ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ವಿವಾಹೇತರ ಸಂಬಂಧ ಕ್ರಿಮಿನಲ್ ಅಪರಾಧವಲ್ಲ,

ಐಪಿಸಿ ಸೆಕ್ಷನ್ 497, ಸಿಆರ್​ಪಿಸಿ ಸೆಕ್ಷನ್ 198(2) ರದ್ದುಗೊಳಿಸಿದ ಸುಪ್ರೀಂ >>
ನವದೆಹಲಿ: ವಿವಾಹೇತರ ಸಂಬಂಧ ಹೊಂದುವುದು ಅಪರಾಧ ಎಂಬ 158 ವರ್ಷಗಳ ಹಳೆಯ ಐಪಿಸಿ ಸೆಕ್ಷನ್ 497ನ್ನು (ಅಡಲ್ಟರಿ ಕಾಯ್ದೆ) ಸುಪ್ರೀಂಕೋರ್ಟ್ ಗುರುವಾರ ರದ್ದುಪಡಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಖಾನ್ವಿಲ್ಕರ್, ನ್ಯಾ. ಆರ್.ಎಫ್. ನಾರಿಮನ್, ನ್ಯಾ. ಚಂದ್ರಚೂಡ್ ಹಾಗೂ ನ್ಯಾ. ಇಂದೂ ಮಲ್ಹೊತ್ರಾ ಅವರಿದ್ದ ಪಂಚಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ‘ವಿವಾಹೇತರ ಸಂಬಂಧ ಹೊಂದಲು ಪತ್ನಿಗೆ ಪತಿಯ ಒಪ್ಪಿಗೆ ಅಗತ್ಯ. ಪತ್ನಿ ಪತಿಯ ಸ್ವತ್ತು ಎಂಬ ಐಪಿಸಿ 497 ಮತ್ತು ಸಿಆರ್​ಪಿಸಿಯ ಸೆಕ್ಷನ್ 198 ಎರಡೂ ಕೂಡ ಅಸಾಂವಿಧಾನಿಕ’ ಎಂದಿದೆ.
ಸುಪ್ರೀಂ ಹೇಳಿದ್ದೇನು?
ವಿವಾಹೇತರ ಸಂಬಂಧ ಕಾಯ್ದೆ ಪ್ರಕಾರ, ಪತಿಯೇ ಒಡೆಯ ಹಾಗೂ ಪತ್ನಿ ಆತನ ಸ್ವತ್ತು ಎನ್ನುತ್ತದೆ. ಇದು ಮಹಿಳೆಯ ಘನತೆಗೆ ಧಕ್ಕೆ ತರುತ್ತದೆ.
ವಿವಾಹೇತರ ಸಂಬಂಧ ಅಪರಾಧವಲ್ಲ. ಆದರೆ ಈ ಕಾರಣಕ್ಕಾಗಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾದಲ್ಲಿ ಪತಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಬಹುದು.
ವಿವಾಹೇತರ ಸಂಬಂಧವನ್ನು ವಿಚ್ಛೇದನ ಪಡೆಯಲು ಪ್ರಮುಖ ಕಾರಣ ಎಂದು ಪರಿಗಣಿಸಲಾಗುವುದು
ಸಂತಸರಹಿತ ವೈವಾಹಿಕ ಜೀವನದ ಫಲವಾಗಿ ವಿವಾಹೇತರ ಸಂಬಂಧ ಏರ್ಪಡಬಹುದು.
ಚೀನಾ, ಜಪಾನ್, ಆಸ್ಟ್ರೇಲಿಯಾದಲ್ಲಿ ವಿವಾಹೇತರ ಸಂಬಂಧ ಅಪರಾಧವಲ್ಲ.
ತಂದೆ ನೀಡಿದ್ದ ತೀರ್ಪು ತಳ್ಳಿಹಾಕಿದ ಮಗ!
1985ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸೌಮಿತ್ರಿ ವಿಷ್ಣು ಎಂಬುವವರು ದಾವೆ ಹೂಡಿದ್ದರು. ಈ ಪ್ರಕರಣದಲ್ಲಿ ನ್ಯಾ. ಯಶವಂತ್ ವಿಷ್ಣು ಚಂದ್ರಚೂಡ್ ಸೆಕ್ಷನ್ 497 ಸಾಂವಿಧಾನಿಕ ಮಾನ್ಯತೆ ಎತ್ತಿಹಿಡಿದಿದ್ದರು. ಒಂದು ನಿರ್ದಿಷ್ಟ ವರ್ಗದಲ್ಲಿ ವಿವಾಹೇತರ ಸಂಬಂಧವನ್ನು ಅಪರಾಧವಾಗಿ ಪರಿಗಣಿಸುವುದು ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಅವಶ್ಯಕ ಎಂದು ಅವರು ಅಭಿಪ್ರಾಯಪಟ್ಟಿದ್ದರು. ಅವರ ಪುತ್ರ, ಪಂಚಸದಸ್ಯ ಪೀಠದಲ್ಲಿದ್ದ ನ್ಯಾ. ಡಿ.ವೈ. ಚಂದ್ರಚೂಡ್ ಈಗ ಸೆಕ್ಷನ್ 497 ವಿರುದ್ಧವಾಗಿ ತೀರ್ಪು ಪ್ರಕಟಿಸಿದ್ದಾರೆ.
