ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಆದೇಶ ಸಂಧಿ

ಇದುವರೆಗೆ ಸ್ವರದ ಮುಂದೆ ಸ್ವರ ಬಂದರೆ ಲೋಪಸಂಧಿಯೋ, ಆಗಮಸಂಧಿಯೋ ಆಗುವ ವಿಚಾರ ನೋಡಿದೆವು.  ಈಗ ಸ್ವರದ ಮುಂದೆ ವ್ಯಂಜನ ಬಂದಾಗ ಅಥವಾ ವ್ಯಂಜನದ ಮುಂದೆ ವ್ಯಂಜನ ಬಂದಾಗ ಏನೇನು ಸಂಧಿಕಾರ‍್ಯ ನಡೆಯುವುದೆಂಬುದನ್ನು ತಿಳಿಯೋಣ.
ಮಳೆ + ಕಾಲ = ಮಳೆಗಾಲ (ಮಳೆ + ಗ್‌ಆಲ)
ಚಳಿ + ಕಾಲ = ಚಳಿಗಾಲ (ಚಳಿ +ಗ್‌ಆಲ)
ಬೆಟ್ಟ + ತಾವರೆ = ಬೆಟ್ಟದಾವರೆ (ಬೆಟ್ಟ + ದ್‌ಆವರೆ)
ಕಣ್ + ಕೆಟ್ಟು = ಕಂಗೆಟ್ಟು (ಕಂ + ಗ್‌ಎಟ್ಟು)
ಕಣ್ + ಪನಿ = ಕಂಬನಿ (ಕಂ + ಬ್‌ಅನಿ)
ಮೇಲಿನ ಉದಾಹರಣೆಗಳಲ್ಲಿರುವ, ಮಳೆ + ಕಾಲ ಎಂಬೆರಡು ಶಬ್ದಗಳಲ್ಲಿ ೨ ನೆಯ ಪದ [ಉತ್ತರಪದ] ದ ಮೊದಲನೆಯ ಕ ಕಾರಕ್ಕೆ ಗ ಕಾರ ಬಂದಿದೆ.  ಚಳಿಗಾಲ ಎಂಬಲ್ಲಿಯೂ ಇದರಂತೆಯೇ ಕಕಾರಕ್ಕೆ ಗಕಾರ ಬಂದಿದೆ.  ಬೆಟ್ಟ + ತಾವರೆ ಎಂಬೆರಡು ಪದಗಳಲ್ಲಿ ೨ ನೆಯ ಪದದ ಮೊದಲಕ್ಷರವಾದ ತ ಕಾರಕ್ಕೆ ದ ಕಾರ ಬಂದಿದೆ.  [ಅಂದರೆ ತ್ ಎಂಬ ವ್ಯಂಜನಕ್ಕೆ ದ್ ಎಂಬ ವ್ಯಂಜನ ಬಂದಿದೆ] ಕಣ್ + ಪನಿ ಎಂಬಲ್ಲಿ ಪ ಕಾರಕ್ಕೆ ಬ ಕಾರ ಬಂದಿದೆ.  ಹೀಗೆ ಸಂಧಿ ಯಾಗುವಾಗ ಒಂದು ಅಕ್ಷರದ ಸ್ಥಳದಲ್ಲಿ ಬೇರೊಂದು ಅಕ್ಷರ ಬರುವುದೇ ಆದೇಶವೆನಿಸುವುದು.   ಕನ್ನಡ ಸಂಧಿಗಳಲ್ಲಿ ಈ ಆದೇಶವಾಗುವಿಕೆಯು ಉತ್ತರ ಪದದ ಆದಿಯಲ್ಲಿರುವ ವ್ಯಂಜನಕ್ಕೆ ಮಾತ್ರ ಎಂಬುದನ್ನು ಮುಖ್ಯವಾಗಿ ಗಮನದಲ್ಲಿಟ್ಟಿರಬೇಕು.
