ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ರಾಜ್ಯಕ್ಕೆ ಆಯುಷ್ಮಾನ್​ಭವ,

ಪ್ರತಿಷ್ಠೆ ಬದಿಗಿಟ್ಟ ಸಿಎಂ | ಕೇಂದ್ರ, ರಾಜ್ಯ ಯೋಜನೆ
ವಿಲೀನಕ್ಕೆ ಸಮ್ಮತಿ >>

| ವರುಣ ಹೆಗಡೆ

ಬೆಂಗಳೂರು: ಕಡು ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್
ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆ ಜಾರಿ ವಿಚಾರದಲ್ಲಿನ ಗೊಂದಲ ಬಹುತೇಕ
ಬಗೆಹರಿದಿದೆ. ಆಯುಷ್ಮಾನ್ ಜತೆ ಆರೋಗ್ಯ ಕರ್ನಾಟಕ ವಿಲೀನಗೊಳಿಸಿದಲ್ಲಿ ಅದರ ಸಂಪೂರ್ಣ
ಶ್ರೇಯಸ್ಸು ಕೇಂದ್ರಕ್ಕೆ ಹೋಗಬಹುದೆಂಬ ಕಾರಣಕ್ಕೆ ಹಿಂದಡಿ ಇಟ್ಟಿದ್ದ ರಾಜ್ಯ ಸರ್ಕಾರ
ವೈದ್ಯರ ಸಲಹೆ ಹಿನ್ನೆಲೆಯಲ್ಲಿ ಮನಸ್ಸು ಬದಲಾಯಿಸಿದೆ. ಗುರುವಾರ ನಡೆಯಲಿರುವ ರಾಜ್ಯ ಸಚಿವ
ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಹೊರಬೀಳಲಿದೆ.

ಆಯುಷ್ಮಾನ್ ಭಾರತ್ ಯೋಜನೆ ಜತೆ ಒಡಂಬಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ
ಕುಮಾರಸ್ವಾಮಿ ಬುಧವಾರ ವೈದ್ಯರ ಸಭೆ ನಡೆಸಿ ಸಲಹೆ ಪಡೆದಿದ್ದಾರೆ. ಈ ಯೋಜನೆ ಜಾರಿಯಿಂದ
ರಾಜ್ಯದ ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಲಿದೆ ಎಂಬ ವೈದ್ಯರ ಅಭಿಪ್ರಾಯದ
ಹಿನ್ನೆಲೆಯಲ್ಲಿ ಯೋಜನೆ ವಿಲೀನಗೊಳಿಸಿ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಎರಡೂ
ಹೆಸರಿನಲ್ಲಿ ಆರೋಗ್ಯ ಸೇವೆ ನೀಡುವ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಕೇಂದ್ರ ಸರ್ಕಾರದ
ಜತೆಗೆ ಮಾತುಕತೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ. ಏಕೀಕೃತ ಯೋಜನೆ ಜಾರಿಯಾದಲ್ಲಿ ರಾಜ್ಯ
ಸರ್ಕಾರ 800 ಕೋಟಿ ರೂ. ಹಾಗೂ ಕೇಂದ್ರ ಸರ್ಕಾರ 300 ಕೋಟಿ ರೂ. ವಿನಿಯೋಗ ಮಾಡಲಿವೆ.

11 ರಾಜ್ಯದಲ್ಲಿ ಪ್ರಾಯೋಗಿಕ ಜಾರಿ

36 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ ಈವರೆಗೆ 29 ರಾಜ್ಯ ಹಾಗೂ ಕೇಂದ್ರಾಡಳಿತ
ಪ್ರದೇಶಗಳು ಆಯುಷ್ಮಾನ್ ಭಾರತ ಯೋಜನೆಗೆ ಕೈ ಜೋಡಿಸಲು ಸಮ್ಮತಿ ಸೂಚಿಸಿವೆ. ಒಡಿಶಾ ಈ
ಯೋಜನೆಯಿಂದ ಹೊರತಾಗಿದ್ದು, ಕರ್ನಾಟಕ ಸೇರಿ 6 ರಾಜ್ಯಗಳು ಯೋಜನೆಗೆ ಒಳಪಡುವ ಬಗ್ಗೆ
ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಮೊದಲ ಹಂತದಲ್ಲಿ ಛತ್ತೀಸ್​ಗಢ, ತ್ರಿಪುರ, ಅರುಣಾಚಲ
ಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ಗುಜರಾತ್ ಮತ್ತು ಹಿಮಾಚಲ
ಪ್ರದೇಶ ಆಯ್ಕೆಯಾಗಿವೆ. ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಂಜಾಬ್ ಹಾಗೂ ದೆಹಲಿ
ಹೊರಗುಳಿದಿವೆ.

