ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಪಾಠ ನಾಸ್ತಿ ಪಠ್ಯೇತರವೇ ಜಾಸ್ತಿ!,

ಸರ್ಕಾರಿ ಶಾಲೆಗಳ ಶಿಕ್ಷಕರು ವಾರ್ಷಿಕ ಶೈಕ್ಷಣಿಕ ಅವಧಿಯಲ್ಲಿ ಕೇವಲ ಶೇ.19.1 ಸಮಯವನ್ನು ವಿದ್ಯಾರ್ಥಿಗಳ ಕಲಿಕೆಗೆ ಮೀಸಲಿಡುತ್ತಿದ್ದಾರೆ. ಉಳಿದ ಶೇ.81 ಅವಧಿ ಸರ್ಕಾರದ ವಿವಿಧ ಕೆಲಸದಲ್ಲೇ ಕಳೆದುಹೋಗುತ್ತಿದೆ ಎಂಬ ಆತಂಕಕಾರಿ ವಿಷಯವನ್ನು ಶೈಕ್ಷಣಿಕ ಯೋಜನೆ ಹಾಗೂ ಆಡಳಿತದ ರಾಷ್ಟ್ರೀಯ ಸಂಸ್ಥೆ(ಎನ್​ಐಇಪಿಎ)ಸಮೀಕ್ಷಾ ವರದಿ ಹೊರಗೆಡವಿದೆ.
ಪಾಠ ಮಾಡಲೇ ಬಿಡುವುದಿಲ್ಲ!
ಶೈಕ್ಷಣಿಕ ವರ್ಷ ಆರಂಭದಿಂದ ಸೆಪ್ಟೆಂಬರ್​ವರೆಗೆ ಪಠ್ಯಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆ ಹಾಗೂ ಇತರ ಸರ್ಕಾರಿ ಕೆಲಸಗಳಲ್ಲಿಯೇ ಶಿಕ್ಷಕರು ಹೈರಾಣಾಗಿ ಹೋಗುತ್ತಾರೆ. ಉಳಿದ ದಿನಗಳಲ್ಲಿಯೂ ಸರ್ಕಾರ ಹೇಳಿದ ಇತರ ಕೆಲಸಗಳನ್ನು ಮಾಡಬೇಕಾಗುತ್ತದೆ. ಸರ್ಕಾರದ ವಿವಿಧ ಕೆಲಸಗಳನ್ನು ಮಾಡುವುದು ಹೇಗೆಂದು ಹೇಳಿಕೊಡುತ್ತಾರೆ. ಆದರೆ ಪಠ್ಯದ ಗುಣಮಟ್ಟ ಏರಿಕೆಗೆ ಯಾವುದೇ ಮಾರ್ಗಸೂಚಿಗಳು ಬರುವುದಿಲ್ಲ. ಇದರಿಂದ ಸರ್ಕಾರಿ ಶಾಲೆಗಳ ಗುಣಮಟ್ಟ ಕುಸಿಯುತ್ತಿದೆ ಎಂಬ ಶಿಕ್ಷಕರ ಅಭಿಪ್ರಾಯವೂ ವರದಿಯಲ್ಲಿ ಉಲ್ಲೇಖವಾಗಿದೆ.
ಏನೇನು ಶಿಕ್ಷಣೇತರ ಕೆಲಸ?