(೧೮) ಸಂಧಿಯಾಗುವಾಗ ಒಂದು ಅಕ್ಷರದ ಸ್ಥಾನದಲ್ಲಿ (ಸ್ಥಳದಲ್ಲಿ) ಬೇರೊಂದು ಅಕ್ಷರವು ಬರುವುದೇ ಆದೇಶಸಂಧಿಯೆನಿಸುವುದು.
ಹಾಗಾದರೆ ಎಲ್ಲೆಲ್ಲಿ ಈ ಆದೇಶಸಂಧಿಯಾಗುವುದು? ಯಾವ ಅಕ್ಷರಕ್ಕೆ ಯಾವ ಅಕ್ಷರ ಆದೇಶವಾಗಿ ಬರುವುದು? ಎಂಬುದನ್ನು ವಿವರವಾಗಿ ತಿಳಿಯೋಣ.
(i) ಸಮಾಸದಲ್ಲಿ ಉತ್ತರಪದದ ಆದಿಯಲ್ಲಿರುವ ಕ ತ ಪ ವ್ಯಂಜನಗಳಿಗೆ ಕ್ರಮವಾಗಿ ಗ ದ ಬ ವ್ಯಂಜನಗಳು ಆದೇಶವಾಗಿ ಬರುವುವು.
ಉದಾಹರಣೆಗೆ:-
ಹುಲ್ಲು + ಕಾವಲು
=
*ಹುಲ್ಲು + ಗ್ ಆವಲು
=
ಹುಲ್ಲುಗಾವಲು
(ಕಕಾರಕ್ಕೆ ಗಕಾರಾದೇಶ)
ಹಳ + ಕನ್ನಡ
=
ಹಳ + ಗ್ ಅನ್ನಡ
=
ಹಳಗನ್ನಡ
(ಕಕಾರಕ್ಕೆ ಗಕಾರಾದೇಶ)
ಕಳೆ + ಕೂಡಿ
=
ಕಳೆ + ಗ್ ಊಡಿ
=
ಕಳೆಗೂಡಿ
(ಕಕಾರಕ್ಕೆ ಗಕಾರಾದೇಶ)
ಎಳೆ + ಕರು
=
ಎಳೆ + ಗ್ ಅರು
=
ಎಳೆಗರು
(ಕಕಾರಕ್ಕೆ ಗಕಾರಾದೇಶ)
ಮನೆ + ಕೆಲಸ
=
ಮನೆ + ಗ್ ಎಲಸ
=
ಮನೆಗೆಲಸ
(ಕಕಾರಕ್ಕೆ ಗಕಾರಾದೇಶ)
ಮೈ + ತೊಳೆ
=
ಮೈ + ದ್ ಒಳೆ
=
ಮೈದೊಳೆ
(ತಕಾರಕ್ಕೆ ದಕಾರಾದೇಶ)
ಮೇರೆ + ತಪ್ಪು
=
ಮೇರೆ + ದ್ ಅಪ್ಪು
=
ಮೇರೆದಪ್ಪು
(ತಕಾರಕ್ಕೆ ದಕಾರಾದೇಶ)
ಕಣ್ + ಪನಿ
=
ಕಣ್ + ಬ್ ಅನಿ
=
ಕಂಬನಿ
(ಪಕಾರಕ್ಕೆ ಬಕಾರಾದೇಶ)
ಬೆನ್ + ಪತ್ತು
=
ಬೆನ್ + ಬ್ ಅತ್ತು
=
(ಬೆಂಬತ್ತು)
(ಪಕಾರಕ್ಕೆ ಬಕಾರಾದೇಶ)
ಕೆಲವು ಕಡೆ ಈ ಆದೇಶಗಳು ಬಾರದೆ ಇರುವುದೂ ಉಂಟು
ಮನೆ + ಕಟ್ಟು     =        ಮನೆಕಟ್ಟು
ತಲೆ + ಕಟ್ಟು      =        ತಲೆಕಟ್ಟು
(ii) ಸಮಾಸದಲ್ಲಿ ಉತ್ತರಪದದ ಆದಿಯಲ್ಲಿರುವ ಪ ಬ ಮ ವ್ಯಂಜನಗಳಿಗೆ ವ ಕಾರವು ಆದೇಶವಾಗಿ ಬರುವುದು
