ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: Me Too ಅಂದರೇನು, ಶುರುವಾಗಿದ್ದು ಎಲ್ಲಿಂದ, ಯಾರಿಂದ, ಏತಕ್ಕಾಗಿ?

ಇಲ್ಲಿದೆ ಮಾಹಿತಿ, Me Too ಈ ಟ್ಯಾಗ್​ಲೈನ್​ ಈಗ ದೇಶದಲ್ಲಿ ಸಂಚಲನ ಮೂಡಿಸುತ್ತಿದೆ, ಚಳವಳಿಯಾಗಿ ಮಾರ್ಪಟ್ಟಿದೆ, ಹಲವರ ಎದೆ ನಡೆಗಿಸಿದೆ, ದೌರ್ಜನ್ಯಕ್ಕೊಳಗಾದರಿಗೆ ವೇದಿಕೆ ಎಂಬಂತಾಗಿದೆ.
ಚಿತ್ರರಂಗದ ನಟಿಯರು, ಸೆಲೆಬ್ರೆಟಿಗಳು, ಮಹಿಳಾ ಪತ್ರಕರ್ತರು ತಮಗಾದ ವೇದನೆಯನ್ನು Me Too ಅಡಿಯಲ್ಲಿ ನಿವೇದಿಸಿಕೊಳ್ಳುತ್ತಿದ್ದಾರೆ. ನಾನಾ ಪಾಟೇಕರ್​ ಅವರಂಥ ಹಿರಿಯ ನಟರು, ಎಂ.ಜೆ ಅಕ್ಬರ್​ ಅವರಂಥ ಪ್ರಭಾವಿ ಸಚಿವರು ಇದರ ಸುಳಿಗೆ ಸಿಲುಕಿ ಕಂಗಾಲಾಗಿದ್ದಾರೆ.
ಆದರೆ, ಈ Me Too ಪೂರ್ವಾಪರ ಬಹುತೇಕರಿಗೆ ಗೊತ್ತಿಲ್ಲ. ಅದರ ಕುರಿತ ಒಂದಷ್ಟು ಮಾಹಿತಿ ಇಲ್ಲಿದೆ.
ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ನೆರವಾಗಲೆಂದು ಟರಾನಾ ಬರ್ಕ್​ ಎಂಬ ನಾಗರೀಕ ಹೋರಾಟಗಾರ್ತಿ 2006ರಲ್ಲಿ Me Too ಅಭಿಯಾನವನ್ನು ಆರಂಭಿಸಿದರು.
ಅತ್ಯಂತ ಕೆಳಸ್ತರದ, ದೌರ್ಜನ್ಯಕ್ಕೊಳಗದ ಹೆಣ್ಣುಮಕ್ಕಳ ಒಳಿತಿಗಾಗಿ, ಸಮಸ್ಯೆ ಪರಿಹಾರಕ್ಕಾಗಿ ಮತ್ತು ಅವರಿಗೆ ನೈತಿಕ ಸ್ಥೈರ್ಯ ತುಂಬಲು ಟರಾನಾ ಬರ್ಕ್​ ಈ ಚಳವಳಿಗೆ ಮುನ್ನಡಿ ಬರೆದಿದ್ದರು.
ಆರಂಭದಲ್ಲಿ Me Too ಎಂಬುದರ ಮೂಲ ಉದ್ದೇಶ ಮಹಿಳಾ ಸಬಲೀಕರಣವಾಗಿತ್ತು. ಅಲ್ಲದೆ, ದೌರ್ಜನ್ಯಕ್ಕೊಳಗಾದವರು ಒಂಟಿಯಲ್ಲ ಎಂಬ ಭಾವನೆ ಮೂಡಿಸುವುದಾಗಿತ್ತು.