# ಚುನಾವಣೆ ಅಧಿಕಾರಿ, ಮತಚೀಟಿ ನೋಂದಣಿಗೆ ಸಹಕಾರ
# ಬಿಸಿಯೂಟ ಹಾಗೂ ಕ್ಷೀರಭಾಗ್ಯ ಉಸ್ತುವಾರಿ
# ಆದಾಯ ಹಾಗೂ ಜಾತಿ ಪತ್ರದ ನೋಂದಣಿ
# ಶಿಕ್ಷಣ ಇಲಾಖೆಯ ಇತರ ಕೆಲಸಗಳು
# ಜನಗಣತಿ
# ಶಾಲೆಯಲ್ಲಿ ಗುಮಾಸ್ತ ಹಾಗೂ ಪರಿಚಾರಕರು ಮಾಡುವ ಎಲ್ಲ ಕೆಲಸ
# ಬಯಲು ಬಹಿರ್ದೆಸೆ ಮುಕ್ತ ಸಮಾಜ ಸೇರಿ ಇತರ ಸರ್ಕಾರಿ ಯೋಜನೆಗಳ ಕುರಿತು ಸಮೀಕ್ಷೆ
# ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ
ನೆಪಮಾತ್ರದ ಅನುಪಾತ
ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಅನುಪಾತ 30:1 ಇರಬೇಕು. ಆದರೆ ಕರ್ನಾಟಕ ಸೇರಿ ಯಾವುದೇ ರಾಜ್ಯಗಳಲ್ಲಿ ಈ ಅನುಪಾತ ಅನುಷ್ಠಾನಕ್ಕೆ ಬಂದಿಲ್ಲ. ವರದಿಯಲ್ಲಿ ಮಹಾರಾಷ್ಟ್ರದ ಒಂದು ಶಾಲೆಯ ಉದಾಹರಣೆ ನೀಡಲಾಗಿದ್ದು, ಆ ಶಾಲೆಯಲ್ಲಿ 8 ಶಿಕ್ಷಕರಿದ್ದರೆ, ಐವರು ಶಿಕ್ಷಣೇತರ ಚಟುವಟಿಕೆಯಲ್ಲಿ ನಿರತರಾಗಿರುತ್ತಾರೆ. ಉಳಿದ ಮೂವರು ಶಿಕ್ಷಕರು 555 ವಿದ್ಯಾರ್ಥಿಗಳನ್ನು ನಿಭಾಯಿಸಬೇಕಿದೆ. ಶೇ.15 ಶಿಕ್ಷಕರು ಪಾಠ ಮಾಡುವುದು ಬಿಟ್ಟು ಕಾಯಂ ಆಗಿ ಸರ್ಕಾರಿ ಚಾಕರಿಯಲ್ಲಿ ನಿರತರಾಗಿದ್ದಾರೆ.
> ದೇಶದಲ್ಲಿರುವ ಶಾಲೆಗಳು: 14.67 ಲಕ್ಷ
> ಸರ್ಕಾರಿ ಶಾಲೆಗಳು: 10.7 ಲಕ್ಷ
> ಸರ್ಕಾರಿ ಶಾಲೆ ವಿದ್ಯಾರ್ಥಿಗಳು: 11 ಕೋಟಿ
> ಒಟ್ಟು ಶಿಕ್ಷಕರು: 80.7 ಲಕ್ಷ
> ಸರ್ಕಾರಿ ಶಾಲೆ ಶಿಕ್ಷಕರು: 47.3 ಲಕ್ಷ
ಶಿಫಾರಸುಗಳೇನು?
# ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಉಲ್ಲೇಖವಾಗಿರುವಂತೆ ಶಿಕ್ಷಣೇತರ ಚಟುವಟಿಕೆಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳಬಾರದು.
# ಶಿಕ್ಷಣ ಹಾಗೂ ಶಿಕ್ಷಣೇತರ ಚಟುವಟಿಕೆಗಳ ವ್ಯಾಖ್ಯಾನವನ್ನು ಶಿಕ್ಷಣ ಇಲಾಖೆ ಮಾಡಬೇಕು.
# ಶಿಕ್ಷಕರನ್ನು ಆಡಳಿತದ ಕೆಲಸಕ್ಕೆ ಬಳಸಿಕೊಳ್ಳುವುದನ್ನು ನಿರ್ಬಂಧಿಸಬೇಕು.
# ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಯಿಂದ ಪದೇಪದೆ ಶಿಕ್ಷಕರ ಮೇಲಿನ ಚುನಾವಣೆ ಕೆಲಸದ ಒತ್ತಡ ತಪ್ಪಲಿದೆ.
ನಿಯಮ ಹೇಳುವುದೇನು?
# ಕಾಯ್ದೆ ಪ್ರಕಾರ ಕಿರಿಯ ಪ್ರಾಥಮಿಕ ಶಾಲೆಗೆ ವಾರ್ಷಿಕ 200 ಕೆಲಸದ ದಿನ
# ಹಿರಿಯ ಪ್ರಾಥಮಿಕ ಶಾಲೆಗೆ 220 ಕೆಲಸದ ದಿನ
# ಆದರೆ ಕೇವಲ 42 ದಿನಗಳು ಕಲಿಕೆಗೆ ಮೀಸಲು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...