ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಜೀವರಕ್ಷಕರಿಗಿನ್ನು ಕಾನೂನು ಕವಚ,

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನೆರವಾಗುವ ರಾಜ್ಯದ ಜೀವರಕ್ಷಕರಿಗಿನ್ನು ಕಾನೂನಿನ ರಕ್ಷಣಾ ಕವಚ ಸಿಗಲಿದೆ. ರಸ್ತೆ ಬದಿ ನರಳಾಡುತ್ತ ಸಾವು, ಬದುಕಿನ ನಡುವೆ ಹೋರಾಡುವ ಗಾಯಾಳುಗಳಿಗೆ ನೆರವು ನೀಡುವವರಿಗೆ ಕೋರ್ಟ್, ಕಚೇರಿ, ಪೊಲೀಸ್ ಠಾಣೆ ಅಲೆದಾಟದ ಕಿರಿಕಿರಿ ತಪ್ಪಿಸುವ ಉದ್ದೇಶದಿಂದ ರೂಪಿಸಲಾ ಗಿರುವ ಕರ್ನಾಟಕ ಜೀವರಕ್ಷಕರ ಕಾನೂನು ರಕ್ಷಣಾ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅಂಕಿತ ಹಾಕಿದ್ದಾರೆ. ಆ ಮೂಲಕ ಜೀವರಕ್ಷಕರಿಗೆ ಕಾನೂನು ರಕ್ಷಣೆ ಒದಗಿಸಿದ ದೇಶದ ಮೊದಲ ರಾಜ್ಯ ಎಂಬ ಹಿರಿಮೆ ರಾಜ್ಯದ ಮುಡಿಗೇರಿದೆ.
ಕೇಂದ್ರದ ಕಾಯ್ದೆಯಿಲ್ಲ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾಗುವವರಿಗೆ ರಕ್ಷಣೆ ನೀಡುವ ಕುರಿತು ಕೇಂದ್ರ ಸರ್ಕಾರ ಯಾವುದೇ ಕಾಯ್ದೆ ರೂಪಿಸಿಲ್ಲ. ಆದರೆ, ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸಾರಿಗೆ ಸಚಿವಾಲಯ 2015ರಲ್ಲಿ ಕೆಲವು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿದೆ.
ಕಾಯ್ದೆ ಉದ್ದೇಶ
2015 ಮತ್ತು 2016ರಲ್ಲಿ ಅತಿಹೆಚ್ಚು ರಸ್ತೆ ಅಪಘಾತಗಳಾದ ಐದು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿತ್ತು. ಕೋರ್ಟ್-ಕಚೇರಿ ಅಲೆದಾಟಕ್ಕೆ ಹೆದರಿ ಗಾಯಾಳುಗಳಿಗೆ ನೆರವಾಗಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದ ಪರಿಣಾಮ ಗೋಲ್ಡನ್ ಅವರ್​ನಲ್ಲಿ ಆಸ್ಪತ್ರೆ ತಲುಪಲಾಗದೆ ನೂರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದರು. 2015ರಲ್ಲಿ ರಾಷ್ಟ್ರದಲ್ಲಿ ಸಂಭವಿಸಿದ್ದ 5.01 ಲಕ್ಷ ಅಪಘಾತಗಳಲ್ಲಿ 1.46 ಲಕ್ಷ ಜನರು ಮತ್ತು 2016ರಲ್ಲಿ 4.80 ಅಪಘಾತಗಳಲ್ಲಿ 1.50 ಲಕ್ಷ ಜನರು ಅಸುನೀಗಿದ್ದರು. ಕ್ಷಿಪ್ರ ಅವಧಿಯಲ್ಲಿ ವೈದ್ಯಕೀಯ ನೆರವು ಸಿಕ್ಕಿದ್ದರೆ ಒಂದಷ್ಟು ಜನರು ಬದುಕುಳಿಯುವ ಸಾಧ್ಯತೆ ಇತ್ತು.
ಏನಿದೆ ಕಾಯ್ದೆಯಲ್ಲಿ?
ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರನ್ನು ಕ್ಷಿಪ್ರ ಅವಧಿಯಲ್ಲಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ದೊರೆಯುವಂತೆ ಮಾಡುವವರು ಇನ್ಮುಂದೆ ಪೊಲೀಸರು ಅಥವಾ ತನಿಖೆಗೆ ಹೆದರಬೇಕಿಲ್ಲ. ಈ ಕಾಯ್ದೆ ಪ್ರಕಾರ ಸಕಾಲದಲ್ಲಿ ಗಾಯಾಳುಗಳಿಗೆ ನೆರವು ನೀಡಿದವರಿಗೆ ಕರ್ನಾಟಕ ಸರ್ಕಾರ ಆರ್ಥಿಕ ನೆರವನ್ನೂ ಒದಗಿಸಲಿದೆ. ಒಂದು ವೇಳೆ ಗಾಯಾಳುಗಳಿಗೆ ನೆರವಾಗುವವರು ಕೋರ್ಟ್ ಅಥವಾ ಪೊಲೀಸ್ ಠಾಣೆಗೆ ಹಾಜರಾಗುವ ಅನಿವಾರ್ಯತೆ ಬಂದರೆ ಅವರ ಖರ್ಚುವೆಚ್ಚ ಭರಿಸಲಾಗುತ್ತದೆ.
ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ನೆರವು ನೀಡಿದವರು ತಕ್ಷಣವೇ ನಿರ್ಗಮಿಸಬಹುದು.
ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆ ವೈದ್ಯರು ಗಾಯಾಳುವನ್ನು ದಾಖಲಿಸಿಕೊಂಡು ಪ್ರಥಮ ಚಿಕಿತ್ಸೆ ಕೊಡುವುದು ಕಡ್ಡಾಯ.