ಯಾರೀ ಟರಾನಾ ಬರ್ಕ್​
ಟರಾನಾ ಬುರ್ಕ್​ ಆಫ್ರಿಕನ್​ ಅಮೆರಿಕನ್​ ಮಹಿಳೆ. ನ್ಯೂಯಾರ್ಕ್​ನ ನಾಗರಿಕ ಹಕ್ಕುಗಳ ಹೋರಾಟಗಾರ್ತಿಯೂ ಹೌದು.
ನ್ಯೂಯಾರ್ಕ್​ನ ಬ್ರುಕ್ಲಿನ್​ ಮೂಲದ ‘ಲಿಂಗ ಸಮಾನತೆಗಾಗಿ ಹೆಣ್ಣುಮಕ್ಕಳು’ ಎಂಬ ಸಂಸ್ಥೆಯಲ್ಲಿ ಸದ್ಯ ಟರಾನ್​ ಬುರ್ಕ್​ ಅವರು ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳ ಪರ ಹೋರಾಡಿದ, ಕಲ್ಯಾಣ ಕಾರ್ಯಕ್ರಮಗಳ ಕೈಗೊಂಡ ಟರಾನಾ ಅವರು 2017ರಲ್ಲಿ ‘ಟೈಮ್​ ವರ್ಷದ ವ್ಯಕ್ತಿ ಪ್ರಶಸ್ತಿಗೆ’ ಪಾತ್ರರಾಗಿದ್ದಾರೆ.
#MeToo ಆರಂಭವಾಗಿದ್ದು ಹೇಗೆ?
ಲೈಂಗಿಕ ದಾಸ್ಯಕ್ಕೊಳಗಾದ ಕೆಳ ಸ್ತರದ ಹೆಣ್ಣು ಮಕ್ಕಳ ಪರವಾಗಿ ಹೋರಾಡಲೆಂದು ಟರಾನಾ ಬರ್ಕ್​ 2003ರಲ್ಲಿ Just Be Inc. ಎಂಬ ಸಂಸ್ಥೆ ಆರಂಭಿಸಿದ್ದರು. ಅದರ ಮೂಲಕ ‘myspace’ ಎಂಬ ವೆಬ್​ ಪೋರ್ಟಲ್​ನಲ್ಲಿ ಹೆಣ್ಣು ಮಕ್ಕಳ ಸಮಸ್ಯೆ ಆಲಿಸುವ, ಅವರಿಗೆ ಸಾಂತ್ವನ ಹೇಳುವ, ಅವರಿಗೆ ಕಾನೂನು ನೆರವು ಕಲ್ಪಿಸುವ ಕಾರ್ಯಕ್ರಮ (ಯೂತ್​ ಕ್ಯಾಂಪ್​ ) ನಡೆಸುತ್ತಿದ್ದರು. ಟರಾನಾ ಅವರು ಅಪ್ರಾಪ್ತ, ಸಂತ್ರಸ್ತ ಹೆಣ್ಣುಮಕ್ಕಳ ಯೋಗಕ್ಷೇಮಕ್ಕಾಗಿ ಯೋಜನೆಗಳನ್ನು ಹಾಕಿಕೊಳ್ಳಲು ಆರಂಭಿಸಿದರು.
 ಹೆಣ್ಣು ಮಕ್ಕಳ ಸಮಸ್ಯೆಗಳನ್ನು ಆಲಿಸುತ್ತಿದ್ದ ಟರಾನಾ ಅವರಿಗೆ ಒಂದು ಬಾರಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿಯ ಪ್ರಿಯಕರ ನೀಡಿದ ಲೈಂಗಿಕ ದೌರ್ಜನ್ಯದ ವೃತ್ತಾಂತ ಹೇಳಿಕೊಂಡಿದ್ದಳು. ಈ ಸನ್ನಿವೇಶ ಟರಾನಾ ಅವರನ್ನು ಮನ ಕಲಕಿತ್ತು. ಸದ್ಯ ಜನಪ್ರಿಯ ಗೊಂಡಿರುವ MeToo ಅಭಿಯಾನ ಹುಟ್ಟಿಕೊಂಡಿದ್ದು ಅಂದೇ.
