ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಇನ್ಮುಂದೆ ದೇಶಕ್ಕೆ ಒಂದೇ ಡಿಎಲ್!,

ದೇಶಾದ್ಯಂತ ಏಕರೂಪ ಚಾಲನಾ ಪರವಾನಗಿ (ಡಿಎಲ್), ವಾಹನ ನೋಂದಣಿ ಪ್ರಮಾಣ ಪತ್ರ (ಆರ್​ಸಿ) ವಿತರಿಸಲು ಕೇಂದ್ರ ಮಹತ್ವದ ಹೆಜ್ಜೆ ಇರಿಸಿದೆ. 2019ರ ಜುಲೈನಿಂದ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದೇ ವಿನ್ಯಾಸ, ಬಣ್ಣದ ಡಿಎಲ್ ಕಾರ್ಡ್ ವಿತರಿಸ ಲಾಗುತ್ತದೆ.
20 ರೂ. ಖರ್ಚು
ಹೊಸ ಡಿಎಲ್ ಅಥವಾ ಆರ್​ಸಿ ಹೊಂದಲು ಕೇವಲ 15ರಿಂದ 20 ರೂ. ಖರ್ಚು ಬರುತ್ತದೆ. ಆದ್ದರಿಂದ, ನಿರ್ದಿಷ್ಟ ಅವಧಿಯಲ್ಲಿ ಈ ಕಾರ್ಡ್ ವಿತರಣೆ ಕಾರ್ಯ ಪೂರ್ಣಗೊಳಿಸ ಬಹುದು ಎನ್ನಲಾಗಿದೆ.
ಸ್ಮಾರ್ಟ್ ಕಾರ್ಡ್
ಹೊಸದಾಗಿ ವಿತರಿಸಲಾಗುವ ಡಿಎಲ್, ಆರ್​ಸಿ ಸ್ಮಾರ್ಟ್ ಕಾರ್ಡ್ ರೂಪದಲ್ಲಿರುತ್ತವೆ. ಮೈಕ್ರೋಚಿಪ್ ಜತೆಗೆ ಕ್ಯೂಆರ್ ಕೋಡ್ ಕೂಡ ಅಳವಡಿಕೆ ಆಗಿರುತ್ತದೆ. ಮೆಟ್ರೋ ರೈಲು, ಎಟಿಎಂ ಕಾರ್ಡ್​ಗಳಲ್ಲಿರುವಂತೆ ನಿಯರ್ ಫೀಲ್ಡ್ ಕಮ್ಯುನಿಕೇಷನ್ (ಎನ್​ಎಫ್​ಸಿ; ಕಾರ್ಡ್ ಅನ್ನು ಗುರುತಿಸುವ ಯಂತ್ರಕ್ಕೆ 4 ಸೆಂ.ಮೀ. ಹತ್ತಿರ ತಂದಾಗ ಅದರಲ್ಲಿನ ವಿವರಗಳು ಯಂತ್ರದಲ್ಲಿ ಕಾಣಿಸುವುದು) ವ್ಯವಸ್ಥೆಯನ್ನು ಹೊಂದಿರುತ್ತದೆ. ಇದರಿಂದಾಗಿ ಸಂಚಾರ ಪೊಲೀಸರಿಗೆ ಸುಲಭವಾಗಿ ದಾಖಲೆ ಪರಿಶೀಲಿಸಲು ಮತ್ತು ಜುಲ್ಮಾನೆ ವಿಧಿಸಲು ಅನುಕೂಲವಾಗುತ್ತದೆ.
ಏನೆಲ್ಲ ವಿವರ ಅಡಕ: ಹೊಸ ಡಿಎಲ್​ನಲ್ಲಿ ಕೇಂದ್ರ, ರಾಜ್ಯಸರ್ಕಾರಗಳ ಲಾಂಛನ, ಅದನ್ನು ನೀಡಿದ ಪ್ರಾದೇಶಿಕ ಸಾರಿಗೆ ಕಚೇರಿ ವಿವರ, ವಿತರಿಸಿದ ದಿನಾಂಕ ಮತ್ತು ಮಾನ್ಯತೆ ಹೊಂದಿರುವ ಅವಧಿ, ವಾಹನ ಚಾಲಕರ ರಕ್ತದ ಗುಂಪು, ಅಂಗಾಂಗ ದಾನಕ್ಕೆ ಸಮ್ಮತಿ ಇರುವ ಕುರಿತು ಮಾಹಿತಿ, ಅಪಘಾತದ ಸಂದರ್ಭದಲ್ಲಿ ತುರ್ತಾಗಿ ಕರೆ ಮಾಡಬಹುದಾದ ದೂರವಾಣಿ ಸಂಖ್ಯೆ ದಾಖಲಾಗಿರುತ್ತದೆ. ಆರ್​ಸಿಯಲ್ಲೂ ಈ ಮಾಹಿತಿಗಳ ಜತೆಗೆ ವಾಹನ ವಾಣಿಜ್ಯ ಬಳಕೆಯದ್ದೋ ಅಥವಾ ವೈಯಕ್ತಿಕ ಬಳಕೆಯದ್ದೋ, ವಾಹನದ ಚಾಸಿ ಹಾಗೂ ಇಂಜಿನ್ ಸಂಖ್ಯೆ, ಮಾಲಿನ್ಯ ನಿಯಮ ಪಾಲನೆಯ ವಿವರ ಇರುತ್ತದೆ.
ಭದ್ರತಾ ರೇಖೆ, ವಿವರಗಳ ಮೈಕ್ರೋ ಮುದ್ರಣ, ಮೈಕ್ರೋ ಗೆರೆ, ಹಾಲೋಗ್ರಾಮ್ ಮತ್ತು ವಾಟರ್​ವಾರ್ಕ್ ಎರಡೂ ಕಾರ್ಡ್​ಗಳಲ್ಲಿ ಸಾಮಾನ್ಯವಾಗಿರಲಿದೆ.
ಬದಲಾವಣೆಗೆ ಅವಕಾಶ: ಹೊಸದಾಗಿ ಡಿಎಲ್ ಮಾಡಿಸುವವರ ಜತೆಗೆ ಡಿಎಲ್ ಮತ್ತು ವಾಹನ ನೋಂದಣಿ ನವೀಕರಣದ ಸಂದರ್ಭದಲ್ಲೂ ಹೊಸ ಕಾರ್ಡ್ ಬದಲಿಸಿ ಕೊಡಲಾಗುತ್ತದೆ. ಸದ್ಯ ದೇಶಾದ್ಯಂತ ಪ್ರತಿದಿನ 32 ಸಾವಿರ ಡಿಎಲ್​ಗಳನ್ನು ಹೊಸದಾಗಿ ವಿತರಿಸಲಾಗುತ್ತಿದೆ ಇಲ್ಲವೇ ನವೀಕರಿ ಸಲಾಗುತ್ತದೆ. ಅಂತೆಯೇ ಪ್ರತಿದಿನ 43 ಸಾವಿರ ವಾಹನಗಳನ್ನು ಹೊಸದಾಗಿ ನೋಂದಣಿ ಮಾಡಿಸಲಾಗುತ್ತಿದೆ ಇಲ್ಲವೇ ನವೀಕರಿಸಲಾಗುತ್ತಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....