ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಏಳು ದಶಕದಲ್ಲಿ ಆರ್ಥಿಕತೆ, ಕೈಗಾರಿಕೆ, ಉದ್ದಿಮೆ ಬೆಳವಣಿಗೆ

ದೇಶವು ಈ 7 ದಶಕದಲ್ಲಿ ಆರ್ಥಿಕ ಹಾಗೂ ಉದ್ಯಮ ವಲಯದಲ್ಲಿ ಭಾರಿ ಸಕಾರಾತ್ಮಕ ಪ್ರಗತಿ ಕಂಡಿದೆ. ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿರುವ ಭಾರತ, ಜಿಡಿಪಿ ಬೆಳವಣಿಗೆಯ ದೃಷ್ಟಿಯಿಂದ ವಿಶ್ವದಲ್ಲಿಯೇ ಅತಿ ವೇಗದಲ್ಲಿ ಬೆಳವಣಿಗೆ ಹೊಂದುತ್ತಿದೆ. ವಿಶ್ವದ 6ನೇ ಅತಿ ದೊಡ್ಡ ಆರ್ಥಿಕತೆಯಾಗಿ ಇತ್ತೀಚೆಗೆ ಫ್ರಾನ್ಸ್‌ ಅನ್ನೂ ಭಾರತ ಹಿಂದಿಕ್ಕಿದೆ. ಸ್ವಾತಂತ್ರ್ಯದ ಆರಂಭಿಕ ಹಂತದಲ್ಲಿ ರಚನೆಯಾದ ಕೈಗಾರಿಕಾ ನೀತಿಯಿಂದ ಇತ್ತೀಚಿನ ಮೇಕ್‌ ಇನ್‌ ಇಂಡಿಯಾದ ತನಕ ಅನೇಕ ಕೈಗಾರಿಕಾ ನೀತಿಗಳು ದೇಶದ ಉದ್ಯಮ ವಲಯದ ಚಹರೆಯನ್ನೇ ಬದಲಿಸಿದೆ. ಮೊದ ಮೊದಲು ಕೇಂದ್ರ ಸರಕಾರದ ಅಧೀನದಲ್ಲಿ ಉದ್ಯಮ ವಲಯದ ದಿಗ್ಗಜ ಕಂಪನಿಗಳು ಪ್ರಗತಿಯಾದರೆ, ಉದಾರೀಕರಣದ ನಂತರ ಖಾಸಗಿ ವಲಯದ ಕೈಗಾರಿಕೆಗಳೂ ಗಣನೀಯ ಪ್ರಗತಿ ದಾಖಲಿಸಿತು. ಎಂಬತ್ತರ ದಶಕದ ನಂತರ ಐಟಿ ವಲಯ, ಆರ್‌ಆ್ಯಂಡ್‌ಡಿ, ಇ-ಕಾಮರ್ಸ್‌ ಇತ್ತೀಚಿನ ಸ್ಟಾರ್ಟಪ್‌ ಗಳೆಂಬ ನವೋದ್ಯಮದ ತನಕ ಉದ್ಯಮ ಕ್ಷೇತ್ರ ಅನೇಕ ಟಿಸಿಲುಗಳನ್ನು ಒಡೆದಿದೆ.



1. ಜಿಡಿಪಿ ಪ್ರಗತಿ: ಭಾರತದ ಒಟ್ಟಾರೆ ರಾಷ್ಟ್ರೀಯ ಉತ್ಪನ್ನ ವನ್ನು (ಜಿಡಿಪಿ)ರೂಪಾಯಿಗಳ ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ, ಕಳೆದ 71 ವರ್ಷಗಳಲ್ಲಿ 2.7 ಲಕ್ಷ ಕೋಟಿ ರೂ.ಗಳಿಂದ ಬರೋಬ್ಬರಿ 190 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಮೊತ್ತಕ್ಕೆ ಜಿಗಿದಿದೆ. ಈ ವರ್ಷ ಶೇ.7.5ರ ಜಿಡಿಪಿ ಪ್ರಗತಿ ನಿರೀಕ್ಷಿಸಲಾಗಿದೆ.

