ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಜೀವಕೋಶ

♦ ಜೀವಕೋಶವು ಜೀವಿಯ ರಚನಾತ್ಮಕ ಹಾಗೂ ಕಾರ್ಯ ನಿರ್ವಾಹಕ ಘಟಕವಾಗಿರುತ್ತದೆ.
♦ ಜೀವಕೋಶದ ಮೂಲ ಘಟಕಕ್ಕೆ ಜೀವಕೋಶವೆಂದು ಹೆಸರಿಸಿದವರು 'ರಾಬರ್ಟ್ ಹುಕ್'
♦ ಜೀವಕೋಶದಲ್ಲಿ ಮೂರು ಪ್ರಮುಖ ಭಾಗಗಳು ಇವೆ, ಅವುಗಳೆಂದರೆ :
ಕೋಶಪೊರೆಕೋಶದ್ರವ್ಯಕೋಶಬೀಜ
♦ ಕೋಶಪೊರೆ : ಜೀವಕೋಶವನ್ನು ರಕ್ಷಿಸಿ ಕೋಶದೊಳಗೆ ಹೋಗುವ ಮತ್ತು ಬರುವ ವಸ್ತುಗಳ ಚಲನೆಯನ್ನು ನಿಯಂತ್ರಿಸುವುದೇ ಕೋಶಪೊರೆ. ಕೋಶಪೊರೆ ಅತ್ಯಂತ ಸೂಕ್ಷ್ಮವಾದ ಪೊರೆಯಾಗಿದ್ದು ಜೀವಕೋಶವನ್ನು ಕೋಟೆಯಂತೆ ಆವರಿಸುತ್ತದೆ ಹಾಗೆಯೇ ಜೀವಕೋಶಕ್ಕೆ ನಿರ್ದಿಷ್ಟ ಆಕಾರ ನೀಡುತ್ತದೆ.
♦ ಕೋಶದ್ರವ್ಯ : ಇದು ಕೋಶಪೊರೆ ಮತ್ತು ಕೋಶಬೀಜದ ನಡುವೆ ಇರುವ ದ್ರವವಾಗಿದೆ.
♦ ಕೋಶಕೇಂದ್ರ (ಕೋಶಬೀಜ) : ಇದು ಜೀವಕೋಶದ ಮಧ್ಯೆ ಇರುವಂತಹ ಕಾಯ. ಇದು ನಾಲ್ಕು ಮುಖ್ಯ ಭಾಗಗಳನ್ನು ಹೊಂದಿದ್ದು 'ವರ್ಣಜಾಲ' ಎಂಬ ದಾರದಂತಹ ರಚನೆ ಪ್ರಮುಖವಾದುದು. ಇದು ಕೋಶ ವಿಭಜನೆಯ ಸಮಯದಲ್ಲಿ ಸಣ್ಣ ತಂತುಗಳಾಗಿ ಮಾರ್ಪಡುತ್ತದೆ. ಕೋಶ ಬೀಜವು ಕಿರುಕೋಶಬೀಜಗಳನ್ನು ಸಹ ಒಳಗೊಂಡಿರುತ್ತದೆ. ಕೋಶಕೇಂದ್ರ ದ್ರವ್ಯದಲ್ಲಿ ಕಾಣುವ ದಾರದ ಎಳೆಗಳಂತಹ ರಚನೆಗಳನ್ನು 'ಕ್ರೊಮ್ಯಾಟಿನ್' ಎಂದು ಕರೆಯುತ್ತಾರೆ.
♦ ನ್ಯೂಕ್ಲಿಯರ್ ಪೊರೆ :ಕೋಶಕೇಂದ್ರವನ್ನು ಆವರಿಸಿರುವ ಪೊರೆಯಾಗಿದೆ. ಇದರಲ್ಲಿ ಸಣ್ಣ ಸಣ್ಣ ರಂಧ್ರಗಳಿದ್ದು ಅವುಗಳ ಮೂಲಕ ಕೋಶಕೇಂದ್ರದ ಒಳಗೆ ಹಾಗೂ ಹೊರಗೆ ರಾಸಾಯನಿಕ ವಸ್ತುಗಳ ಸಾಗಾಣಿಕೆಯನ್ನು ನಿಯಂತ್ರಿಸುತ್ತದೆ.