ಯಾವಾಗ ಜಾರಿ?

ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಘೋಷಿಸಿರುವ ಆಯುಷ್ಮಾನ್ ಭಾರತ್ ಯೋಜನೆ
ಸೆ.25ಕ್ಕೆ ದೀನ್ ದಯಾಳ್ ಉಪಾಧ್ಯಾಯ ಜಯಂತಿಯಂದು ಹನ್ನೊಂದು ರಾಜ್ಯದಲ್ಲಿ ಆರಂಭವಾಗಲಿದೆ.

ಫಲಾನುಭವಿಗಳು

ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಎಪಿಎಲ್ ಕಾರ್ಡ್​ದಾರರಿಗೆ ಶೇ.30 ವೆಚ್ಚವನ್ನು ಸರ್ಕಾರ
ಪಾವತಿಸುತ್ತದೆ. ಆದರೆ, ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್​ದಾರರಿಗಷ್ಟೇ
ವೈದ್ಯಕೀಯ ಸೇವೆ ಸಿಗುತ್ತದೆ.

ಪ್ಯಾಕೇಜ್ ವ್ಯವಸ್ಥೆ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಚಿಕಿತ್ಸಾ ವೆಚ್ಚವನ್ನು ಪ್ಯಾಕೇಜ್ ರೂಪದಲ್ಲಿಯೇ
ಭರಿಸಲಾಗುತ್ತದೆ. ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ನಿಗದಿ
ಮಾಡಬಹುದಾಗಿದೆ. ರಾಜ್ಯ ಸರ್ಕಾರ ವೆಚ್ಚ ಭರಿಸುವುದರಿಂದ ದರ ನಿಗದಿ ಮಾಡುವ ಅಧಿಕಾರ
ನೀಡಲಾಗಿದೆ. ಆರೋಗ್ಯ ಕರ್ನಾಟಕ ಯೋಜನೆಯಡಿ ಸಹ ಪ್ಯಾಕೇಜ್ ವ್ಯವಸ್ಥೆ ರೂಪಿಸಲಾಗಿದ್ದು,
ಹೃದ್ರೋಗ ಚಿಕಿತ್ಸೆಗೆ (65 ಸಾವಿರ ರೂ), ಮಂಡಿಚಿಪ್ಪು ಬದಲಾವಣೆ (ನೀ ರಿಪ್ಲೇಸ್​ವೆುಂಟ್)
ಚಿಕಿತ್ಸೆಗೆ (65 ಸಾವಿರ ರೂ), ಕಣ್ಣಿನ ನರ ಚಿಕಿತ್ಸೆ (8 ಸಾವಿರ ರೂ.) ಸೇರಿದಂತೆ ವಿವಿಧ
ಚಿಕಿತ್ಸೆಗೆ ದರ ನಿಗದಿ ಮಾಡಲಾಗಿದೆ.

ಪ್ರತ್ಯೇಕ ಕಾರ್ಡ್ ಬೇಕಿಲ್ಲ

ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಫಲಾನುಭವಿಗಳು ಸೇವೆ ಪಡೆಯಲು 10 ರೂ. ಪಾವತಿಸಿ ಹೆಲ್ತ್
ಕಾರ್ಡ್ ಪಡೆದುಕೊಳ್ಳಬೇಕು. ಸದ್ಯ ಪಡಿತರ ಚೀಟಿ ತೋರಿಸಿದರೂ ಚಿಕಿತ್ಸೆ ನೀಡಲಾಗುತ್ತಿದೆ.
ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಆರೋಗ್ಯ ಸೇವೆ ಪಡೆದುಕೊಳ್ಳಲು ಆಧಾರ್ ಕಾರ್ಡ್
ವಿನಾಯಿತಿ ಸಹ ನೀಡಲಾಗಿದೆ. ಪಡಿತರ ಚೀಟಿ, ಚಾಲನಾ ಪರವಾನಿಗೆ, ಚುನಾವಣಾ ಗುರುತಿನ ಚೀಟಿ
ತೋರಿಸಿ ಸೇವೆ ಪಡೆದುಕೊಳ್ಳಬಹುದಾಗಿದೆ. ಪ್ರತ್ಯೇಕ ಕಾರ್ಡ್ ಪಡೆಯಬೇಕಿಲ್ಲ.