2. ತಲಾ ಆದಾಯ ಏರಿಕೆ: ಸ್ವಾತಂತ್ರ್ಯದ ಸಿಕ್ಕಿದ 1947ರಲ್ಲಿ ಪ್ರತಿ ವ್ಯಕ್ತಿಯ ತಲಾ ಆದಾಯ 259 ರೂ.ಗಳಿದ್ದರೆ, 2018ರ ಮಾರ್ಚ್‌ ವೇಳೆಗೆ ಅದು 1,12,835 ರೂ.ಗೆ ಏರಿದೆ.

3. ದಾಖಲೆಯ ಆಹಾರೋತ್ಪಾದನೆ: 2017-18ರಲ್ಲಿ ದಾಖಲೆಯ 27.74 ಕೋಟಿ ಟನ್‌ ಆಹಾರ ಧಾನ್ಯಗಳನ್ನು ಉತ್ಪಾದಿಸಿದೆ, ಸ್ವಾತಂತ್ರ್ಯಾನಂತರ ಇಲ್ಲಿಯವರೆಗೆ ಆರು ಪಟ್ಟಕ್ಕೂ ಹೆಚ್ಚು ಆಹಾರ ಧಾನ್ಯ ಉತ್ಪಾದಿಸಲಾಗಿದೆ.

4. ಆಮದು-ರಫ್ತು ಹೆಚ್ಚಳ: 2017-18ರಲ್ಲಿ 30300 ಕೋಟಿ ಡಾಲರ್‌ ಮೌಲ್ಯದ ಉತ್ಪನ್ನ ಮತ್ತು ಸೇವೆಯನ್ನು ರಫ್ತು ಮಾಡಿತ್ತು. ಕೃಷಿ, ಇಂಧನ, ಗಣಿ, ಉತ್ಪಾದನಾ ವಲಯದ ಉತ್ಪನ್ನಗಳನ್ನು ಭಾರತ ರಫ್ತು ಮಾಡುತ್ತಿದೆ. ಆಮದು ಕೂಡ 2017-18ರಲ್ಲಿ 46500 ಕೋಟಿ ಡಾಲರ್‌ಗೆ ವೃದ್ಧಿಸಿದೆ.

5. ಉತ್ಪಾದನಾ ವಲಯ: ಭಾರತದ ಜಿಡಿಪಿಗೆ ಉತ್ಪಾದನಾ ವಲಯ ಶೇ.22ರಷ್ಟು ಕೊಡುಗೆ ನೀಡುತ್ತಿದ್ದು, ಆಟೊಮೊಬೈಲ್‌, ಮೊಬೈಲ್‌ ಉತ್ಪಾದನೆಯಲ್ಲಿ ಜಾಗತಿಕ ಮಟ್ಟದಲ್ಲಿಯೇ ಮುಂಚೂಣಿಯಲ್ಲಿದೆ.

6. ಸಾರ್ವಜನಿಕ ವಲಯದ ಕಂಪನಿಗಳು: 1951ರಲ್ಲಿ ಭಾರತದಲ್ಲಿದ್ದ ಕೇಂದ್ರೀಯ ಸಾರ್ವಜನಿಕ ಉದ್ದಿಮೆಗಳು ಕೇವಲ 5. ನಂತರ 1991ರ ವೇಲೆಗೆ 246ಕ್ಕೆ ವೃದ್ಧಿಸಿತ್ತು. ಈಗಲೂ ಡಿಆರ್‌ಡಿಒ, ಎಚ್‌ಎಎಲ್‌, ಬಿಎಚ್‌ಇಎಲ್‌, ಬೆಮೆಲ್‌, ಇಸ್ರೊ, ಕೋಲ್‌ ಇಂಡಿಯಾ, ಐಒಸಿ, ಎಚ್‌ಪಿ, ಒಎನ್‌ಜಿಸಿ ಇತ್ಯಾದಿ ಸಾರ್ವಜನಿಕ ತೈಲ ಕಂಪನಿಗಳು ಆರ್ಥಿಕತೆಗೆ ಗಣನೀಯ ಕೊಡುಗೆ ಸಲ್ಲಿಸುತ್ತಿವೆ.

