ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಭಾರತಪರ ಸೊಲಿಹ್​ಗೆ ಜಯ,

ಕೊಲೊಂಬೊ: ಮಾಲ್ಡೀವ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ ಬೆಂಬಲಿತ ಅಬ್ದುಲ್ಲಾ ಯಮೀನ್ ಸೋಲು ಅನುಭವಿಸಿದ್ದು, ಭಾರತದ ಪರ ಒಲವು ಹೊಂದಿರುವ ಮೊಹಮದ್ ಸೊಲಿಹ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಳೆದೊಂದು ವರ್ಷದಿಂದ ಈ ದ್ವೀಪ ರಾಷ್ಟ್ರದಲ್ಲಿ ಭಾರತ ಹಾಗೂ ಚೀನಾ ಮೇಲುಗೈ ಕುರಿತು ಆಂತರಿಕ ಕಲಹ ನಡೆಯುತ್ತಿತ್ತು. ನಿರ್ಗಮಿತ ಅಧ್ಯಕ್ಷ ಅಬ್ದುಲ್ಲಾ ಯಮೀನ್​ರ ಭಾರತ ವಿರೋಧಿ ನೀತಿಗಳ ಮಧ್ಯೆ ಅಧ್ಯಕ್ಷೀಯ ಚುನಾವಣೆ ನಡೆದಿತ್ತು. ಯಮೀನ್ ಆಡಳಿತಾವಧಿ ನ.17ಕ್ಕೆ ಮುಗಿಯಲಿದೆ.
ಸೋಮವಾರ ಅಧಿಕೃತ ಫಲಿತಾಂಶ ಪ್ರಕಟವಾಗಿದ್ದು, ಮೊಹಮದ್​ಗೆ 1,34,616 ಮತ ಬಂದರೆ, ಅಬ್ದುಲ್ಲಾ 96,132 ಮತಗಳಿಸಿದ್ದಾರೆ. ಮತಗಳಿಕೆಯಲ್ಲಿ ಶೇ.58.33 ಮತಗಳನ್ನು ನೂತನ ಅಧ್ಯಕ್ಷ ಮೊಹಮದ್ ಪಡೆದಿದ್ದಾರೆ ಎಂದು ಅಧಿಕೃತವಾಗಿ ಚುನಾವಣೆ ಆಯೋಗ ಘೋಷಿಸಿದೆ. ಶೇ.89 ಮತದಾನವಾಗಿದ್ದ ಮಾಲ್ಡೀವ್ಸ್ ಚುನಾವಣೆಯಲ್ಲಿ ಅಬ್ದುಲ್ಲಾ ಸರ್ಕಾರವು ತೀವ್ರ ಚುನಾವಣೆ ಅಕ್ರಮ ನಡೆಸಿತ್ತು ಎಂದು ಅಂತಾರಾಷ್ಟ್ರೀಯ ತಜ್ಞರು ವರದಿ ಮಾಡಿದ್ದರು. ಅಂತಾರಾಷ್ಟ್ರೀಯ ವೀಕ್ಷಕರಿಗೂ ವೀಸಾ ನೀಡಿರಲಿಲ್ಲ.
ಮೂರು ದಶಕಗಳ ಕಾಲ ಮಾಲ್ಡೀವ್ಸ್​ನಲ್ಲಿ ಸರ್ವಾಧಿಕಾರ ನಡೆಸಿದ್ದ ಕುಟುಂಬದ ಸದಸ್ಯ ಅಬ್ದುಲ್ಲಾ ಯಮೀನ್, ಚುನಾವಣೆ ಸಂದರ್ಭದಲ್ಲಿ ಮಾಧ್ಯಮ ಹಾಗೂ ಪ್ರತಿಪಕ್ಷಗಳ ಮೇಲೆ ನಿರ್ಬಂಧ ಹೇರಿದ್ದರು. ಪ್ರತಿಪಕ್ಷಗಳ ಚುನಾವಣೆ ಪ್ರಚಾರದ ಸುದ್ದಿಗಳನ್ನು ಪ್ರಕಟಿಸಲು ಕೂಡ ಅವಕಾಶ ನೀಡಿರಲಿಲ್ಲ. ಆದರೆ ಮಾಲ್ಡೀವ್ಸ್ ಡೆಮಾಕ್ರಟಿಕ್ ಪಾರ್ಟಿ ಪರ ಒಲವು ತೋರಿ, ಚೀನಾ ಬೆಂಬಲಿತ ಪಕ್ಷಕ್ಕೆ ಬುದ್ಧಿ ಕಲಿಸಿದ್ದಾರೆ.
ಭಾರತ, ಅಮೆರಿಕ ಸ್ವಾಗತ: ಮಾಲ್ಡೀವ್ಸ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಗೆಲುವನ್ನು ಭಾರತ ಹಾಗೂ ಅಮೆರಿಕ ಸರ್ಕಾರಗಳು ಸ್ವಾಗತಿಸಿವೆ.
ಭಾರತ, ಚೀನಾದ ಮೇಲೆ ಪರಿಣಾಮ?
ಮಾಲ್ಡೀವ್ಸ್​ನಲ್ಲಿ ಪಾರಂಪರಿಕವಾಗಿ ಭಾರತವು ಪ್ರಭಾವ ಹೊಂದಿತ್ತು. ಪ್ರಜಾತಂತ್ರ ಸರ್ಕಾರ ರಚನೆಗೆ ಭಾರತದ ಪಾತ್ರ ದೊಡ್ದದಿತ್ತು.
ಅಬ್ದುಲ್ಲಾ ಯಮೀನ್ ಅಧ್ಯಕ್ಷರಾದ ಬಳಿಕ ಚೀನಾ ಆಡಳಿತವು ಜಲ ವಾಣಿಜ್ಯ ಮಾರ್ಗಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹೂಡಿಕೆಗೆ ನಿರ್ಧರಿಸಿತ್ತು.
ಈ ಬೆಳವಣಿಗೆ ನಂತರ ಭಾರತೀಯ ಸೇನೆಯನ್ನು ಹಿಂಪಡೆಯಲು ಸೂಚಿಸಿದ್ದ ಮಾಲ್ಡೀವ್ಸ್, ಭಾರತದ ತೆಕ್ಕೆಯಿಂದ ದೂರ ಸರಿಯುತ್ತಿತ್ತು.
ಈ ಫಲಿತಾಂಶದಿಂದ ಚೀನಾದ ಹೂಡಿಕೆ ಹಾಗೂ ಹಿಂದು ಮಹಾಸಾಗರದ ಮೇಲೆ ಪ್ರಭಾವ ಹೆಚ್ಚಿಸಿಕೊಳ್ಳುವ ಪ್ರಯತ್ನಕ್ಕೆ ಹಿನ್ನಡೆಯಾಗಲಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...