ಸಿಎಂ ಜತೆ ಸಭೆ ಮಾಡಿದ್ದೇವೆ. ಆರೋಗ್ಯ ಶ್ರೀ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ
ಲಕ್ಷಾಂತರ ರೋಗಿಗಳಿಗೆ ಚಿಕಿತ್ಸೆ ದೊರೆತಿದೆ. ಬಡತನ ರೇಖೆಗಿಂತ ಕೆಳಗಿರುವ ರೋಗಿಗಳಿಗೆ
ರಾಜ್ಯ ಸರ್ಕಾರದ ಯೋಜನೆಯಿಂದ ಅನುಕೂಲವಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಅನುದಾನ
ಸಿಗುವುದರಿಂದ ವೈದ್ಯರ ಸಲಹೆ ಮೇರೆಗೆ ಸಿಎಂ ಸಮ್ಮತಿ ಸೂಚಿಸಿದ್ದಾರೆ.

| ಡಾ.ಸಿ.ಎನ್. ಮಂಜುನಾಥ್, ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ



ಕಾರ್ಡ್​ಗಳ ಕಥೆಯೇನು?

ಆರೋಗ್ಯ ಕರ್ನಾಟಕ ಯೋಜನೆ ಜಾರಿ ಬಳಿಕ ಈವರೆಗೆ 3ಲಕ್ಷಕ್ಕೂ ಅಧಿಕ ಮಂದಿ ಆರೋಗ್ಯ ಕಾರ್ಡ್
ಪಡೆದುಕೊಂಡಿದ್ದಾರೆ. ಆದರೆ, ಇದೀಗ ಆರೋಗ್ಯ ಕರ್ನಾಟಕ ಆಯುಷ್ಮಾನ್ ಭಾರತ್​ನಲ್ಲಿ
ವಿಲೀನವಾದರೆ ಈ ಕಾರ್ಡ್​ಗಳ ಕತೆಯೇನೆಂಬ ಪ್ರಶ್ನೆ ಏಳಲಿದೆ. ಚಿಕಿತ್ಸೆ ಪಡೆಯಲು ಹೊಸ
ಕಾರ್ಡ್ ಪಡೆಯಬೇಕೆ? ಅದಕ್ಕೆ ಹಣ ಪಾವತಿಸಬೇಕೆಂಬ ಎಂಬ ಗೊಂದಲಗಳು ಸೃಷ್ಟಿಯಾಗಲಿವೆ.
ಆದ್ದರಿಂದ ರಾಜ್ಯ ಸರ್ಕಾರ ಈ ವಿಚಾರವಾಗಿ ಕೇಂದ್ರ ಸರ್ಕಾರದ ಜತೆಗೆ ಮಾತುಕತೆ ನಡೆಸಿ ಎಲ್ಲ
ಗೊಂದಲ ಬಗೆಹರಿಸಬೇಕಿದೆ.

ಆಯುಷ್ಮಾನ್ ಭಾರತ್ ವಿಶೇಷತೆ

ವರ್ಷಕ್ಕೆ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ವೈದ್ಯಕೀಯ ಸೇವಾ ವೆಚ್ಚ ಲಭ್ಯ

ದೇಶದ 50 ಕೋಟಿ ಜನರಿಗೆ ಆರೋಗ್ಯ ಸೇವೆ ಒದಗಿಸುವ ಗುರಿ

ದೇಶದಲ್ಲಿ ನೋಂದಾಯಿತ ಯಾವುದೇ ಸರ್ಕಾರಿ/ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡದೆ ಚಿಕಿತ್ಸೆ
ಸಿಗುತ್ತೆ

ಫಲಾನುಭವಿಗಳು ಸಾರ್ವಜನಿಕ ಹಾಗೂ ಖಾಸಗಿ ಆಸ್ಪತ್ರೆ ಎರಡೂ ಕಡೆ ಸೇವೆ ಪಡೆಯಬಹುದು

ಮುಂಚಿತವಾಗಿಯೇ ಚಿಕಿತ್ಸಾ ವೆಚ್ಚದ ಪ್ಯಾಕೇಜ್ ನಿಗದಿ ಮಾಡಿದ್ದರಿಂದ ಹೆಚ್ಚುವರಿ ಹಣ
ಸುಲಿಗೆಗೆ ಬ್ರೇಕ್