7. ಖಾಸಗಿ ವಲಯದ ಕೈಗಾರಿಕೆ: ದೇಶದಲ್ಲಿ ಈಗ ಅತಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುತ್ತಿರುವ ಕ್ಷೇತ್ರಗಳಲ್ಲಿ ಖಾಸಗಿ ವಲಯದ ಕೈಗಾರಿಕೆಗಳೂ ಪ್ರಮುಖ. ಸ್ವಾತಂತ್ರ್ಯ ಗಳಿಸಿದ ಸಂದರ್ಭ ಟಾಟಾ ಸಮೂಹ ಖಾಸಗಿ ವಲಯದ ಪ್ರಮುಖ ಕಂಪನಿಗಳಲ್ಲೊಂದಾಗಿದ್ದರೆ, ಈಗ ಅಸಂಖ್ಯಾತ ದಿಗ್ಗಜ ಕಂಪನಿಗಳು ಹೊರಹೊಮ್ಮಿವೆ. ರಿಲಯನ್ಸ್‌ ಇಂಡಸ್ಟ್ರೀಸ್‌, ಎಲ್‌ಆ್ಯಂಡ್‌ಟಿ, ಭಾರ್ತಿ ಏರ್‌ಟೆಲ್‌, ಆದಿತ್ಯಾ ಗ್ರೂಪ್‌, ಮಹೀಂದ್ರಾ ಇತ್ಯಾದಿ ಅನೇಕ ಕಂಪನಿಗಳಿವೆ.

8. ಸೆನ್ಸೆಕ್ಸ್‌ ದಾಖಲೆಯ ಜಿಗಿತ: ಏಷ್ಯಾದ ಹಳೆಯ ಷೇರು ವಿನಿಮಯ ಕೇಂದ್ರಗಳಲ್ಲಿ ಒಂದಾಗಿರುವ ಬಾಂಬೆ ಸ್ಟಾಕ್‌ ಎಕ್ಸ್‌ಚೇಂಜ್‌ (ಬಿಎಸ್‌ ಇ) 2.3 ಲಕ್ಷ ಕೋಟಿ ರೂ.ಗೂ ಅಧಿಕ ಷೇರು ಮಾರುಕಟ್ಟೆ ಬಂಡವಾಳ ಹೊಂದಿದ್ದು, ವಿಶ್ವದ 10ನೇ ಅತಿ ದೊಡ್ಡ ಷೇರು ವಿನಿಮಯ ಕೇಂದ್ರವಾಗಿ ಹೊರಹೊಮ್ಮಿದೆ.

9. ಮಾಹಿತಿ ತಂತ್ರಜ್ಞಾನದ ಬೆಳವಣಿಗೆ: ಮಾಹಿತಿ ತಂತ್ರಜ್ಞಾನ ದೇಶದ ಜಿಡಿಪಿಗೆ 1998ರಲ್ಲಿ ಶೇ.1.2ರಷ್ಟು ಕೊಡುಗೆ ನೀಡಿದ್ದರೆ, 2017ರ ವೇಳೆಗೆ ಶೇ.7.7ಕ್ಕೆ ವೃದ್ಧಿಸಿದೆ. ಬೆಂಗಳೂರಿನಲ್ಲಿ ಆರಂಭವಾದ ಐಟಿ ಅಭ್ಯುದಯ ದೇಶದ ಪ್ರಮುಖ ಮಹಾ ನಗರಗಳಲ್ಲಿ ಭಾರಿ ಬೆಳವಣಿಗೆ ಸಾಧಿಸಿದೆ.

10. ನೋಟು ಅಮಾನ್ಯತೆ, ಜಿಎಸ್‌ಟಿ: ಕಾಳಧನದ ತಡೆ ಹಾಗೂ ಇತರ ಹಲವು ಆರ್ಥಿಕ ಸುಧಾರಣೆಯ ಉದ್ದೇಶವನ್ನು ಇಟ್ಟುಕೊಂಡು 2016ರ ನವೆಂಬರ್‌ 8ರಂದು ಘೋಷಣೆಯಾದ ನೋಟು ಅಮಾನ್ಯತೆ ಹಾಗೂ 2017ರ ಜುಲೈ 1ರಂದು ಜಾರಿಯಾದ ಜಿಎಸ್‌ಟಿ, ಸ್ವಾತಂತ್ರ್ಯೋತ್ತರ ಭಾರತದ ಕ್ರಾಂತಿಕಾರಕ ಆರ್ಥಿಕ ಸುಧಾರಣಾ ಕ್ರಮಗಳೆನಿಸಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....