♦ ಕಿರುಕೋಶ ಬೀಜ : ಕಿರುಕೋಶ ಬೀಜವು ರೈಬೋಸ್ ನ್ಯೂಕ್ಲಿಕ್ ಆಮ್ಲ ಮತ್ತು ಸಸಾರಜನಕದಿಂದ ಆಗಿರುತ್ತದೆ.
ಜೀವಕೋಶದ ವಿವಿಧ ಕಣದಂಗಗಳು ಮತ್ತು ಅವುಗಳ ಕ್ರಿಯೆಗಳು :
♦ ಮೈಟೋಕಾಂಡ್ರಿಯಾ (ಶಕ್ತಿ ಉತ್ಪಾದನಾ ಕೇಂದ್ರ) :ಮೈಟೋಕಾಂಡ್ರಿಯಾ ಕಣದಂಗಗಳನ್ನು ವಿಜ್ಞಾನಿ 'ಕೊಲ್ಲಿಕರ್' ಕಂಡುಹಿಡಿದರು. ಇದು ಕೋಶದ ಉಸಿರಾಟ ಕೇಂದ್ರವಾಗಿದೆ. ಇಲ್ಲಿ ಶಕ್ತಿ ಬಿಡುಗಡೆಯಾಗುವುದರಿಂದ ಇದನ್ನು ಜೀವ ಕೋಶದ ಶಕ್ತಿ ಕೇಂದ್ರ ಎನ್ನುವರು.
♦ ರೈಬೋಸೋಮ (ಪ್ರೋಟೀನ್ ಕಾರ್ಖಾನೆ) :1955ರಲ್ಲಿ 'ಫ್ಯಾರಡೆ' ರೈಬೋಸೋಮ್ ಕಣದಂಗಗಳನ್ನು ಕಂಡುಹಿಡಿದರು. ಇದು ಸಸಾರಜನಕ ತಯಾರಿಸುವುದರೊಂದಿಗೆ ರೈಬೋಸೋಮುಗಳು ಪ್ರೋಟೀನ್ ಉತ್ಪಾದನೆಯಲ್ಲಿ ಸಹಾಯ ಮಾಡುತ್ತದೆ.
♦ ಗಾಲ್ಗಿ ಸಂಕೀರ್ಣ : ಇದರ ಮುಖ್ಯ ಕಾರ್ಯ ಪ್ರೋಟೀನುಗಳನ್ನು ಸಂಗ್ರಹಿಸಿ ಜೀವಕೋಶಕ್ಕೆ ಬೇಕಾದ ಕಿಣ್ವಗಳನ್ನು ಉತ್ಪಾದಿಸುತ್ತದೆ. ಲೈಸೋಸೋಮ್ ಗಳನ್ನು ಉತ್ಪತ್ತಿ ಮಾಡಲು ಇದು ನೆರವಾಗುತ್ತದೆ.
♦ ಕೋಶರಸಾಂತರ ಜಾಲ : ಇದು ಕೋಶಪೊರೆಯಿಂದ ಕೋಶ ಬೀಜದವರೆಗೆ ಹರಡಿರುವ ನಳಿಕೆಗಳ ಜಾಲವಾಗಿದೆ.
ಜೀವಕೋಶದ ವಿವಿಧ ಕಣದಂಗಗಳು ಮತ್ತು ಅವುಗಳ ಕ್ರಿಯೆಗಳು :
♦ ಸೆಂಟ್ರಿಯೋಲ್ : ಕೋಶಕೇಂದ್ರದ ಸಮೀಪದಲ್ಲಿ ಇರುವ ಕಣದಂಗವಾಗಿದ್ದು ಕೋಶ ವಿಭಜನೆಯ ಸಂದರ್ಭದಲ್ಲಿ ಕದಿರಿನ ಎಳೆಗಳನ್ನು ಉತ್ಪತ್ತಿ ಮಾಡುತ್ತದೆ.