ಕಷ್ಟ ಹೇಳಿಕೊಳ್ಳಲು ಬಂದ ಹೆಣ್ಣು ಮಕ್ಕಳನ್ನು ಸಂತೈಸಲು ಬಳಸಿದ ಪದ MeToo
ಲೈಂಗಿಕ ತೃಷೆಗೆ ನಲುಗಿದ ಆ ಅಪ್ರಾಪ್ತ ಹೆಣ್ಣು ಮಗಳು ತನ್ನ ಸಮಸ್ಯೆ ಹೇಳಿಕೊಳ್ಳುತ್ತಿದ್ದಾಗ ಆಕೆಯನ್ನು ಸಂತೈಸಲು ಟರಾನಾ ಬರ್ಕ್​ ಬಳಿಸಿದ ಪದವೇ MeToo (ನನಗೂ ಹೀಗೆ ಆಗಿದೆ. ನೀನು ಒಂಟಿಯಲ್ಲ ಎಂಬರ್ಥದ ಮಾತು)
ಟರಾನಾ ಬರ್ಕ್​ ಅವರು ತಾವು ಹೋದಕಡೆಗಳಲ್ಲೆಲ್ಲ MeToo ಎಂಬ ಪದ ಬಳಸಲಾರಂಭಸಿದರು. ನೀವು ಒಂಟಿಯಲ್ಲ. ಇದು ನನಗೂ ಸಂಭವಿಸಿದ ಸಮಸ್ಯೆ ಎಂದು ಹೇಳಿಕೊಳ್ಳಲಾರಂಭಸಿದರು. ಇದು ಸಂತ್ರಸ್ತರಿಗೆ ಧೈರ್ಯ ತುಂಬುವ ಮಾತಾಗಿತ್ತು.
ಕೇವಲ 500 ಟ್ವಿಟರ್​ ಫಾಲೋಯರ್​ಗಳನ್ನು ಹೊಂದಿದ್ದ ಟರಾನಾ ಬರ್ಕ್​ ಅವರು ಸಾಮಾಜಿಕ ಜಾಲತಾಣದಲ್ಲಿ ಈ MeToo ಎಂಬ ಪದವನ್ನು ಪರಿಚಯಿಸಿದರು.
ಆದರೆ ಟರಾನಾ ಬರ್ಕ್​ ಅವರ ಸಂದೇಶಕ್ಕೆ ಸಿಗದ ವ್ಯಾಪಕತೆ ನಟಿ ಅಲಿಸ್ಸ ಮಿಲಾನೊ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಉಲ್ಲೇಖ ಮಾಡುವುದರೊಂದಿಗೆ ಹೆಚ್ಚು ಪ್ರವರ್ಧಮಾನಕ್ಕೆ ಬಂತು. 2017ರಲ್ಲಿ ಅಲಿಸ್ಸ ಮಿಲಾನೊ ಮಾಡಿದ  ಟ್ವೀಟ್​ನ,  ನಂತರ MeToo ಜಗತ್ತಿನಾದ್ಯಂತ ಪ್ರಖ್ಯಾತಿ ಪಡೆದುಕೊಂಡಿದೆ.
ಈ ಚಳವಳಿ ಸಾಮಾಜಿ ಜಾಲತಾಣದಲ್ಲಿ ಹೆಚ್ಚು ವೈರಲ್​ ಆದ ನಂತರ ಮಾತನಾಡಿದ ಟರಾನಾ ಬರ್ಕ್​ ” ಇದು ಕೇವಲ ವೈರಲ್​ ಅಭಿಯಾನವಲ್ಲ. ಇದೊಂದು ಆದೋಂಲನ, ಚಳವಳಿ. ಸಂತ್ರಸ್ತ ಹೆಣ್ಣು ಮಕ್ಕಳಿಗೆ ಸಾಂತ್ವನ ಹೇಳಲೆಂದು ಆರಂಭವಾದ ಪದ ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
https://twitter.com/TaranaBurke/status/919704949751255040

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....