ನೋಂದಾಯಿತ ಆಸ್ಪತ್ರೆಯ ಖಾತೆಗೆ ನೇರವಾಗಿ ಹಣ ಜಮೆ ಆಗಲಿದೆ

ವಿಮಾ ಕಂಪನಿಗಳ ಪ್ರೀಮಿಯಂ ಪಾವತಿ ವೆಚ್ಚ ಕೇಂದ್ರ ಮತ್ತು ರಾಜ್ಯಕ್ಕೆ ನಿಗದಿಯಂತೆ ಹಂಚಿಕೆ

ಯೋಜನೆಯ ವ್ಯವಸ್ಥಿತ ಜಾರಿಗೆ ರಾಷ್ಟ್ರೀಯ ಆರೋಗ್ಯ ಸುರಕ್ಷಾ  ಯೋಜನಾ ಮಂಡಳಿ ರಚನೆ

ಅನನುಕೂಲ

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ನಿಗದಿಪಡಿಸಿರುವ ಪ್ಯಾಕೇಜ್ ದರ ಕಡಿಮೆ

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶದಿಂದ ಸರ್ಕಾರಿ ಆಸ್ಪತ್ರೆಯತ್ತ ರೋಗಿಗಳು
ಬರದಿರಬಹುದು

ಆರ್ಥಿಕ ನೆರವಿನಲ್ಲಿ ಕೇಂದ್ರದ ಪಾಲು ಕಡಿಮೆಯಿದ್ದರೂ ಪೂರ್ಣ ಕ್ರೆಡಿಟ್ ಹೋಗುತ್ತದೆ. ನಕಲಿ
ಗುರುತಿನ ಚೀಟಿ ಸೃಷ್ಟಿಸಿ ವೈದ್ಯ ಸೇವೆ ಪಡೆಯುವ ಸಾಧ್ಯತೆ.

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕೆಲವು ದೋಷಗಳಿದ್ದವು. ಕೆಲವು ಬದಲಾವಣೆಗಳೊಂದಿಗೆ
ಆರೋಗ್ಯ ಕರ್ನಾಟಕ ಯೋಜನೆ ಜತೆ ವಿಲೀನ ಮಾಡುವ ಬಗ್ಗೆ ಕೇಂದ್ರ ಲಿಖಿತ ಒಪ್ಪಿಗೆ ನೀಡಿದೆ.
ಗುರುವಾರ ಸಂಪುಟದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ.

| ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ



ಆರೋಗ್ಯ ಕರ್ನಾಟಕ ಸೇವೆ

ಸರ್ಕಾರಿ ಆಸ್ಪತ್ರೆಗಳಿಗೆ ಮೊದಲ ಆದ್ಯತೆ. ವೈದ್ಯರ ಶಿಫಾರಸಿನ ನಂತರ ಖಾಸಗಿ ಆಸ್ಪತ್ರೆಯಲ್ಲಿ
ಚಿಕಿತ್ಸೆ

1.34 ಕೋಟಿ ಕುಟುಂಬಗಳಿಗೆ ಪ್ರಾಥಮಿಕ, ದ್ವಿತೀಯ ಹಾಗೂ ತೃತೀಯ ಹಂತದ ಆರೋಗ್ಯ ರಕ್ಷಣೆ

ವೈದ್ಯಕೀಯ ಪ್ಯಾಕೇಜ್ ದರದಲ್ಲಿ ಹೆಚ್ಚಳ, ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಕಡಿವಾಣ

ಬಿಪಿಎಲ್ ಕಾರ್ಡ್ ಮಾನದಂಡ ಹಿನ್ನೆಲೆ ಯಲ್ಲಿ ಬಡವರಿಗೆ ಸಿಗಲಿದೆ ಯೋಜನೆ ಫಲ

ಎಪಿಎಲ್ ಕಾರ್ಡ್​ದಾರರಿಗೂ ಯೋಜನೆಯ ಪ್ಯಾಕೇಜ್ ದರದ ಶೇ.30 ಪಾವತಿಸಬಹುದು.

ಯೋಜನೆ ಅಡಿ 1516 ನಿರ್ದಿಷ್ಟ ವೈದ್ಯಕೀಯ ಚಿಕಿತ್ಸೆ.

ಪಡಿತರ ಚೀಟಿ ತೋರಿಸಿಯೂ ಆರೋಗ್ಯ ಸೇವೆ ಪಡೆದುಕೊಳ್ಳುವ ವ್ಯವಸ್ಥೆ.

ಅನನುಕೂಲ

ಚಿಕಿತ್ಸಾ ವೆಚ್ಚ 2 ಲಕ್ಷ ರೂ. ಮೀರಿದರೆ ರೋಗಿಯೇ ಹೆಚ್ಚುವರಿ ವೆಚ್ಚ ಭರಿಸಬೇಕು.

ರೋಗಿ ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಇಲ್ಲ. ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....