ಉದಾಹರಣೆಗೆ:-
ನೀರ್ + ಪೊನಲ್
=
ನೀರ್ + ವ್ ಒನಲ್ = ನೀರ‍್ವೊನಲ್
(ಪಕಾರಕ್ಕೆ ವಕಾರಾದೇಶ)
ಎಳ + ಪೆರೆ
=
ಎಳ + ವ್ ಎರೆ = ಎಳವರೆ
(ಪಕಾರಕ್ಕೆ ವಕಾರಾದೇಶ)
ಬೆಮರ್ + ಪನಿ
=
ಬೆಮರ್ + ವ್ ಅನಿ = ಬೆಮರ್ವನಿ
(ಪಕಾರಕ್ಕೆ ವಕಾರಾದೇಶ)
ಬೇರ್ + ಬೆರಸಿ
=
ಬೇರ್ + ವ್ ಎರಸಿ = ಬೇರ‍್ವೆರಸಿ
(ಬಕಾರಕ್ಕೆ ವಕಾರಾದೇಶ)
ಕಡು + ಬೆಳ್ಪು
=
ಕಡು + ವ್ ಎಳ್ಪು =  ಕಡುವೆಳ್ಪು
(ಬಕಾರಕ್ಕೆ ವಕಾರಾದೇಶ)
ಎಳ + ಬಳ್ಳಿ
=
ಎಳ + ವ್ ಅಳ್ಳಿ = ಎಳವಳ್ಳಿ
(ಬಕಾರಕ್ಕೆ ವಕಾರಾದೇಶ)
ಮೆಲ್ + ಮಾತು
=
ಮೆಲ್ + ವ್ ಆತು = ಮೆಲ್ವಾತು
(ಮಕಾರಕ್ಕೆ ವಕಾರಾದೇಶ)
ನೆಲೆ + ಮನೆ
=
ನೆಲೆ + ವ್ ಅನೆ = ನೆಲೆವನೆ
(ಮಕಾರಕ್ಕೆ ವಕಾರಾದೇಶ)
ಇದರ ಹಾಗೆ…….ಕಿಸುವಣ್, ಎಸರ‍್ವೊಯ್ದು, ಚೆಲ್ವೆಳಕು, ಕೆನೆವಾಲ್, ಕೈವಿಡಿ, ನೆರೆವೀದಿ, ಪೊರೆವೀಡು ಇತ್ಯಾದಿಗಳಲ್ಲಿ ವಕಾರಾದೇಶ ಬಂದಿರುವುದನ್ನು ಗಮನಿಸಿರಿ.
ಈ ಆದೇಶವು ಕೆಲವು ಕಡೆ ಬರುವುದಿಲ್ಲ.  ಅದಕ್ಕೆ ಉದಾಹರಣೆ:-
ಕಣ್ + ಬೇಟ = ಕಣ್ಬೇಟ (ಕಣ್ವೇಟ ಆಗುವುದಿಲ್ಲ)
ಕಿಳ್ + ಪೊಡೆ = ಕಿಳ್ಪೊಡೆ (ಕಿಳ್ವೊಡೆ ಆಗುವುದಿಲ್ಲ)
ಪಾಳ್ + ಮನೆ = ಪಾಳ್ಮನೆ (ಪಾಳ್ವನೆ ಆಗುವುದಿಲ್ಲ)
(iii) ಸಮಾಸದಲ್ಲಿ ಉತ್ತರಪದದ ಆದಿಯಲ್ಲಿರುವ ಸಕಾರಕ್ಕೆ ಸಾಮಾನ್ಯವಾಗಿ ಕೆಲವು ಕಡೆ ಚಕಾರವೂ, ಕೆಲವು ಕಡೆ ಜಕಾರವೂ, ಕೆಲವು ಕಡೆ ಛಕಾರವೂ ಆದೇಶವಾಗಿ ಬರುವುದುಂಟು. ಆದರೆ ಪೂರ್ವಪದದ ಕೊನೆಯಲ್ಲಿ ಯ್, ಲ್ ಗಳು ಇರಬಾರದು.
