ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ವರ್ಜೀನಿಯಾಲ್ಲಿ ಪತ್ತೆಯಾಯ್ತು ಎರಡು ತಲೆಯ ವಿಷಕಾರಿ ಹಾವು;

ಯಾವ ತಲೆ ಹೇಗೆ ವರ್ತಿಸುತ್ತಿದೆ ಗೊತ್ತೇ?, ವಾಷಿಂಗ್ಟನ್​: ಹಲವು ತಲೆಗಳ ಹಾವುಗಳನ್ನು ಭಾರತೀಯ ಪುರಾಣಗಳಲ್ಲಿ ಕೇಳಿದ್ದೇವೆಯೇ ಹೊರತು ನೋಡಿದ್ದು ವಿರಳ. ಆದರೆ, ಆಂಥ ಹಾವುಗಳು ವಾಸ್ತವದಲ್ಲಿಯೂ ಇವೆ ಎಂಬುದು ಈಗ ಗೊತ್ತಾಗಿದೆ. ವರ್ಜೀನಿಯಾದಲ್ಲಿ ಸಿಕ್ಕ ಎರಡು ತಲೆಯ ಹಾವು ಈಗ ಜಗತ್ತಿನ ಅಚ್ಚರಿಗೆ ಕಾರಣವಾಗಿದೆ.
ಕಾಪರ್​ಹೆಡ್​ ಎಂಬ ಅತ್ಯಂತ ವಿಷಕಾರಿ ಪ್ರಬೇಧಕ್ಕೆ ಸೇರಿದ ಹಾವಿನಲ್ಲಿ ಇಂಥ ವಿಸ್ಮಯ ಕಂಡು ಬಂದಿದ್ದು, ಎರಡು ವಾರಗಳ ಹಿಂದೆ ವರ್ಜೀನಿಯಾದಲ್ಲಿ ಪತ್ತೆಯಾಗಿದೆ. ಪರಿಸರ ತಜ್ಞ ಜೆಡಿ ಕ್ಲಿಯೋಫರ್​ ಅವರು ಅದರ ಚಿತ್ರಗಳನ್ನು, ವಿಡಿಯೋಗಳನ್ನು ಫೇಸ್​ಬುಕ್​ನಲ್ಲಿ ಪ್ರಕಟಿಸಿದ್ದಾರೆ.
ವಿರಳಾತಿ ವಿರಳ ಎನ್ನಬಹುದಾದ ಈ ವಿಚಿತ್ರ ಹಾವನ್ನು ಸದ್ಯ ಜೀವ ತಳಿ ತಜ್ಞರು ಅಧ್ಯಯನಕ್ಕಾಗಿ ಕೊಂಡೊಯ್ದಿದ್ದಾರೆ.
ಇದಕ್ಕೂ ಮೊದಲು ದೇಹರಚನಾ ತಜ್ಞರು ಈ ಹಾವನ್ನು ಅಧ್ಯಯನ ಮಾಡಿದ್ದರು. ಅದರಂತೆ, ಈ ಹಾವಿನ ಎಡ ತಲೆಯಲ್ಲಿ ಅನ್ನನಾಳದ ವ್ಯವಸ್ಥೆ ಹೆಚ್ಚು ಅಭಿವೃದ್ಧಿ ಹೊಂದಿದೆ. ಆದರೆ, ಬಲ ತಲೆಯಲ್ಲಿ ಗಂಟಲಿನ ರಚನೆ ಅತ್ಯುತ್ತಮವಾಗಿದ್ದು, ಆಹಾರ ಸೇವಿಸಲು ಶಕ್ತವಾಗಿದೆ. ಹೀಗಾಗಿ ಒಂದು ತಲೆ ಆಹಾರ ಸೇವಿಸುವ ಕಾರ್ಯವನ್ನು ಮಾಡಿದರೆ, ಇನ್ನೊಂದು ತಲೆ ಆಹಾರವನ್ನು ದೇಹಕ್ಕೆ ರವಾನಿಸುವ ಕೆಲಸ ಮಾಡುತ್ತಿದೆ. ಆಹಾರ ಸೇವಿಸಲು ಬಲ ತಲೆ ಯೋಗ್ಯವಾಗಿದ್ದರೂ, ದೇಹದ ಮೇಲೆ ಎಡ ತಲೆ ಪ್ರಾಬಲ್ಯ ಪಡೆದುಕೊಂಡಿದೆ. ಈ ಸಂಗತಿ ತಜ್ಞರ ಅಚ್ಚರಿಗೂ ಕಾರಣವಾಗಿದೆ.
(function(d, s, id) { var js, fjs = d.getElementsByTagName(s)[0]; if (d.getElementById(id)) return; js = d.createElement(s); js.id = id; js.src = 'https://connect.facebook.net/kn_IN/sdk.js#xfbml=1&version=v3.1'; fjs.parentNode.insertBefore(js, fjs);}(document, 'script', 'facebook-jssdk'));
JD Kleopfer,  ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಗುರುವಾರ, ಸೆಪ್ಟೆಂಬರ್ 20, 2018
ಎಡ ತಲೆಯು ಬಲ ತಲೆಗಿಂತಲೂ ಹೆಚ್ಚು ಕ್ರಿಯಾಶೀಲವಾಗಿದ್ದು, ಪ್ರಚೋಧನೆಗಳಿಗೆ ಹೆಚ್ಚು ಸ್ಪಂದಿಸುತ್ತದೆ. ಈ ಹಾವಿನಲ್ಲಿ ಕಂಡು ಬಂದಿರುವುದು ಒಂದೇ ಹೃದಯ ಮತ್ತು ಒಂದೇ ಶ್ವಾಸ ರಚನೆ ಮಾತ್ರ.
ಅಧ್ಯಯನದ ನಂತರ ಈ ಹಾವನ್ನು ತಜ್ಞರು ಮತ್ತು ಅಧಿಕಾರಿಗಳು ಮೃಗಾಲಯಕ್ಕೆ ರವಾನಿಸಿ, ಸಾರ್ವಜನಿಕರ ಪ್ರದರ್ಶನಕ್ಕೆ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ವರ್ಜೀನಿಯಾದ ವೂಡ್​ಬ್ರಿಡ್ಜ್​ ಎಂಬಲ್ಲಿ ಮಹಿಳೆಯೊಬ್ಬರಿಗೆ ಈ ಹಾವು ಮೊದಲಬಾರಿಗೆ ಪೊದೆಯೊಂದರಲ್ಲಿ ಕಾಣಿಸಿಕೊಂಡಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....