♦ ವರ್ಣಜಾಲ (ಕ್ರೋಮ್ಯಾಟಿನ್) :ಅನುವಂಶಿಕ ಲಕ್ಷಣಗಳನ್ನು ಪೀಳಿಗೆಯಿಂದ ಪೀಳಿಗೆಗೆ ವರ್ಗಾಯಿಸುತ್ತದೆ. ಇದು ಡಿ.ಎನ್.ಎ ಮತ್ತು ಪ್ರೋಟೀನ್ ಗಳಿಂದ ಮಾಡಲ್ಪಟ್ಟಿವೆ.
♦ ಲೈಸೋಜೋಮ್ : ಅನುಪಯುಕ್ತ ವಸ್ತು ಮತ್ತು ಮುದಿ ಕೋಶಗಳ ನಾಶಕ್ಕೆ ಕಾರಣವಾಗುತ್ತದೆ. ಆದ್ದರಿಂದ ಇದನ್ನು 'ಆತ್ಮಹತ್ಯಾ ಸಂಚಿ' ಎಂದು ಕರೆಯುತ್ತಾರೆ. ಲೈಸೋಸೋಮ್ ಕಣದಂಗಗಳನ್ನು ಕಂಡುಹಿಡಿದ ವಿಜ್ಞಾನಿ ಕ್ರಿಶ್ಚಿಯನ್-ಡಿ-ಡು.
♦ ಕಿರುಕೋಶಬೀಜ ಕೇಂದ್ರ : ಇದು ದೇಹದಲ್ಲಿ ಸಸಾರಜನಕ ತಯಾರಿಸಲು ಬೇಕಾದ ವಸ್ತುಗಳನ್ನು ಸಜ್ಜುಗೊಳಿಸುತ್ತದೆ.
♦ ಸಮರೂಪಿ ವರ್ಣತಂತುಗಳು : ಕೋಶಗಳಲ್ಲಿ ಜೋಡಿಯಾಗಿರುವ ವರ್ಣತಂತುಗಳಿಗೆ ಸಮರೂಪಿ ವರ್ಣತಂತುಗಳು ಎನ್ನುವರು. ಇವುಗಳಲ್ಲಿ ಒಂದು ವರ್ಣತಂತುವು ಎರಡು ಸಮಾನಾಂತರ ಎಳೆಗಳಿಂದ ಕೂಡಿರುತ್ತದೆ. ಇವುಗಳನ್ನು ಬಂಧಿಸುವ ಬಿಂದುವನ್ನು 'ಸೆಂಟ್ರಿಯೋಮಿಯರ್' ಎನ್ನುವರು.
♦ ಕ್ಲೋರೋಪ್ಲಾಸ್ಪ್ (ಹರಿತ್ತು) : ಸಸ್ಯಕೋಶಗಳಲ್ಲಿ ಕಂಡುಬರುವ ಹಸಿರಾದ ಮತ್ತು ದ್ಯುತಿಸಂಶ್ಲೇಷಣೆ ಕ್ರಿಯೆ ನಡೆಯುವ ಕೇಂದ್ರ ಮತ್ತು ಸೌರಶಕ್ತಿಯನ್ನು ರಾಸಾಯನಿಕ ಶಕ್ತಿಯನ್ನಾಗಿ ಪರಿವರ್ತಿಸುವುದು.
♦ ಎಂಡೋಪ್ಲಾಸ್ಮಿಕ್ ರೆಟಿಕ್ಯೂಲಮ್ ಕೋಶಕ್ಕೆ ಆಂತರಿಕವಾಗಿ ಆಧಾರ ನೀಡುವುದು ಮತ್ತು ಪ್ರೋಟಿನನ್ನು ಸಾಗಿಸುತ್ತದೆ.