ಉದಾಹರಣೆಗೆ:-
(೧) ಸಕಾರಕ್ಕೆ ಚಕಾರ ಬರುವುದಕ್ಕೆ__ಇನ್ + ಸರ = ಇನ್ + ಚ್ ಅರ = ಇಂಚರ
ನುಣ್ + ಸರ = ನುಣ್ + ಚ್ ಅರ = ನುಣ್ಚರ
(೨) ಸಕಾರಕ್ಕೆ ಜಕಾರ ಬರುವುದಕ್ಕೆ__ಮುನ್ + ಸೆರಂಗು = ಮುನ್ + ಜ್ ಎರಂಗು = ಮುಂಜೆರಂಗು
ಮುನ್ + ಸೊಡರ್ = ಮುನ್ + ಜ್ ಒಡರ್ = ಮುಂಜೊಡರ್
ತಣ್ + ಸೊಡರ್ = ತಣ್ + ಜ್ ಒಡರ್ = ತಣ್ಜೊಡರ್
(೩) ಸಕಾರಕ್ಕೆ ಛಕಾರ ಬರುವುದಕ್ಕೆ__
ಇರ್ + ಸಾಸಿರ = ಇರ್ + ಛ್ ಆಸಿರ = ಇರ್ಚ್ಛಾಸಿರ
ಪದಿನೆಣ್ + ಸಾಸಿರ = ಪದಿನೆಣ್ + ಛ್ ಆಸಿರ = ಪದಿನೆಣ್ಛಾಸಿರ
ನೂರ್ + ಸಾಸಿರ = ನೂರ್ + ಛ್ ಆಸಿರ = ನೂರ್ಛಾಸಿರ
ಕೆಲವು ಕಡೆ ಈ ಸಕಾರಕ್ಕೆ ಯಾವ ಆದೇಶಗಳೂ ಬಾರದಿರುವುದುಂಟು.
ಬಾಯ್ + ಸವಿ = ಬಾಯ್ಸವಿ, ಬೆಳ್ಸರಿ, ಕಣ್ಸೋಲ, ಕಣ್ಸ್‌ವಿ, ಮೆಲ್ಸರ, ಮೆಯ್ಸವಿ, ಬಲ್ಸೋನೆ.

[1] ‘ಕಾ’ ಎಂಬುದು ‘ರಕ್ಷಣೆ ಮಾಡು’ ಎಂಬರ್ಥದಲ್ಲಿ ಏಕಾಕ್ಷರಧಾತು.  ಹೊಸಗನ್ನಡದಲ್ಲಿ ‘ಕಾ’ ಧಾತು ‘ಕಾಯ್’ ಆಗುವುದೆಂದು ಕೆಲವರು ಒಪ್ಪುತ್ತಾರೆ.
[2] ಮೀ ಎಂಬುದೂ ಕೂಡ ಸ್ನಾನಮಾಡು ಎಂಬರ್ಥದ ಕನ್ನಡ ಏಕಾಕ್ಷರ ಧಾತು.
[3] ಮೇ ಎಂಬುದೂ ಕೂಡ ಪಶುಗಳ ಆಹಾರ ಭಕ್ಷಣೆಯ ಅರ್ಥದಲ್ಲಿ ಏಕಾಕ್ಷರ ಧಾತುವಾಗಿದೆ.
