ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕರ್ನಾಟಕದ ನದಿಗಳು ಬಗ್ಗೆ ನಿಮ್ಮಗೇಷ್ಟು ಗೊತ್ತು...

1) ಪೂರ್ವಾಭಿಮುಖವಾಗಿ ಹರಿಯುವ ನದಿಗಳನ್ನು ಹೆಸರಿಸಿ?
* 1) ಘಟಪ್ರಭಾ.
   2) ಮಲಪ್ರಭಾ.
   3) ಭೀಮಾ.
   4) ತುಂಗಭದ್ರಾ.
   5) ಡೋಣಿ.
               - ಮುಂತಾದವು.

2) ಮಹಾರಾಷ್ಟ್ರದ "ಭೀಮಾಶಂಕರ್" ಬಳಿಯಲ್ಲಿ ಉಗಮವಾಗುವ ನದಿ ಯಾವುದು?
* ಭೀಮಾನದಿ.

3) "ಉತ್ತರ ಪಿನಾಕಿನಿ ನದಿ"ಯ ಮತ್ತೊಂದು ಹೆಸರೇನು?
* ಪೆನ್ನಾರ್.

4) "ಛಾಯಾ ಭಗವತಿ" ಜಲಪಾತವನ್ನು ನಿರ್ಮಿಸುವ ನದಿ ಯಾವುದು?
* ಡೋಣಿ.

5) ಹಿರಣ್ಯಕೇಶಿ & ಮಾರ್ಕಂಡೇಯ ಇವು ಯಾವ ನದಿಯ ಉಪನದಿಗಳು?
* ಘಟಪ್ರಭಾ.

6) ರಾಣೆಬೆನ್ನೂರಿನ ಬಳಿ ಯಾವ ನದಿಯು ತುಂಗಭದ್ರಾ ನದಿಯನ್ನು ಸೇರುವುದು?
* ಕುಮುದ್ವತಿ.

7) "ನವಿಲುತಿರ್ಥ"ವೆಂದು ಯಾವ ನದಿಯನ್ನು ಕರೆಯುವರು?
* ಮಲಪ್ರಭಾ.

8) "ಗೋಕಾಕ್ ಜಲಪಾತ"ವನ್ನು ಉಂಟು ಮಾಡುವ ನದಿ ಯಾವುದು?
* ಘಟಪ್ರಭಾ.

9) ವೇದಾವತಿ & ಹಗರಿ ಯಾವ ನದಿಯ ಉಪನದಿಗಳು?
* ತುಂಗಭದ್ರಾ.

10) ಘಟಪ್ರಭಾ ನದಿಯ ಉಗಮ ಸ್ಥಳ ಯಾವುದು?
* ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಪಶ್ಚಿಮಘಟ್ಟ.

11) ಬಾದಾಮಿ ಯಾವ ನದಿಯ ಎಡದಂಡೆಗೆ ಸಮೀಪದಲ್ಲಿದೆ?
* ಮಲಪ್ರಭಾ.

12) ಗುಲ್ಬರ್ಗಾ ಜಿಲ್ಲೆಯ ಜಪಾಲಪುರದ ಬಳಿ ಡೋಣಿ ಯಾವ ನದಿಯನ್ನು ಸೇರುವುದು?
* ಕೃಷ್ಣಾ.

13) ಮಲಪ್ರಭಾ ನದಿಯ ಉಗಮ ಸ್ಥಳ ಯಾವುದು?
* ಕನಕುಂಬಿ.

14) ಕನಕುಂಬಿ ಬೆಳಗಾವಿ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿದೆ?
* ಖಾನಾಪುರ.

15) ಯಾವ ನದಿಗೆ "ಪಂಪಸಾಗರ" ಜಲಾಶಯ ನಿರ್ಮಿಸಲಾಗಿದೆ?
* ತುಂಗಭದ್ರಾ.

16) ಮಹಾರಾಷ್ಟ್ರದ ದತ್ತಪಟ್ಟಣದ ಬಳಿ ಹುಟ್ಟುವ ನದಿ ಯಾವುದು?
* ಡೋಣಿ.

17) ಬೆಣ್ಣೆ ಹಳ್ಳ & ಹಿರೇ ಹಳ್ಳ ಯಾವ ನದಿಯ ಉಪನದಿಗಳು?
* ಮಲಪ್ರಭಾ.

18) ತುಂಗಾಭದ್ರಾ ನದಿಯು ಆಂಧ್ರಪ್ರದೇಶದ ಯಾವ ಸ್ಥಳದಲ್ಲಿ ಕೃಷ್ಣಾ ನದಿಯನ್ನು ಸೇರುತ್ತದೆ?
* ಕರ್ನೂಲ್ ಬಳಿ ಆಲಂಪುರದಲ್ಲಿ.

19) ಇತಿಹಾಸ ಪ್ರಸಿದ್ಧ ಪಟ್ಟದಕಲ್ಲು & ಐಹೋಳೆ ಯಾವ ನದಿಯ ಬಲದಂಡೆಗೆ ಇವೆ?
* ಮಲಪ್ರಭಾ.

20) ಶಿವಮೊಗ್ಗದ ಮೂಲಕ ಹರಿದು ಬರುವ "ವರದಾನದಿಯು" ಬಿಲ್ವಿಗಿಯ ಬಳಿ ಯಾವ ನದಿಯನ್ನು ಸೇರುವುದು?
* ತುಂಗಭದ್ರಾ.

21) ವರದಾ & ಕುಮದ್ವತಿ ಯಾವ ನದಿಯ ಉಪನದಿಗಳು?
* ತುಂಗಭದ್ರಾ.

 ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳನ್ನು ಹೆಸರಿಸಿ? * 1) ಕಾಳಿ.
  2) ಶರಾವತಿ.
  3) ನೇತ್ರಾವತಿ.
  4) ಬೇಡ್ತಿ.
  5) ಅಘನಾಶಿನಿ.
  6) ವಾರಾಹಿ.
  7) ಮಹಾದಾಯಿ.
               --- ಮುಂತಾದವು.

23) "ಬಾರಪೊಳೆ ನದಿ"ಯು ಯಾವ ಎರಡು ರಾಜ್ಯಗಳಲ್ಲಿ ಹರಿಯುತ್ತದೆ?
* ಕರ್ನಾಟಕ & ಕೇರಳ.

24) "ಮಾಗೋಡು ಜಲಪಾತ"ವನ್ನು ಉಂಟುಮಾಡುವ ನದಿ ಯಾವುದು?
* ಬೇಡ್ತಿ.

25) ಬೇಡ್ತಿ ನದಿಯ ಮತ್ತೊಂದು ಹೆಸರೇನು?
* ಗಂಗಾವಳಿ.

26) ಕಾಳಿ ನದಿಯ ಉಗಮ ಸ್ಥಳ ಯಾವುದು?
* ಉತ್ತರಕನ್ನಡ ಜಿಲ್ಲೆಯ ಸೂಪಾ ತಾಲ್ಲೂಕಿನ ಡಿಗ್ಗಿಘಾಟಿನಲ್ಲಿ.

27) "ಭಂಡಾಜೆ ಜಲಪಾತ"ವನ್ನು ಉಂಟುಮಾಡುವ ನದಿ ಯಾವುದು?
* ನೇತ್ರಾವತಿ.

28) ಹರಿದ್ರಾತಿ & ಎಣ್ಣೆ ಹೊಳಿ ಇವು ಯಾವ ನದಿಯ ಪ್ರಮುಖ ಉಪನದಿಗಳು?
* ಶರಾವತಿ.

29) ಶರಾವತಿ ನದಿಯ ಉಗಮಸ್ಥಳ ಯಾವುದು?
* ಶಿವಮೊಗ್ಗ ಜಿಲ್ಲೆಯ ತಿರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥ.

30) ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಲ್ಲಿ ಉದ್ದವಾದ ನದಿ ಯಾವುದು?
* ಕಾಳಿನದಿ.

31) "ಉಂಚಳ್ಳಿ ಜಲಪಾತ"ವನ್ನು ನಿರ್ಮಿಸುವ ನದಿ ಯಾವುದು?
* ಅಘನಾಶಿನಿ.

32) ಭೂಗರ್ಭದಲ್ಲಿ ವಿದ್ಯುತ್ ಉತ್ಪಾದನೆಯನ್ನು ಆರಂಭಿಸಿರುವ ಏಕೈಕ ನದಿ ಯಾವುದು?
* ವರಾಹಿ ನದಿ.

33) ನೇತ್ರಾವತಿ ನದಿಯ ಉಗಮಸ್ಥಳ ಯಾವುದು?
* ಚಿಕ್ಕಮಗಳೂರು ಜಿಲ್ಲೆಯ ಬಲ್ಲಾಳರಾಯನದುರ್ಗದ ಬಳಿ.

34) "ಲಾಲಗುಳಿ ಜಲಪಾತ''ವನ್ನು ಉಂಟು ಮಾಡುವ ನದಿ ಯಾವುದು?
* ಕಾಳಿ ನದಿ.

35) ಕಳಸ & ಬಂಡೂರಿ ಯಾವ ನದಿಯ ಉಪನದಿಗಳು?
* ಮಹದಾಯಿ.

36) ಶಿವಗಂಗೆ & ಇಳಿಮನೆ ಜಲಪಾತಗಳನ್ನು ಉಂಟುಮಾಡುವ ನದಿ ಯಾವುದು?
* ಅಘನಾಶಿನಿ.

37) ಗುರುಪುರ & ಕುಮಾರಧಾರ ಯಾವ ನದಿಯ ಉಪನದಿಗಳು?
* ನೇತ್ರಾವತಿ.

38) ಮಹದಾಯಿ ನದಿಯು ಗೋವಾದಲ್ಲಿ ಯಾವ ಹೆಸರಿನಿಂದ ಹರಿಯುವುದು?
* ಮಾಂಡೋವಿ.

39) ಜಗತ್ಪ್ರಸಿದ್ಧ "ಜೋಗ್ ಜಲಪಾತ"ವನ್ನು ಸೃಷ್ಟಿಸಿದ ನದಿ ಯಾವುದು?
* ಶರಾವತಿ.

40) "ಕಪ್ಪುಕಾಳಿ" ಎಂದು ಯಾವ ನದಿಯನ್ನು ಕರೆಯುತ್ತಾರೆ?
* ಕಾಳಿ.

41) "ಪಣಜಿ" ಯಾವ ನದಿಯ ತೀರದಲ್ಲಿದೆ?
* ಮಹದಾಯಿ.

42) ತಟ್ಟಿಹಳ್ಳ & ಪಂಡ್ರಿ ಯಾವ ನದಿಯ ಉಪನದಿಗಳು?
* ಕಾಳಿನದಿ.

43) ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ದೇವಾಂಗ ಎಂಬಲ್ಲಿ ಉಗಮವಾಗುವ ನದಿ ಯಾವುದು?
* ಮಹದಾಯಿ.

44) ಚಾರ್ಮುಡಿ, ಶಿಶಿಲ & ಪಾಲ್ಗುಣಿ ಯಾವ ನದಿಯ ಉಪನದಿಗಳು?
* ನೇತ್ರಾವತಿ.

45) ಕನೇರಿ, ವಾಕಿ &  ಇವು ಯಾವ ನದಿಯ ಉಪನದಿಗಳು?
* ಕಾಳಿನದಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...