ಜೀವಕೋಶದ ಆಧಾರದ ಮೇಲೆ ಜೀವಿಗಳ ವಿಂಗಡನೆ :
📕📕📗📔
♦ ಏಕಕೋಶ ಜೀವಿಗಳು : ಇವು ಒಂದೇ ಜೀವಕೋಶವನ್ನು ಹೊಂದಿದ್ದು ಆ ಜೀವಕೋಶವು ಎಲ್ಲ ಕ್ರಿಯೆಗಳನ್ನು ಕೈಗೊಳ್ಳುತ್ತದೆ.
♦ ಬಹುಕೋಶೀಯ ಜೀವಿಗಳು : ಇವು ಒಂದಕ್ಕಿಂತ ಹೆಚ್ಚು ಜೀವಕೋಶಗಳನ್ನು ಹೊಂದಿದ್ದು, ವಿಶಿಷ್ಟ ಅಂಗಾಂಶ, ಅಂಗ ಮತ್ತು ಅಂಗವ್ಯೂಹ ಹೊಂದಿದ ಜೀವಿಗಳನ್ನು ಬಹುಕೋಶಿಯ ಜೀವಿಗಳು ಎಂದು ಕರೆಯುತ್ತಾರೆ.
ಕೋಶ ವಿಭಜನೆ :
ಒಂದು ಜೀವಕೋಶ ಪ್ರೌಢಾವಸ್ಥೆ ತಲುಪಿದಾಗ ವಿಭಜನೆ ಹೊಂದಿ ಎರಡು ಮರಿಕೋಶಗಳಾಗುವ ಕ್ರಿಯೆಗೆ ಕೋಶ ವಿಭಜನೆ ಎನ್ನುವರು. ಏಕಕೋಶ ಜೀವಿಗಳಲ್ಲಿ ಈ ವಿಭಜನೆ ಆ ಜೀವಿಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ, ಆದರೆ ಬಹುಕೋಶ ಜೀವಿಗಳಲ್ಲಿ ಬೆಳವಣಿಗೆ, ಸವೆದ ಭಾಗಗಳ ದುರಸ್ತಿ, ಪ್ರಜನನ ಕ್ರಿಯೆಗಳು ನಡೆಯುತ್ತದೆ. ಕೋಶ ವಿಭಜನೆಯಲ್ಲಿ ಎರಡು ವಿಧಗಳಿವೆ. ಅವು
1. ಮೈಟೋಸಿಸ್
2. ಮಿಯಾಸಿಸ್
1. ಮೈಟೋಸಿಸ್ : ಇದು ಮೇಲ್ವರ್ಗದ ಸಸ್ಯ ಹಾಗೂ ಪ್ರಾಣಿಗಳ ವರ್ಧನ ಕೋಶಗಳಲ್ಲಿ ಸಾಮಾನ್ಯವಾಗಿರುತ್ತದೆ. ಪ್ರೌಢಕೋಶವು ಎರಡು ಮರಿಕೋಶಗಳಾಗಿ ವಿಭಜಿಸುತ್ತದೆ. ಈ ವಿಭಜಿತ ಕೋಶಗಳಲ್ಲೂ ಪ್ರೌಢಕೋಶದಲ್ಲಿದ್ದಷ್ಟೆ ವರ್ಣರೇಖೆಗಳು ಇರುತ್ತವೆ.
2. ಮಿಯಾಸಿಸ್ : ವರ್ಣರೇಖೆಗಳನ್ನು ದ್ವಿಗುಣಿತ ಸ್ಥಿತಿಯಿಂದ ಏಕಸ್ಥಿತಿಗೆ ಇಳಿಸುವ ಕೋಶ ವಿಭಜನೆಯಲ್ಲಿ ಮೊದಲು ಸಂಖ್ಯಾಕ್ಷೀಣ ವಿಭಜನೆಯಾಗಿ ನಂತರ ಸಮಭಾಜಕ ವಿಭಜನೆಯಾಗುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...