[4] ಆ ಶಬ್ದವೆಂದರೆ, ಕೆಲವು ಕಡೆ ಅವನು, ಅವಳು, ಅದು ಎಂಬ ಸರ್ವನಾಮಗಳಿಗೆ ಆ ಎಂಬುದು ಆದೇಶವಾಗಿ ಬರುವುದು.  ಹಾಗೆ ಆದೇಶವಾಗಿ ಬಂದ ಆಕಾರವೇ ಆ ಶಬ್ದವೆನಿಸುವುದು.  ಉದಾ.:-ಅವನು+ಗಂಡಸು= ಆ ಗಂಡಸು; ಅವಳು+ಹೆಂಗಸು=ಆ ಹೆಂಗಸು; ಅದು+ಕಲ್ಲು= ಆ ಕಲ್ಲು ಇದರಂತೆ ಕೆಲವು ಕಡೆ – ಇವನು+ಗಂಡಸು=ಈ ಗಂಡಸು; ಇವಳು+ಹೆಂಗಸು=ಈ ಹೆಂಗಸು; ಇದು+ಕಲ್ಲು=ಈ ಕಲ್ಲು – ಇತ್ಯಾದಿ ಕಡೆಗಳಲ್ಲಿ ಇವನು, ಇವಳು, ಇದು ಎಂಬುದಕ್ಕೆ ಈ ಆದೇಶವಾಗಿ ಬಂದರೆ ಇದನ್ನು ಈ ಶಬ್ದವೆನ್ನುವರು
[5] ಎರಡು ಪದಗಳಲ್ಲಿ ಮೊದಲನೆಯ ಪದ ಪೂರ್ವಪದ; ಎರಡನೆಯ ಪದ ಉತ್ತರಪದ.  ಸಮಾಸದಲ್ಲಿ ಹೀಗೆ ಹೇಳುವುದು ವಾಡಿಕೆ.  ಮಳೆಯ + ಕಾಲ-ಎಂಬೆರಡು ಪದಗಳಲ್ಲಿ ಮಳೆಯ ಎಂಬುದು ಪೂರ್ವಪದ; ಕಾಲ ಎಂಬುದು ಉತ್ತರ ಪದ ಹೀಗೆ ತಿಳಿಯಬೇಕು
[6] ಸಮಾಸ ಎಂದರೇನು? ಎಂಬುದನ್ನು ಮುಂದೆ ಸಮಾಸ ಪ್ರಕರಣ ಎಂಬ ಹೆಸರಿನ ಭಾಗದಲ್ಲಿ ವಿವರಿಸಿದೆ.  ಆಗ ಸ್ಪಷ್ಟವಾಗಿ ತಿಳಿದುಬರುವುದು.  ಈಗ ಸಂಧಿಕಾರ‍್ಯಗಳನ್ನಷ್ಟು ಗಮನಿಸಿದರೆ ಸಾಕು.
* ಇಲ್ಲಿ ಹುಲ್ಲು + ಕಾವಲು-ಎಂಬಲ್ಲಿ ಹುಲ್ಲು + ಕ್ + ಆವಲು = ಹುಲ್ಲುಗ್‌ಆವಲು = ಹುಲ್ಲುಗಾವಲು ಎಂದು ಕ್ ವ್ಯಂಜನಕ್ಕೆ ಗ್ ವ್ಯಂಜನ ಬಂದಿದೆ ಎಂದು ತಿಳಿಯಬೇಕು.  ಇದರಂತೆ ಉಳಿದವುಗಳನ್ನೂ ತಿಳಿಯಬೇಕು.
[7] ಪ ಬ ಮ ವ್ಯಂಜನಗಳಿಗೆ ಎಂದರೆ ಪ್, ಬ್, ಮ್‌ಗಳಿಗೆ ಎಂದೂ, ವಕಾರವೆಂದರೆ ವ್ ಎಂಬ ವ್ಯಂಜನವೆಂದೂ ತಿಳಿಯಬೇಕು.  ಉಚ್ಚಾರಣೆಯ ಸೌಲಭ್ಯ ದೃಷ್ಟಿಯಿಂದ ಪ ಬ ಮ ವ-ಇತ್ಯಾದಿ ಬರೆದಿದೆ.  ಆದೇಶ ಬರುವುದು ಕೇವಲ ವ್ಯಂಜನಾಕ್ಷರಕ್ಕೇ ಎಂದು ಎಲ್ಲ ಕಡೆಗೂ ತಿಳಿಯಬೇಕು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....