ಕೇಂದ್ರದ ನಿಲುವೇನಿತ್ತು?
ಕಾಯ್ದೆಯನ್ನು ಉಳಿಸಿಕೊಳ್ಳುವ ಬಗ್ಗೆ ಸರ್ಕಾರ ಒಲವು ತೋರಿತ್ತು. ಲಿಂಗ ಸಮಾನತೆಗಾಗಿ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಲು ಸಾಧ್ಯವಿದೆ. ಅನೈತಿಕ ಸಂಬಂಧದಿಂದ ಪತ್ನಿಯು ಮಾನಸಿಕ, ದೈಹಿಕ ಘಾಸಿಗೆ ಒಳಗಾಗುತ್ತಾಳೆ. ಕಾಯ್ದೆ ರದ್ದತಿ ಮಕ್ಕಳು ಮತ್ತು ಕುಟುಂಬದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಸರ್ಕಾರ ಕೋರ್ಟ್​ನಲ್ಲಿ ವಾದಿಸಿತ್ತು. ಅರಿವಿದ್ದು ಕೂಡ ಬೇಕೆಂದಲೋ, ಅನಿವಾರ್ಯತೆಯಿಂದಲೋ ಅನೈತಿಕ ಸಂಬಂಧಗಳು ಏರ್ಪಡುತ್ತವೆ. ವೈವಾಹಿಕ ಜೀವನ ಭಾರತದ ಸಾಮಾಜಿಕ ವ್ಯವಸ್ಥೆಯ ಬೆನ್ನುಲುಬು ಎಂದು ಸರ್ಕಾರ ಹೇಳಿತ್ತು.
ಐಪಿಸಿ ಸೆಕ್ಷನ್ 497
158 ವರ್ಷಗಳ ಹಿಂದಿನ ಕಾಯ್ದೆ ಇದು. ‘ಬೇರೊಬ್ಬನ ಪತ್ನಿ ಜತೆ ಒಬ್ಬ ಪುರುಷ ಆಕೆಯ ಪತಿಯ ಸಹಮತವಿಲ್ಲದೆ ದೈಹಿಕ ಸಂಪರ್ಕ ಸಾಧಿಸಿದಲ್ಲಿ ಅಂಥ ಕೃತ್ಯ ಅಪರಾಧ ಎನಿಸುತ್ತದೆ. ಕಾಯ್ದೆ ಪ್ರಕಾರ ವಿವಾಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಿದಾತ ಅಪರಾಧಿ ಎನಿಸುತ್ತಾನೆ. ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಆದರೆ ಸಂಬಂಧ ಬೆಳೆಸಿದ ಮಹಿಳೆಗೆ ಶಿಕ್ಷೆ ಅನ್ವಯವಾಗುವುದಿಲ್ಲ. ಅತ್ಯಾಚಾರಕ್ಕೆ ಹೊರತಾದ ಕೃತ್ಯಕ್ಕೆ ಮಾತ್ರ ಅನ್ವಯ.
ಸಿಆರ್​ಪಿಸಿ 198(2)
ವಿವಾಹೇತರ ಸಂಬಂಧ ಹೊಂದಿದ ಪುರುಷನ ವಿರುದ್ಧ ಆತನ ಪತ್ನಿ ಅಥವಾ ಸಂಬಂಧ ಹೊಂದಿದ ಮಹಿಳೆಯ ಪತಿ ಆರೋಪ ಹೊರಿಸಿ ಪ್ರಕರಣ ದಾಖಲಿಸಲು ಅನುವು ಮಾಡಿಕೊಡುತ್ತದೆ.
ಅಡಲ್ಟರಿ ಎಂದರೆ ತನ್ನ ಪತ್ನಿಯಲ್ಲದ ಮಹಿಳೆಯೊಂದಿಗೆ ಮತ್ತೊಬ್ಬ ವಿವಾಹಿತ ಪುರುಷನಿಂದ ದೈಹಿಕ ಸಂಪರ್ಕ. ಇಬ್ಬರ ಸಮ್ಮತಿಯಿಂದ ನಡೆದರೆ ಅದು ಅಡಲ್ಟರಿ.
ಅನೈತಿಕ ಸಂಬಂಧ ಇಟ್ಟುಕೊಂಡರೆ ಇನ್ನು ಮುಂದೆ ಪತ್ನಿಗೂ ಕಠಿಣ ಶಿಕ್ಷೆ?
ವಿವಾಹ ಪಾವಿತ್ರ್ಯ ಕಾಪಾಡಲು ಅಕ್ರಮ ಸಂಬಂಧದ ವಿರುದ್ಧದ ಶಿಕ್ಷೆ ಬೇಕು
ದಾಂಪತ್ಯವನ್ನು ಮುರಿಯುತ್ತಿದೆ ಅಕ್ರಮ ಸಂಬಂಧ,
ಹದ ತಪ್ಪುತ್ತಿದೆ ದಾಂಪತ್ಯ,
ವಿವಾಹೇತರ ಸಂಬಂಧದ ಬಗ್ಗೆ ಎಚ್ಚರಿಕೆ ಇರಲಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....