಲಾಗಿದ್ದ ಸಮಯಕ್ಕಿಂತಲೂ 2.7 ಪಟ್ಟು ಹೆಚ್ಚಿನ ಸಮಯ ಬೇಕಾಗಿತ್ತು ?ಇದರಿಂದ ವಿಮಾನದ ಉತ್ಪಾದನೆ ವೆಚ್ಚದಲ್ಲೂ ಏರಿಕೆಯಾಗುತ್ತದೆ. ಆಗ ಯುರೋಫೈಟರ್​ಗಿಂತಲೂ ರಫೆಲ್ ದುಬಾರಿಯಾಗುತ್ತದೆ.
ಮೋದಿ ಸರ್ಕಾರದ ವಿರುದ್ಧ 30 ದಿನ ಕಾಂಗ್ರೆಸ್ ಪ್ರತಿಭಟನೆ
ರಫೆಲ್ ಖರೀದಿ ಹಗರಣ ಸೇರಿ ಅನೇಕ ಹಗರಣಗಳನ್ನು ಮಾಡಿರುವ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಒಂದು ತಿಂಗಳು ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಶನಿವಾರ ನಿರ್ಧರಿಸಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು ಹಾಗೂ ರಾಜ್ಯ ಘಟಕದ ಅಧ್ಯಕ್ಷರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಫೆಲ್ ಒಪ್ಪಂದದ ಬಗ್ಗೆ ಜಂಟಿ ಸಂಸದೀಯ ಸಮಿತಿಯಿಂದ ತನಿಖೆಯಾಬೇಕೆಂಬ ಆಗ್ರಹ ನಮ್ಮದು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.
ಕಾಂಗ್ರೆಸ್ ಟಾಸ್ಕ್​ಫೋರ್ಸ್
ಹಿರಿಯ ಕಾಂಗ್ರೆಸ್ ಮುಖಂಡ ಜೈಪಾಲ್ ರೆಡ್ಡಿ ನೇತೃತ್ವದಲ್ಲಿ ಆರು ಸದಸ್ಯರ ಟಾಸ್ಕ್ ಫೋರ್ಸನ್ನು ರಾಹುಲ್ ಗಾಂಧಿ ರಚಿಸಿದ್ದಾರೆ. ರಫೆಲ್ ಒಪ್ಪಂದದಲ್ಲಿನ ಹಗರಣವನ್ನು ಬಯಲಿಗೆಳೆಯುವ ಕೆಲಸ ಇವರಿಗೆ ನೀಡಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....