ಕಾಯ್ದೆ ರೂಪಿಸಿದ ರಾಜ್ಯಕ್ಕೆ ಹೆಮ್ಮೆ
ಬೆಂಗಳೂರು: ಕೆಎಸ್​ಆರ್​ಟಿಸಿ ಭದ್ರತಾ ಸಿಬ್ಬಂದಿಯೊಬ್ಬರು ಬೆಂಗಳೂರಿನ ಮೈಸೂರು ರಸ್ತೆಯ ಮೇಲ್ಸೇತುವೆಯಲ್ಲಿ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದರೂ ಯಾವೊಬ್ಬ ದಾರಿಹೋಕರೂ ಅವರನ್ನು ಆಸ್ಪತ್ರೆಗೆ ದಾಖಲಿಸುವ ಕಾಳಜಿ, ಔದಾರ್ಯ ತೋರಿಸಿರಲಿಲ್ಲ, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ ಅಪಘಾತಕ್ಕೀಡಾಗಿ ಯುವಕನೊಬ್ಬ ಬಿದ್ದು ಒದ್ದಾಡಿದರೂ ಕಿಕ್ಕಿರಿದು ನೆರೆದಿದ್ದ ಜನರ ಪೈಕಿ ಒಬ್ಬರೂ ಮುಂದೆ ಬಂದು ಆಸ್ಪತ್ರೆಗೆ ಸೇರಿಸಲಿಲ್ಲ. ಬದಲಾಗಿ ಸನ್ನಿವೇಶದ ಫೋಟೋ, ವೀಡಿಯೋ ತೆಗೆದುಕೊಳ್ಳುವುದರಲ್ಲಿಯೇ ನಿರತರಾಗಿದ್ದರು.
ಇನ್ನು ಬೇರೆ ಬೇರೆ ರಾಜ್ಯಗಳಿಂದ ವ್ಯಾಪಾರ ಮತ್ತಿತರ ಕಾರಣಗಳಿಗೆ ರಾಜ್ಯಕ್ಕೆ ಬಂದು ಅಪಘಾತಕ್ಕೀಡಾದಲ್ಲಿ ಇವರ ಚಿಕಿತ್ಸಾ ವೆಚ್ಚದ ಹೊಣೆ ಹೊರುವವರು ಯಾರು? ಆಸ್ಪತ್ರೆಗೆ ದಾಖಲಿಸುವವರು ಜವಾಬ್ದಾರಿ ತೆಗೆದುಕೊಳ್ಳುವುದಾದರೂ ಹೇಗೆ? ಆಸ್ಪತ್ರೆಗೆ ಕರೆತಂದವರೇ ಚಿಕಿತ್ಸಾ ವೆಚ್ಚ ಪಾವತಿಸಬೇಕಿತ್ತು. ಹಣ ಪಾವತಿಸದೇ ಇದ್ದರೆ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದವು. ಈ ಎಲ್ಲ ಪ್ರಶ್ನೆಗಳು ಹಿಂದಿನ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಯು.ಟಿ.ಖಾದರ್ ಅವರನ್ನು ಕಾಡಿದವು. ಇದಕ್ಕೊಂದು ಪರಿಹಾರ ಕಂಡುಹಿಡಿಯಬೇಕೆಂದು ಆಲೋಚಿಸಿದ್ದರ ಫಲವೇ ಕರ್ನಾಟಕ ಗುಡ್ ಸಮಾರಿಟನ್ ಆಂಡ್ ಮೆಡಿಕಲ್ ಪ್ರೊಫೆಷನಲ್ ಬಿಲ್ ಜನ್ಮ ತಾಳಿತು. ಈ ಕಾಯ್ದೆಯಡಿ ಆಸ್ಪತ್ರೆಗೆ ದಾಖಲಾಗುವ ವ್ಯಕ್ತಿಗೆ 48 ಗಂಟೆ ಅವಧಿಯ ಚಿಕಿತ್ಸಾ ವೆಚ್ಚ 25 ಸಾವಿರ ರೂ.ಗಳನ್ನು ಸರ್ಕಾರವೇ ಭರಿಸುತ್ತದೆ. ರಾಜ್ಯ ಸರ್ಕಾರ ‘ಕರ್ನಾಟಕ ಪರೋಪಕಾರ ಮತ್ತು ವೈದ್ಯಕೀಯ ವೃತ್ತಿಪರ ಕಾಯ್ದೆ 2016’ ದೇಶಕ್ಕೆ ಮಾದರಿಯಾಗಿದೆ. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿರುವುದು ರಾಜ್ಯಕ್ಕೆ ಮತ್ತೊಂದು ಗರಿ ಮೂಡಿಸಿದೆ.
ಅಪಘಾತಕ್ಕೀಡಾದವರ ಜೀವ ಉಳಿಸುವಲ್ಲಿ ಈ ಕಾಯ್ದೆ ಹೆಚ್ಚು ನೆರವಿಗೆ ಬರುತ್ತದೆ. ದೇಶದಲ್ಲೇ ಮೊದಲ ಬಾರಿಗೆ ರೂಪುಗೊಂಡ ಈ ಕಾಯ್ದೆಗೆ ಈಗ ರಾಷ್ಟ್ರಪತಿಗಳು ಅಂಕಿತ ಹಾಕಿರುವುದು ಸಂತಸ ತಂದಿದೆ. ಗೃಹ ಹಾಗೂ ಆರೋಗ್ಯ ಇಲಾಖೆಗಳು ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಒತ್ತು ನೀಡಬೇಕು.
-ಯು.ಟಿ.ಖಾದರ್, ನಗರಾಭಿವೃದ್ಧಿ ಸಚಿವ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...